Homeಕರ್ನಾಟಕ'ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ' :...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

- Advertisement -
- Advertisement -

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶನಿವಾರ (ಏ.4) ಸುದೀರ್ಘ ಪೋಸ್ಟ್ ಹಾಕಿರುವ ನಾರಾಯಣಗೌಡರು, “ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ. ಇದೇ ಅಧಿಕಪ್ರಸಂಗವನ್ನು ಮುಂದುವರೆಸಿದರೆ ರಾಜ್ಯಪಾಲರೇ, ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ನಾವು ಹೇಳಬೇಕಾಗುತ್ತದೆ” ಎಂದಿದ್ದಾರೆ.

“ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಅವರೇ, ಕರ್ನಾಟಕ ಸರ್ಕಾರಕ್ಕೆ ನೀವು ಬರೆದ ಪತ್ರದ ಕುರಿತ ಮಾಧ್ಯಮ ವರದಿಗಳನ್ನು ಗಮನಿಸಿದೆ. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ನೀವು ಹೇಳಿದ್ದೀರಿ. ನಿಮ್ಮ ಈ ಪತ್ರ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತೆ ಇದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

“ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ” ಎಂದು ತಿಳಿಸಿದ್ದಾರೆ.

“ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕಾಲಕಾಲಕ್ಕೆ ಬದಲಾವಣೆ ಮಾಡುವ ಸಂವಿಧಾನಬದ್ಧ ಹಕ್ಕು ರಾಜ್ಯ ಸರ್ಕಾರಕ್ಕಿದೆ. ಸರ್ಕಾರ ಈಗ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರುತ್ತಿರುವುದಕ್ಕೆ ಸಾಕಷ್ಟು ಕಾರಣಗಳಿವೆ. ಇದರ ಸಾಧಕ ಬಾಧಕಗಳನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ. ʻಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘʻದವರು ನಿಮಗೆ ಕೊಟ್ಟಿದ್ದಾರೆ ಎನ್ನಲಾದ ಮನವಿಗೆ ತುರ್ತಾಗಿ ಪ್ರತಿಕ್ರಿಯಿಸಿರುವುದನ್ನು ಕೇಳಿ ಆಶ್ಚರ್ಯವಾಯಿತು. ಬೆಂಗಳೂರಿನಲ್ಲಿ ಇಂಥದ್ದೊಂದು ಸಂಘ ಇದೆ ಎಂಬುದೇ ನಮಗೆ ತಿಳಿದಿರಲಿಲ್ಲ. ಈ ರೀತಿಯ ನಾಟಕಗಳನ್ನು ನಾವು ಎಷ್ಟೋ ನೋಡಿದ್ದೇವೆ. ಇಂಥ ಕುತಂತ್ರಗಳು ಕರ್ನಾಟಕಕ್ಕೆ ಹೊಸದೇನೂ ಅಲ್ಲ. ಮರೆಯಲ್ಲಿ ನಿಂತು ಬಾಣ ಬಿಡುವ ಈ ಹೇಡಿಗಳು ಬೀದಿಗೆ ಬರಲಿ ಎಂದು ನಾವೂ ಕಾಯುತ್ತಿದ್ದೇವೆ” ಎಂದಿದ್ದಾರೆ.

“ರಾಜ್ಯಪಾಲರ ಹುದ್ದೆ ಎಂಬುದೇ ಪ್ರಜಾಪ್ರಭುತ್ವ ವ್ಯವಸ್ಥೆ ಒಳಗೆ ನುಸುಳಿಕೊಂಡಿರುವ ರಾಜಶಾಹಿ ವ್ಯವಸ್ಥೆಯ ಒಂದು ಪಳೆಯುಳಿಕೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಪ್ರಭುಗಳು. ಇನ್ಯಾರೋ ಇಲ್ಲಿ ರಾಜರಂತೆ ಮೆರೆಯುವುದು ಸಾಧ್ಯವಿಲ್ಲ. ನಿಮ್ಮ ಈ ಅಧಿಕಪ್ರಸಂಗದ ಪತ್ರ ರಾಜ್ಯಪಾಲರ ವ್ಯವಸ್ಥೆ ನಮ್ಮ ದೇಶಕ್ಕೆ ಬೇಕೇ ಎಂಬ ಪ್ರಶ್ನೆಯನ್ನು ಮತ್ತೆ ಮುನ್ನೆಲೆಗೆ ತಂದಂತಾಗಿದೆ” ಎಂದು ನಾರಾಯಣಗೌಡರು ಹೇಳಿದ್ದಾರೆ.

