Homeಮುಖಪುಟಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು...

ಕೃಷಿ ಸನ್ಮಾನ್ ನಿಧಿ (ರೈತರಿಗೆ ಮೂರು ಕಂತುಗಳಲ್ಲಿ ಆರು ಸಾವಿರ ಹಣ) ಯೋಜನೆ : ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ

- Advertisement -
- Advertisement -

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು ದೇಶಾದ್ಯಂತ ಜಾರಿಗೊಳಿಸಿದ್ದು ಅದರ ಫಲ ಬಹುತೇಕ ಅರ್ಹ ರೈತರಿಗೆ ದೊರಕಿಲ್ಲದೇ ಇರುವುದು ಶೋಚನೀಯ ಸಂಗತಿ.  ಕೃಷಿ ಸನ್ಮಾನ್ ನಿಧಿ ಯೋಜನೆಯ ಹಣ ಪಡೆಯಲು ಬೇಕಾದ ಎಲ್ಲಾ ದಾಖಲೆಗಳನ್ನು ನೀಡಿಯೂ ಹಣ ಬ್ಯಾಂಕ್ ಖಾತೆಗೆ ಬಿದ್ದಿಲ್ಲ ಎಂಬುದು ರೈತರ ನೋವು. ಈ ಯೋಜನೆ ಜಾರಿಗೆ ಬಂದು ಒಂದು ವರ್ಷ ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ತುಮಕೂರಿನಲ್ಲಿ ಜನವರಿ 2ರಂದು ನಡೆಯಲಿರುವ ರೈತರ ಸಮಾವೇಶದಲ್ಲಿ ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಹಾಗಾದರೆ ರಾಜ್ಯದಲ್ಲಿ ರೈತರಿಗೆ ಒಂದು ವರ್ಷದ ಹಣ ಆರು ಸಾವಿರ ರೂಪಾಯಿ ಬಂದಿದೆಯೇ ಇಲ್ಲವೇ ಎಂಬ ಬಗ್ಗೆ ಕ್ರಾಸ್ ಚೆಕ್ ಮಾಡಿದಾಗ ಕಂಡುಬಂದ ಸತ್ಯಾಂಶದ ವರದಿ ಇಲ್ಲಿದೆ. 

ಕೃಷಿ ಸನ್ಮಾನ್ ನಿಧಿ ಯೋಜನೆಯನ್ನು 01-12-2018ರಂದು ಪ್ರಧಾನಿ ನರೇಂದ್ರ ಮೋದಿ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಆಗ ಉತ್ತರಭಾರತದ ಕೆಲವು ರಾಜ್ಯಗಳ ಉಪಚುನಾವಣೆಗಳು ನಡೆಯುವುದರಲ್ಲಿದ್ದವು. ಚುನಾವಣೆ ಯಲ್ಲಿ ಮತ ಸೆಳೆಯುವ ಉದ್ದೇಶವನ್ನಿಟ್ಟುಕೊಂಡೇ ಈ ಯೋಜನೆ ಜಾರಿಯಾಯಿತು. ಎರಡು ಹೆಕ್ಟೇರ್ ಅಂದರೆ 5 ಎಕರೆಯೊಳಗೆ ಭೂಮಿ ಇರುವ ರೈತರ ಖಾತೆಗಳಿಗೆ 2 ಸಾವಿರ ರೂಪಾಯಿ ಹಣವನ್ನು ನೇರ ರೈತರ ಖಾತೆಗಗಳಿಗೆ ಬಿಡುಗಡೆ ಮಾಡಲಾಯಿತು. ಅದು ಮೊದಲ ಕಂತಾಗಿತ್ತು. ಇದನ್ನು ಬೆಂಬಲಸಿದ ಅಂದಿನ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರವೂ ವಾರ್ಷಿಕ 4 ಸಾವಿರ ರೂಪಾಯಿ ರೈತರಿಗೆ ನೀಡುವುದಾಗಿ ಘೋಷಿಸಿತು. ಇದು ಈಗ ಇತಿಹಾಸದ ಪುಟ ಸೇರಿಹೋಗಿದೆ.

