Homeಮುಖಪುಟಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು...

ಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ

- Advertisement -
- Advertisement -

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು ದೇಶಾದ್ಯಂತ ಜಾರಿಗೊಳಿಸಿದ್ದು ಅದರ ಫಲ ಬಹುತೇಕ ಅರ್ಹ ರೈತರಿಗೆ ದೊರಕಿಲ್ಲದೇ ಇರುವುದು ಶೋಚನೀಯ ಸಂಗತಿ.  ಕೃಷಿ ಸನ್ಮಾನ್ ನಿಧಿ ಯೋಜನೆಯ ಹಣ ಪಡೆಯಲು ಬೇಕಾದ ಎಲ್ಲಾ ದಾಖಲೆಗಳನ್ನು ನೀಡಿಯೂ ಹಣ ಬ್ಯಾಂಕ್ ಖಾತೆಗೆ ಬಿದ್ದಿಲ್ಲ ಎಂಬುದು ರೈತರ ನೋವು. ಈ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ತುಮಕೂರಿನಲ್ಲಿ ಜನವರಿ 2ರಂದು ನಡೆಯಲಿರುವ ರೈತರ ಸಮಾವೇಶದಲ್ಲಿ ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಹಾಗಾದರೆ ರಾಜ್ಯದಲ್ಲಿ ರೈತರಿಗೆ ಒಂದು ವರ್ಷದ ಹಣ ಆರು ಸಾವಿರ ರೂಪಾಯಿ ಬಂದಿದೆಯೇ ಇಲ್ಲವೇ ಎಂಬ ಬಗ್ಗೆ ಕ್ರಾಸ್ ಚೆಕ್ ಮಾಡಿದಾಗ ಕಂಡುಬಂದ ಸತ್ಯಾಂಶದ ವರದಿ ಇಲ್ಲಿದೆ. 

ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು 01-12-2018ರಂದು ಪ್ರಧಾನಿ ನರೇಂದ್ರ ಮೋದಿ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಆಗ ಉತ್ತರಭಾರತದ ಕೆಲವು ರಾಜ್ಯಗಳ ಉಪಚುನಾವಣೆಗಳು ನಡೆಯುವುದರಲ್ಲಿದ್ದವು. ಚುನಾವಣೆ ಯಲ್ಲಿ ಮತ ಸೆಳೆಯುವ ಉದ್ದೇಶವನ್ನಿಟ್ಟುಕೊಂಡೇ ಈ ಯೋಜನೆ ಜಾರಿಯಾಯಿತು. ಎರಡು ಹೆಕ್ಟೇರ್ ಅಂದರೆ 5 ಎಕರೆಯೊಳಗೆ ಭೂಮಿ ಇರುವ ರೈತರ ಖಾತೆಗಳಿಗೆ 2 ಸಾವಿರ ರೂಪಾಯಿ ಹಣವನ್ನು ನೇರ ರೈತರ ಖಾತೆಗಗಳಿಗೆ ಬಿಡುಗಡೆ ಮಾಡಲಾಯಿತು. ಅದು ಮೊದಲ ಕಂತಾಗಿತ್ತು. ಇದನ್ನು ಬೆಂಬಲಸಿದ ಅಂದಿನ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರವೂ ವಾರ್ಷಿಕ 4 ಸಾವಿರ ರೂಪಾಯಿ ರೈತರಿಗೆ ನೀಡುವುದಾಗಿ ಘೋಷಿಸಿತು. ಇದು ಈಗ ಇತಿಹಾಸದ ಪುಟ ಸೇರಿಹೋಗಿದೆ.

