Homeಮುಖಪುಟಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು...

ಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ

- Advertisement -
- Advertisement -

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು ದೇಶಾದ್ಯಂತ ಜಾರಿಗೊಳಿಸಿದ್ದು ಅದರ ಫಲ ಬಹುತೇಕ ಅರ್ಹ ರೈತರಿಗೆ ದೊರಕಿಲ್ಲದೇ ಇರುವುದು ಶೋಚನೀಯ ಸಂಗತಿ.  ಕೃಷಿ ಸನ್ಮಾನ್ ನಿಧಿ ಯೋಜನೆಯ ಹಣ ಪಡೆಯಲು ಬೇಕಾದ ಎಲ್ಲಾ ದಾಖಲೆಗಳನ್ನು ನೀಡಿಯೂ ಹಣ ಬ್ಯಾಂಕ್ ಖಾತೆಗೆ ಬಿದ್ದಿಲ್ಲ ಎಂಬುದು ರೈತರ ನೋವು. ಈ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ತುಮಕೂರಿನಲ್ಲಿ ಜನವರಿ 2ರಂದು ನಡೆಯಲಿರುವ ರೈತರ ಸಮಾವೇಶದಲ್ಲಿ ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಹಾಗಾದರೆ ರಾಜ್ಯದಲ್ಲಿ ರೈತರಿಗೆ ಒಂದು ವರ್ಷದ ಹಣ ಆರು ಸಾವಿರ ರೂಪಾಯಿ ಬಂದಿದೆಯೇ ಇಲ್ಲವೇ ಎಂಬ ಬಗ್ಗೆ ಕ್ರಾಸ್ ಚೆಕ್ ಮಾಡಿದಾಗ ಕಂಡುಬಂದ ಸತ್ಯಾಂಶದ ವರದಿ ಇಲ್ಲಿದೆ. 

ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು 01-12-2018ರಂದು ಪ್ರಧಾನಿ ನರೇಂದ್ರ ಮೋದಿ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಆಗ ಉತ್ತರಭಾರತದ ಕೆಲವು ರಾಜ್ಯಗಳ ಉಪಚುನಾವಣೆಗಳು ನಡೆಯುವುದರಲ್ಲಿದ್ದವು. ಚುನಾವಣೆ ಯಲ್ಲಿ ಮತ ಸೆಳೆಯುವ ಉದ್ದೇಶವನ್ನಿಟ್ಟುಕೊಂಡೇ ಈ ಯೋಜನೆ ಜಾರಿಯಾಯಿತು. ಎರಡು ಹೆಕ್ಟೇರ್ ಅಂದರೆ 5 ಎಕರೆಯೊಳಗೆ ಭೂಮಿ ಇರುವ ರೈತರ ಖಾತೆಗಳಿಗೆ 2 ಸಾವಿರ ರೂಪಾಯಿ ಹಣವನ್ನು ನೇರ ರೈತರ ಖಾತೆಗಗಳಿಗೆ ಬಿಡುಗಡೆ ಮಾಡಲಾಯಿತು. ಅದು ಮೊದಲ ಕಂತಾಗಿತ್ತು. ಇದನ್ನು ಬೆಂಬಲಸಿದ ಅಂದಿನ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರವೂ ವಾರ್ಷಿಕ 4 ಸಾವಿರ ರೂಪಾಯಿ ರೈತರಿಗೆ ನೀಡುವುದಾಗಿ ಘೋಷಿಸಿತು. ಇದು ಈಗ ಇತಿಹಾಸದ ಪುಟ ಸೇರಿಹೋಗಿದೆ.

