Homeಕರೋನಾ ತಲ್ಲಣಕಾನೂನು ವಿದ್ಯಾರ್ಥಿಗಳ ಪರೀಕ್ಷಾ ದಿನಾಂಕದ ಗೊಂದಲ ನಿವಾರಿಸಿ - ಕೆವಿಎಸ್ ಆಗ್ರಹ

ಕಾನೂನು ವಿದ್ಯಾರ್ಥಿಗಳ ಪರೀಕ್ಷಾ ದಿನಾಂಕದ ಗೊಂದಲ ನಿವಾರಿಸಿ – ಕೆವಿಎಸ್ ಆಗ್ರಹ

ಕಾನೂನು ಸಚಿವ ಮಾಧುಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ‘ಸ್ವಲ್ಪ ದಿನಗಳ ಕಾಲ ತರಗತಿಗಳನ್ನು ನಡೆಸಿ ನಂತರ ಪರೀಕ್ಷೆಗಳನ್ನು ನಡೆಸಲಾಗುವುದು’ ಎಂದು ತಿಳಿಸಿದರೂ ಪರೀಕ್ಷಾ ದಿನಾಂಕದ  ಬಗ್ಗೆ ಯಾವುದೇ ನಿಖರವಾದ ಮಾಹಿತಿಯನ್ನು ನೀಡಿಲ್ಲ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಒಂದು ರೀತಿಯ ಆತಂಕ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದ ಸ್ಥಿತಿ ಬಂದಿದೆ. ಒಂದೊಂದು ಶಿಕ್ಷಣ ಸಂಸ್ಥೆಗಳು ಒಂದೊಂದು ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ವಿಶ್ವವಿದ್ಯಾಲಯಗಳು ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಬಿಟ್ಟು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ನಿರ್ಧರಿಸಿವೆ.

ಆದರೆ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಮಾತ್ರ ಎಲ್ಲಾ ವರ್ಷದ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ. ಆದರೆ ಪರೀಕ್ಷೆ ವೇಳಾಪಟ್ಟಿ ಮಾತ್ರ ಪ್ರಕಟಿಸದೆ ವಿದ್ಯಾರ್ಥಿಗಳನ್ನು ಗೊಂದಲಕ್ಕೆ ನೂಕಿದೆ. ಜೂನ್‌-ಜುಲೈನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಕೊರೊನಾ ಕಾರಣದಿಂದಾಗಿ ಮುಂದೂಡಲಾಗಿದೆ. ಕಾನೂನು ವಿವಿ ನಿರ್ಲಕ್ಯದಿಂದಾಗಿ ಪರೀಕ್ಷೆಯ ಬಗ್ಗೆ ನಿಖರ ಮಾಹಿತಿ ಇಲ್ಲದೆ ವಿದ್ಯಾರ್ಥಿಗಳು ಪರದಾಡುವಂತಹ ಸ್ಥಿತಿ ಎದುರಾಗಿದೆ.

ಲಾಕ್‌ಡೌನ್‌ ನಂತರದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕೆಗಳು ಮತ್ತು ಪೂರಕ ಪರೀಕ್ಷೆಗಳು, ಪದವಿ ಪರೀಕ್ಷೆಗಳು ಮುಗಿದಿವೆ. ಆದರೆ, ಕಾನೂನು ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗಳು ಯಾವಾಗ ನಡೆಯುತ್ತವೇ ಎಂಬುದೇ ಗೊತ್ತಿಲ್ಲದೆ ಗೊಂದಲದಲ್ಲಿದ್ದಾರೆ. ಉನ್ನತ ವಿದ್ಯಾಭ್ಯಾಸ ಮತ್ತು ವೃತ್ತಿಗಾಗಿ ತೆರಳಬೇಕಿರುವ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳು ಪರೀಕ್ಷೆಯ ದಿನಾಂಕದಲ್ಲಿ ಯಾವುದೇ ಸ್ಪಷ್ಟತೆಯಿಲ್ಲದೆ ಸಂಕಟಕ್ಕೀಡಾಗಿದ್ದಾರೆ.

