Homeಕರೋನಾ ತಲ್ಲಣಕಾನೂನು ವಿದ್ಯಾರ್ಥಿಗಳ ಪರೀಕ್ಷಾ ದಿನಾಂಕದ ಗೊಂದಲ ನಿವಾರಿಸಿ - ಕೆವಿಎಸ್ ಆಗ್ರಹ

ಕಾನೂನು ವಿದ್ಯಾರ್ಥಿಗಳ ಪರೀಕ್ಷಾ ದಿನಾಂಕದ ಗೊಂದಲ ನಿವಾರಿಸಿ – ಕೆವಿಎಸ್ ಆಗ್ರಹ

ಕಾನೂನು ಸಚಿವ ಮಾಧುಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ‘ಸ್ವಲ್ಪ ದಿನಗಳ ಕಾಲ ತರಗತಿಗಳನ್ನು ನಡೆಸಿ ನಂತರ ಪರೀಕ್ಷೆಗಳನ್ನು ನಡೆಸಲಾಗುವುದು’ ಎಂದು ತಿಳಿಸಿದರೂ ಪರೀಕ್ಷಾ ದಿನಾಂಕದ  ಬಗ್ಗೆ ಯಾವುದೇ ನಿಖರವಾದ ಮಾಹಿತಿಯನ್ನು ನೀಡಿಲ್ಲ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದಿಂದಾಗಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಒಂದು ರೀತಿಯ ಆತಂಕ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದ ಸ್ಥಿತಿ ಬಂದಿದೆ. ಒಂದೊಂದು ಶಿಕ್ಷಣ ಸಂಸ್ಥೆಗಳು ಒಂದೊಂದು ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ವಿಶ್ವವಿದ್ಯಾಲಯಗಳು ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ಬಿಟ್ಟು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ನಿರ್ಧರಿಸಿವೆ.

ಆದರೆ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಮಾತ್ರ ಎಲ್ಲಾ ವರ್ಷದ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ. ಆದರೆ ಪರೀಕ್ಷೆ ವೇಳಾಪಟ್ಟಿ ಮಾತ್ರ ಪ್ರಕಟಿಸದೆ ವಿದ್ಯಾರ್ಥಿಗಳನ್ನು ಗೊಂದಲಕ್ಕೆ ನೂಕಿದೆ. ಜೂನ್‌-ಜುಲೈನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಕೊರೊನಾ ಕಾರಣದಿಂದಾಗಿ ಮುಂದೂಡಲಾಗಿದೆ. ಕಾನೂನು ವಿವಿ ನಿರ್ಲಕ್ಯದಿಂದಾಗಿ ಪರೀಕ್ಷೆಯ ಬಗ್ಗೆ ನಿಖರ ಮಾಹಿತಿ ಇಲ್ಲದೆ ವಿದ್ಯಾರ್ಥಿಗಳು ಪರದಾಡುವಂತಹ ಸ್ಥಿತಿ ಎದುರಾಗಿದೆ.

ಲಾಕ್‌ಡೌನ್‌ ನಂತರದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕೆಗಳು ಮತ್ತು ಪೂರಕ ಪರೀಕ್ಷೆಗಳು, ಪದವಿ ಪರೀಕ್ಷೆಗಳು ಮುಗಿದಿವೆ. ಆದರೆ, ಕಾನೂನು ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗಳು ಯಾವಾಗ ನಡೆಯುತ್ತವೇ ಎಂಬುದೇ ಗೊತ್ತಿಲ್ಲದೆ ಗೊಂದಲದಲ್ಲಿದ್ದಾರೆ. ಉನ್ನತ ವಿದ್ಯಾಭ್ಯಾಸ ಮತ್ತು ವೃತ್ತಿಗಾಗಿ ತೆರಳಬೇಕಿರುವ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳು ಪರೀಕ್ಷೆಯ ದಿನಾಂಕದಲ್ಲಿ ಯಾವುದೇ ಸ್ಪಷ್ಟತೆಯಿಲ್ಲದೆ ಸಂಕಟಕ್ಕೀಡಾಗಿದ್ದಾರೆ.