ಕೇಂದ್ರ ಸರ್ಕಾರ ಈಗಾಗಲೇ ಈ ಯೋಜನೆಯಡಿ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ಹಣವನ್ನು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಬಿಡುಗಡೆ ಮಾಡಿದೆ ಎಂದು ಬೀಗುತ್ತಿದೆ. ಆದರೆ ವಾಸ್ತವದಲ್ಲಿ ಎಲ್ಲ ರೈತರ ಖಾತೆಗೂ ಹಣ ನೇರವರ್ಗಾವಣೆಯಾಗಿದೆಯೇ ಎಂದು ಕ್ರಾಸ್ ಚೆಕ್ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂಬುದು ಸಾಬೀತಾಗಿದೆ. ಕೆಲವು ಕಡೆ ಮೂರು ಕಂತುಗಳನ್ನು ಹಾಕಿ ತನ್ನ ಮಾತನ್ನು ಉಳಿಸಿಕೊಂಡಿದ್ದಾರೆ ಮೋದಿ. ಆದರೆ ಬಹುತೇಕ ಕಡೆಯ ರೈತರಿಗೆ ಒಂದು ಕಂತಿನ ಹಣವನ್ನು ಮಾತ್ರ ವರ್ಗಾವಣೆ ಮಾಡಲಾಗಿದೆ. ಅಂದರೆ ರೈತರಿಗೆ ಹಣ ನೀಡುವಲ್ಲಿ ತಾರತಮ್ಯ ಮಾಡಿರುವುದು ಗೋಚರಿಸಿದೆ.

ಯೋಜನೆ ಜಾರಿಯಾದ ಆರಂಭದಲ್ಲೇ ರೈತರು ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಗ್ರಾಮ ಪಂಚಾಯ್ತಿ ಪಿಡಿಒಗಳ ಮೂಲಕ ಅಗತ್ಯ ದಾಖಲೆಗಳನ್ನು ನೀಡಿದ್ದಾರೆ. ಅಂದರೆ ರೈತರು ಜಮೀನು ಹೊಂದಿರುವ ಬಗ್ಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಹೀಗೆ ಸರ್ಕಾರ ಕೇಳಿದ ಎಲ್ಲಾ ದಾಖಲೆಗಳನ್ನು ನೀಡಿದ್ದಾರೆ. ಕೆಲವರಿಗೆ ಮೊದಲ ಕಂತಿನ ಹಣ ಬಂದಿದೆ. ಮತ್ತೆ ಕೆಲವರಿಗೆ ಎರಡು ಕಂತು, ಇನ್ನೂ ಕೆಲವರಿಗೆ ಮೂರು ಕಂತುಗಳ ಹಣ ಬಂದಿದೆ. ಸರ್ಕಾರ ಘೋಷಿಸಿದ ಪೂರ್ಣ ಹಣ ಬಾರದ ರೈತರು ಮತ್ತೆ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಬ್ಯಾಂಕ್ ಗಳಿಗೆ ಅಲೆದು ಮೂರು ಬಾರಿ ಸೂಚಿಸಿದ ದಾಖಲೆಗಳನ್ನು ನೀಡಿದ್ದರೂ ಹಣ ಬಂದಿಲ್ಲ. ಈ ಬಗ್ಗೆ ಕೇಳಿದರೆ ನಾವು ಕಳಿಸಿದ್ದೇವೆ. ಎಲ್ಲವೂ ದೆಹಲಿಯಲ್ಲೇ ತಿರ್ಮಾನವಾಗುತ್ತದೆ ಎಂಬ ಸಬೂಬು ಹೇಳಿಕಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಸುಮಾರು 72 ಸಾವಿರ ರೈತರು ಕೃಷಿ ಸನ್ಮಾನ್ ನಿಧಿ ಯೋಜನೆಯ ನೆರವು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಇವರ ಪೈಕಿ 12 ಸಾವಿರ ಮಂದಿ ರೈತರಿಗೆ 6 ಸಾವಿರ ಅಂದರೆ ಮೂರು ಕಂತಿನ ಹಣ ಬಂದಿದೆ. ಉಳಿದ 60 ಸಾವಿರ ಮಂದಿ ರೈತರಿಗೆ ಒಂದು, ಎರಡು ಕಂತಿನ ಹಣ ರೈತರ ಖಾತೆಗೆ ವರ್ಗಾವಣೆಯಾಗಿದೆ. ಅಂದರೆ ಇವರಿಗೆ ಪೂರಾ ಹಣ ಬಂದಿಲ್ಲ. ಇನ್ನೂ ಶೇಕಡ 25ರಷ್ಟು ಹಣ ಬರಬೇಕು.

