Homeಮುಖಪುಟಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು...

ಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ

- Advertisement -
- Advertisement -

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು ದೇಶಾದ್ಯಂತ ಜಾರಿಗೊಳಿಸಿದ್ದು ಅದರ ಫಲ ಬಹುತೇಕ ಅರ್ಹ ರೈತರಿಗೆ ದೊರಕಿಲ್ಲದೇ ಇರುವುದು ಶೋಚನೀಯ ಸಂಗತಿ.  ಕೃಷಿ ಸನ್ಮಾನ್ ನಿಧಿ ಯೋಜನೆಯ ಹಣ ಪಡೆಯಲು ಬೇಕಾದ ಎಲ್ಲಾ ದಾಖಲೆಗಳನ್ನು ನೀಡಿಯೂ ಹಣ ಬ್ಯಾಂಕ್ ಖಾತೆಗೆ ಬಿದ್ದಿಲ್ಲ ಎಂಬುದು ರೈತರ ನೋವು. ಈ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ತುಮಕೂರಿನಲ್ಲಿ ಜನವರಿ 2ರಂದು ನಡೆಯಲಿರುವ ರೈತರ ಸಮಾವೇಶದಲ್ಲಿ ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಹಾಗಾದರೆ ರಾಜ್ಯದಲ್ಲಿ ರೈತರಿಗೆ ಒಂದು ವರ್ಷದ ಹಣ ಆರು ಸಾವಿರ ರೂಪಾಯಿ ಬಂದಿದೆಯೇ ಇಲ್ಲವೇ ಎಂಬ ಬಗ್ಗೆ ಕ್ರಾಸ್ ಚೆಕ್ ಮಾಡಿದಾಗ ಕಂಡುಬಂದ ಸತ್ಯಾಂಶದ ವರದಿ ಇಲ್ಲಿದೆ. 

ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು 01-12-2018ರಂದು ಪ್ರಧಾನಿ ನರೇಂದ್ರ ಮೋದಿ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಆಗ ಉತ್ತರಭಾರತದ ಕೆಲವು ರಾಜ್ಯಗಳ ಉಪಚುನಾವಣೆಗಳು ನಡೆಯುವುದರಲ್ಲಿದ್ದವು. ಚುನಾವಣೆ ಯಲ್ಲಿ ಮತ ಸೆಳೆಯುವ ಉದ್ದೇಶವನ್ನಿಟ್ಟುಕೊಂಡೇ ಈ ಯೋಜನೆ ಜಾರಿಯಾಯಿತು. ಎರಡು ಹೆಕ್ಟೇರ್ ಅಂದರೆ 5 ಎಕರೆಯೊಳಗೆ ಭೂಮಿ ಇರುವ ರೈತರ ಖಾತೆಗಳಿಗೆ 2 ಸಾವಿರ ರೂಪಾಯಿ ಹಣವನ್ನು ನೇರ ರೈತರ ಖಾತೆಗಗಳಿಗೆ ಬಿಡುಗಡೆ ಮಾಡಲಾಯಿತು. ಅದು ಮೊದಲ ಕಂತಾಗಿತ್ತು. ಇದನ್ನು ಬೆಂಬಲಸಿದ ಅಂದಿನ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರವೂ ವಾರ್ಷಿಕ 4 ಸಾವಿರ ರೂಪಾಯಿ ರೈತರಿಗೆ ನೀಡುವುದಾಗಿ ಘೋಷಿಸಿತು. ಇದು ಈಗ ಇತಿಹಾಸದ ಪುಟ ಸೇರಿಹೋಗಿದೆ.