ಕೇಂದ್ರ ಸರ್ಕಾರ ಈಗಾಗಲೇ ಈ ಯೋಜನೆಯಡಿ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ಹಣವನ್ನು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಬಿಡುಗಡೆ ಮಾಡಿದೆ ಎಂದು ಬೀಗುತ್ತಿದೆ. ಆದರೆ ವಾಸ್ತವದಲ್ಲಿ ಎಲ್ಲ ರೈತರ ಖಾತೆಗೂ ಹಣ ನೇರವರ್ಗಾವಣೆಯಾಗಿದೆಯೇ ಎಂದು ಕ್ರಾಸ್ ಚೆಕ್ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂಬುದು ಸಾಬೀತಾಗಿದೆ. ಕೆಲವು ಕಡೆ ಮೂರು ಕಂತುಗಳನ್ನು ಹಾಕಿ ತನ್ನ ಮಾತನ್ನು ಉಳಿಸಿಕೊಂಡಿದ್ದಾರೆ ಮೋದಿ. ಆದರೆ ಬಹುತೇಕ ಕಡೆಯ ರೈತರಿಗೆ ಒಂದು ಕಂತಿನ ಹಣವನ್ನು ಮಾತ್ರ ವರ್ಗಾವಣೆ ಮಾಡಲಾಗಿದೆ. ಅಂದರೆ ರೈತರಿಗೆ ಹಣ ನೀಡುವಲ್ಲಿ ತಾರತಮ್ಯ ಮಾಡಿರುವುದು ಗೋಚರಿಸಿದೆ.

ಯೋಜನೆ ಜಾರಿಯಾದ ಆರಂಭದಲ್ಲೇ ರೈತರು ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಗ್ರಾಮ ಪಂಚಾಯ್ತಿ ಪಿಡಿಒಗಳ ಮೂಲಕ ಅಗತ್ಯ ದಾಖಲೆಗಳನ್ನು ನೀಡಿದ್ದಾರೆ. ಅಂದರೆ ರೈತರು ಜಮೀನು ಹೊಂದಿರುವ ಬಗ್ಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಹೀಗೆ ಸರ್ಕಾರ ಕೇಳಿದ ಎಲ್ಲಾ ದಾಖಲೆಗಳನ್ನು ನೀಡಿದ್ದಾರೆ. ಕೆಲವರಿಗೆ ಮೊದಲ ಕಂತಿನ ಹಣ ಬಂದಿದೆ. ಮತ್ತೆ ಕೆಲವರಿಗೆ ಎರಡು ಕಂತು, ಇನ್ನೂ ಕೆಲವರಿಗೆ ಮೂರು ಕಂತುಗಳ ಹಣ ಬಂದಿದೆ. ಸರ್ಕಾರ ಘೋಷಿಸಿದ ಪೂರ್ಣ ಹಣ ಬಾರದ ರೈತರು ಮತ್ತೆ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಕೃಷಿ ಇಲಾಖೆ, ಬ್ಯಾಂಕ್ ಗಳಿಗೆ ಅಲೆದು ಮೂರು ಬಾರಿ ಸೂಚಿಸಿದ ದಾಖಲೆಗಳನ್ನು ನೀಡಿದ್ದರೂ ಹಣ ಬಂದಿಲ್ಲ. ಈ ಬಗ್ಗೆ ಕೇಳಿದರೆ ನಾವು ಕಳಿಸಿದ್ದೇವೆ. ಎಲ್ಲವೂ ದೆಹಲಿಯಲ್ಲೇ ತಿರ್ಮಾನವಾಗುತ್ತದೆ ಎಂಬ ಸಬೂಬು ಹೇಳಿಕಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಸುಮಾರು 72 ಸಾವಿರ ರೈತರು ಕೃಷಿ ಸನ್ಮಾನ್ ನಿಧಿ ಯೋಜನೆಯ ನೆರವು ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಇವರ ಪೈಕಿ 12 ಸಾವಿರ ಮಂದಿ ರೈತರಿಗೆ 6 ಸಾವಿರ ಅಂದರೆ ಮೂರು ಕಂತಿನ ಹಣ ಬಂದಿದೆ. ಉಳಿದ 60 ಸಾವಿರ ಮಂದಿ ರೈತರಿಗೆ ಒಂದು, ಎರಡು ಕಂತಿನ ಹಣ ರೈತರ ಖಾತೆಗೆ ವರ್ಗಾವಣೆಯಾಗಿದೆ. ಅಂದರೆ ಇವರಿಗೆ ಪೂರಾ ಹಣ ಬಂದಿಲ್ಲ. ಇನ್ನೂ ಶೇಕಡ 25ರಷ್ಟು ಹಣ ಬರಬೇಕು.

