Homeಮುಖಪುಟಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು...

ಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ

- Advertisement -
- Advertisement -

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು ದೇಶಾದ್ಯಂತ ಜಾರಿಗೊಳಿಸಿದ್ದು ಅದರ ಫಲ ಬಹುತೇಕ ಅರ್ಹ ರೈತರಿಗೆ ದೊರಕಿಲ್ಲದೇ ಇರುವುದು ಶೋಚನೀಯ ಸಂಗತಿ.  ಕೃಷಿ ಸನ್ಮಾನ್ ನಿಧಿ ಯೋಜನೆಯ ಹಣ ಪಡೆಯಲು ಬೇಕಾದ ಎಲ್ಲಾ ದಾಖಲೆಗಳನ್ನು ನೀಡಿಯೂ ಹಣ ಬ್ಯಾಂಕ್ ಖಾತೆಗೆ ಬಿದ್ದಿಲ್ಲ ಎಂಬುದು ರೈತರ ನೋವು. ಈ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ತುಮಕೂರಿನಲ್ಲಿ ಜನವರಿ 2ರಂದು ನಡೆಯಲಿರುವ ರೈತರ ಸಮಾವೇಶದಲ್ಲಿ ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಹಾಗಾದರೆ ರಾಜ್ಯದಲ್ಲಿ ರೈತರಿಗೆ ಒಂದು ವರ್ಷದ ಹಣ ಆರು ಸಾವಿರ ರೂಪಾಯಿ ಬಂದಿದೆಯೇ ಇಲ್ಲವೇ ಎಂಬ ಬಗ್ಗೆ ಕ್ರಾಸ್ ಚೆಕ್ ಮಾಡಿದಾಗ ಕಂಡುಬಂದ ಸತ್ಯಾಂಶದ ವರದಿ ಇಲ್ಲಿದೆ. 

ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು 01-12-2018ರಂದು ಪ್ರಧಾನಿ ನರೇಂದ್ರ ಮೋದಿ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಆಗ ಉತ್ತರಭಾರತದ ಕೆಲವು ರಾಜ್ಯಗಳ ಉಪಚುನಾವಣೆಗಳು ನಡೆಯುವುದರಲ್ಲಿದ್ದವು. ಚುನಾವಣೆ ಯಲ್ಲಿ ಮತ ಸೆಳೆಯುವ ಉದ್ದೇಶವನ್ನಿಟ್ಟುಕೊಂಡೇ ಈ ಯೋಜನೆ ಜಾರಿಯಾಯಿತು. ಎರಡು ಹೆಕ್ಟೇರ್ ಅಂದರೆ 5 ಎಕರೆಯೊಳಗೆ ಭೂಮಿ ಇರುವ ರೈತರ ಖಾತೆಗಳಿಗೆ 2 ಸಾವಿರ ರೂಪಾಯಿ ಹಣವನ್ನು ನೇರ ರೈತರ ಖಾತೆಗಗಳಿಗೆ ಬಿಡುಗಡೆ ಮಾಡಲಾಯಿತು. ಅದು ಮೊದಲ ಕಂತಾಗಿತ್ತು. ಇದನ್ನು ಬೆಂಬಲಸಿದ ಅಂದಿನ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರವೂ ವಾರ್ಷಿಕ 4 ಸಾವಿರ ರೂಪಾಯಿ ರೈತರಿಗೆ ನೀಡುವುದಾಗಿ ಘೋಷಿಸಿತು. ಇದು ಈಗ ಇತಿಹಾಸದ ಪುಟ ಸೇರಿಹೋಗಿದೆ.