ಕೇಂದ್ರ ಸರ್ಕಾರ ಈಗಾಗಲೇ ಈ ಯೋಜನೆಯಡಿ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ಹಣವನ್ನು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಬಿಡುಗಡೆ ಮಾಡಿದೆ ಎಂದು ಬೀಗುತ್ತಿದೆ. ಆದರೆ ವಾಸ್ತವದಲ್ಲಿ ಎಲ್ಲ ರೈತರ ಖಾತೆಗೂ ಹಣ ನೇರವರ್ಗಾವಣೆಯಾಗಿದೆಯೇ ಎಂದು ಕ್ರಾಸ್ ಚೆಕ್ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂಬುದು ಸಾಬೀತಾಗಿದೆ. ಕೆಲವು ಕಡೆ ಮೂರು ಕಂತುಗಳನ್ನು ಹಾಕಿ ತನ್ನ ಮಾತನ್ನು ಉಳಿಸಿಕೊಂಡಿದ್ದಾರೆ ಮೋದಿ. ಆದರೆ ಬಹುತೇಕ ಕಡೆಯ ರೈತರಿಗೆ ಒಂದು ಕಂತಿನ ಹಣವನ್ನು ಮಾತ್ರ ವರ್ಗಾವಣೆ ಮಾಡಲಾಗಿದೆ. ಅಂದರೆ ರೈತರಿಗೆ ಹಣ ನೀಡುವಲ್ಲಿ ತಾರತಮ್ಯ ಮಾಡಿರುವುದು ಗೋಚರಿಸಿದೆ.

ಯೋಜನೆ ಜಾರಿಯಾದ ಆರಂಭದಲ್ಲೇ ರೈತರು ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಗ್ರಾಮ ಪಂಚಾಯ್ತಿ ಪಿಡಿಒಗಳ ಮೂಲಕ ಅಗತ್ಯ ದಾಖಲೆಗಳನ್ನು ನೀಡಿದ್ದಾರೆ. ಅಂದರೆ ರೈತರು ಜಮೀನು ಹೊಂದಿರುವ ಬಗ್ಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಹೀಗೆ ಸರ್ಕಾರ ಕೇಳಿದ ಎಲ್ಲಾ ದಾಖಲೆಗಳನ್ನು ನೀಡಿದ್ದಾರೆ. ಕೆಲವರಿಗೆ ಮೊದಲ ಕಂತಿನ ಹಣ ಬಂದಿದೆ. ಮತ್ತೆ ಕೆಲವರಿಗೆ ಎರಡು ಕಂತು, ಇನ್ನೂ ಕೆಲವರಿಗೆ ಮೂರು ಕಂತುಗಳ ಹಣ ಬಂದಿದೆ. ಸರ್ಕಾರ ಘೋಷಿಸಿದ ಪೂರ್ಣ ಹಣ ಬಾರದ ರೈತರು ಮತ್ತೆ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಬ್ಯಾಂಕ್ ಗಳಿಗೆ ಅಲೆದು ಮೂರು ಬಾರಿ ಸೂಚಿಸಿದ ದಾಖಲೆಗಳನ್ನು ನೀಡಿದ್ದರೂ ಹಣ ಬಂದಿಲ್ಲ. ಈ ಬಗ್ಗೆ ಕೇಳಿದರೆ ನಾವು ಕಳಿಸಿದ್ದೇವೆ. ಎಲ್ಲವೂ ದೆಹಲಿಯಲ್ಲೇ ತಿರ್ಮಾನವಾಗುತ್ತದೆ ಎಂಬ ಸಬೂಬು ಹೇಳಿಕಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಸುಮಾರು 72 ಸಾವಿರ ರೈತರು ಕೃಷಿ ಸನ್ಮಾನ್ ನಿಧಿ ಯೋಜನೆಯ ನೆರವು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಇವರ ಪೈಕಿ 12 ಸಾವಿರ ಮಂದಿ ರೈತರಿಗೆ 6 ಸಾವಿರ ಅಂದರೆ ಮೂರು ಕಂತಿನ ಹಣ ಬಂದಿದೆ. ಉಳಿದ 60 ಸಾವಿರ ಮಂದಿ ರೈತರಿಗೆ ಒಂದು, ಎರಡು ಕಂತಿನ ಹಣ ರೈತರ ಖಾತೆಗೆ ವರ್ಗಾವಣೆಯಾಗಿದೆ. ಅಂದರೆ ಇವರಿಗೆ ಪೂರಾ ಹಣ ಬಂದಿಲ್ಲ. ಇನ್ನೂ ಶೇಕಡ 25ರಷ್ಟು ಹಣ ಬರಬೇಕು.

