Homeಕರ್ನಾಟಕನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

ನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

ಸರ್ಕಾರ ಈ ಸಮಸ್ಯೆಯಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎಂದು ದಾರಿ ಹುಡುಕುತ್ತಿದೆ. ಮಾತುಕತೆಗಾಗಿ ನಮ್ಮನ್ನು ಕರೆದಿದ್ದಾರೆಂದು ಸಾರಿಗೆ ಸಚಿವರು ಸುಳ್ಳು ಹೇಳುತ್ತಿದ್ದಾರೆ. ಇದುವರೆಗೂ ಯಾವುದೇ ಮಾತುಕತೆಗಾಗಿ ನಮ್ಮನ್ನು ಕರೆದಿಲ್ಲ ಎಂದು ಮುಷ್ಕರ ನಿರತ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸಿ ಎಂದು ಒತ್ತಾಯಿಸಿ ಕೆಎಸ್‌ಆರ್‌ಟಿಸಿ ನೌಕರರು ನಿನ್ನೆ ನಡೆಸಿದ ಬೃಹತ್‌ ಪ್ರತಿಭಟನೆಯ ಮುಂದುವರೆದ ಭಾಗವಾಗಿ ಇಂದು ಮುಷ್ಕರ ಹೂಡಿದ್ದು, ಮುಂಜಾನೆಯಿಂದ ಯಾವುದೇ ಬಸ್ಸುಗಳು ಓಡಾಡಿರಲಿಲ್ಲ. ಮುಷ್ಕರದ ಬಗ್ಗೆ ಸರ್ಕಾರ ನಮ್ಮೊಂದಿಗೆ ಯಾವುದೆ ಮಾತುಕತೆ ನಡೆಸಿಲ್ಲವಾದ್ದರಿಂದ ’ನಾಳೆಯು ಮುಷ್ಕರ ಮುಂದುವರೆಯಲಿದೆ’ ಎಂದು ಮುಷ್ಕರವನ್ನು ಮುನ್ನಡೆಸುತ್ತಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು ತಿಳಿಸಿದರು.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವರು, “ಸರ್ಕಾರ ಈ ಸಮಸ್ಯೆಯಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎಂದು ದಾರಿ ಹುಡುಕುತ್ತಿದೆ. ಮಾತುಕತೆಗಾಗಿ ನಮ್ಮನ್ನು ಕರೆದಿದ್ದಾರೆಂದು ಸಾರಿಗೆ ಸಚಿವರು ಸುಳ್ಳು ಹೇಳುತ್ತಿದ್ದಾರೆ. ಇದುವರೆಗೂ ಯಾವುದೇ ಮಾತುಕತೆಗಾಗಿ ನಮ್ಮನ್ನು ಕರೆದಿಲ್ಲವಾದ್ದರಿಂದ, ನಾಳೆಯು ಮುಷ್ಕರ ಮುಂದುವರೆಯಲಿದೆ” ಎಂದು ಹೇಳಿದರು.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕೆಎಸ್‌ಆರ್‌ಟಿಸಿ ನೌಕರರ ಸಂಘ(ಎ.ಐ.ಟಿ.ಯು.ಸಿ) ಮುಖಂಡರಾದ ಅನಂತ ಸುಬ್ಬರಾವ್, “ಈ ಮುಷ್ಕರವನ್ನು ಮುನ್ನಡೆಸುತ್ತಿರುವುದು ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್‌ ಅವರಾಗಿದ್ದಾರೆ, ನಮ್ಮ ಸಂಘಟನೆಯ ಸದಸ್ಯರಿಗೆ ಸಹಕಾರ ಕೊಡಲು ಹೇಳಿದ್ದೇವೆ. ಮುಷ್ಕರ ಹಿನ್ನಲೆಯಲ್ಲಿ ಸಚಿವರು ನಮ್ಮನ್ನು ಸಭೆಗೆ ಕರೆದಿದ್ದರಾದರೂ ’ಮುಷ್ಕರವನ್ನು ನಾವು ಮುನ್ನಡೆಸುತ್ತಿಲ್ಲವಾದ್ದರಿಂದ ಅದನ್ನು ತಡೆಯುವುದು ಕೂಡಾ ಇಲ್ಲ, ಮುಷ್ಕರ ಮುನ್ನಡೆಸುತ್ತಿರುವ ಮುಖಂಡರನ್ನು ಕರೆದು ಮಾತನಾಡಿ’ ಎಂದು ಸರ್ಕಾರವನ್ನು ಕೇಳಿಕೊಂಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ: ಬೆಂಗಳೂರಿನಲ್ಲಿ ಬೃಹತ್ ಹೋರಾಟ

