Homeಕರ್ನಾಟಕನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

ನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

ಸರ್ಕಾರ ಈ ಸಮಸ್ಯೆಯಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎಂದು ದಾರಿ ಹುಡುಕುತ್ತಿದೆ. ಮಾತುಕತೆಗಾಗಿ ನಮ್ಮನ್ನು ಕರೆದಿದ್ದಾರೆಂದು ಸಾರಿಗೆ ಸಚಿವರು ಸುಳ್ಳು ಹೇಳುತ್ತಿದ್ದಾರೆ. ಇದುವರೆಗೂ ಯಾವುದೇ ಮಾತುಕತೆಗಾಗಿ ನಮ್ಮನ್ನು ಕರೆದಿಲ್ಲ ಎಂದು ಮುಷ್ಕರ ನಿರತ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸಿ ಎಂದು ಒತ್ತಾಯಿಸಿ ಕೆಎಸ್‌ಆರ್‌ಟಿಸಿ ನೌಕರರು ನಿನ್ನೆ ನಡೆಸಿದ ಬೃಹತ್‌ ಪ್ರತಿಭಟನೆಯ ಮುಂದುವರೆದ ಭಾಗವಾಗಿ ಇಂದು ಮುಷ್ಕರ ಹೂಡಿದ್ದು, ಮುಂಜಾನೆಯಿಂದ ಯಾವುದೇ ಬಸ್ಸುಗಳು ಓಡಾಡಿರಲಿಲ್ಲ. ಮುಷ್ಕರದ ಬಗ್ಗೆ ಸರ್ಕಾರ ನಮ್ಮೊಂದಿಗೆ ಯಾವುದೆ ಮಾತುಕತೆ ನಡೆಸಿಲ್ಲವಾದ್ದರಿಂದ ’ನಾಳೆಯು ಮುಷ್ಕರ ಮುಂದುವರೆಯಲಿದೆ’ ಎಂದು ಮುಷ್ಕರವನ್ನು ಮುನ್ನಡೆಸುತ್ತಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು ತಿಳಿಸಿದರು.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವರು, “ಸರ್ಕಾರ ಈ ಸಮಸ್ಯೆಯಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎಂದು ದಾರಿ ಹುಡುಕುತ್ತಿದೆ. ಮಾತುಕತೆಗಾಗಿ ನಮ್ಮನ್ನು ಕರೆದಿದ್ದಾರೆಂದು ಸಾರಿಗೆ ಸಚಿವರು ಸುಳ್ಳು ಹೇಳುತ್ತಿದ್ದಾರೆ. ಇದುವರೆಗೂ ಯಾವುದೇ ಮಾತುಕತೆಗಾಗಿ ನಮ್ಮನ್ನು ಕರೆದಿಲ್ಲವಾದ್ದರಿಂದ, ನಾಳೆಯು ಮುಷ್ಕರ ಮುಂದುವರೆಯಲಿದೆ” ಎಂದು ಹೇಳಿದರು.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕೆಎಸ್‌ಆರ್‌ಟಿಸಿ ನೌಕರರ ಸಂಘ(ಎ.ಐ.ಟಿ.ಯು.ಸಿ) ಮುಖಂಡರಾದ ಅನಂತ ಸುಬ್ಬರಾವ್, “ಈ ಮುಷ್ಕರವನ್ನು ಮುನ್ನಡೆಸುತ್ತಿರುವುದು ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್‌ ಅವರಾಗಿದ್ದಾರೆ, ನಮ್ಮ ಸಂಘಟನೆಯ ಸದಸ್ಯರಿಗೆ ಸಹಕಾರ ಕೊಡಲು ಹೇಳಿದ್ದೇವೆ. ಮುಷ್ಕರ ಹಿನ್ನಲೆಯಲ್ಲಿ ಸಚಿವರು ನಮ್ಮನ್ನು ಸಭೆಗೆ ಕರೆದಿದ್ದರಾದರೂ ’ಮುಷ್ಕರವನ್ನು ನಾವು ಮುನ್ನಡೆಸುತ್ತಿಲ್ಲವಾದ್ದರಿಂದ ಅದನ್ನು ತಡೆಯುವುದು ಕೂಡಾ ಇಲ್ಲ, ಮುಷ್ಕರ ಮುನ್ನಡೆಸುತ್ತಿರುವ ಮುಖಂಡರನ್ನು ಕರೆದು ಮಾತನಾಡಿ’ ಎಂದು ಸರ್ಕಾರವನ್ನು ಕೇಳಿಕೊಂಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ: ಬೆಂಗಳೂರಿನಲ್ಲಿ ಬೃಹತ್ ಹೋರಾಟ

