Homeಸಿನಿಮಾಕ್ರೀಡೆಕೆಎಸ್‍ಸಿಎಗೆ ಕಳಂಕ ತಂದ ಕೆಪಿಎಲ್ ಮೋಸದಾಟ...

ಕೆಎಸ್‍ಸಿಎಗೆ ಕಳಂಕ ತಂದ ಕೆಪಿಎಲ್ ಮೋಸದಾಟ…

ಯಾರದೋ ಹಣದಾಹಕ್ಕೆ ಬಲಿಯಾಗಿ ಅತಿ ಕಡಿಮೆ ಅವಧಿಯಲ್ಲಿ ಶ್ರೀಮಂತರಾಗಬಹುದೆಂಬ ಭ್ರಮೆಯಲ್ಲಿ ಇಂತಹ ಮೋಸದಾಟದ ಬಲೆಗೆ ಬೀಳುತ್ತಿರುವುದು ಕ್ರಿಕೆಟ್ ಜಗತ್ತಿನ ಕಳಂಕವಾಗಿದೆ...

- Advertisement -
- Advertisement -

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಡಳಿತ ಸಮಿತಿಯ ಚುನಾವಣೆಯಲ್ಲಿ, 1983ರ ಭಾರತದ ವಿಶ್ವಕಪ್ ವಿಜೇತ ತಂಡದ ನಾಡಿನ ಹೆಮ್ಮೆಯ ಆಟಗಾರ ನೇತೃತ್ವದ ಬಳಗ ಪ್ರಚಂಡ ಬಹುಮತದಿಂದ ಆಯ್ಕೆಯಾಗಿರುವುದು ಸಂತೋಷದಾಯಕ ವಿಚಾರವಾಗಿದೆ.

ರೋಜರ್ ಬಿನ್ನಿ

ಮೋಸದಾಟ ಎಲ್ಲಾ ಹಂತದ ಕ್ರಿಕೆಟ್‍ನಲ್ಲೂ ಸದ್ದು ಮಾಡುತ್ತಿರುವ ಸಂದರ್ಭದಲ್ಲಿ ಸ್ವಚ್ಛ, ಪಾರದರ್ಶಕ, ಭ್ರಷ್ಟಾಚಾರ ರಹಿತವಾದ ಆಡಳಿತದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ರೋಜರ್ ಬಿನ್ನಿ ನೇತೃತ್ವದ ತಂಡದಲ್ಲಿ ನಿಷ್ಕಳಂಕ ವೃತ್ತಿಪರ ಮಾಜಿ ಆಟಗಾರರು ಹಾಗೂ ಶಾವೀರ್ ತಾರಾಪೂರ್‌ರಂತಹ ಅಂತರ ರಾಷ್ಟ್ರೀಯ ಅಂಪೈರ್ ಇರುವುದು ಪಾರದರ್ಶಕ ಆಡಳಿತದ ದೃಷ್ಟಿಯಿಂದ ಸಮಾಧಾನಕರವಾದ ವಿಷಯವಾಗಿದೆ.

