Homeಕರ್ನಾಟಕನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

ನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

ಸರ್ಕಾರ ಈ ಸಮಸ್ಯೆಯಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎಂದು ದಾರಿ ಹುಡುಕುತ್ತಿದೆ. ಮಾತುಕತೆಗಾಗಿ ನಮ್ಮನ್ನು ಕರೆದಿದ್ದಾರೆಂದು ಸಾರಿಗೆ ಸಚಿವರು ಸುಳ್ಳು ಹೇಳುತ್ತಿದ್ದಾರೆ. ಇದುವರೆಗೂ ಯಾವುದೇ ಮಾತುಕತೆಗಾಗಿ ನಮ್ಮನ್ನು ಕರೆದಿಲ್ಲ ಎಂದು ಮುಷ್ಕರ ನಿರತ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸಿ ಎಂದು ಒತ್ತಾಯಿಸಿ ಕೆಎಸ್‌ಆರ್‌ಟಿಸಿ ನೌಕರರು ನಿನ್ನೆ ನಡೆಸಿದ ಬೃಹತ್‌ ಪ್ರತಿಭಟನೆಯ ಮುಂದುವರೆದ ಭಾಗವಾಗಿ ಇಂದು ಮುಷ್ಕರ ಹೂಡಿದ್ದು, ಮುಂಜಾನೆಯಿಂದ ಯಾವುದೇ ಬಸ್ಸುಗಳು ಓಡಾಡಿರಲಿಲ್ಲ. ಮುಷ್ಕರದ ಬಗ್ಗೆ ಸರ್ಕಾರ ನಮ್ಮೊಂದಿಗೆ ಯಾವುದೆ ಮಾತುಕತೆ ನಡೆಸಿಲ್ಲವಾದ್ದರಿಂದ ’ನಾಳೆಯು ಮುಷ್ಕರ ಮುಂದುವರೆಯಲಿದೆ’ ಎಂದು ಮುಷ್ಕರವನ್ನು ಮುನ್ನಡೆಸುತ್ತಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು ತಿಳಿಸಿದರು.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವರು, “ಸರ್ಕಾರ ಈ ಸಮಸ್ಯೆಯಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎಂದು ದಾರಿ ಹುಡುಕುತ್ತಿದೆ. ಮಾತುಕತೆಗಾಗಿ ನಮ್ಮನ್ನು ಕರೆದಿದ್ದಾರೆಂದು ಸಾರಿಗೆ ಸಚಿವರು ಸುಳ್ಳು ಹೇಳುತ್ತಿದ್ದಾರೆ. ಇದುವರೆಗೂ ಯಾವುದೇ ಮಾತುಕತೆಗಾಗಿ ನಮ್ಮನ್ನು ಕರೆದಿಲ್ಲವಾದ್ದರಿಂದ, ನಾಳೆಯು ಮುಷ್ಕರ ಮುಂದುವರೆಯಲಿದೆ” ಎಂದು ಹೇಳಿದರು.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕೆಎಸ್‌ಆರ್‌ಟಿಸಿ ನೌಕರರ ಸಂಘ(ಎ.ಐ.ಟಿ.ಯು.ಸಿ) ಮುಖಂಡರಾದ ಅನಂತ ಸುಬ್ಬರಾವ್, “ಈ ಮುಷ್ಕರವನ್ನು ಮುನ್ನಡೆಸುತ್ತಿರುವುದು ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್‌ ಅವರಾಗಿದ್ದಾರೆ, ನಮ್ಮ ಸಂಘಟನೆಯ ಸದಸ್ಯರಿಗೆ ಸಹಕಾರ ಕೊಡಲು ಹೇಳಿದ್ದೇವೆ. ಮುಷ್ಕರ ಹಿನ್ನಲೆಯಲ್ಲಿ ಸಚಿವರು ನಮ್ಮನ್ನು ಸಭೆಗೆ ಕರೆದಿದ್ದರಾದರೂ ’ಮುಷ್ಕರವನ್ನು ನಾವು ಮುನ್ನಡೆಸುತ್ತಿಲ್ಲವಾದ್ದರಿಂದ ಅದನ್ನು ತಡೆಯುವುದು ಕೂಡಾ ಇಲ್ಲ, ಮುಷ್ಕರ ಮುನ್ನಡೆಸುತ್ತಿರುವ ಮುಖಂಡರನ್ನು ಕರೆದು ಮಾತನಾಡಿ’ ಎಂದು ಸರ್ಕಾರವನ್ನು ಕೇಳಿಕೊಂಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ: ಬೆಂಗಳೂರಿನಲ್ಲಿ ಬೃಹತ್ ಹೋರಾಟ

