Homeಮುಖಪುಟಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು...

ಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ

- Advertisement -
- Advertisement -

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು ದೇಶಾದ್ಯಂತ ಜಾರಿಗೊಳಿಸಿದ್ದು ಅದರ ಫಲ ಬಹುತೇಕ ಅರ್ಹ ರೈತರಿಗೆ ದೊರಕಿಲ್ಲದೇ ಇರುವುದು ಶೋಚನೀಯ ಸಂಗತಿ.  ಕೃಷಿ ಸನ್ಮಾನ್ ನಿಧಿ ಯೋಜನೆಯ ಹಣ ಪಡೆಯಲು ಬೇಕಾದ ಎಲ್ಲಾ ದಾಖಲೆಗಳನ್ನು ನೀಡಿಯೂ ಹಣ ಬ್ಯಾಂಕ್ ಖಾತೆಗೆ ಬಿದ್ದಿಲ್ಲ ಎಂಬುದು ರೈತರ ನೋವು. ಈ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ತುಮಕೂರಿನಲ್ಲಿ ಜನವರಿ 2ರಂದು ನಡೆಯಲಿರುವ ರೈತರ ಸಮಾವೇಶದಲ್ಲಿ ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಹಾಗಾದರೆ ರಾಜ್ಯದಲ್ಲಿ ರೈತರಿಗೆ ಒಂದು ವರ್ಷದ ಹಣ ಆರು ಸಾವಿರ ರೂಪಾಯಿ ಬಂದಿದೆಯೇ ಇಲ್ಲವೇ ಎಂಬ ಬಗ್ಗೆ ಕ್ರಾಸ್ ಚೆಕ್ ಮಾಡಿದಾಗ ಕಂಡುಬಂದ ಸತ್ಯಾಂಶದ ವರದಿ ಇಲ್ಲಿದೆ. 

ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು 01-12-2018ರಂದು ಪ್ರಧಾನಿ ನರೇಂದ್ರ ಮೋದಿ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಆಗ ಉತ್ತರಭಾರತದ ಕೆಲವು ರಾಜ್ಯಗಳ ಉಪಚುನಾವಣೆಗಳು ನಡೆಯುವುದರಲ್ಲಿದ್ದವು. ಚುನಾವಣೆ ಯಲ್ಲಿ ಮತ ಸೆಳೆಯುವ ಉದ್ದೇಶವನ್ನಿಟ್ಟುಕೊಂಡೇ ಈ ಯೋಜನೆ ಜಾರಿಯಾಯಿತು. ಎರಡು ಹೆಕ್ಟೇರ್ ಅಂದರೆ 5 ಎಕರೆಯೊಳಗೆ ಭೂಮಿ ಇರುವ ರೈತರ ಖಾತೆಗಳಿಗೆ 2 ಸಾವಿರ ರೂಪಾಯಿ ಹಣವನ್ನು ನೇರ ರೈತರ ಖಾತೆಗಗಳಿಗೆ ಬಿಡುಗಡೆ ಮಾಡಲಾಯಿತು. ಅದು ಮೊದಲ ಕಂತಾಗಿತ್ತು. ಇದನ್ನು ಬೆಂಬಲಸಿದ ಅಂದಿನ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರವೂ ವಾರ್ಷಿಕ 4 ಸಾವಿರ ರೂಪಾಯಿ ರೈತರಿಗೆ ನೀಡುವುದಾಗಿ ಘೋಷಿಸಿತು. ಇದು ಈಗ ಇತಿಹಾಸದ ಪುಟ ಸೇರಿಹೋಗಿದೆ.

