Homeಕರ್ನಾಟಕನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

ನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

ಸರ್ಕಾರ ಈ ಸಮಸ್ಯೆಯಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎಂದು ದಾರಿ ಹುಡುಕುತ್ತಿದೆ. ಮಾತುಕತೆಗಾಗಿ ನಮ್ಮನ್ನು ಕರೆದಿದ್ದಾರೆಂದು ಸಾರಿಗೆ ಸಚಿವರು ಸುಳ್ಳು ಹೇಳುತ್ತಿದ್ದಾರೆ. ಇದುವರೆಗೂ ಯಾವುದೇ ಮಾತುಕತೆಗಾಗಿ ನಮ್ಮನ್ನು ಕರೆದಿಲ್ಲ ಎಂದು ಮುಷ್ಕರ ನಿರತ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸಿ ಎಂದು ಒತ್ತಾಯಿಸಿ ಕೆಎಸ್‌ಆರ್‌ಟಿಸಿ ನೌಕರರು ನಿನ್ನೆ ನಡೆಸಿದ ಬೃಹತ್‌ ಪ್ರತಿಭಟನೆಯ ಮುಂದುವರೆದ ಭಾಗವಾಗಿ ಇಂದು ಮುಷ್ಕರ ಹೂಡಿದ್ದು, ಮುಂಜಾನೆಯಿಂದ ಯಾವುದೇ ಬಸ್ಸುಗಳು ಓಡಾಡಿರಲಿಲ್ಲ. ಮುಷ್ಕರದ ಬಗ್ಗೆ ಸರ್ಕಾರ ನಮ್ಮೊಂದಿಗೆ ಯಾವುದೆ ಮಾತುಕತೆ ನಡೆಸಿಲ್ಲವಾದ್ದರಿಂದ ’ನಾಳೆಯು ಮುಷ್ಕರ ಮುಂದುವರೆಯಲಿದೆ’ ಎಂದು ಮುಷ್ಕರವನ್ನು ಮುನ್ನಡೆಸುತ್ತಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು ತಿಳಿಸಿದರು.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವರು, “ಸರ್ಕಾರ ಈ ಸಮಸ್ಯೆಯಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎಂದು ದಾರಿ ಹುಡುಕುತ್ತಿದೆ. ಮಾತುಕತೆಗಾಗಿ ನಮ್ಮನ್ನು ಕರೆದಿದ್ದಾರೆಂದು ಸಾರಿಗೆ ಸಚಿವರು ಸುಳ್ಳು ಹೇಳುತ್ತಿದ್ದಾರೆ. ಇದುವರೆಗೂ ಯಾವುದೇ ಮಾತುಕತೆಗಾಗಿ ನಮ್ಮನ್ನು ಕರೆದಿಲ್ಲವಾದ್ದರಿಂದ, ನಾಳೆಯು ಮುಷ್ಕರ ಮುಂದುವರೆಯಲಿದೆ” ಎಂದು ಹೇಳಿದರು.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕೆಎಸ್‌ಆರ್‌ಟಿಸಿ ನೌಕರರ ಸಂಘ(ಎ.ಐ.ಟಿ.ಯು.ಸಿ) ಮುಖಂಡರಾದ ಅನಂತ ಸುಬ್ಬರಾವ್, “ಈ ಮುಷ್ಕರವನ್ನು ಮುನ್ನಡೆಸುತ್ತಿರುವುದು ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್‌ ಅವರಾಗಿದ್ದಾರೆ, ನಮ್ಮ ಸಂಘಟನೆಯ ಸದಸ್ಯರಿಗೆ ಸಹಕಾರ ಕೊಡಲು ಹೇಳಿದ್ದೇವೆ. ಮುಷ್ಕರ ಹಿನ್ನಲೆಯಲ್ಲಿ ಸಚಿವರು ನಮ್ಮನ್ನು ಸಭೆಗೆ ಕರೆದಿದ್ದರಾದರೂ ’ಮುಷ್ಕರವನ್ನು ನಾವು ಮುನ್ನಡೆಸುತ್ತಿಲ್ಲವಾದ್ದರಿಂದ ಅದನ್ನು ತಡೆಯುವುದು ಕೂಡಾ ಇಲ್ಲ, ಮುಷ್ಕರ ಮುನ್ನಡೆಸುತ್ತಿರುವ ಮುಖಂಡರನ್ನು ಕರೆದು ಮಾತನಾಡಿ’ ಎಂದು ಸರ್ಕಾರವನ್ನು ಕೇಳಿಕೊಂಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ: ಬೆಂಗಳೂರಿನಲ್ಲಿ ಬೃಹತ್ ಹೋರಾಟ