ಹಾಗೆಯೇ ಕೆಎಸ್‍ಸಿಎಯಿಂದ ಬಿಸಿಸಿಐ ಪ್ರತಿನಿಧಿಯಾಗಿ ಬ್ರಿಜೇಶ್ ಪಟೇಲ್ ಅವರನ್ನು ನಾಮನಿರ್ದೇಶನ ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಏಕೆಂದರೆ ಭಾರತದ ಖ್ಯಾತನಾಮ ಆಟರಾರರಾಗಿದ್ದ ಜಾವಗಲ್ ಶ್ರೀನಾಥ್, ಅನಿಲ್ ಕುಂಬ್ಳೆ ಅಂತಹವರು ಕೆಎಸ್‍ಸಿಎ ಯ ಪದಾಧಿಕಾರಿಗಳಾಗಿ ಅಧಿಕಾರದ ಚುಕ್ಕಾಣಿ ಹಿಡಿದಾಗ ಬುಡಮಟ್ಟದಿಂದ ಬದಲಾವಣೆಗಳನ್ನು ಮಾಡುವ ದೃಢ ಸಂಕಲ್ಪವನ್ನು ಮಾಡಿ ಯಾವುದೇ ಲಾಭಿಗೆ ಮಣಿಯದೇ ಅತ್ಯಂತ ನಿಷ್ಠೆಯಿಂದ ಅದರಲ್ಲಿ ಸಫಲತೆಯನ್ನು ಕಂಡರು.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯನ್ನು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತಗೊಳಿಸದೇ ಬಹುಪಾಲು ಜಿಲ್ಲಾ ಕೇಂದ್ರಗಳಲ್ಲಿ ಉತ್ಕೃಷ್ಟ ಮಟ್ಟದ ಕ್ರಿಡಾಂಗಣಗಳನ್ನು ನಿರ್ಮಿಸಿ ವಲಯವಾರು ಕ್ರಿಕೆಟ್ ಪಂದ್ಯಾವಳಿಗಳಿಗೆ ಹೆಚ್ಚಿನ ಒತ್ತು ಕೊಟ್ಟು ಅಲ್ಲಿಯ ಪ್ರತಿಭೆಗಳಿಗೆ ಅವಕಾಶ ಮಾಡಿಕೊಟ್ಟು ಗ್ರಾಮೀಣ ಭಾಗದ ಆಟಗಾರರ ಆಶಾಕಿರಣವಾದರು. ಹಾಗೆಯೇ ಕೆಎಸ್‍ಸಿಎ ಲೀಗ್ ಪಂದ್ಯಾವಳಿಗಳ ಆಯೋಜನೆಯಲ್ಲಿಯೂ ಅನೇಕ ಬದಲಾವಣೆ ತರುವುದರ ಮೂಲಕ ಕೆಎಸ್‍ಸಿಎ ಆಡಳಿತದ ಆಧಾರ ಸ್ಥಂಭಗಳಾದರು. ಇಂತಹ ಪಾರದರ್ಶಕ, ವೃತ್ತಿಪರ ಆಡಳಿತದ ಅವಶ್ಯಕತೆಯಿರುವುದರಿಂದ, ಹಾಗೂ ಮೋಸದಾಟದಂತಹ ಪಿಡುಗನ್ನು ಹಬ್ಬಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿರುವುದಿಂದ ಶುದ್ಧ ಹಸ್ತದ ಅನಿವಾರ್ಯತೆ ಕೆಎಸ್‍ಸಿಎಗೆ ಇದೆ.