ಕೇಂದ್ರ ಸರ್ಕಾರ ಈಗಾಗಲೇ ಈ ಯೋಜನೆಯಡಿ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ಹಣವನ್ನು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಬಿಡುಗಡೆ ಮಾಡಿದೆ ಎಂದು ಬೀಗುತ್ತಿದೆ. ಆದರೆ ವಾಸ್ತವದಲ್ಲಿ ಎಲ್ಲ ರೈತರ ಖಾತೆಗೂ ಹಣ ನೇರವರ್ಗಾವಣೆಯಾಗಿದೆಯೇ ಎಂದು ಕ್ರಾಸ್ ಚೆಕ್ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂಬುದು ಸಾಬೀತಾಗಿದೆ. ಕೆಲವು ಕಡೆ ಮೂರು ಕಂತುಗಳನ್ನು ಹಾಕಿ ತನ್ನ ಮಾತನ್ನು ಉಳಿಸಿಕೊಂಡಿದ್ದಾರೆ ಮೋದಿ. ಆದರೆ ಬಹುತೇಕ ಕಡೆಯ ರೈತರಿಗೆ ಒಂದು ಕಂತಿನ ಹಣವನ್ನು ಮಾತ್ರ ವರ್ಗಾವಣೆ ಮಾಡಲಾಗಿದೆ. ಅಂದರೆ ರೈತರಿಗೆ ಹಣ ನೀಡುವಲ್ಲಿ ತಾರತಮ್ಯ ಮಾಡಿರುವುದು ಗೋಚರಿಸಿದೆ.

ಯೋಜನೆ ಜಾರಿಯಾದ ಆರಂಭದಲ್ಲೇ ರೈತರು ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಗ್ರಾಮ ಪಂಚಾಯ್ತಿ ಪಿಡಿಒಗಳ ಮೂಲಕ ಅಗತ್ಯ ದಾಖಲೆಗಳನ್ನು ನೀಡಿದ್ದಾರೆ. ಅಂದರೆ ರೈತರು ಜಮೀನು ಹೊಂದಿರುವ ಬಗ್ಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಹೀಗೆ ಸರ್ಕಾರ ಕೇಳಿದ ಎಲ್ಲಾ ದಾಖಲೆಗಳನ್ನು ನೀಡಿದ್ದಾರೆ. ಕೆಲವರಿಗೆ ಮೊದಲ ಕಂತಿನ ಹಣ ಬಂದಿದೆ. ಮತ್ತೆ ಕೆಲವರಿಗೆ ಎರಡು ಕಂತು, ಇನ್ನೂ ಕೆಲವರಿಗೆ ಮೂರು ಕಂತುಗಳ ಹಣ ಬಂದಿದೆ. ಸರ್ಕಾರ ಘೋಷಿಸಿದ ಪೂರ್ಣ ಹಣ ಬಾರದ ರೈತರು ಮತ್ತೆ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಬ್ಯಾಂಕ್ ಗಳಿಗೆ ಅಲೆದು ಮೂರು ಬಾರಿ ಸೂಚಿಸಿದ ದಾಖಲೆಗಳನ್ನು ನೀಡಿದ್ದರೂ ಹಣ ಬಂದಿಲ್ಲ. ಈ ಬಗ್ಗೆ ಕೇಳಿದರೆ ನಾವು ಕಳಿಸಿದ್ದೇವೆ. ಎಲ್ಲವೂ ದೆಹಲಿಯಲ್ಲೇ ತಿರ್ಮಾನವಾಗುತ್ತದೆ ಎಂಬ ಸಬೂಬು ಹೇಳಿಕಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಸುಮಾರು 72 ಸಾವಿರ ರೈತರು ಕೃಷಿ ಸನ್ಮಾನ್ ನಿಧಿ ಯೋಜನೆಯ ನೆರವು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಇವರ ಪೈಕಿ 12 ಸಾವಿರ ಮಂದಿ ರೈತರಿಗೆ 6 ಸಾವಿರ ಅಂದರೆ ಮೂರು ಕಂತಿನ ಹಣ ಬಂದಿದೆ. ಉಳಿದ 60 ಸಾವಿರ ಮಂದಿ ರೈತರಿಗೆ ಒಂದು, ಎರಡು ಕಂತಿನ ಹಣ ರೈತರ ಖಾತೆಗೆ ವರ್ಗಾವಣೆಯಾಗಿದೆ. ಅಂದರೆ ಇವರಿಗೆ ಪೂರಾ ಹಣ ಬಂದಿಲ್ಲ. ಇನ್ನೂ ಶೇಕಡ 25ರಷ್ಟು ಹಣ ಬರಬೇಕು.

