Homeಕರೋನಾ ತಲ್ಲಣಕಾನೂನು ವಿದ್ಯಾರ್ಥಿಗಳ ಪರೀಕ್ಷಾ ದಿನಾಂಕದ ಗೊಂದಲ ನಿವಾರಿಸಿ - ಕೆವಿಎಸ್ ಆಗ್ರಹ

ಕಾನೂನು ವಿದ್ಯಾರ್ಥಿಗಳ ಪರೀಕ್ಷಾ ದಿನಾಂಕದ ಗೊಂದಲ ನಿವಾರಿಸಿ – ಕೆವಿಎಸ್ ಆಗ್ರಹ

ಕಾನೂನು ಸಚಿವ ಮಾಧುಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ‘ಸ್ವಲ್ಪ ದಿನಗಳ ಕಾಲ ತರಗತಿಗಳನ್ನು ನಡೆಸಿ ನಂತರ ಪರೀಕ್ಷೆಗಳನ್ನು ನಡೆಸಲಾಗುವುದು’ ಎಂದು ತಿಳಿಸಿದರೂ ಪರೀಕ್ಷಾ ದಿನಾಂಕದ  ಬಗ್ಗೆ ಯಾವುದೇ ನಿಖರವಾದ ಮಾಹಿತಿಯನ್ನು ನೀಡಿಲ್ಲ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಒಂದು ರೀತಿಯ ಆತಂಕ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದ ಸ್ಥಿತಿ ಬಂದಿದೆ. ಒಂದೊಂದು ಶಿಕ್ಷಣ ಸಂಸ್ಥೆಗಳು ಒಂದೊಂದು ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ವಿಶ್ವವಿದ್ಯಾಲಯಗಳು ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಬಿಟ್ಟು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ನಿರ್ಧರಿಸಿವೆ.

ಆದರೆ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಮಾತ್ರ ಎಲ್ಲಾ ವರ್ಷದ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ. ಆದರೆ ಪರೀಕ್ಷೆ ವೇಳಾಪಟ್ಟಿ ಮಾತ್ರ ಪ್ರಕಟಿಸದೆ ವಿದ್ಯಾರ್ಥಿಗಳನ್ನು ಗೊಂದಲಕ್ಕೆ ನೂಕಿದೆ. ಜೂನ್‌-ಜುಲೈನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಕೊರೊನಾ ಕಾರಣದಿಂದಾಗಿ ಮುಂದೂಡಲಾಗಿದೆ. ಕಾನೂನು ವಿವಿ ನಿರ್ಲಕ್ಯದಿಂದಾಗಿ ಪರೀಕ್ಷೆಯ ಬಗ್ಗೆ ನಿಖರ ಮಾಹಿತಿ ಇಲ್ಲದೆ ವಿದ್ಯಾರ್ಥಿಗಳು ಪರದಾಡುವಂತಹ ಸ್ಥಿತಿ ಎದುರಾಗಿದೆ.

ಲಾಕ್‌ಡೌನ್‌ ನಂತರದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕೆಗಳು ಮತ್ತು ಪೂರಕ ಪರೀಕ್ಷೆಗಳು, ಪದವಿ ಪರೀಕ್ಷೆಗಳು ಮುಗಿದಿವೆ. ಆದರೆ, ಕಾನೂನು ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗಳು ಯಾವಾಗ ನಡೆಯುತ್ತವೇ ಎಂಬುದೇ ಗೊತ್ತಿಲ್ಲದೆ ಗೊಂದಲದಲ್ಲಿದ್ದಾರೆ. ಉನ್ನತ ವಿದ್ಯಾಭ್ಯಾಸ ಮತ್ತು ವೃತ್ತಿಗಾಗಿ ತೆರಳಬೇಕಿರುವ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳು ಪರೀಕ್ಷೆಯ ದಿನಾಂಕದಲ್ಲಿ ಯಾವುದೇ ಸ್ಪಷ್ಟತೆಯಿಲ್ಲದೆ ಸಂಕಟಕ್ಕೀಡಾಗಿದ್ದಾರೆ.