ಬಿಜೆಪಿ ಸಂಸದ ಎ. ನಾರಾಯಣಸ್ವಾಮಿ ಕ್ಷೇತ್ರ ಚಿತ್ರದುರ್ಗದಲ್ಲಿ ಶೇಕಡ 90ರಷ್ಟು ಹಣ ಬಂದಿದೆ. ಈ ಜಿಲ್ಲೆಯಲ್ಲಿ ಎಲ್ಲ ರೈತರು ವಾರ್ಷಿಕವಾಗಿ ನೀಡುವ ಮೂರು ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ. ದಾಖಲೆಗಳನ್ನು ಸಮರ್ಪಕವಾಗಿ ನೀಡದ ರೈತರಿಗೆ ಮಾತ್ರ ಹಣ ಬಿಡುಗಡೆಯಾಗಿಲ್ಲ. ಉಳಿದಂತೆ ಎಲ್ಲಾ ರೈತರಿಗೂ ಹಣ ಬಂದಿದೆ ಎನ್ನುತ್ತಾರೆ.

ತುಮಕೂರು ಜಿಲ್ಲೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ಒಂದು ಕಂತಿನ ಹಣ ವರ್ಗಾವಣೆಯಾಗಿರುವುದು ಬಿಟ್ಟರೆ ಬಹುತೇಕ ಅರ್ಹ ಫಲಾನುಭವಿ ರೈತರಿಗೆ ಈ ಯೋಜನೆಯ ನೆರವು ದೊರೆತಿಲ್ಲ. ಕುಣಿಗಲ್ ಸಂತೆಮಾವತ್ತೂರು ರೈತ ನಾಗಣ್ಣ ಹೇಳುವ ಹಾಗೆ ನೆರವಿಗಾಗಿ ಆಧಾರ್, ಪಹಣಿ, ಬ್ಯಾಂಕ್ ಪುಸ್ತಕ ಕೊಟ್ಟರೂ ನಮಗೆ ಇದುವರೆಗೆ ಬಿಡಿಗಾಸು ನೋಡಿಲ್ಲ. ನಮ್ಮ ಗ್ರಾಮದಲ್ಲಿ ಯಾರಿಗೂ ಒಂದು ಕಂತು ಹಣವೂ ಬಂದಿಲ್ಲ. ಏನು ನಡೆಯುತ್ತಿದೆ ಎಂದು ಗೊತ್ತಿಲ್ಲ ಎನ್ನುತ್ತಾರೆ.

ಗುಬ್ಬಿ ತಾಲೂಕು ಚೇಳೂರು ರೈತ ರಾಜಣ್ಣ ಮತ್ತು ಬುಡ್ಡಣ್ಣ ಮಾತ್ರ ನಮಗೆ ಒಂದು ಕಂತಿನ ಹಣ ಬಂತು. ಬ್ಯಾಂಕಿನಿಂದ ಆ ಹಣವನ್ನು ಬಿಡಿಸಿಕೊಂಡಿದ್ದೇವೆ. ಮತ್ತು ಮೊಬೈಲ್ ನಲ್ಲಿ ಚೆಕ್ ಮಾಡಿದರೆ ಪೆಂಡಿಂಗ್ ಅಂತ ಬರ್ತಾ ಇದೆ. ನಾವು ಅವರು (ಸರ್ಕಾರ) ಹೇಳಿದ ದಾಖಲೆಗಳನ್ನು ಕೊಟ್ಟರೂ ನಮಗೆ ದುಡ್ಡು ಬರ್ತಿಲ್ಲ. ಯಾರನ್ನು ಕೇಳಿದರೂ ಏನು ಹೇಳ್ತಿಲ್ಲ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಪಾವಗಡ ತಾಲೂಕು ಸೊಳಿಯಪ್ಪ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಲಾಯಿತು. ಅವರು ನನಗೆ ಎರಡು ಎಕರೆ ಜಮೀನು ಇದೆ. ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕೃಷಿ ಇಲಾಖೆಗೆ ಎರಡೆರಡು ಬಾರಿ ದಾಖಲೆ ನೀಡಿದ್ದೇನೆ. ಹಣವೂ ಇಲ್ಲ. ಉತ್ತರವೂ ಇಲ್ಲ. ಯಾರ್ನಪ್ಪ ಕೇಳಾನ. ಇಲ್ಲಿಯವರನ್ನು ಕೇಳಿದರೆ ಮೇಲಕ್ಕೆ ತೋರಿಸುತ್ತಾರೆ. ನಾವು ಅಲ್ಲಿಗೋಗಿ ಕೇಳಕಾಗಲ್ಲ.