ಬಿಜೆಪಿ ಸಂಸದ ಎ. ನಾರಾಯಣಸ್ವಾಮಿ ಕ್ಷೇತ್ರ ಚಿತ್ರದುರ್ಗದಲ್ಲಿ ಶೇಕಡ 90ರಷ್ಟು ಹಣ ಬಂದಿದೆ. ಈ ಜಿಲ್ಲೆಯಲ್ಲಿ ಎಲ್ಲ ರೈತರು ವಾರ್ಷಿಕವಾಗಿ ನೀಡುವ ಮೂರು ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ. ದಾಖಲೆಗಳನ್ನು ಸಮರ್ಪಕವಾಗಿ ನೀಡದ ರೈತರಿಗೆ ಮಾತ್ರ ಹಣ ಬಿಡುಗಡೆಯಾಗಿಲ್ಲ. ಉಳಿದಂತೆ ಎಲ್ಲಾ ರೈತರಿಗೂ ಹಣ ಬಂದಿದೆ ಎನ್ನುತ್ತಾರೆ.

ತುಮಕೂರು ಜಿಲ್ಲೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ಒಂದು ಕಂತಿನ ಹಣ ವರ್ಗಾವಣೆಯಾಗಿರುವುದು ಬಿಟ್ಟರೆ ಬಹುತೇಕ ಅರ್ಹ ಫಲಾನುಭವಿ ರೈತರಿಗೆ ಈ ಯೋಜನೆಯ ನೆರವು ದೊರೆತಿಲ್ಲ. ಕುಣಿಗಲ್ ಸಂತೆಮಾವತ್ತೂರು ರೈತ ನಾಗಣ್ಣ ಹೇಳುವ ಹಾಗೆ ನೆರವಿಗಾಗಿ ಆಧಾರ್, ಪಹಣಿ, ಬ್ಯಾಂಕ್ ಪುಸ್ತಕ ಕೊಟ್ಟರೂ ನಮಗೆ ಇದುವರೆಗೆ ಬಿಡಿಗಾಸು ನೋಡಿಲ್ಲ. ನಮ್ಮ ಗ್ರಾಮದಲ್ಲಿ ಯಾರಿಗೂ ಒಂದು ಕಂತು ಹಣವೂ ಬಂದಿಲ್ಲ. ಏನು ನಡೆಯುತ್ತಿದೆ ಎಂದು ಗೊತ್ತಿಲ್ಲ ಎನ್ನುತ್ತಾರೆ.

ಗುಬ್ಬಿ ತಾಲೂಕು ಚೇಳೂರು ರೈತ ರಾಜಣ್ಣ ಮತ್ತು ಬುಡ್ಡಣ್ಣ ಮಾತ್ರ ನಮಗೆ ಒಂದು ಕಂತಿನ ಹಣ ಬಂತು. ಬ್ಯಾಂಕಿನಿಂದ ಆ ಹಣವನ್ನು ಬಿಡಿಸಿಕೊಂಡಿದ್ದೇವೆ. ಮತ್ತು ಮೊಬೈಲ್ ನಲ್ಲಿ ಚೆಕ್ ಮಾಡಿದರೆ ಪೆಂಡಿಂಗ್ ಅಂತ ಬರ್ತಾ ಇದೆ. ನಾವು ಅವರು (ಸರ್ಕಾರ) ಹೇಳಿದ ದಾಖಲೆಗಳನ್ನು ಕೊಟ್ಟರೂ ನಮಗೆ ದುಡ್ಡು ಬರ್ತಿಲ್ಲ. ಯಾರನ್ನು ಕೇಳಿದರೂ ಏನು ಹೇಳ್ತಿಲ್ಲ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಪಾವಗಡ ತಾಲೂಕು ಸೊಳಿಯಪ್ಪ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಲಾಯಿತು. ಅವರು ನನಗೆ ಎರಡು ಎಕರೆ ಜಮೀನು ಇದೆ. ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕೃಷಿ ಇಲಾಖೆಗೆ ಎರಡೆರಡು ಬಾರಿ ದಾಖಲೆ ನೀಡಿದ್ದೇನೆ. ಹಣವೂ ಇಲ್ಲ. ಉತ್ತರವೂ ಇಲ್ಲ. ಯಾರ್ನಪ್ಪ ಕೇಳಾನ. ಇಲ್ಲಿಯವರನ್ನು ಕೇಳಿದರೆ ಮೇಲಕ್ಕೆ ತೋರಿಸುತ್ತಾರೆ. ನಾವು ಅಲ್ಲಿಗೋಗಿ ಕೇಳಕಾಗಲ್ಲ.

