Homeಕರ್ನಾಟಕ'ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ' :...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

- Advertisement -
- Advertisement -

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶನಿವಾರ (ಏ.4) ಸುದೀರ್ಘ ಪೋಸ್ಟ್ ಹಾಕಿರುವ ನಾರಾಯಣಗೌಡರು, “ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ. ಇದೇ ಅಧಿಕಪ್ರಸಂಗವನ್ನು ಮುಂದುವರೆಸಿದರೆ ರಾಜ್ಯಪಾಲರೇ, ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ನಾವು ಹೇಳಬೇಕಾಗುತ್ತದೆ” ಎಂದಿದ್ದಾರೆ.

“ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಅವರೇ, ಕರ್ನಾಟಕ ಸರ್ಕಾರಕ್ಕೆ ನೀವು ಬರೆದ ಪತ್ರದ ಕುರಿತ ಮಾಧ್ಯಮ ವರದಿಗಳನ್ನು ಗಮನಿಸಿದೆ. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ನೀವು ಹೇಳಿದ್ದೀರಿ. ನಿಮ್ಮ ಈ ಪತ್ರ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತೆ ಇದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

“ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ” ಎಂದು ತಿಳಿಸಿದ್ದಾರೆ.

“ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕಾಲಕಾಲಕ್ಕೆ ಬದಲಾವಣೆ ಮಾಡುವ ಸಂವಿಧಾನಬದ್ಧ ಹಕ್ಕು ರಾಜ್ಯ ಸರ್ಕಾರಕ್ಕಿದೆ. ಸರ್ಕಾರ ಈಗ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರುತ್ತಿರುವುದಕ್ಕೆ ಸಾಕಷ್ಟು ಕಾರಣಗಳಿವೆ. ಇದರ ಸಾಧಕ ಬಾಧಕಗಳನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ. ʻಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘʻದವರು ನಿಮಗೆ ಕೊಟ್ಟಿದ್ದಾರೆ ಎನ್ನಲಾದ ಮನವಿಗೆ ತುರ್ತಾಗಿ ಪ್ರತಿಕ್ರಿಯಿಸಿರುವುದನ್ನು ಕೇಳಿ ಆಶ್ಚರ್ಯವಾಯಿತು. ಬೆಂಗಳೂರಿನಲ್ಲಿ ಇಂಥದ್ದೊಂದು ಸಂಘ ಇದೆ ಎಂಬುದೇ ನಮಗೆ ತಿಳಿದಿರಲಿಲ್ಲ. ಈ ರೀತಿಯ ನಾಟಕಗಳನ್ನು ನಾವು ಎಷ್ಟೋ ನೋಡಿದ್ದೇವೆ. ಇಂಥ ಕುತಂತ್ರಗಳು ಕರ್ನಾಟಕಕ್ಕೆ ಹೊಸದೇನೂ ಅಲ್ಲ. ಮರೆಯಲ್ಲಿ ನಿಂತು ಬಾಣ ಬಿಡುವ ಈ ಹೇಡಿಗಳು ಬೀದಿಗೆ ಬರಲಿ ಎಂದು ನಾವೂ ಕಾಯುತ್ತಿದ್ದೇವೆ” ಎಂದಿದ್ದಾರೆ.

“ರಾಜ್ಯಪಾಲರ ಹುದ್ದೆ ಎಂಬುದೇ ಪ್ರಜಾಪ್ರಭುತ್ವ ವ್ಯವಸ್ಥೆ ಒಳಗೆ ನುಸುಳಿಕೊಂಡಿರುವ ರಾಜಶಾಹಿ ವ್ಯವಸ್ಥೆಯ ಒಂದು ಪಳೆಯುಳಿಕೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಪ್ರಭುಗಳು. ಇನ್ಯಾರೋ ಇಲ್ಲಿ ರಾಜರಂತೆ ಮೆರೆಯುವುದು ಸಾಧ್ಯವಿಲ್ಲ. ನಿಮ್ಮ ಈ ಅಧಿಕಪ್ರಸಂಗದ ಪತ್ರ ರಾಜ್ಯಪಾಲರ ವ್ಯವಸ್ಥೆ ನಮ್ಮ ದೇಶಕ್ಕೆ ಬೇಕೇ ಎಂಬ ಪ್ರಶ್ನೆಯನ್ನು ಮತ್ತೆ ಮುನ್ನೆಲೆಗೆ ತಂದಂತಾಗಿದೆ” ಎಂದು ನಾರಾಯಣಗೌಡರು ಹೇಳಿದ್ದಾರೆ.