ಹೆಂಡತಿ ಹೆಸರಿನಲ್ಲಿ 3 ಎಕರೆ ಜಮೀನಿದೆ. ಪಾಸ್ ಬುಕ್, ಆರ್.ಟಿ.ಸಿ. ಆಧಾರ್ ಎಲ್ಲ ಕೊಟ್ಟರೂ ನಮಗೆ ದುಡ್ಡೇ ಬಂದಿಲ್ಲ. ಪಿಡಿಓ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಪಂಚಾಯಿತಿ ಮತ್ತು ಕೃಷಿ ಇಲಾಖೆಯಲ್ಲಿ ಏನೋ ನಡೀತಾ ಇದೆ. ಸಣ್ಣ ರೈತರು ಅಂದರೆ ಎಲ್ಲರಿಗೂ ಕೊಡಬೇಕಲ್ವ, ಕೆಲವ್ರಿಗೆ ಕೊಡ್ತಾರೆ. ಬಹುತೇಕರಿಗೆ ಇಲ್ಲ. ರಾಜಕೀಯ ನಡೆಯುತ್ತಿದೆ. – ಸಿ. ಅಜ್ಜಪ್ಪ, ಕೂಲಿ ಕೆಲಸ.

ಕೃಷಿ ಸನ್ಮಾನ್ ನಿಧಿ ಯೋಜನೆಯಡಿ ಸಂಸದರು, ಸಚಿವರು, ಶಾಸಕರು, ಮಂತ್ರಿಗಳು, ಮೇಯರ್, ಸರ್ಕಾರಿ, ನೌಕರರು, ವೈದ್ಯರು, ವಕೀಲರು ಮೊದಲಾದವರಿಗೆ ಹಣ ನೀಡಲು ಬರುವುದಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ಸೂಕ್ತ ದಾಖಲೆ ಹೊಂದಿರುವ ಅರ್ಹ ಫಲಾನುಭವಿ ರೈತರಿಗೆ ನೆರವು ದೊರೆಯುತ್ತಿಲ್ಲ. ಗ್ರಾಮ ಪಂಚಾಯಿತಿ, ಕೃಷಿ ಇಲಾಖೆ, ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ರೈತರಿಗೆ ಸಿಗಬೇಕಾದ ಸರ್ಕಾರದ ನೆರವಿಗೆ ಅಡ್ಡಿಪಡಿಸುತ್ತಿದ್ದಾರೆಂಬ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಅರ್ಹ ರೈತರಿಂದ ಸೂಕ್ತ ದಾಖಲೆಗಳನ್ನು ಪಡೆದರೂ ಅವುಗಳನ್ನು ಕಂಪ್ಯೂಟರ್ ನಲ್ಲಿ ಅಳವಡಿಸುತ್ತಿಲ್ಲ. ಜೊತೆಗ ಯಾವ ಪಕ್ಷದವರು ಎಂಬುದನ್ನು ನೋಡಿ ಅರ್ಜಿಗಳನ್ನು ಮುಂದಕ್ಕೆ ರವಾನೆ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದಾರೆ. ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನೆರವು ದೊರೆಯದ ರೈತರ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ರೈತರಿಗೆ ನೆರವು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಮತ್ತೊಂದು ಕಡೆ ರಾಜ್ಯ ಸರ್ಕಾರ ರೈತರಿಗೆ ಘೋಷಿಸಿರುವ ನಾಲ್ಕು ಸಾವಿರ ಹಣ ಇದುವರೆಗೂ ಬಂದಿಲ್ಲ. ಈ ಬಗ್ಗೆಯೂ ಉತ್ತರವನ್ನು ರೈತರು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...