‘ಕ್ರಿಕೆಟ್ ಜಂಟಲ್ ಮ್ಯಾನ್ಸ್ ಗೇಮ್’ ಎಂದು ಕರೆಯುತ್ತಾರೆ. ಆದರೆ ಕ್ರಿಕೆಟ್ ಮತ್ತು ಮೋಸದಾಟಕ್ಕೆ ಅವಿನಾಭಾವ ಸಂಬಂಧವಿದೆಯೇನೋ ಎನ್ನುವಷ್ಟರಮಟ್ಟಿಗೆ ಅದು ಒಂದಕ್ಕೊಂದು ಬೆರೆತುಹೋಗಿದೆ. ಕ್ರಿಕೆಟ್‍ನ ಎಲ್ಲಾ ಮಟ್ಟದ ಪಂದ್ಯಾವಳಿಗಳು ಇದಕ್ಕೆ ಹೊರತಲ್ಲ. ಮೊದಮೊದಲು ಅಂತರರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಸೌತ್ ಆಫ್ರಿಕಾ ತಂಡದ ಆಗಿನ ನಾಯಕ ಹ್ಯಾನ್ಸಿ ಕ್ರೋನಿಯೆ ಪ್ರಕರಣದ ಮೂಲಕ ಇದರ ವಾಸನೆ ಬಡಿದ ಮೇಲೆ ಜಗಜ್ಜಾಹಿರಾಯಿತು. ಇಡೀ ಕ್ರಿಕೆಟ್ ಜಗತ್ತು ಮೂಕವಿಸ್ಮಿತವಾಗಿ ಕ್ರಿಕೆಟ್ ಆಟಗಾರರನ್ನು ಖಳನಾಯಕರಂತೆ ಕಾಣಲು ಪ್ರಾರಂಭಿಸಿತು. ಕ್ರಿಕೆಟ್ ಪ್ರಿಯರು ಹುಚ್ಚರಂತೆ ಟಿವಿ ಮುಂದೆ ಕುಳಿತುಕೊಳ್ಳುತ್ತಿದ್ದವರು ಕ್ರಿಕೆಟ್ ಬಗ್ಗೆ ತಾತ್ಸಾರ ಮನೋಭಾವನೆ ತಾಳಲು ಪ್ರಾರಂಭಿಸಿದರು. ಇನ್ನೇನೂ ಮೋಸದಾಟ ಮರೆತು ಕ್ರಿಕೆಟನ್ನು ಆಸ್ವಾದಿಸಬೇಕು ಎಂದುಕೊಳ್ಳುತ್ತಿದ್ದ ಹಾಗೆಯೇ ಪದೇಪದೇ ಇಂತಹ ಪ್ರಕರಣಗಳು ಆಗಾಗ್ಗೆ ಕೇಳಿಬರುತ್ತಲೇ ಇದ್ದವು. ಅವು ಕೇವಲ ಅಂತರರಾಷ್ಟ್ರೀಯ ಮಟ್ಟಕ್ಕೆ ಮಾತ್ರ ಸೀಮಿತಕೊಳ್ಳದೇ ಐಪಿಎಲ್ ( ಇಂಡಿಯನ್ ಪ್ರೀಮಿಯರ್ ಲೀಗ್) ನಂತಹ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಗಳಲ್ಲೂ ಈ ಪೆಡಂಭೂತ ಕಾಡಲು ಶುರು ಮಾಡಿತು. ಆದರೂ ಐಪಿಎಲ್ ಎಡಬಿಡದೇ ಸಾಗಿಕೊಂಡು ಬಂದಿದೆ. ಅದರ ಉದ್ದೇಶ ಪ್ರತಿಭಾನ್ವಿತ ಆಟಗಾರರಿಗೆ ಅವಕಾಶ ಕೊಡುವುದೇ ಆಗಿದ್ದರೂ ಹಣದಾಹ ಮೂಲೋದ್ದೇಶಕ್ಕೆ ಧಕ್ಕೆ ಬರುವ ಹಾಗೆ ಮಾಡುತ್ತಿದೆ.