ಕೇಂದ್ರ ಸರ್ಕಾರ ಈಗಾಗಲೇ ಈ ಯೋಜನೆಯಡಿ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ಹಣವನ್ನು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಬಿಡುಗಡೆ ಮಾಡಿದೆ ಎಂದು ಬೀಗುತ್ತಿದೆ. ಆದರೆ ವಾಸ್ತವದಲ್ಲಿ ಎಲ್ಲ ರೈತರ ಖಾತೆಗೂ ಹಣ ನೇರವರ್ಗಾವಣೆಯಾಗಿದೆಯೇ ಎಂದು ಕ್ರಾಸ್ ಚೆಕ್ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂಬುದು ಸಾಬೀತಾಗಿದೆ. ಕೆಲವು ಕಡೆ ಮೂರು ಕಂತುಗಳನ್ನು ಹಾಕಿ ತನ್ನ ಮಾತನ್ನು ಉಳಿಸಿಕೊಂಡಿದ್ದಾರೆ ಮೋದಿ. ಆದರೆ ಬಹುತೇಕ ಕಡೆಯ ರೈತರಿಗೆ ಒಂದು ಕಂತಿನ ಹಣವನ್ನು ಮಾತ್ರ ವರ್ಗಾವಣೆ ಮಾಡಲಾಗಿದೆ. ಅಂದರೆ ರೈತರಿಗೆ ಹಣ ನೀಡುವಲ್ಲಿ ತಾರತಮ್ಯ ಮಾಡಿರುವುದು ಗೋಚರಿಸಿದೆ.

ಯೋಜನೆ ಜಾರಿಯಾದ ಆರಂಭದಲ್ಲೇ ರೈತರು ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಗ್ರಾಮ ಪಂಚಾಯ್ತಿ ಪಿಡಿಒಗಳ ಮೂಲಕ ಅಗತ್ಯ ದಾಖಲೆಗಳನ್ನು ನೀಡಿದ್ದಾರೆ. ಅಂದರೆ ರೈತರು ಜಮೀನು ಹೊಂದಿರುವ ಬಗ್ಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಹೀಗೆ ಸರ್ಕಾರ ಕೇಳಿದ ಎಲ್ಲಾ ದಾಖಲೆಗಳನ್ನು ನೀಡಿದ್ದಾರೆ. ಕೆಲವರಿಗೆ ಮೊದಲ ಕಂತಿನ ಹಣ ಬಂದಿದೆ. ಮತ್ತೆ ಕೆಲವರಿಗೆ ಎರಡು ಕಂತು, ಇನ್ನೂ ಕೆಲವರಿಗೆ ಮೂರು ಕಂತುಗಳ ಹಣ ಬಂದಿದೆ. ಸರ್ಕಾರ ಘೋಷಿಸಿದ ಪೂರ್ಣ ಹಣ ಬಾರದ ರೈತರು ಮತ್ತೆ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಬ್ಯಾಂಕ್ ಗಳಿಗೆ ಅಲೆದು ಮೂರು ಬಾರಿ ಸೂಚಿಸಿದ ದಾಖಲೆಗಳನ್ನು ನೀಡಿದ್ದರೂ ಹಣ ಬಂದಿಲ್ಲ. ಈ ಬಗ್ಗೆ ಕೇಳಿದರೆ ನಾವು ಕಳಿಸಿದ್ದೇವೆ. ಎಲ್ಲವೂ ದೆಹಲಿಯಲ್ಲೇ ತಿರ್ಮಾನವಾಗುತ್ತದೆ ಎಂಬ ಸಬೂಬು ಹೇಳಿಕಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಸುಮಾರು 72 ಸಾವಿರ ರೈತರು ಕೃಷಿ ಸನ್ಮಾನ್ ನಿಧಿ ಯೋಜನೆಯ ನೆರವು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಇವರ ಪೈಕಿ 12 ಸಾವಿರ ಮಂದಿ ರೈತರಿಗೆ 6 ಸಾವಿರ ಅಂದರೆ ಮೂರು ಕಂತಿನ ಹಣ ಬಂದಿದೆ. ಉಳಿದ 60 ಸಾವಿರ ಮಂದಿ ರೈತರಿಗೆ ಒಂದು, ಎರಡು ಕಂತಿನ ಹಣ ರೈತರ ಖಾತೆಗೆ ವರ್ಗಾವಣೆಯಾಗಿದೆ. ಅಂದರೆ ಇವರಿಗೆ ಪೂರಾ ಹಣ ಬಂದಿಲ್ಲ. ಇನ್ನೂ ಶೇಕಡ 25ರಷ್ಟು ಹಣ ಬರಬೇಕು.