ಹೆಂಡತಿ ಹೆಸರಿನಲ್ಲಿ 3 ಎಕರೆ ಜಮೀನಿದೆ. ಪಾಸ್ ಬುಕ್, ಆರ್.ಟಿ.ಸಿ. ಆಧಾರ್ ಎಲ್ಲ ಕೊಟ್ಟರೂ ನಮಗೆ ದುಡ್ಡೇ ಬಂದಿಲ್ಲ. ಪಿಡಿಓ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಪಂಚಾಯಿತಿ ಮತ್ತು ಕೃಷಿ ಇಲಾಖೆಯಲ್ಲಿ ಏನೋ ನಡೀತಾ ಇದೆ. ಸಣ್ಣ ರೈತರು ಅಂದರೆ ಎಲ್ಲರಿಗೂ ಕೊಡಬೇಕಲ್ವ, ಕೆಲವ್ರಿಗೆ ಕೊಡ್ತಾರೆ. ಬಹುತೇಕರಿಗೆ ಇಲ್ಲ. ರಾಜಕೀಯ ನಡೆಯುತ್ತಿದೆ. – ಸಿ. ಅಜ್ಜಪ್ಪ, ಕೂಲಿ ಕೆಲಸ.

ಕೃಷಿ ಸನ್ಮಾನ್ ನಿಧಿ ಯೋಜನೆಯಡಿ ಸಂಸದರು, ಸಚಿವರು, ಶಾಸಕರು, ಮಂತ್ರಿಗಳು, ಮೇಯರ್, ಸರ್ಕಾರಿ, ನೌಕರರು, ವೈದ್ಯರು, ವಕೀಲರು ಮೊದಲಾದವರಿಗೆ ಹಣ ನೀಡಲು ಬರುವುದಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ಸೂಕ್ತ ದಾಖಲೆ ಹೊಂದಿರುವ ಅರ್ಹ ಫಲಾನುಭವಿ ರೈತರಿಗೆ ನೆರವು ದೊರೆಯುತ್ತಿಲ್ಲ. ಗ್ರಾಮ ಪಂಚಾಯಿತಿ, ಕೃಷಿ ಇಲಾಖೆ, ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ರೈತರಿಗೆ ಸಿಗಬೇಕಾದ ಸರ್ಕಾರದ ನೆರವಿಗೆ ಅಡ್ಡಿಪಡಿಸುತ್ತಿದ್ದಾರೆಂಬ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಅರ್ಹ ರೈತರಿಂದ ಸೂಕ್ತ ದಾಖಲೆಗಳನ್ನು ಪಡೆದರೂ ಅವುಗಳನ್ನು ಕಂಪ್ಯೂಟರ್ ನಲ್ಲಿ ಅಳವಡಿಸುತ್ತಿಲ್ಲ. ಜೊತೆಗ ಯಾವ ಪಕ್ಷದವರು ಎಂಬುದನ್ನು ನೋಡಿ ಅರ್ಜಿಗಳನ್ನು ಮುಂದಕ್ಕೆ ರವಾನೆ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದಾರೆ. ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನೆರವು ದೊರೆಯದ ರೈತರ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ರೈತರಿಗೆ ನೆರವು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಮತ್ತೊಂದು ಕಡೆ ರಾಜ್ಯ ಸರ್ಕಾರ ರೈತರಿಗೆ ಘೋಷಿಸಿರುವ ನಾಲ್ಕು ಸಾವಿರ ಹಣ ಇದುವರೆಗೂ ಬಂದಿಲ್ಲ. ಈ ಬಗ್ಗೆಯೂ ಉತ್ತರವನ್ನು ರೈತರು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...