“ಜನರಿಂದ ಆಯ್ಕೆಯಾದ ಸರ್ಕಾರದ ದೈನಂದಿನ ಆಡಳಿತದ ತೀರ್ಮಾನದ ಕುರಿತು ಪತ್ರ ಬರೆಯಲು ನಿಮಗೆ ಯಾವುದೇ ಹಕ್ಕಿಲ್ಲ. ಒಂದು ವೇಳೆ ನೀವು ಸಾಮಾನ್ಯ ನಾಗರಿಕರಾಗಿ ಈ ಪತ್ರವನ್ನು ಬರೆದಿದ್ದರೆ, ಮೊದಲು ಉತ್ತರದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತ್ರಿಭಾಷಾ ನೀತಿ ಅನ್ವಯ ಕನ್ನಡವನ್ನು ಮೂರನೇ ಭಾಷೆಯನ್ನಾಗಿ ಅಲ್ಲಿನ ಮಕ್ಕಳಿಗೆ ಕಲಿಸಲು ಹೇಳಿ. ನಿಮಗೆ ಆ ಧೈರ್ಯವಿಲ್ಲದಿದ್ದರೆ ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿ ಕರ್ನಾಟಕದ ನೆಲದಲ್ಲಿ ನಿಂತು ಮಾತನಾಡಬೇಡಿ. ತೃತೀಯ ಭಾಷೆಯ ಮೇಲಿನ ಪ್ರೇಮವನ್ನು ಉತ್ತರ ಭಾರತದ ರಾಜ್ಯಗಳಲ್ಲಿ ಉಕ್ಕಿ ಹರಿಸಿ. ಪಾಪ, ಅಲ್ಲಿನ ಮಕ್ಕಳು ಇದುವರೆಗೆ ಎರಡೇ ಭಾಷೆಗಳನ್ನು ಓದಿಕೊಂಡು ಬಂದಿದ್ದಾರೆ” ಎಂದು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ.

“ನೀವು ಹಿಂದಿ ಸಾಮ್ರಾಜ್ಯಶಾಹಿಯ ಲಾಬಿಯ ಪರವಾಗಿ ಮಾತನಾಡುತ್ತಿದ್ದೀರಿ ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ಕನ್ನಡಿಗರು ಔದಾರ್ಯವಂತರು. ನಮ್ಮ ನೆಲದಲ್ಲಿ ನಿಮಗೆ ಐಶಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದೇವೆ. ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ರಾಜಭವನ ನಡೆಯುತ್ತಿದೆ. ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ. ಇದೇ ಅಧಿಕಪ್ರಸಂಗವನ್ನು ಮುಂದುವರೆಸಿದರೆ ರಾಜ್ಯಪಾಲರೇ, ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ನಾವು ಹೇಳಬೇಕಾಗುತ್ತದೆ” ಎಂದು ತಿಳಿಸಿದ್ದಾರೆ.

“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀವು ಬರೆದಿರುವ ಪತ್ರವನ್ನು ಕೂಡಲೇ ಹಿಂದಕ್ಕೆ ಪಡೆಯಿರಿ. ಸರ್ಕಾರ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ದಶಕಗಳಿಂದ ಕನ್ನಡದ ಜನತೆಯನ್ನುಕಾಡುತ್ತಿದ್ದ ಶಾಪ ವಿಮೋಚನೆಯಾಗಿದೆ. ಒಂದು ವೇಳೆ ಇದನ್ನು ಜಾರಿಗೆ ತರುವುದನ್ನು ತಡೆಯಲು ಯಾರೇ ಯತ್ನಿಸಿದರೂ ಕರ್ನಾಟಕದಲ್ಲಿ ಧಗಧಗಿಸುವ ಕ್ರಾಂತಿಯ ಜ್ವಾಲೆ ಹೊತ್ತಿಕೊಳ್ಳಲಿದೆ” ಎಂದು ಎಚ್ಚರಿಸಿದ್ದಾರೆ.

“ಮಾನ್ಯ ರಾಜ್ಯಪಾಲರೇ, ನಿಮ್ಮ ಕೆಲಸ ನೀವು ನೋಡಿಕೊಳ್ಳಿ. ಹಿಂಬಾಗಿಲಿನಲ್ಲಿ ಬಂದು ಆಡಳಿತ ಮಾಡುವ ಯತ್ನ ಮಾಡಬೇಡಿ, ನಿಮಗೆ ಆ ಅಧಿಕಾರವನ್ನು ಕರ್ನಾಟಕದ ಜನತೆ ಕೊಟ್ಟಿಲ್ಲ. ರಾಜಭವನದಲ್ಲಿ ನಿಮ್ಮ ಉಪಚಾರಕ್ಕೆ ಏನಾದರೂ ಕೊರತೆಯಾಗಿದ್ದರೆ ಕೇಳಿ, ವ್ಯವಸ್ಥೆ ಮಾಡಿಕೊಡೋಣ. ಬೇರೆ ಉಸಾಬರಿಯನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ” ಎಂದು ನಾರಾಯಣಗೌಡರು ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...