ಬಿಜೆಪಿ ಸಂಸದ ಎ. ನಾರಾಯಣಸ್ವಾಮಿ ಕ್ಷೇತ್ರ ಚಿತ್ರದುರ್ಗದಲ್ಲಿ ಶೇಕಡ 90ರಷ್ಟು ಹಣ ಬಂದಿದೆ. ಈ ಜಿಲ್ಲೆಯಲ್ಲಿ ಎಲ್ಲ ರೈತರು ವಾರ್ಷಿಕವಾಗಿ ನೀಡುವ ಮೂರು ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ. ದಾಖಲೆಗಳನ್ನು ಸಮರ್ಪಕವಾಗಿ ನೀಡದ ರೈತರಿಗೆ ಮಾತ್ರ ಹಣ ಬಿಡುಗಡೆಯಾಗಿಲ್ಲ. ಉಳಿದಂತೆ ಎಲ್ಲಾ ರೈತರಿಗೂ ಹಣ ಬಂದಿದೆ ಎನ್ನುತ್ತಾರೆ.

ತುಮಕೂರು ಜಿಲ್ಲೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ಒಂದು ಕಂತಿನ ಹಣ ವರ್ಗಾವಣೆಯಾಗಿರುವುದು ಬಿಟ್ಟರೆ ಬಹುತೇಕ ಅರ್ಹ ಫಲಾನುಭವಿ ರೈತರಿಗೆ ಈ ಯೋಜನೆಯ ನೆರವು ದೊರೆತಿಲ್ಲ. ಕುಣಿಗಲ್ ಸಂತೆಮಾವತ್ತೂರು ರೈತ ನಾಗಣ್ಣ ಹೇಳುವ ಹಾಗೆ ನೆರವಿಗಾಗಿ ಆಧಾರ್, ಪಹಣಿ, ಬ್ಯಾಂಕ್ ಪುಸ್ತಕ ಕೊಟ್ಟರೂ ನಮಗೆ ಇದುವರೆಗೆ ಬಿಡಿಗಾಸು ನೋಡಿಲ್ಲ. ನಮ್ಮ ಗ್ರಾಮದಲ್ಲಿ ಯಾರಿಗೂ ಒಂದು ಕಂತು ಹಣವೂ ಬಂದಿಲ್ಲ. ಏನು ನಡೆಯುತ್ತಿದೆ ಎಂದು ಗೊತ್ತಿಲ್ಲ ಎನ್ನುತ್ತಾರೆ.

ಗುಬ್ಬಿ ತಾಲೂಕು ಚೇಳೂರು ರೈತ ರಾಜಣ್ಣ ಮತ್ತು ಬುಡ್ಡಣ್ಣ ಮಾತ್ರ ನಮಗೆ ಒಂದು ಕಂತಿನ ಹಣ ಬಂತು. ಬ್ಯಾಂಕಿನಿಂದ ಆ ಹಣವನ್ನು ಬಿಡಿಸಿಕೊಂಡಿದ್ದೇವೆ. ಮತ್ತು ಮೊಬೈಲ್ ನಲ್ಲಿ ಚೆಕ್ ಮಾಡಿದರೆ ಪೆಂಡಿಂಗ್ ಅಂತ ಬರ್ತಾ ಇದೆ. ನಾವು ಅವರು (ಸರ್ಕಾರ) ಹೇಳಿದ ದಾಖಲೆಗಳನ್ನು ಕೊಟ್ಟರೂ ನಮಗೆ ದುಡ್ಡು ಬರ್ತಿಲ್ಲ. ಯಾರನ್ನು ಕೇಳಿದರೂ ಏನು ಹೇಳ್ತಿಲ್ಲ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಪಾವಗಡ ತಾಲೂಕು ಸೊಳಿಯಪ್ಪ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಲಾಯಿತು. ಅವರು ನನಗೆ ಎರಡು ಎಕರೆ ಜಮೀನು ಇದೆ. ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕೃಷಿ ಇಲಾಖೆಗೆ ಎರಡೆರಡು ಬಾರಿ ದಾಖಲೆ ನೀಡಿದ್ದೇನೆ. ಹಣವೂ ಇಲ್ಲ. ಉತ್ತರವೂ ಇಲ್ಲ. ಯಾರ್ನಪ್ಪ ಕೇಳಾನ. ಇಲ್ಲಿಯವರನ್ನು ಕೇಳಿದರೆ ಮೇಲಕ್ಕೆ ತೋರಿಸುತ್ತಾರೆ. ನಾವು ಅಲ್ಲಿಗೋಗಿ ಕೇಳಕಾಗಲ್ಲ.