ಕೇಂದ್ರ ಸರ್ಕಾರ ಈಗಾಗಲೇ ಈ ಯೋಜನೆಯಡಿ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ಹಣವನ್ನು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಬಿಡುಗಡೆ ಮಾಡಿದೆ ಎಂದು ಬೀಗುತ್ತಿದೆ. ಆದರೆ ವಾಸ್ತವದಲ್ಲಿ ಎಲ್ಲ ರೈತರ ಖಾತೆಗೂ ಹಣ ನೇರವರ್ಗಾವಣೆಯಾಗಿದೆಯೇ ಎಂದು ಕ್ರಾಸ್ ಚೆಕ್ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂಬುದು ಸಾಬೀತಾಗಿದೆ. ಕೆಲವು ಕಡೆ ಮೂರು ಕಂತುಗಳನ್ನು ಹಾಕಿ ತನ್ನ ಮಾತನ್ನು ಉಳಿಸಿಕೊಂಡಿದ್ದಾರೆ ಮೋದಿ. ಆದರೆ ಬಹುತೇಕ ಕಡೆಯ ರೈತರಿಗೆ ಒಂದು ಕಂತಿನ ಹಣವನ್ನು ಮಾತ್ರ ವರ್ಗಾವಣೆ ಮಾಡಲಾಗಿದೆ. ಅಂದರೆ ರೈತರಿಗೆ ಹಣ ನೀಡುವಲ್ಲಿ ತಾರತಮ್ಯ ಮಾಡಿರುವುದು ಗೋಚರಿಸಿದೆ.

ಯೋಜನೆ ಜಾರಿಯಾದ ಆರಂಭದಲ್ಲೇ ರೈತರು ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಗ್ರಾಮ ಪಂಚಾಯ್ತಿ ಪಿಡಿಒಗಳ ಮೂಲಕ ಅಗತ್ಯ ದಾಖಲೆಗಳನ್ನು ನೀಡಿದ್ದಾರೆ. ಅಂದರೆ ರೈತರು ಜಮೀನು ಹೊಂದಿರುವ ಬಗ್ಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಹೀಗೆ ಸರ್ಕಾರ ಕೇಳಿದ ಎಲ್ಲಾ ದಾಖಲೆಗಳನ್ನು ನೀಡಿದ್ದಾರೆ. ಕೆಲವರಿಗೆ ಮೊದಲ ಕಂತಿನ ಹಣ ಬಂದಿದೆ. ಮತ್ತೆ ಕೆಲವರಿಗೆ ಎರಡು ಕಂತು, ಇನ್ನೂ ಕೆಲವರಿಗೆ ಮೂರು ಕಂತುಗಳ ಹಣ ಬಂದಿದೆ. ಸರ್ಕಾರ ಘೋಷಿಸಿದ ಪೂರ್ಣ ಹಣ ಬಾರದ ರೈತರು ಮತ್ತೆ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಬ್ಯಾಂಕ್ ಗಳಿಗೆ ಅಲೆದು ಮೂರು ಬಾರಿ ಸೂಚಿಸಿದ ದಾಖಲೆಗಳನ್ನು ನೀಡಿದ್ದರೂ ಹಣ ಬಂದಿಲ್ಲ. ಈ ಬಗ್ಗೆ ಕೇಳಿದರೆ ನಾವು ಕಳಿಸಿದ್ದೇವೆ. ಎಲ್ಲವೂ ದೆಹಲಿಯಲ್ಲೇ ತಿರ್ಮಾನವಾಗುತ್ತದೆ ಎಂಬ ಸಬೂಬು ಹೇಳಿಕಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಸುಮಾರು 72 ಸಾವಿರ ರೈತರು ಕೃಷಿ ಸನ್ಮಾನ್ ನಿಧಿ ಯೋಜನೆಯ ನೆರವು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಇವರ ಪೈಕಿ 12 ಸಾವಿರ ಮಂದಿ ರೈತರಿಗೆ 6 ಸಾವಿರ ಅಂದರೆ ಮೂರು ಕಂತಿನ ಹಣ ಬಂದಿದೆ. ಉಳಿದ 60 ಸಾವಿರ ಮಂದಿ ರೈತರಿಗೆ ಒಂದು, ಎರಡು ಕಂತಿನ ಹಣ ರೈತರ ಖಾತೆಗೆ ವರ್ಗಾವಣೆಯಾಗಿದೆ. ಅಂದರೆ ಇವರಿಗೆ ಪೂರಾ ಹಣ ಬಂದಿಲ್ಲ. ಇನ್ನೂ ಶೇಕಡ 25ರಷ್ಟು ಹಣ ಬರಬೇಕು.

