Homeಕರ್ನಾಟಕ'ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ' :...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

- Advertisement -
- Advertisement -

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶನಿವಾರ (ಏ.4) ಸುದೀರ್ಘ ಪೋಸ್ಟ್ ಹಾಕಿರುವ ನಾರಾಯಣಗೌಡರು, “ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ. ಇದೇ ಅಧಿಕಪ್ರಸಂಗವನ್ನು ಮುಂದುವರೆಸಿದರೆ ರಾಜ್ಯಪಾಲರೇ, ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ನಾವು ಹೇಳಬೇಕಾಗುತ್ತದೆ” ಎಂದಿದ್ದಾರೆ.

“ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಅವರೇ, ಕರ್ನಾಟಕ ಸರ್ಕಾರಕ್ಕೆ ನೀವು ಬರೆದ ಪತ್ರದ ಕುರಿತ ಮಾಧ್ಯಮ ವರದಿಗಳನ್ನು ಗಮನಿಸಿದೆ. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ನೀವು ಹೇಳಿದ್ದೀರಿ. ನಿಮ್ಮ ಈ ಪತ್ರ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತೆ ಇದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

“ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ” ಎಂದು ತಿಳಿಸಿದ್ದಾರೆ.

“ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕಾಲಕಾಲಕ್ಕೆ ಬದಲಾವಣೆ ಮಾಡುವ ಸಂವಿಧಾನಬದ್ಧ ಹಕ್ಕು ರಾಜ್ಯ ಸರ್ಕಾರಕ್ಕಿದೆ. ಸರ್ಕಾರ ಈಗ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರುತ್ತಿರುವುದಕ್ಕೆ ಸಾಕಷ್ಟು ಕಾರಣಗಳಿವೆ. ಇದರ ಸಾಧಕ ಬಾಧಕಗಳನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ. ʻಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘʻದವರು ನಿಮಗೆ ಕೊಟ್ಟಿದ್ದಾರೆ ಎನ್ನಲಾದ ಮನವಿಗೆ ತುರ್ತಾಗಿ ಪ್ರತಿಕ್ರಿಯಿಸಿರುವುದನ್ನು ಕೇಳಿ ಆಶ್ಚರ್ಯವಾಯಿತು. ಬೆಂಗಳೂರಿನಲ್ಲಿ ಇಂಥದ್ದೊಂದು ಸಂಘ ಇದೆ ಎಂಬುದೇ ನಮಗೆ ತಿಳಿದಿರಲಿಲ್ಲ. ಈ ರೀತಿಯ ನಾಟಕಗಳನ್ನು ನಾವು ಎಷ್ಟೋ ನೋಡಿದ್ದೇವೆ. ಇಂಥ ಕುತಂತ್ರಗಳು ಕರ್ನಾಟಕಕ್ಕೆ ಹೊಸದೇನೂ ಅಲ್ಲ. ಮರೆಯಲ್ಲಿ ನಿಂತು ಬಾಣ ಬಿಡುವ ಈ ಹೇಡಿಗಳು ಬೀದಿಗೆ ಬರಲಿ ಎಂದು ನಾವೂ ಕಾಯುತ್ತಿದ್ದೇವೆ” ಎಂದಿದ್ದಾರೆ.

“ರಾಜ್ಯಪಾಲರ ಹುದ್ದೆ ಎಂಬುದೇ ಪ್ರಜಾಪ್ರಭುತ್ವ ವ್ಯವಸ್ಥೆ ಒಳಗೆ ನುಸುಳಿಕೊಂಡಿರುವ ರಾಜಶಾಹಿ ವ್ಯವಸ್ಥೆಯ ಒಂದು ಪಳೆಯುಳಿಕೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಪ್ರಭುಗಳು. ಇನ್ಯಾರೋ ಇಲ್ಲಿ ರಾಜರಂತೆ ಮೆರೆಯುವುದು ಸಾಧ್ಯವಿಲ್ಲ. ನಿಮ್ಮ ಈ ಅಧಿಕಪ್ರಸಂಗದ ಪತ್ರ ರಾಜ್ಯಪಾಲರ ವ್ಯವಸ್ಥೆ ನಮ್ಮ ದೇಶಕ್ಕೆ ಬೇಕೇ ಎಂಬ ಪ್ರಶ್ನೆಯನ್ನು ಮತ್ತೆ ಮುನ್ನೆಲೆಗೆ ತಂದಂತಾಗಿದೆ” ಎಂದು ನಾರಾಯಣಗೌಡರು ಹೇಳಿದ್ದಾರೆ.