“ಮುಷ್ಕರದಲ್ಲಿ ಮುಖ್ಯವಾಗಿ ಸರ್ಕಾರಿ ಸಂಬಳ, ಕೊರೊನಾದಿಂದ ಮೃತಪಟ್ಟವರಿಗೆ 30 ಲಕ್ಷ ನೀಡುವುದು ಹಾಗೂ ನೌಕರರಿಗೆ ಹಿಂಸೆ ಕಿರುಕುಳದ ಬಗ್ಗೆ ನೌಕರರು ಹೇಳಿಕೊಂಡಿದ್ದಾರೆ. ನಾವು ಈ ಬಗ್ಗೆ ಆಂಧ್ರಪ್ರದೇಶದಲ್ಲಿ ಆಗಿರುವ ಸುಧಾರಣೆಗಳ ಬಗ್ಗೆ ಅಧ್ಯಯನ ನಡೆಸಲು ಒಂದು ಆಯೋಗವನ್ನು ಕಳುಹಿಸಿ ವರದಿ ಪಡೆಯಲು ಕೇಳಿಕೊಂಡಿದ್ದೇವೆ” ಎಂದು ಅನಂತಸುಬ್ಬರಾವ್ ಹೇಳಿದರು.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ಮುಖಂಡ ಪ್ರಕಾಶ್ ಮಾತನಾಡಿ, “ಮುಷ್ಕರವನ್ನು ನಿಲ್ಲಿಸಲು ಸಹಾಯ ಮಾಡಿ ಎಂದು ಸರ್ಕಾರ ಕೇಳಿಕೊಂಡಿದೆ. ಮುಷ್ಕರ ಕೋಡಿಹಳ್ಳಿ ಚಂದ್ರಶೇಖರ್‌ ಅವರ ನೇತೃತ್ವದಲ್ಲಿ ನಡೆಯುತ್ತಿರುವುದರಿಂದ, ಅವರನ್ನು ಸಭೆಗೆ ಕರೆಯದ ಹೊರತು ಸಭೆ ನಡೆಸಿ ಮುಷ್ಕರವನ್ನು ಕೊನೆಗೊಳಿಸಲು ಆಗುವುದಿಲ್ಲ ಎಂದು ಹೇಳಿದ್ದೇವೆ. ಕಾರ್ಮಿಕರಲ್ಲಿ ಸರ್ಕಾರದ ವಿರುದ್ದ ಅಸಮಾಧಾನ ಮಡುಗಟ್ಟಿರುವುದರಿಂದ ಮುಷ್ಕರವನ್ನು ಮಾಡುತ್ತಿದ್ದಾರೆ, ಸರ್ಕಾರ ಕೂಡಾ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ಕಾರ್ಮಿಕರು ಎತ್ತಿರುವ ಬೇಡಿಕೆಯನ್ನು ಈಡೇರಿಸುವಂತೆ ಕೇಳಿಕೊಂಡಿದ್ದೇವೆ” ಎಂದು ಹೇಳಿದರು.

“ಸಾರಿಗೆ ಸಿಬ್ಬಂದಿಗಳ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಸಹಾನುಭೂತಿ ಇದೆ. ಅವರ ಬೇಡಿಕೆಗಳ ಬಗ್ಗೆ ಈಗಾಗಲೇ ಒಕ್ಕೂಟಗಳ ಮುಖಂಡರ ಒಂದು ಸುತ್ತಿನ ಸಭೆ ನಡೆಸಲಾಯಿತು. ಅಗತ್ಯವಿದ್ದರೆ ಮತ್ತಷ್ಟು ಮಾತುಕತೆಗಳನ್ನು ನಡೆಸಿ ಸಂಧಾನ ಮಾರ್ಗದಲ್ಲಿ ಸಮಸ್ಯೆ ಪರಿಹರಿಸುವ ಉದ್ದೇಶ ನಮ್ಮ ಸರ್ಕಾರದ್ದಾಗಿದೆ” ಎಂದು ಸಚಿವ ಲಕ್ಷ್ಮಣ್ ಸವದಿ ಸಂಜೆ ಮಾಧ್ಯಮ ಹೇಳಿಕೆ ನೀಡಿದ್ದರು.

ದಿಡೀರ್ ಆಗಿ ಬಸ್ ಸಂಚಾರವನ್ನು ಕೆಲವೆಡೆ ಸ್ಥಗಿತಗೊಳಿಸಿರುವುದರಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟಾಗಿದೆ. ಆದ್ದರಿಂದ ತಕ್ಷಣ ಮುಷ್ಕರನಿರತ ಸಿಬ್ಬಂದಿಗಳು ಕರ್ತವ್ಯಕ್ಕೆ ಮರಳಬೇಕೆಂದು ಮನವಿ ಮಾಡಿಕೊಂಡಿದ್ದ ಲಕ್ಷ್ಮಣ ಸವದಿ, “ಕೋವಿಡ್‍ನಿಂದಾಗಿ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ನೌಕರರ ಕುಟುಂಬದವರಿಗೆ ಇನ್ನು 15 ದಿನಗಳೊಳಗಾಗಿ 30 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು” ಎಂದು ಮಾಧ್ಯಮ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಇಂದು BMTC ಬಸ್‌ಗಳು ರಸ್ತೆಗಿಳಿಯುವುದಿಲ್ಲ: ಸಾರಿಗೆ ನೌಕರರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...