“ಜನರಿಂದ ಆಯ್ಕೆಯಾದ ಸರ್ಕಾರದ ದೈನಂದಿನ ಆಡಳಿತದ ತೀರ್ಮಾನದ ಕುರಿತು ಪತ್ರ ಬರೆಯಲು ನಿಮಗೆ ಯಾವುದೇ ಹಕ್ಕಿಲ್ಲ. ಒಂದು ವೇಳೆ ನೀವು ಸಾಮಾನ್ಯ ನಾಗರಿಕರಾಗಿ ಈ ಪತ್ರವನ್ನು ಬರೆದಿದ್ದರೆ, ಮೊದಲು ಉತ್ತರದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತ್ರಿಭಾಷಾ ನೀತಿ ಅನ್ವಯ ಕನ್ನಡವನ್ನು ಮೂರನೇ ಭಾಷೆಯನ್ನಾಗಿ ಅಲ್ಲಿನ ಮಕ್ಕಳಿಗೆ ಕಲಿಸಲು ಹೇಳಿ. ನಿಮಗೆ ಆ ಧೈರ್ಯವಿಲ್ಲದಿದ್ದರೆ ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿ ಕರ್ನಾಟಕದ ನೆಲದಲ್ಲಿ ನಿಂತು ಮಾತನಾಡಬೇಡಿ. ತೃತೀಯ ಭಾಷೆಯ ಮೇಲಿನ ಪ್ರೇಮವನ್ನು ಉತ್ತರ ಭಾರತದ ರಾಜ್ಯಗಳಲ್ಲಿ ಉಕ್ಕಿ ಹರಿಸಿ. ಪಾಪ, ಅಲ್ಲಿನ ಮಕ್ಕಳು ಇದುವರೆಗೆ ಎರಡೇ ಭಾಷೆಗಳನ್ನು ಓದಿಕೊಂಡು ಬಂದಿದ್ದಾರೆ” ಎಂದು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ.

“ನೀವು ಹಿಂದಿ ಸಾಮ್ರಾಜ್ಯಶಾಹಿಯ ಲಾಬಿಯ ಪರವಾಗಿ ಮಾತನಾಡುತ್ತಿದ್ದೀರಿ ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ಕನ್ನಡಿಗರು ಔದಾರ್ಯವಂತರು. ನಮ್ಮ ನೆಲದಲ್ಲಿ ನಿಮಗೆ ಐಶಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದೇವೆ. ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ರಾಜಭವನ ನಡೆಯುತ್ತಿದೆ. ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ. ಇದೇ ಅಧಿಕಪ್ರಸಂಗವನ್ನು ಮುಂದುವರೆಸಿದರೆ ರಾಜ್ಯಪಾಲರೇ, ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ನಾವು ಹೇಳಬೇಕಾಗುತ್ತದೆ” ಎಂದು ತಿಳಿಸಿದ್ದಾರೆ.

“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀವು ಬರೆದಿರುವ ಪತ್ರವನ್ನು ಕೂಡಲೇ ಹಿಂದಕ್ಕೆ ಪಡೆಯಿರಿ. ಸರ್ಕಾರ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ದಶಕಗಳಿಂದ ಕನ್ನಡದ ಜನತೆಯನ್ನುಕಾಡುತ್ತಿದ್ದ ಶಾಪ ವಿಮೋಚನೆಯಾಗಿದೆ. ಒಂದು ವೇಳೆ ಇದನ್ನು ಜಾರಿಗೆ ತರುವುದನ್ನು ತಡೆಯಲು ಯಾರೇ ಯತ್ನಿಸಿದರೂ ಕರ್ನಾಟಕದಲ್ಲಿ ಧಗಧಗಿಸುವ ಕ್ರಾಂತಿಯ ಜ್ವಾಲೆ ಹೊತ್ತಿಕೊಳ್ಳಲಿದೆ” ಎಂದು ಎಚ್ಚರಿಸಿದ್ದಾರೆ.

“ಮಾನ್ಯ ರಾಜ್ಯಪಾಲರೇ, ನಿಮ್ಮ ಕೆಲಸ ನೀವು ನೋಡಿಕೊಳ್ಳಿ. ಹಿಂಬಾಗಿಲಿನಲ್ಲಿ ಬಂದು ಆಡಳಿತ ಮಾಡುವ ಯತ್ನ ಮಾಡಬೇಡಿ, ನಿಮಗೆ ಆ ಅಧಿಕಾರವನ್ನು ಕರ್ನಾಟಕದ ಜನತೆ ಕೊಟ್ಟಿಲ್ಲ. ರಾಜಭವನದಲ್ಲಿ ನಿಮ್ಮ ಉಪಚಾರಕ್ಕೆ ಏನಾದರೂ ಕೊರತೆಯಾಗಿದ್ದರೆ ಕೇಳಿ, ವ್ಯವಸ್ಥೆ ಮಾಡಿಕೊಡೋಣ. ಬೇರೆ ಉಸಾಬರಿಯನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ” ಎಂದು ನಾರಾಯಣಗೌಡರು ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...