“ಮುಷ್ಕರದಲ್ಲಿ ಮುಖ್ಯವಾಗಿ ಸರ್ಕಾರಿ ಸಂಬಳ, ಕೊರೊನಾದಿಂದ ಮೃತಪಟ್ಟವರಿಗೆ 30 ಲಕ್ಷ ನೀಡುವುದು ಹಾಗೂ ನೌಕರರಿಗೆ ಹಿಂಸೆ ಕಿರುಕುಳದ ಬಗ್ಗೆ ನೌಕರರು ಹೇಳಿಕೊಂಡಿದ್ದಾರೆ. ನಾವು ಈ ಬಗ್ಗೆ ಆಂಧ್ರಪ್ರದೇಶದಲ್ಲಿ ಆಗಿರುವ ಸುಧಾರಣೆಗಳ ಬಗ್ಗೆ ಅಧ್ಯಯನ ನಡೆಸಲು ಒಂದು ಆಯೋಗವನ್ನು ಕಳುಹಿಸಿ ವರದಿ ಪಡೆಯಲು ಕೇಳಿಕೊಂಡಿದ್ದೇವೆ” ಎಂದು ಅನಂತಸುಬ್ಬರಾವ್ ಹೇಳಿದರು.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ಮುಖಂಡ ಪ್ರಕಾಶ್ ಮಾತನಾಡಿ, “ಮುಷ್ಕರವನ್ನು ನಿಲ್ಲಿಸಲು ಸಹಾಯ ಮಾಡಿ ಎಂದು ಸರ್ಕಾರ ಕೇಳಿಕೊಂಡಿದೆ. ಮುಷ್ಕರ ಕೋಡಿಹಳ್ಳಿ ಚಂದ್ರಶೇಖರ್‌ ಅವರ ನೇತೃತ್ವದಲ್ಲಿ ನಡೆಯುತ್ತಿರುವುದರಿಂದ, ಅವರನ್ನು ಸಭೆಗೆ ಕರೆಯದ ಹೊರತು ಸಭೆ ನಡೆಸಿ ಮುಷ್ಕರವನ್ನು ಕೊನೆಗೊಳಿಸಲು ಆಗುವುದಿಲ್ಲ ಎಂದು ಹೇಳಿದ್ದೇವೆ. ಕಾರ್ಮಿಕರಲ್ಲಿ ಸರ್ಕಾರದ ವಿರುದ್ದ ಅಸಮಾಧಾನ ಮಡುಗಟ್ಟಿರುವುದರಿಂದ ಮುಷ್ಕರವನ್ನು ಮಾಡುತ್ತಿದ್ದಾರೆ, ಸರ್ಕಾರ ಕೂಡಾ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ಕಾರ್ಮಿಕರು ಎತ್ತಿರುವ ಬೇಡಿಕೆಯನ್ನು ಈಡೇರಿಸುವಂತೆ ಕೇಳಿಕೊಂಡಿದ್ದೇವೆ” ಎಂದು ಹೇಳಿದರು.

“ಸಾರಿಗೆ ಸಿಬ್ಬಂದಿಗಳ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಸಹಾನುಭೂತಿ ಇದೆ. ಅವರ ಬೇಡಿಕೆಗಳ ಬಗ್ಗೆ ಈಗಾಗಲೇ ಒಕ್ಕೂಟಗಳ ಮುಖಂಡರ ಒಂದು ಸುತ್ತಿನ ಸಭೆ ನಡೆಸಲಾಯಿತು. ಅಗತ್ಯವಿದ್ದರೆ ಮತ್ತಷ್ಟು ಮಾತುಕತೆಗಳನ್ನು ನಡೆಸಿ ಸಂಧಾನ ಮಾರ್ಗದಲ್ಲಿ ಸಮಸ್ಯೆ ಪರಿಹರಿಸುವ ಉದ್ದೇಶ ನಮ್ಮ ಸರ್ಕಾರದ್ದಾಗಿದೆ” ಎಂದು ಸಚಿವ ಲಕ್ಷ್ಮಣ್ ಸವದಿ ಸಂಜೆ ಮಾಧ್ಯಮ ಹೇಳಿಕೆ ನೀಡಿದ್ದರು.

ದಿಡೀರ್ ಆಗಿ ಬಸ್ ಸಂಚಾರವನ್ನು ಕೆಲವೆಡೆ ಸ್ಥಗಿತಗೊಳಿಸಿರುವುದರಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟಾಗಿದೆ. ಆದ್ದರಿಂದ ತಕ್ಷಣ ಮುಷ್ಕರನಿರತ ಸಿಬ್ಬಂದಿಗಳು ಕರ್ತವ್ಯಕ್ಕೆ ಮರಳಬೇಕೆಂದು ಮನವಿ ಮಾಡಿಕೊಂಡಿದ್ದ ಲಕ್ಷ್ಮಣ ಸವದಿ, “ಕೋವಿಡ್‍ನಿಂದಾಗಿ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ನೌಕರರ ಕುಟುಂಬದವರಿಗೆ ಇನ್ನು 15 ದಿನಗಳೊಳಗಾಗಿ 30 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು” ಎಂದು ಮಾಧ್ಯಮ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಇಂದು BMTC ಬಸ್‌ಗಳು ರಸ್ತೆಗಿಳಿಯುವುದಿಲ್ಲ: ಸಾರಿಗೆ ನೌಕರರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...