ಬಿಜೆಪಿ ಸಂಸದ ಎ. ನಾರಾಯಣಸ್ವಾಮಿ ಕ್ಷೇತ್ರ ಚಿತ್ರದುರ್ಗದಲ್ಲಿ ಶೇಕಡ 90ರಷ್ಟು ಹಣ ಬಂದಿದೆ. ಈ ಜಿಲ್ಲೆಯಲ್ಲಿ ಎಲ್ಲ ರೈತರು ವಾರ್ಷಿಕವಾಗಿ ನೀಡುವ ಮೂರು ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ. ದಾಖಲೆಗಳನ್ನು ಸಮರ್ಪಕವಾಗಿ ನೀಡದ ರೈತರಿಗೆ ಮಾತ್ರ ಹಣ ಬಿಡುಗಡೆಯಾಗಿಲ್ಲ. ಉಳಿದಂತೆ ಎಲ್ಲಾ ರೈತರಿಗೂ ಹಣ ಬಂದಿದೆ ಎನ್ನುತ್ತಾರೆ.

ತುಮಕೂರು ಜಿಲ್ಲೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ಒಂದು ಕಂತಿನ ಹಣ ವರ್ಗಾವಣೆಯಾಗಿರುವುದು ಬಿಟ್ಟರೆ ಬಹುತೇಕ ಅರ್ಹ ಫಲಾನುಭವಿ ರೈತರಿಗೆ ಈ ಯೋಜನೆಯ ನೆರವು ದೊರೆತಿಲ್ಲ. ಕುಣಿಗಲ್ ಸಂತೆಮಾವತ್ತೂರು ರೈತ ನಾಗಣ್ಣ ಹೇಳುವ ಹಾಗೆ ನೆರವಿಗಾಗಿ ಆಧಾರ್, ಪಹಣಿ, ಬ್ಯಾಂಕ್ ಪುಸ್ತಕ ಕೊಟ್ಟರೂ ನಮಗೆ ಇದುವರೆಗೆ ಬಿಡಿಗಾಸು ನೋಡಿಲ್ಲ. ನಮ್ಮ ಗ್ರಾಮದಲ್ಲಿ ಯಾರಿಗೂ ಒಂದು ಕಂತು ಹಣವೂ ಬಂದಿಲ್ಲ. ಏನು ನಡೆಯುತ್ತಿದೆ ಎಂದು ಗೊತ್ತಿಲ್ಲ ಎನ್ನುತ್ತಾರೆ.

ಗುಬ್ಬಿ ತಾಲೂಕು ಚೇಳೂರು ರೈತ ರಾಜಣ್ಣ ಮತ್ತು ಬುಡ್ಡಣ್ಣ ಮಾತ್ರ ನಮಗೆ ಒಂದು ಕಂತಿನ ಹಣ ಬಂತು. ಬ್ಯಾಂಕಿನಿಂದ ಆ ಹಣವನ್ನು ಬಿಡಿಸಿಕೊಂಡಿದ್ದೇವೆ. ಮತ್ತು ಮೊಬೈಲ್ ನಲ್ಲಿ ಚೆಕ್ ಮಾಡಿದರೆ ಪೆಂಡಿಂಗ್ ಅಂತ ಬರ್ತಾ ಇದೆ. ನಾವು ಅವರು (ಸರ್ಕಾರ) ಹೇಳಿದ ದಾಖಲೆಗಳನ್ನು ಕೊಟ್ಟರೂ ನಮಗೆ ದುಡ್ಡು ಬರ್ತಿಲ್ಲ. ಯಾರನ್ನು ಕೇಳಿದರೂ ಏನು ಹೇಳ್ತಿಲ್ಲ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಪಾವಗಡ ತಾಲೂಕು ಸೊಳಿಯಪ್ಪ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಲಾಯಿತು. ಅವರು ನನಗೆ ಎರಡು ಎಕರೆ ಜಮೀನು ಇದೆ. ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕೃಷಿ ಇಲಾಖೆಗೆ ಎರಡೆರಡು ಬಾರಿ ದಾಖಲೆ ನೀಡಿದ್ದೇನೆ. ಹಣವೂ ಇಲ್ಲ. ಉತ್ತರವೂ ಇಲ್ಲ. ಯಾರ್ನಪ್ಪ ಕೇಳಾನ. ಇಲ್ಲಿಯವರನ್ನು ಕೇಳಿದರೆ ಮೇಲಕ್ಕೆ ತೋರಿಸುತ್ತಾರೆ. ನಾವು ಅಲ್ಲಿಗೋಗಿ ಕೇಳಕಾಗಲ್ಲ.