ಇದನ್ನೂ ಓದಿ: 59.7% ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ಶಾಲೆಗೆ ಹೋಗುತ್ತಾರೆ: NSO

ಕಾನೂನು ಸಚಿವ ಮಾಧುಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ‘ಸ್ವಲ್ಪ ದಿನಗಳ ಕಾಲ ತರಗತಿಗಳನ್ನು ನಡೆಸಿ ನಂತರ ಪರೀಕ್ಷೆಗಳನ್ನು ನಡೆಸಲಾಗುವುದು’ ಎಂದು ತಿಳಿಸಿದರೂ ಪರೀಕ್ಷಾ ದಿನಾಂಕದ  ಬಗ್ಗೆ ಯಾವುದೇ ನಿಖರವಾದ ಮಾಹಿತಿಯನ್ನು ನೀಡಿಲ್ಲ. ಸಚಿವರು ಪತ್ರಿಕಾಗೋಷ್ಠಿ ನಡೆಸಿ ಸುಮಾರು ಒಂದೂವರೆ ತಿಂಗಳುಗಳು ಕಳೆದರೂ ಈವರೆಗೆ ಕಾನೂನು ವಿಶ್ವವಿದ್ಯಾಲಯದಿಂದಾಗಲಿ, ಕಾನೂನು ಮಂತ್ರಿಗಳಿಂದಾಗಲಿ ಯಾವುದೇ ಸ್ಪಷ್ಟತೆ ಬಂದಿಲ್ಲ.

ಇತ್ತ ಪರೀಕ್ಷೆಗಳು ಮುಗಿಯದ ಕಾರಣ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಇದು ವಿದ್ಯಾರ್ಥಿಗಳ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದೆ ಎಂದು ಬೇಸರಗೊಂಡಿದ್ದಾರೆ. ಇದಷ್ಟೇ ಅಲ್ಲದೇ ಸೆಪ್ಟೆಂಬರ್ ತಿಂಗಳಿನಲ್ಲಿಯೇ ಪರೀಕ್ಷಾ ಶುಲ್ಕವನ್ನು ಪಾವತಿಸಲಾಗಿದೆ.

ಪರೀಕ್ಷೆ ವೇಳಾಪಟ್ಟಿ ಬಗ್ಗೆ ವಿಚಾರಿಸಲು ವಿಶ್ವವಿದ್ಯಾಲಯವನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ಆದರೆ ಅಲ್ಲಿಂದ ಯಾವುದೇ ಉತ್ತರ ಬರುತ್ತಿಲ್ಲ. ಕಾಲೇಜು ಆಡಳಿತ ಮಂಡಳಿ ಸಹ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗದೆ ಕೈಚೆಲ್ಲಿ ಕುಳಿತಿದ್ದಾರೆ ಎಂದು ಕಾನೂನು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಕೆಎಸ್‍ಎಲ್‍ಯು ಉಪಕುಲತಿಗಳಾದ ಪಿ.ಈಶ್ವರ್ ಭಟ್‍ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಈ ಕೂಡಲೇ ಸ್ಪಷ್ಟವಾದ ಮಾಹಿತಿಯನ್ನು ನೀಡಬೇಕು. ಜೊತೆಗೆ ಆದಷ್ಟು ಬೇಗ ಪರೀಕ್ಷಾ ವೇಳಾಪಟ್ಟಿಯನ್ನು ಅಂತಿಮಗೊಳಿಸಬೇಕಾಗಿ ಕೆವಿಎಸ್ (ಕರ್ನಾಟಕ ವಿದ್ಯಾರ್ಥಿ ಸಂಘಟನೆ) ಆಗ್ರಹಿಸಿದೆ.


ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...