ರಾಷ್ಟ್ರೀಯ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಐಪಿಎಲ್, ಆಟಗಾರರಿಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟರೆ, ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿ ಪ್ರಾರಂಭವಾದ ಕೆಪಿಎಲ್ (ಕರ್ನಾಟಕ ಪ್ರೀಮಿಯರ್ ಲೀಗ್) ರಾಷ್ಟ್ರ, ರಾಜ್ಯಮಟ್ಟದಲ್ಲಿ ಹೆಸರು ತಂದುಕೊಡುವ ಪಂದ್ಯಾವಳಿಯಾಗಿದೆ. ಸಾಮಾನ್ಯವಾಗಿ ಕೆಎಸ್‌ಸಿಎ ಮೊದಲ ಡಿವಿಶನ್‍ನಲ್ಲಿ ಆಡುವ ಆಟಗಾರರು ಮತ್ತು ಕೆಲವೇ ಕೆಲವು ಎರಡನೇ ಡಿವಿಶನ್ ಲ್ರಿಕೆಟ್ ಲೀಗ್ ಆಡುವ ಆಟಗಾರರು ಸ್ಥಾನಗಳನ್ನು ಪಡೆದುಕೊಳ್ಳುತ್ತಾರೆ. ಇದು ಅವರಿಗೆ ಕ್ರಿಕೆಟ್ ಜಗತ್ತಿನಲ್ಲಿ ಬೆಳೆಯಲು ಕೆಎಸ್‍ಸಿಎ ಒದಗಿಸಿರುವ ಸುವರ್ಣಾವಕಾಶವಾಗಿದೆ. ಅನೇಕ ಕನಸುಗಳನ್ನು ಹೊತ್ತು ಬರುವ ಅದೆಷ್ಟೋ ಆಟಗಾರರ ಭವಿಷ್ಯಕ್ಕೆ ಇದು ದಾರಿದೀಪವಾಗಿದೆ. ಅಷ್ಟೇ ಅಲ್ಲದೇ ಎಲ್ಲಾ ಆಟಗಾರರು ಟಿವಿ ಪರದೆ ಮೇಲೆ ಕಾಣಿಸಿಕೊಳ್ಳಬೇಕು ಎಂಬ ಹಂಬಲಕ್ಕೆ ಆಸರೆಯಾಗಿ ಇದು ನೇರ ಪ್ರಸಾರವನ್ನು ಕೂಡ ಕಾಣುತ್ತದೆ. ಹಾಗೂ ಒಂದಷ್ಟು ಹಣವನ್ನು ತಂದುಕೊಡುತ್ತದೆ. ಈ ಕಾರಣಕ್ಕಾಗಿಯೇ ಅನೇಕ ಯುವ ಆಟಗಾರರ ಗಮನ ಕೆಪಿಎಲ್ ಸೆಳೆಯಲು ಕಾರಣವಾಗಿದೆ.

ಹೀಗೆ ಕನಸು ಕಂಡು ಬರುವ ಆಟಗಾರರು ಅವಕಾಶಗಳನ್ನು ಪಡೆದುಕೊಂಡು ಯಾರದೋ ಹಣದಾಹಕ್ಕೆ ಬಲಿಯಾಗಿ ಅತಿ ಕಡಿಮೆ ಅವಧಿಯಲ್ಲಿ ಶ್ರೀಮಂತರಾಗಬಹುದೆಂಬ ಭ್ರಮೆಯಲ್ಲಿ ಇಂತಹ ಮೋಸದಾಟದ ಬಲೆಗೆ ಬೀಳುತ್ತಿರುವುದು ಕ್ರಿಕೆಟ್ ಜಗತ್ತಿನ ಕಳಂಕವಾಗಿದೆ. 2019-20ನೇ ಸಾಲಿನ ಕೆಪಿಎಲ್ ಕ್ರಿಕೆಟ್ ಟೂರ್ನಿ ಬಹಳ ಸಾಂಗವಾಗಿ ನೆರವೇರಿತು ಎಂದು ಕೆಎಸ್‍ಸಿಎ ನಿಟ್ಟುಸಿರು ಬಿಡುತ್ತಿರಬೇಕಾದರೆಯೇ ಮೋಸದಾಟದ ಸುದ್ದಿ ಹೊರಬಂದಿದೆ.

ಕ್ರಿಕೆಟ್ ಮೋಸದಾಟದಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕ ಅಲಿ ಅಶ್ಫಾಕ್ ಮತ್ತು ಡ್ರಮ್ಮರ್ ಭವೇಶ್ ಬಾಫ್ನಾ ಇದರಲ್ಲಿ ಭಾಗಿಯಾಗಿದ್ದಾರೆಂಬ ಸ್ಪೋಟಕ ಮಾಹಿತಿ ಪೋಲಿಸ್ ತನಿಖೆಯಿಂದ ಗೊತ್ತಾಗಿ ಅವರನ್ನು ಬಂಧಿಸಲಾಗಿದೆ. ಅವರನ್ನು ತೀವ್ರವಾದ ವಿಚಾರಣೆಗೆ ಒಳಪಡಿಸಲಾಗಿ ಆರೋಪಿಗಳು ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಬುಕ್ಕಿಗಳ ಸಂಪರ್ಕ ಹೊಂದಿದ್ದಾರೆ ಎಂಬ ವಿಚಾರ ಮಾಧ್ಯಮಗಳಲ್ಲಿ ಬಿತ್ತರಗೊಂಡಿದೆ. ಇದು ಕೇವಲ ಇಲ್ಲಿ ಮಾತ್ರವಿದೆಯೆಂದು ಅರ್ಥವಲ್ಲ. ಇಂತಹ ಅನೇಕ ಮಂದಿ ಮೋಸದಾಟದಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ನ್ಯಾಯಯುತವಾದ ತನಿಖೆ ನಡೆಸಿದರೆ ಸಿಕ್ಕಿಬೀಳುತ್ತಾರೆ.