ಬಿಜೆಪಿ ಸಂಸದ ಎ. ನಾರಾಯಣಸ್ವಾಮಿ ಕ್ಷೇತ್ರ ಚಿತ್ರದುರ್ಗದಲ್ಲಿ ಶೇಕಡ 90ರಷ್ಟು ಹಣ ಬಂದಿದೆ. ಈ ಜಿಲ್ಲೆಯಲ್ಲಿ ಎಲ್ಲ ರೈತರು ವಾರ್ಷಿಕವಾಗಿ ನೀಡುವ ಮೂರು ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ. ದಾಖಲೆಗಳನ್ನು ಸಮರ್ಪಕವಾಗಿ ನೀಡದ ರೈತರಿಗೆ ಮಾತ್ರ ಹಣ ಬಿಡುಗಡೆಯಾಗಿಲ್ಲ. ಉಳಿದಂತೆ ಎಲ್ಲಾ ರೈತರಿಗೂ ಹಣ ಬಂದಿದೆ ಎನ್ನುತ್ತಾರೆ.

ತುಮಕೂರು ಜಿಲ್ಲೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ಒಂದು ಕಂತಿನ ಹಣ ವರ್ಗಾವಣೆಯಾಗಿರುವುದು ಬಿಟ್ಟರೆ ಬಹುತೇಕ ಅರ್ಹ ಫಲಾನುಭವಿ ರೈತರಿಗೆ ಈ ಯೋಜನೆಯ ನೆರವು ದೊರೆತಿಲ್ಲ. ಕುಣಿಗಲ್ ಸಂತೆಮಾವತ್ತೂರು ರೈತ ನಾಗಣ್ಣ ಹೇಳುವ ಹಾಗೆ ನೆರವಿಗಾಗಿ ಆಧಾರ್, ಪಹಣಿ, ಬ್ಯಾಂಕ್ ಪುಸ್ತಕ ಕೊಟ್ಟರೂ ನಮಗೆ ಇದುವರೆಗೆ ಬಿಡಿಗಾಸು ನೋಡಿಲ್ಲ. ನಮ್ಮ ಗ್ರಾಮದಲ್ಲಿ ಯಾರಿಗೂ ಒಂದು ಕಂತು ಹಣವೂ ಬಂದಿಲ್ಲ. ಏನು ನಡೆಯುತ್ತಿದೆ ಎಂದು ಗೊತ್ತಿಲ್ಲ ಎನ್ನುತ್ತಾರೆ.

ಗುಬ್ಬಿ ತಾಲೂಕು ಚೇಳೂರು ರೈತ ರಾಜಣ್ಣ ಮತ್ತು ಬುಡ್ಡಣ್ಣ ಮಾತ್ರ ನಮಗೆ ಒಂದು ಕಂತಿನ ಹಣ ಬಂತು. ಬ್ಯಾಂಕಿನಿಂದ ಆ ಹಣವನ್ನು ಬಿಡಿಸಿಕೊಂಡಿದ್ದೇವೆ. ಮತ್ತು ಮೊಬೈಲ್ ನಲ್ಲಿ ಚೆಕ್ ಮಾಡಿದರೆ ಪೆಂಡಿಂಗ್ ಅಂತ ಬರ್ತಾ ಇದೆ. ನಾವು ಅವರು (ಸರ್ಕಾರ) ಹೇಳಿದ ದಾಖಲೆಗಳನ್ನು ಕೊಟ್ಟರೂ ನಮಗೆ ದುಡ್ಡು ಬರ್ತಿಲ್ಲ. ಯಾರನ್ನು ಕೇಳಿದರೂ ಏನು ಹೇಳ್ತಿಲ್ಲ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಪಾವಗಡ ತಾಲೂಕು ಸೊಳಿಯಪ್ಪ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಲಾಯಿತು. ಅವರು ನನಗೆ ಎರಡು ಎಕರೆ ಜಮೀನು ಇದೆ. ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕೃಷಿ ಇಲಾಖೆಗೆ ಎರಡೆರಡು ಬಾರಿ ದಾಖಲೆ ನೀಡಿದ್ದೇನೆ. ಹಣವೂ ಇಲ್ಲ. ಉತ್ತರವೂ ಇಲ್ಲ. ಯಾರ್ನಪ್ಪ ಕೇಳಾನ. ಇಲ್ಲಿಯವರನ್ನು ಕೇಳಿದರೆ ಮೇಲಕ್ಕೆ ತೋರಿಸುತ್ತಾರೆ. ನಾವು ಅಲ್ಲಿಗೋಗಿ ಕೇಳಕಾಗಲ್ಲ.