ಹೆಂಡತಿ ಹೆಸರಿನಲ್ಲಿ 3 ಎಕರೆ ಜಮೀನಿದೆ. ಪಾಸ್ ಬುಕ್, ಆರ್.ಟಿ.ಸಿ. ಆಧಾರ್ ಎಲ್ಲ ಕೊಟ್ಟರೂ ನಮಗೆ ದುಡ್ಡೇ ಬಂದಿಲ್ಲ. ಪಿಡಿಓ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಪಂಚಾಯಿತಿ ಮತ್ತು ಕೃಷಿ ಇಲಾಖೆಯಲ್ಲಿ ಏನೋ ನಡೀತಾ ಇದೆ. ಸಣ್ಣ ರೈತರು ಅಂದರೆ ಎಲ್ಲರಿಗೂ ಕೊಡಬೇಕಲ್ವ, ಕೆಲವ್ರಿಗೆ ಕೊಡ್ತಾರೆ. ಬಹುತೇಕರಿಗೆ ಇಲ್ಲ. ರಾಜಕೀಯ ನಡೆಯುತ್ತಿದೆ. – ಸಿ. ಅಜ್ಜಪ್ಪ, ಕೂಲಿ ಕೆಲಸ.

ಕೃಷಿ ಸನ್ಮಾನ್ ನಿಧಿ ಯೋಜನೆಯಡಿ ಸಂಸದರು, ಸಚಿವರು, ಶಾಸಕರು, ಮಂತ್ರಿಗಳು, ಮೇಯರ್, ಸರ್ಕಾರಿ, ನೌಕರರು, ವೈದ್ಯರು, ವಕೀಲರು ಮೊದಲಾದವರಿಗೆ ಹಣ ನೀಡಲು ಬರುವುದಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ಸೂಕ್ತ ದಾಖಲೆ ಹೊಂದಿರುವ ಅರ್ಹ ಫಲಾನುಭವಿ ರೈತರಿಗೆ ನೆರವು ದೊರೆಯುತ್ತಿಲ್ಲ. ಗ್ರಾಮ ಪಂಚಾಯಿತಿ, ಕೃಷಿ ಇಲಾಖೆ, ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ರೈತರಿಗೆ ಸಿಗಬೇಕಾದ ಸರ್ಕಾರದ ನೆರವಿಗೆ ಅಡ್ಡಿಪಡಿಸುತ್ತಿದ್ದಾರೆಂಬ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಅರ್ಹ ರೈತರಿಂದ ಸೂಕ್ತ ದಾಖಲೆಗಳನ್ನು ಪಡೆದರೂ ಅವುಗಳನ್ನು ಕಂಪ್ಯೂಟರ್ ನಲ್ಲಿ ಅಳವಡಿಸುತ್ತಿಲ್ಲ. ಜೊತೆಗ ಯಾವ ಪಕ್ಷದವರು ಎಂಬುದನ್ನು ನೋಡಿ ಅರ್ಜಿಗಳನ್ನು ಮುಂದಕ್ಕೆ ರವಾನೆ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದಾರೆ. ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನೆರವು ದೊರೆಯದ ರೈತರ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ರೈತರಿಗೆ ನೆರವು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಮತ್ತೊಂದು ಕಡೆ ರಾಜ್ಯ ಸರ್ಕಾರ ರೈತರಿಗೆ ಘೋಷಿಸಿರುವ ನಾಲ್ಕು ಸಾವಿರ ಹಣ ಇದುವರೆಗೂ ಬಂದಿಲ್ಲ. ಈ ಬಗ್ಗೆಯೂ ಉತ್ತರವನ್ನು ರೈತರು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...