ಬಿಜೆಪಿ ಸಂಸದ ಎ. ನಾರಾಯಣಸ್ವಾಮಿ ಕ್ಷೇತ್ರ ಚಿತ್ರದುರ್ಗದಲ್ಲಿ ಶೇಕಡ 90ರಷ್ಟು ಹಣ ಬಂದಿದೆ. ಈ ಜಿಲ್ಲೆಯಲ್ಲಿ ಎಲ್ಲ ರೈತರು ವಾರ್ಷಿಕವಾಗಿ ನೀಡುವ ಮೂರು ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ. ದಾಖಲೆಗಳನ್ನು ಸಮರ್ಪಕವಾಗಿ ನೀಡದ ರೈತರಿಗೆ ಮಾತ್ರ ಹಣ ಬಿಡುಗಡೆಯಾಗಿಲ್ಲ. ಉಳಿದಂತೆ ಎಲ್ಲಾ ರೈತರಿಗೂ ಹಣ ಬಂದಿದೆ ಎನ್ನುತ್ತಾರೆ.

ತುಮಕೂರು ಜಿಲ್ಲೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ಒಂದು ಕಂತಿನ ಹಣ ವರ್ಗಾವಣೆಯಾಗಿರುವುದು ಬಿಟ್ಟರೆ ಬಹುತೇಕ ಅರ್ಹ ಫಲಾನುಭವಿ ರೈತರಿಗೆ ಈ ಯೋಜನೆಯ ನೆರವು ದೊರೆತಿಲ್ಲ. ಕುಣಿಗಲ್ ಸಂತೆಮಾವತ್ತೂರು ರೈತ ನಾಗಣ್ಣ ಹೇಳುವ ಹಾಗೆ ನೆರವಿಗಾಗಿ ಆಧಾರ್, ಪಹಣಿ, ಬ್ಯಾಂಕ್ ಪುಸ್ತಕ ಕೊಟ್ಟರೂ ನಮಗೆ ಇದುವರೆಗೆ ಬಿಡಿಗಾಸು ನೋಡಿಲ್ಲ. ನಮ್ಮ ಗ್ರಾಮದಲ್ಲಿ ಯಾರಿಗೂ ಒಂದು ಕಂತು ಹಣವೂ ಬಂದಿಲ್ಲ. ಏನು ನಡೆಯುತ್ತಿದೆ ಎಂದು ಗೊತ್ತಿಲ್ಲ ಎನ್ನುತ್ತಾರೆ.

ಗುಬ್ಬಿ ತಾಲೂಕು ಚೇಳೂರು ರೈತ ರಾಜಣ್ಣ ಮತ್ತು ಬುಡ್ಡಣ್ಣ ಮಾತ್ರ ನಮಗೆ ಒಂದು ಕಂತಿನ ಹಣ ಬಂತು. ಬ್ಯಾಂಕಿನಿಂದ ಆ ಹಣವನ್ನು ಬಿಡಿಸಿಕೊಂಡಿದ್ದೇವೆ. ಮತ್ತು ಮೊಬೈಲ್ ನಲ್ಲಿ ಚೆಕ್ ಮಾಡಿದರೆ ಪೆಂಡಿಂಗ್ ಅಂತ ಬರ್ತಾ ಇದೆ. ನಾವು ಅವರು (ಸರ್ಕಾರ) ಹೇಳಿದ ದಾಖಲೆಗಳನ್ನು ಕೊಟ್ಟರೂ ನಮಗೆ ದುಡ್ಡು ಬರ್ತಿಲ್ಲ. ಯಾರನ್ನು ಕೇಳಿದರೂ ಏನು ಹೇಳ್ತಿಲ್ಲ.