“ಮುಷ್ಕರದಲ್ಲಿ ಮುಖ್ಯವಾಗಿ ಸರ್ಕಾರಿ ಸಂಬಳ, ಕೊರೊನಾದಿಂದ ಮೃತಪಟ್ಟವರಿಗೆ 30 ಲಕ್ಷ ನೀಡುವುದು ಹಾಗೂ ನೌಕರರಿಗೆ ಹಿಂಸೆ ಕಿರುಕುಳದ ಬಗ್ಗೆ ನೌಕರರು ಹೇಳಿಕೊಂಡಿದ್ದಾರೆ. ನಾವು ಈ ಬಗ್ಗೆ ಆಂಧ್ರಪ್ರದೇಶದಲ್ಲಿ ಆಗಿರುವ ಸುಧಾರಣೆಗಳ ಬಗ್ಗೆ ಅಧ್ಯಯನ ನಡೆಸಲು ಒಂದು ಆಯೋಗವನ್ನು ಕಳುಹಿಸಿ ವರದಿ ಪಡೆಯಲು ಕೇಳಿಕೊಂಡಿದ್ದೇವೆ” ಎಂದು ಅನಂತಸುಬ್ಬರಾವ್ ಹೇಳಿದರು.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ಮುಖಂಡ ಪ್ರಕಾಶ್ ಮಾತನಾಡಿ, “ಮುಷ್ಕರವನ್ನು ನಿಲ್ಲಿಸಲು ಸಹಾಯ ಮಾಡಿ ಎಂದು ಸರ್ಕಾರ ಕೇಳಿಕೊಂಡಿದೆ. ಮುಷ್ಕರ ಕೋಡಿಹಳ್ಳಿ ಚಂದ್ರಶೇಖರ್‌ ಅವರ ನೇತೃತ್ವದಲ್ಲಿ ನಡೆಯುತ್ತಿರುವುದರಿಂದ, ಅವರನ್ನು ಸಭೆಗೆ ಕರೆಯದ ಹೊರತು ಸಭೆ ನಡೆಸಿ ಮುಷ್ಕರವನ್ನು ಕೊನೆಗೊಳಿಸಲು ಆಗುವುದಿಲ್ಲ ಎಂದು ಹೇಳಿದ್ದೇವೆ. ಕಾರ್ಮಿಕರಲ್ಲಿ ಸರ್ಕಾರದ ವಿರುದ್ದ ಅಸಮಾಧಾನ ಮಡುಗಟ್ಟಿರುವುದರಿಂದ ಮುಷ್ಕರವನ್ನು ಮಾಡುತ್ತಿದ್ದಾರೆ, ಸರ್ಕಾರ ಕೂಡಾ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ಕಾರ್ಮಿಕರು ಎತ್ತಿರುವ ಬೇಡಿಕೆಯನ್ನು ಈಡೇರಿಸುವಂತೆ ಕೇಳಿಕೊಂಡಿದ್ದೇವೆ” ಎಂದು ಹೇಳಿದರು.

“ಸಾರಿಗೆ ಸಿಬ್ಬಂದಿಗಳ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಸಹಾನುಭೂತಿ ಇದೆ. ಅವರ ಬೇಡಿಕೆಗಳ ಬಗ್ಗೆ ಈಗಾಗಲೇ ಒಕ್ಕೂಟಗಳ ಮುಖಂಡರ ಒಂದು ಸುತ್ತಿನ ಸಭೆ ನಡೆಸಲಾಯಿತು. ಅಗತ್ಯವಿದ್ದರೆ ಮತ್ತಷ್ಟು ಮಾತುಕತೆಗಳನ್ನು ನಡೆಸಿ ಸಂಧಾನ ಮಾರ್ಗದಲ್ಲಿ ಸಮಸ್ಯೆ ಪರಿಹರಿಸುವ ಉದ್ದೇಶ ನಮ್ಮ ಸರ್ಕಾರದ್ದಾಗಿದೆ” ಎಂದು ಸಚಿವ ಲಕ್ಷ್ಮಣ್ ಸವದಿ ಸಂಜೆ ಮಾಧ್ಯಮ ಹೇಳಿಕೆ ನೀಡಿದ್ದರು.

ದಿಡೀರ್ ಆಗಿ ಬಸ್ ಸಂಚಾರವನ್ನು ಕೆಲವೆಡೆ ಸ್ಥಗಿತಗೊಳಿಸಿರುವುದರಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟಾಗಿದೆ. ಆದ್ದರಿಂದ ತಕ್ಷಣ ಮುಷ್ಕರನಿರತ ಸಿಬ್ಬಂದಿಗಳು ಕರ್ತವ್ಯಕ್ಕೆ ಮರಳಬೇಕೆಂದು ಮನವಿ ಮಾಡಿಕೊಂಡಿದ್ದ ಲಕ್ಷ್ಮಣ ಸವದಿ, “ಕೋವಿಡ್‍ನಿಂದಾಗಿ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ನೌಕರರ ಕುಟುಂಬದವರಿಗೆ ಇನ್ನು 15 ದಿನಗಳೊಳಗಾಗಿ 30 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು” ಎಂದು ಮಾಧ್ಯಮ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಇಂದು BMTC ಬಸ್‌ಗಳು ರಸ್ತೆಗಿಳಿಯುವುದಿಲ್ಲ: ಸಾರಿಗೆ ನೌಕರರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...