Homeಕರ್ನಾಟಕಕ್ಷೀರಭಾಗ್ಯ ದಶಮಾನೋತ್ಸವ ಸಂಭ್ರಮ: ಯೋಜನೆಗೆ ಅಂತರಾಷ್ಟ್ರೀಯ ಮನ್ನಣೆ- ಸಿಎಂ ಸಿದ್ದರಾಮಯ್ಯ

ಕ್ಷೀರಭಾಗ್ಯ ದಶಮಾನೋತ್ಸವ ಸಂಭ್ರಮ: ಯೋಜನೆಗೆ ಅಂತರಾಷ್ಟ್ರೀಯ ಮನ್ನಣೆ- ಸಿಎಂ ಸಿದ್ದರಾಮಯ್ಯ

- Advertisement -
- Advertisement -

”ಕ್ಷೀರಭಾಗ್ಯ ಯೋಜನೆʼ ಜಾರಿಯಾಗಿ 10 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಒಕ್ಕೂಟದಿಂದ ಬುಧವಾರ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ರಾಜ್ಯಮಟ್ಟದ ಕ್ಷೀರಭಾಗ್ಯ ದಶಮಾನೋತ್ಸವ ಸಮಾರಂಭ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾದಿದ್ದರು.

ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ‘ಕ್ಷೀರಭಾಗ್ಯ’ ಯೋಜನೆಯನ್ನು ಜಾರಿಗೆ ತರಲಾಯಿತು. ಮಕ್ಕಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದು, ಕ್ಷೀರ ಭಾಗ್ಯ’ ಅಂತರ್‌ ರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಉತ್ಪಾದಕರ ಸಂಘಗಳ ಒಕ್ಕೂಟವು ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಮಾನಸಿಕವಾಗಿ ಮತ್ತು ದೌಹಿಕವಾಗಿ ಸದೃಢವಾಗಿದ್ದರೆಮಾತ್ರ ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಎಲ್ಲ ಜಾತಿಗಳು, ಎಲ್ಲ ಧರ್ಮಗಳ ಬಡವರು ಮತ್ತು ಮಧ್ಯಮ ವರ್ಗರದವರ ಮಕ್ಕಳ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು.

10 ವರ್ಷಗಳಿಂದ ಪ್ರತೀ ದಿನ ಲಕ್ಷಾಂತರ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗುವಂತೆ ಮಾಡಿದ್ದೇವೆ. ಹೀಗಾಗಿ ನಮ್ಮ ಹೆಮ್ಮೆಯ ಈ ಯೋಜನೆ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ” ಎಂದು ಹೇಳಿದರು.

ಈ ಸಂಬಂಧ ಟ್ವೀಟ್ ಮೂಲಕ ಸಂತಸ ವ್ಯಕ್ತಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‌ʼ”ಶಾಲಾ ವಿದ್ಯಾರ್ಥಿಗಳಿಗೆ ಬಿಸಿ ಹಾಲು ನೀಡುವ ಕ್ಷೀರಭಾಗ್ಯ ಯೋಜನೆಗೆ ಈಗ ದಶಮಾನೋತ್ಸವದ ಸಂಭ್ರಮ. ಈ ಸಡಗರವನ್ನು ಶಾಲೆಗಳಲ್ಲಿ ಖುಷಿಖುಷಿಯಾಗಿ ಹಾಲು ಕುಡಿಯುತ್ತಿರುವ ಮಕ್ಕಳ ಮುಖಗಳಲ್ಲಿ ನಾನು ಕಾಣುತ್ತಿದ್ದೇನೆ” ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

”ಒಂದನೇ ತರಗತಿಯಲ್ಲಿ ಬಿಸಿ ಹಾಲು ಕುಡಿಯಲಾರಂಭಿಸಿದ ಮಗುವೊಂದು ಈಗ ಹತ್ತನೇ ತರಗತಿಯ ಪ್ರೌಡ ವಿದ್ಯಾರ್ಥಿಯಾಗಿ ಕ್ಷೀರಭಾಗ್ಯ ಯೋಜನೆಯಿಂದ ತನ್ನ ದೇಹಕ್ಕೆ ಬಲ ಬಂತು, ಓದಲು ಹುಮ್ಮಸ್ಸು ಬಂತು ಎಂದೆಲ್ಲ ಹೇಳುತ್ತಿರುವುದನ್ನು ಕೇಳಿದಾಗ ಯೋಜನೆಯ ಉದ್ದೇಶ ಸಾರ್ಥಕವಾಯಿತು ಎಂದು ಅನಿಸುತ್ತದೆ” ಎಂದು ತಿಳಿಸಿದ್ದಾರೆ.

”ಅಪೌಷ್ಟಿಕತೆ ನಿವಾರಣೆಯ ಜೊತೆಗೆ ಕಲಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ 2013ರಲ್ಲಿ ನಮ್ಮ ಸರ್ಕಾರವು ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿತ್ತು. ಕ್ಷೀರಭಾಗ್ಯ ಜಾರಿಗೊಂಡ ನಂತರದಿಂದ ಶಾಲಾ ಮಕ್ಕಳ ಪೌಷ್ಟಿಕ ಮಟ್ಟ ಸುಧಾರಣೆಯಾಗಿದೆ, ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಾಗಿದೆ ಮತ್ತು ರಾಜ್ಯದ ಹಾಲು ಉತ್ಪಾದಕ ಒಕ್ಕೂಟಗಳಿಗೂ ಬಲ ಬಂದಿದೆ ಎನ್ನುವುದನ್ನು ತಿಳಿಸಲು ಹೆಮ್ಮೆಯಾಗುತ್ತದೆʼ” ಎಂದು ಮುಖ್ಯಮಂತ್ರಿಗಳು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಗಾಂಧೀಜಿಯವರನ್ನು ಕೊಂದ ಮನಸ್ಥಿತಿಯವರೇ ಗೌರಿ ಲಂಕೇಶ್‌ರನ್ನು ಹತ್ಯೆ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...