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಪಾವಗಡ ತಾಲೂಕು ಸೊಳಿಯಪ್ಪ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಲಾಯಿತು. ಅವರು ನನಗೆ ಎರಡು ಎಕರೆ ಜಮೀನು ಇದೆ. ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕೃಷಿ ಇಲಾಖೆಗೆ ಎರಡೆರಡು ಬಾರಿ ದಾಖಲೆ ನೀಡಿದ್ದೇನೆ. ಹಣವೂ ಇಲ್ಲ. ಉತ್ತರವೂ ಇಲ್ಲ. ಯಾರ್ನಪ್ಪ ಕೇಳಾನ. ಇಲ್ಲಿಯವರನ್ನು ಕೇಳಿದರೆ ಮೇಲಕ್ಕೆ ತೋರಿಸುತ್ತಾರೆ. ನಾವು ಅಲ್ಲಿಗೋಗಿ ಕೇಳಕಾಗಲ್ಲ.

ಹೆಂಡತಿ ಹೆಸರಿನಲ್ಲಿ 3 ಎಕರೆ ಜಮೀನಿದೆ. ಪಾಸ್ ಬುಕ್, ಆರ್.ಟಿ.ಸಿ. ಆಧಾರ್ ಎಲ್ಲ ಕೊಟ್ಟರೂ ನಮಗೆ ದುಡ್ಡೇ ಬಂದಿಲ್ಲ. ಪಿಡಿಓ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಪಂಚಾಯಿತಿ ಮತ್ತು ಕೃಷಿ ಇಲಾಖೆಯಲ್ಲಿ ಏನೋ ನಡೀತಾ ಇದೆ. ಸಣ್ಣ ರೈತರು ಅಂದರೆ ಎಲ್ಲರಿಗೂ ಕೊಡಬೇಕಲ್ವ, ಕೆಲವ್ರಿಗೆ ಕೊಡ್ತಾರೆ. ಬಹುತೇಕರಿಗೆ ಇಲ್ಲ. ರಾಜಕೀಯ ನಡೆಯುತ್ತಿದೆ. – ಸಿ. ಅಜ್ಜಪ್ಪ, ಕೂಲಿ ಕೆಲಸ.

ಕೃಷಿ ಸನ್ಮಾನ್ ನಿಧಿ ಯೋಜನೆಯಡಿ ಸಂಸದರು, ಸಚಿವರು, ಶಾಸಕರು, ಮಂತ್ರಿಗಳು, ಮೇಯರ್, ಸರ್ಕಾರಿ, ನೌಕರರು, ವೈದ್ಯರು, ವಕೀಲರು ಮೊದಲಾದವರಿಗೆ ಹಣ ನೀಡಲು ಬರುವುದಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ಸೂಕ್ತ ದಾಖಲೆ ಹೊಂದಿರುವ ಅರ್ಹ ಫಲಾನುಭವಿ ರೈತರಿಗೆ ನೆರವು ದೊರೆಯುತ್ತಿಲ್ಲ. ಗ್ರಾಮ ಪಂಚಾಯಿತಿ, ಕೃಷಿ ಇಲಾಖೆ, ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ರೈತರಿಗೆ ಸಿಗಬೇಕಾದ ಸರ್ಕಾರದ ನೆರವಿಗೆ ಅಡ್ಡಿಪಡಿಸುತ್ತಿದ್ದಾರೆಂಬ ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಅರ್ಹ ರೈತರಿಂದ ಸೂಕ್ತ ದಾಖಲೆಗಳನ್ನು ಪಡೆದರೂ ಅವುಗಳನ್ನು ಕಂಪ್ಯೂಟರ್ ನಲ್ಲಿ ಅಳವಡಿಸುತ್ತಿಲ್ಲ. ಜೊತೆಗ ಯಾವ ಪಕ್ಷದವರು ಎಂಬುದನ್ನು ನೋಡಿ ಅರ್ಜಿಗಳನ್ನು ಮುಂದಕ್ಕೆ ರವಾನೆ ಮಾಡಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ತುಮಕೂರು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದಾರೆ. ಕೃಷಿ ಸನ್ಮಾನ್ ನಿಧಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನೆರವು ದೊರೆಯದ ರೈತರ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿ ರೈತರಿಗೆ ನೆರವು ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಮತ್ತೊಂದು ಕಡೆ ರಾಜ್ಯ ಸರ್ಕಾರ ರೈತರಿಗೆ ಘೋಷಿಸಿರುವ ನಾಲ್ಕು ಸಾವಿರ ಹಣ ಇದುವರೆಗೂ ಬಂದಿಲ್ಲ. ಈ ಬಗ್ಗೆಯೂ ಉತ್ತರವನ್ನು ರೈತರು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...