ಮಧ್ಯದಲ್ಲಿರುವವರು ಅಲಿ ಅಶ್ಫಾಕ್

ಕೆಎಸ್‌ಸಿಎ ಇದರ ಆಳ, ಅಗಲ, ಮತ್ತು ಇದರ ಮೂಲವನ್ನು ಅದರ ಪ್ರಗತಿಗೆ ಹುಡುಕಲೇ ಬೇಕಾಗಿದೆ. ಇಲ್ಲದಿದ್ದರೆ ಅದು ಪಡೆದುಕೊಂಡಿರುವ ಹೆಸರನ್ನು ಮಣ್ಣು ಪಾಲು ಮಾಡಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ನಾನು 1993ರಿಂದ ಒಬ್ಬ ಕ್ರಿಕೆಟ್ ಕ್ಲಬ್‍ನ ಕೆಎಸ್‍ಸಿಎ ಲೀಗ್ ಪಂದ್ಯಾವಳಿಗಳ ಆಟಗಾರನಾಗಿ ಕ್ರಿಕೆಟನ್ನು ತುಂಬ ಹತ್ತಿರದಿಂದ ಬಲ್ಲವನಾಗಿ ಕ್ರಿಕೆಟ್ ಅತ್ಯಂತ ಪ್ರೀತಿಯಿಂದ, ನಿಷ್ಠೆಯಿಂದ ಹೇಗೆ ಆಡಬಹುದು ಎಂಬುದನ್ನು ಬಲ್ಲೆ. ಯಾವುದೇ ಹಣದಾಹಕ್ಕೆ ಬಲಿಯಾಗದೇ ಆಟಕ್ಕೆ ಗೌರವ ಕೊಟ್ಟು ನಿಷ್ಠೆಯಿಂದ ಆಡಿದರೆ ಅದು ನಮ್ಮನ್ನು ಕಾಪಾಡುತ್ತದೆ. ಯುವ ಆಟಗಾರರು ಇತ್ತ ಕಡೆ ಗಮನಹರಿಸಿ, ತಾತ್ಕಾಲಿಕವಾದ ಇಷ್ಟಗಳನ್ನು ಪೂರೈಸುವ ಆಮಿಷಗಳಿಗೆ ಬಲಿಯಾಗದೇ ಭವಿಷ್ಯವನ್ನು ರೂಪಿಸುವ ಆಟದ ಕಡೆ ಮನಸ್ಸನ್ನು ನೆಡಬೇಕಾಗುತ್ತದೆ. ಹಾಗೆಯೇ ಅಧಿಕಾರದ ಚುಕ್ಕಾಣಿ ಹಿಡಿಯುವವರು ಕೆಎಸ್‌ಸಿಎ ಗೆ ಇರುವ ಮಾನ್ಯತೆ ಮತ್ತು ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯನ್ನು ಇಡಬೇಕಾಗುತ್ತದೆ ಆಗ ಮಾತ್ರ ಕ್ರಿಕೆಟ್ ಪ್ರೀಮಿಗಳು ಕ್ರಿಕೆಟ್ ಆಟಗಾರರ ಬಗ್ಗೆ ಅಭಿಮಾನ ಮತ್ತು ವಿಶ್ವಾಸವನ್ನು ಬೆಳೆಸಿಕೊಳ್ಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...