ಇದನ್ನೂ ಓದಿ: 59.7% ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ಶಾಲೆಗೆ ಹೋಗುತ್ತಾರೆ: NSO

ಕಾನೂನು ಸಚಿವ ಮಾಧುಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ‘ಸ್ವಲ್ಪ ದಿನಗಳ ಕಾಲ ತರಗತಿಗಳನ್ನು ನಡೆಸಿ ನಂತರ ಪರೀಕ್ಷೆಗಳನ್ನು ನಡೆಸಲಾಗುವುದು’ ಎಂದು ತಿಳಿಸಿದರೂ ಪರೀಕ್ಷಾ ದಿನಾಂಕದ  ಬಗ್ಗೆ ಯಾವುದೇ ನಿಖರವಾದ ಮಾಹಿತಿಯನ್ನು ನೀಡಿಲ್ಲ. ಸಚಿವರು ಪತ್ರಿಕಾಗೋಷ್ಠಿ ನಡೆಸಿ ಸುಮಾರು ಒಂದೂವರೆ ತಿಂಗಳುಗಳು ಕಳೆದರೂ ಈವರೆಗೆ ಕಾನೂನು ವಿಶ್ವವಿದ್ಯಾಲಯದಿಂದಾಗಲಿ, ಕಾನೂನು ಮಂತ್ರಿಗಳಿಂದಾಗಲಿ ಯಾವುದೇ ಸ್ಪಷ್ಟತೆ ಬಂದಿಲ್ಲ.

ಇತ್ತ ಪರೀಕ್ಷೆಗಳು ಮುಗಿಯದ ಕಾರಣ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಇದು ವಿದ್ಯಾರ್ಥಿಗಳ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದೆ ಎಂದು ಬೇಸರಗೊಂಡಿದ್ದಾರೆ. ಇದಷ್ಟೇ ಅಲ್ಲದೇ ಸೆಪ್ಟೆಂಬರ್ ತಿಂಗಳಿನಲ್ಲಿಯೇ ಪರೀಕ್ಷಾ ಶುಲ್ಕವನ್ನು ಪಾವತಿಸಲಾಗಿದೆ.

ಪರೀಕ್ಷೆ ವೇಳಾಪಟ್ಟಿ ಬಗ್ಗೆ ವಿಚಾರಿಸಲು ವಿಶ್ವವಿದ್ಯಾಲಯವನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ಆದರೆ ಅಲ್ಲಿಂದ ಯಾವುದೇ ಉತ್ತರ ಬರುತ್ತಿಲ್ಲ. ಕಾಲೇಜು ಆಡಳಿತ ಮಂಡಳಿ ಸಹ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗದೆ ಕೈಚೆಲ್ಲಿ ಕುಳಿತಿದ್ದಾರೆ ಎಂದು ಕಾನೂನು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಕೆಎಸ್‍ಎಲ್‍ಯು ಉಪಕುಲತಿಗಳಾದ ಪಿ.ಈಶ್ವರ್ ಭಟ್‍ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಈ ಕೂಡಲೇ ಸ್ಪಷ್ಟವಾದ ಮಾಹಿತಿಯನ್ನು ನೀಡಬೇಕು. ಜೊತೆಗೆ ಆದಷ್ಟು ಬೇಗ ಪರೀಕ್ಷಾ ವೇಳಾಪಟ್ಟಿಯನ್ನು ಅಂತಿಮಗೊಳಿಸಬೇಕಾಗಿ ಕೆವಿಎಸ್ (ಕರ್ನಾಟಕ ವಿದ್ಯಾರ್ಥಿ ಸಂಘಟನೆ) ಆಗ್ರಹಿಸಿದೆ.


ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...