ಹೆಂಡತಿ ಹೆಸರಿನಲ್ಲಿ 3 ಎಕರೆ ಜಮೀನಿದೆ. ಪಾಸ್ ಬುಕ್, ಆರ್.ಟಿ.ಸಿ. ಆಧಾರ್ ಎಲ್ಲ ಕೊಟ್ಟರೂ ನಮಗೆ ದುಡ್ಡೇ ಬಂದಿಲ್ಲ. ಪಿಡಿಓ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಪಂಚಾಯಿತಿ ಮತ್ತು ಕೃಷಿ ಇಲಾಖೆಯಲ್ಲಿ ಏನೋ ನಡೀತಾ ಇದೆ. ಸಣ್ಣ ರೈತರು ಅಂದರೆ ಎಲ್ಲರಿಗೂ ಕೊಡಬೇಕಲ್ವ, ಕೆಲವ್ರಿಗೆ ಕೊಡ್ತಾರೆ. ಬಹುತೇಕರಿಗೆ ಇಲ್ಲ. ರಾಜಕೀಯ ನಡೆಯುತ್ತಿದೆ. – ಸಿ. ಅಜ್ಜಪ್ಪ, ಕೂಲಿ ಕೆಲಸ.

ಕೃಷಿ ಸನ್ಮಾನ್ ನಿಧಿ ಯೋಜನೆಯಡಿ ಸಂಸದರು, ಸಚಿವರು, ಶಾಸಕರು, ಮಂತ್ರಿಗಳು, ಮೇಯರ್, ಸರ್ಕಾರಿ, ನೌಕರರು, ವೈದ್ಯರು, ವಕೀಲರು ಮೊದಲಾದವರಿಗೆ ಹಣ ನೀಡಲು ಬರುವುದಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ಸೂಕ್ತ ದಾಖಲೆ ಹೊಂದಿರುವ ಅರ್ಹ ಫಲಾನುಭವಿ ರೈತರಿಗೆ ನೆರವು ದೊರೆಯುತ್ತಿಲ್ಲ. ಗ್ರಾಮ ಪಂಚಾಯಿತಿ, ಕೃಷಿ ಇಲಾಖೆ, ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ರೈತರಿಗೆ ಸಿಗಬೇಕಾದ ಸರ್ಕಾರದ ನೆರವಿಗೆ ಅಡ್ಡಿಪಡಿಸುತ್ತಿದ್ದಾರೆಂಬ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಅರ್ಹ ರೈತರಿಂದ ಸೂಕ್ತ ದಾಖಲೆಗಳನ್ನು ಪಡೆದರೂ ಅವುಗಳನ್ನು ಕಂಪ್ಯೂಟರ್ ನಲ್ಲಿ ಅಳವಡಿಸುತ್ತಿಲ್ಲ. ಜೊತೆಗ ಯಾವ ಪಕ್ಷದವರು ಎಂಬುದನ್ನು ನೋಡಿ ಅರ್ಜಿಗಳನ್ನು ಮುಂದಕ್ಕೆ ರವಾನೆ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದಾರೆ. ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನೆರವು ದೊರೆಯದ ರೈತರ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ರೈತರಿಗೆ ನೆರವು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಮತ್ತೊಂದು ಕಡೆ ರಾಜ್ಯ ಸರ್ಕಾರ ರೈತರಿಗೆ ಘೋಷಿಸಿರುವ ನಾಲ್ಕು ಸಾವಿರ ಹಣ ಇದುವರೆಗೂ ಬಂದಿಲ್ಲ. ಈ ಬಗ್ಗೆಯೂ ಉತ್ತರವನ್ನು ರೈತರು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...