ಇದನ್ನೂ ಓದಿ: 59.7% ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ಶಾಲೆಗೆ ಹೋಗುತ್ತಾರೆ: NSO

ಕಾನೂನು ಸಚಿವ ಮಾಧುಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ‘ಸ್ವಲ್ಪ ದಿನಗಳ ಕಾಲ ತರಗತಿಗಳನ್ನು ನಡೆಸಿ ನಂತರ ಪರೀಕ್ಷೆಗಳನ್ನು ನಡೆಸಲಾಗುವುದು’ ಎಂದು ತಿಳಿಸಿದರೂ ಪರೀಕ್ಷಾ ದಿನಾಂಕದ  ಬಗ್ಗೆ ಯಾವುದೇ ನಿಖರವಾದ ಮಾಹಿತಿಯನ್ನು ನೀಡಿಲ್ಲ. ಸಚಿವರು ಪತ್ರಿಕಾಗೋಷ್ಠಿ ನಡೆಸಿ ಸುಮಾರು ಒಂದೂವರೆ ತಿಂಗಳುಗಳು ಕಳೆದರೂ ಈವರೆಗೆ ಕಾನೂನು ವಿಶ್ವವಿದ್ಯಾಲಯದಿಂದಾಗಲಿ, ಕಾನೂನು ಮಂತ್ರಿಗಳಿಂದಾಗಲಿ ಯಾವುದೇ ಸ್ಪಷ್ಟತೆ ಬಂದಿಲ್ಲ.

ಇತ್ತ ಪರೀಕ್ಷೆಗಳು ಮುಗಿಯದ ಕಾರಣ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಇದು ವಿದ್ಯಾರ್ಥಿಗಳ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದೆ ಎಂದು ಬೇಸರಗೊಂಡಿದ್ದಾರೆ. ಇದಷ್ಟೇ ಅಲ್ಲದೇ ಸೆಪ್ಟೆಂಬರ್ ತಿಂಗಳಿನಲ್ಲಿಯೇ ಪರೀಕ್ಷಾ ಶುಲ್ಕವನ್ನು ಪಾವತಿಸಲಾಗಿದೆ.

ಪರೀಕ್ಷೆ ವೇಳಾಪಟ್ಟಿ ಬಗ್ಗೆ ವಿಚಾರಿಸಲು ವಿಶ್ವವಿದ್ಯಾಲಯವನ್ನು ಸಂಪರ್ಕಿಸಲು ಪ್ರಯತ್ನಿಸಿದರೆ ಆದರೆ ಅಲ್ಲಿಂದ ಯಾವುದೇ ಉತ್ತರ ಬರುತ್ತಿಲ್ಲ. ಕಾಲೇಜು ಆಡಳಿತ ಮಂಡಳಿ ಸಹ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗದೆ ಕೈಚೆಲ್ಲಿ ಕುಳಿತಿದ್ದಾರೆ ಎಂದು ಕಾನೂನು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಕೆಎಸ್‍ಎಲ್‍ಯು ಉಪಕುಲತಿಗಳಾದ ಪಿ.ಈಶ್ವರ್ ಭಟ್‍ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಈ ಕೂಡಲೇ ಸ್ಪಷ್ಟವಾದ ಮಾಹಿತಿಯನ್ನು ನೀಡಬೇಕು. ಜೊತೆಗೆ ಆದಷ್ಟು ಬೇಗ ಪರೀಕ್ಷಾ ವೇಳಾಪಟ್ಟಿಯನ್ನು ಅಂತಿಮಗೊಳಿಸಬೇಕಾಗಿ ಕೆವಿಎಸ್ (ಕರ್ನಾಟಕ ವಿದ್ಯಾರ್ಥಿ ಸಂಘಟನೆ) ಆಗ್ರಹಿಸಿದೆ.


ಇದನ್ನೂ ಓದಿ: ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...