ಹೆಂಡತಿ ಹೆಸರಿನಲ್ಲಿ 3 ಎಕರೆ ಜಮೀನಿದೆ. ಪಾಸ್ ಬುಕ್, ಆರ್.ಟಿ.ಸಿ. ಆಧಾರ್ ಎಲ್ಲ ಕೊಟ್ಟರೂ ನಮಗೆ ದುಡ್ಡೇ ಬಂದಿಲ್ಲ. ಪಿಡಿಓ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಪಂಚಾಯಿತಿ ಮತ್ತು ಕೃಷಿ ಇಲಾಖೆಯಲ್ಲಿ ಏನೋ ನಡೀತಾ ಇದೆ. ಸಣ್ಣ ರೈತರು ಅಂದರೆ ಎಲ್ಲರಿಗೂ ಕೊಡಬೇಕಲ್ವ, ಕೆಲವ್ರಿಗೆ ಕೊಡ್ತಾರೆ. ಬಹುತೇಕರಿಗೆ ಇಲ್ಲ. ರಾಜಕೀಯ ನಡೆಯುತ್ತಿದೆ. – ಸಿ. ಅಜ್ಜಪ್ಪ, ಕೂಲಿ ಕೆಲಸ.

ಕೃಷಿ ಸನ್ಮಾನ್ ನಿಧಿ ಯೋಜನೆಯಡಿ ಸಂಸದರು, ಸಚಿವರು, ಶಾಸಕರು, ಮಂತ್ರಿಗಳು, ಮೇಯರ್, ಸರ್ಕಾರಿ, ನೌಕರರು, ವೈದ್ಯರು, ವಕೀಲರು ಮೊದಲಾದವರಿಗೆ ಹಣ ನೀಡಲು ಬರುವುದಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ಸೂಕ್ತ ದಾಖಲೆ ಹೊಂದಿರುವ ಅರ್ಹ ಫಲಾನುಭವಿ ರೈತರಿಗೆ ನೆರವು ದೊರೆಯುತ್ತಿಲ್ಲ. ಗ್ರಾಮ ಪಂಚಾಯಿತಿ, ಕೃಷಿ ಇಲಾಖೆ, ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ರೈತರಿಗೆ ಸಿಗಬೇಕಾದ ಸರ್ಕಾರದ ನೆರವಿಗೆ ಅಡ್ಡಿಪಡಿಸುತ್ತಿದ್ದಾರೆಂಬ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಅರ್ಹ ರೈತರಿಂದ ಸೂಕ್ತ ದಾಖಲೆಗಳನ್ನು ಪಡೆದರೂ ಅವುಗಳನ್ನು ಕಂಪ್ಯೂಟರ್ ನಲ್ಲಿ ಅಳವಡಿಸುತ್ತಿಲ್ಲ. ಜೊತೆಗ ಯಾವ ಪಕ್ಷದವರು ಎಂಬುದನ್ನು ನೋಡಿ ಅರ್ಜಿಗಳನ್ನು ಮುಂದಕ್ಕೆ ರವಾನೆ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದಾರೆ. ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನೆರವು ದೊರೆಯದ ರೈತರ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ರೈತರಿಗೆ ನೆರವು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಮತ್ತೊಂದು ಕಡೆ ರಾಜ್ಯ ಸರ್ಕಾರ ರೈತರಿಗೆ ಘೋಷಿಸಿರುವ ನಾಲ್ಕು ಸಾವಿರ ಹಣ ಇದುವರೆಗೂ ಬಂದಿಲ್ಲ. ಈ ಬಗ್ಗೆಯೂ ಉತ್ತರವನ್ನು ರೈತರು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...