ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಚೋದನೆ ನೀಡಿದ ಒಂದನೇ ಆರೋಪಿ, ಬಿಜೆಪಿ ಹಿರಿಯ ನಾಯಕ, ಶಾಸಕ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ರಾಜಕೀಯ ಹೈಡ್ರಾಮವೊಂದನ್ನು ಅವರು ಮುಗಿಸಿದ್ದಾರೆ.
ರಾಜ್ಯದಾದ್ಯಂತ ಭಾರಿ ತಲ್ಲಣ ಸೃಷ್ಟಿಸಿದ್ದ ಪ್ರಕರಣದಲ್ಲಿ ಆರೋಪಿ ಈಶ್ವರಪ್ಪ ಅವರು, “ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ. ಮೃತ ಸಂತೋಷ್ ತನಗೆ ಯಾರೆಂದೇ ಗೊತ್ತಿಲ್ಲ, ಆತನನ್ನು ತಾನು ನೋಡಿಯೇ ಇಲ್ಲ” ಎಂದು ಹೇಳಿದ್ದರು.
ಆದರೆ ನಿನ್ನೆ ಶಿವಮೊಗ್ಗದಲ್ಲಿ ದಿಢೀರ್ ಪತ್ರಿಕಾಗೋಷ್ಠಿ ಕರೆದಿದ್ದ ಆರೋಪಿ ಈಶ್ವರಪ್ಪ, ಪಕ್ಷದ ಯಾರಿಗೂ ಮುಜುಗರಕ್ಕೆ ಒಳಗಾಗಬಾರದು ಎಂಬ ಕಾರಣಕ್ಕೆ ತಾನು ಶುಕ್ರವಾರ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ನೀಡುವುದಾಗಿ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಇದೀಗ ಈಶ್ವರಪ್ಪ ಅವರು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಸಿಎಂ ನಿವಾಸಕ್ಕೆ ಬಳಿ ಬಂದಾಗ ಈಶ್ವರಪ್ಪನವರ ಬೆಂಬಲಿಗರು ಘೋಷಣೆಗಳನ್ನು ಕೂಗಿದರು. ‘ಈಶ್ವರಪ್ಪ ಜಿಂದಾಬಾದ್, ಜೈಶ್ರೀರಾಮ್, ರಾಜೀನಾಮೆ ಬೇಡ’ ಎಂದು ಒತ್ತಾಯಿಸಿದರು.
ರಾಜೀನಾಮೆಗೆ ಒಂದು ಸಾಲಿನಲ್ಲಿ ಕಾರಣ ತಿಳಿಸಿರುವ ಈಶ್ವರಪ್ಪನವರು, ‘ಸ್ವಇಚ್ಛೆಯಿಂದ ರಾಜೀನಾಮೆ’ ನೀಡಿರುವುದಾಗಿ ತಿಳಿಸಿದ್ದಾರೆ.
ಈ ಮಧ್ಯೆ ಶುಕ್ರವಾರ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, “ಈಶ್ವರಪ್ಪನನ್ನು ಅಗತ್ಯವಿದ್ದರಷ್ಟೆ ಪೊಲೀಸರು ಬಂಧಿಸಲಿದ್ದಾರೆ. ಅವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಅವರ ಮೇಲೆ ಯಾವುದೇ ಒತ್ತಡ ಇರಲಿಲ್ಲ. ಸಾವು ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಅಗತ್ಯವಿದ್ದರೆ ಅವರನ್ನು ಬಂಧಿಸಲಿದ್ದಾರೆ. ಈಶ್ವರಪ್ಪ ತಾವು ನಿರಪರಾಧಿ ಎಂದು ಹೇಳಿದ್ದು, ಆದಷ್ಟು ಬೇಗನೆ ತನಿಖೆ ಮಾಡಿದರೆ ಆರೋಪದಿಂದ ಮುಕ್ತನಾಗುತ್ತೇನೆ ಎಂದು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಅಗತ್ಯವಿದ್ದರಷ್ಟೆ ಈಶ್ವರಪ್ಪರನ್ನು ಪೊಲೀಸರು ಬಂಧಿಸಲಿದ್ದಾರೆ: ಸಿಎಂ ಬೊಮ್ಮಾಯಿ
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಆರೋಪಿ ಈಶ್ವರಪ್ಪ,“ನಾನು ದೇವರನ್ನು ನಂಬುವವನು, ಪ್ರಕರಣದ ಬಗ್ಗೆ ನನಗೆ ಪೂರ್ಣ ವಿಶ್ವಾವಿದೆ. ಈ ಇಡೀ ಎಪಿಸೋಡಲ್ಲಿ ಒಂದೇ ಒಂದು ಪರ್ಸೆಂಟ್ ನನ್ನದೇನಾದರೂ ತಪ್ಪಿದ್ದರೆ, ಆ ಭಗವಂತ ನನಗೆ ಶಿಕ್ಷೆ ಕೊಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ. ಪ್ರಕರಣದಲ್ಲಿ ನಾನು ಮುಕ್ತವಾಗಿ ಹೊರಬರುತ್ತೇನೆ ಎಂದು ನನಗೆ ಪೂರ್ಣ ನಂಬಿಕೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ನಾನು ಮುಖ್ಯಮಂತ್ರಿಗೆ ಹೇಳಿದಾಗ ಅವರು ಕೂಡಾ ಸಂತೋಷದಿಂದ ತನಿಖೆ ಮಾಡುತ್ತೇನೆ ಎಂದು ಅವರು ಒಪ್ಪಿಕೊಂಡಿದ್ದಾರೆ. ನನ್ನ ಮನೆ ದೇವರಾದ ಚೌಡೇಶ್ವರಿ ನಾನು ತಪ್ಪಿತಸ್ಥ ಅಲ್ಲ ಎಂದು ನಿರ್ದೋಷಿಯಾಗಿ ನನ್ನನ್ನು ಹೊರ ತರುತ್ತಾಳೆ” ಎಂದು ಹೇಳಿದ್ದರು.



ಉಪ್ಪು ತಿಂದವನು ನೀರು ಕುಡಿಯಲೇ ಬೇಕು
ಅವರಿನ್ನೂ ಅಪರಾಧಿ ಅಂತ ನ್ಯಾಯಾಲದಲ್ಲಿ ತೀರ್ಮಾನ ಆಗಿಲ್ಲ. ಅಪರಾಧಿ ಎನ್ನುವ ತಲೆಬರಹ ಸರಿಯಲ್ಲ