“ಜನರಿಂದ ಆಯ್ಕೆಯಾದ ಸರ್ಕಾರದ ದೈನಂದಿನ ಆಡಳಿತದ ತೀರ್ಮಾನದ ಕುರಿತು ಪತ್ರ ಬರೆಯಲು ನಿಮಗೆ ಯಾವುದೇ ಹಕ್ಕಿಲ್ಲ. ಒಂದು ವೇಳೆ ನೀವು ಸಾಮಾನ್ಯ ನಾಗರಿಕರಾಗಿ ಈ ಪತ್ರವನ್ನು ಬರೆದಿದ್ದರೆ, ಮೊದಲು ಉತ್ತರದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತ್ರಿಭಾಷಾ ನೀತಿ ಅನ್ವಯ ಕನ್ನಡವನ್ನು ಮೂರನೇ ಭಾಷೆಯನ್ನಾಗಿ ಅಲ್ಲಿನ ಮಕ್ಕಳಿಗೆ ಕಲಿಸಲು ಹೇಳಿ. ನಿಮಗೆ ಆ ಧೈರ್ಯವಿಲ್ಲದಿದ್ದರೆ ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿ ಕರ್ನಾಟಕದ ನೆಲದಲ್ಲಿ ನಿಂತು ಮಾತನಾಡಬೇಡಿ. ತೃತೀಯ ಭಾಷೆಯ ಮೇಲಿನ ಪ್ರೇಮವನ್ನು ಉತ್ತರ ಭಾರತದ ರಾಜ್ಯಗಳಲ್ಲಿ ಉಕ್ಕಿ ಹರಿಸಿ. ಪಾಪ, ಅಲ್ಲಿನ ಮಕ್ಕಳು ಇದುವರೆಗೆ ಎರಡೇ ಭಾಷೆಗಳನ್ನು ಓದಿಕೊಂಡು ಬಂದಿದ್ದಾರೆ” ಎಂದು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ.

“ನೀವು ಹಿಂದಿ ಸಾಮ್ರಾಜ್ಯಶಾಹಿಯ ಲಾಬಿಯ ಪರವಾಗಿ ಮಾತನಾಡುತ್ತಿದ್ದೀರಿ ಎಂಬುದು ನಮಗೆ ಚೆನ್ನಾಗಿ ಗೊತ್ತಿದೆ. ಕನ್ನಡಿಗರು ಔದಾರ್ಯವಂತರು. ನಮ್ಮ ನೆಲದಲ್ಲಿ ನಿಮಗೆ ಐಶಾರಾಮಿ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದೇವೆ. ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ರಾಜಭವನ ನಡೆಯುತ್ತಿದೆ. ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ. ಇದೇ ಅಧಿಕಪ್ರಸಂಗವನ್ನು ಮುಂದುವರೆಸಿದರೆ ರಾಜ್ಯಪಾಲರೇ, ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ ಎಂದು ನಾವು ಹೇಳಬೇಕಾಗುತ್ತದೆ” ಎಂದು ತಿಳಿಸಿದ್ದಾರೆ.

“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀವು ಬರೆದಿರುವ ಪತ್ರವನ್ನು ಕೂಡಲೇ ಹಿಂದಕ್ಕೆ ಪಡೆಯಿರಿ. ಸರ್ಕಾರ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ದಶಕಗಳಿಂದ ಕನ್ನಡದ ಜನತೆಯನ್ನುಕಾಡುತ್ತಿದ್ದ ಶಾಪ ವಿಮೋಚನೆಯಾಗಿದೆ. ಒಂದು ವೇಳೆ ಇದನ್ನು ಜಾರಿಗೆ ತರುವುದನ್ನು ತಡೆಯಲು ಯಾರೇ ಯತ್ನಿಸಿದರೂ ಕರ್ನಾಟಕದಲ್ಲಿ ಧಗಧಗಿಸುವ ಕ್ರಾಂತಿಯ ಜ್ವಾಲೆ ಹೊತ್ತಿಕೊಳ್ಳಲಿದೆ” ಎಂದು ಎಚ್ಚರಿಸಿದ್ದಾರೆ.

“ಮಾನ್ಯ ರಾಜ್ಯಪಾಲರೇ, ನಿಮ್ಮ ಕೆಲಸ ನೀವು ನೋಡಿಕೊಳ್ಳಿ. ಹಿಂಬಾಗಿಲಿನಲ್ಲಿ ಬಂದು ಆಡಳಿತ ಮಾಡುವ ಯತ್ನ ಮಾಡಬೇಡಿ, ನಿಮಗೆ ಆ ಅಧಿಕಾರವನ್ನು ಕರ್ನಾಟಕದ ಜನತೆ ಕೊಟ್ಟಿಲ್ಲ. ರಾಜಭವನದಲ್ಲಿ ನಿಮ್ಮ ಉಪಚಾರಕ್ಕೆ ಏನಾದರೂ ಕೊರತೆಯಾಗಿದ್ದರೆ ಕೇಳಿ, ವ್ಯವಸ್ಥೆ ಮಾಡಿಕೊಡೋಣ. ಬೇರೆ ಉಸಾಬರಿಯನ್ನು ನಮ್ಮ ಜನಪ್ರತಿನಿಧಿಗಳು ನೋಡಿಕೊಳ್ಳುತ್ತಾರೆ” ಎಂದು ನಾರಾಯಣಗೌಡರು ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...