“ಮುಷ್ಕರದಲ್ಲಿ ಮುಖ್ಯವಾಗಿ ಸರ್ಕಾರಿ ಸಂಬಳ, ಕೊರೊನಾದಿಂದ ಮೃತಪಟ್ಟವರಿಗೆ 30 ಲಕ್ಷ ನೀಡುವುದು ಹಾಗೂ ನೌಕರರಿಗೆ ಹಿಂಸೆ ಕಿರುಕುಳದ ಬಗ್ಗೆ ನೌಕರರು ಹೇಳಿಕೊಂಡಿದ್ದಾರೆ. ನಾವು ಈ ಬಗ್ಗೆ ಆಂಧ್ರಪ್ರದೇಶದಲ್ಲಿ ಆಗಿರುವ ಸುಧಾರಣೆಗಳ ಬಗ್ಗೆ ಅಧ್ಯಯನ ನಡೆಸಲು ಒಂದು ಆಯೋಗವನ್ನು ಕಳುಹಿಸಿ ವರದಿ ಪಡೆಯಲು ಕೇಳಿಕೊಂಡಿದ್ದೇವೆ” ಎಂದು ಅನಂತಸುಬ್ಬರಾವ್ ಹೇಳಿದರು.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ಮುಖಂಡ ಪ್ರಕಾಶ್ ಮಾತನಾಡಿ, “ಮುಷ್ಕರವನ್ನು ನಿಲ್ಲಿಸಲು ಸಹಾಯ ಮಾಡಿ ಎಂದು ಸರ್ಕಾರ ಕೇಳಿಕೊಂಡಿದೆ. ಮುಷ್ಕರ ಕೋಡಿಹಳ್ಳಿ ಚಂದ್ರಶೇಖರ್‌ ಅವರ ನೇತೃತ್ವದಲ್ಲಿ ನಡೆಯುತ್ತಿರುವುದರಿಂದ, ಅವರನ್ನು ಸಭೆಗೆ ಕರೆಯದ ಹೊರತು ಸಭೆ ನಡೆಸಿ ಮುಷ್ಕರವನ್ನು ಕೊನೆಗೊಳಿಸಲು ಆಗುವುದಿಲ್ಲ ಎಂದು ಹೇಳಿದ್ದೇವೆ. ಕಾರ್ಮಿಕರಲ್ಲಿ ಸರ್ಕಾರದ ವಿರುದ್ದ ಅಸಮಾಧಾನ ಮಡುಗಟ್ಟಿರುವುದರಿಂದ ಮುಷ್ಕರವನ್ನು ಮಾಡುತ್ತಿದ್ದಾರೆ, ಸರ್ಕಾರ ಕೂಡಾ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ಕಾರ್ಮಿಕರು ಎತ್ತಿರುವ ಬೇಡಿಕೆಯನ್ನು ಈಡೇರಿಸುವಂತೆ ಕೇಳಿಕೊಂಡಿದ್ದೇವೆ” ಎಂದು ಹೇಳಿದರು.

“ಸಾರಿಗೆ ಸಿಬ್ಬಂದಿಗಳ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಸಹಾನುಭೂತಿ ಇದೆ. ಅವರ ಬೇಡಿಕೆಗಳ ಬಗ್ಗೆ ಈಗಾಗಲೇ ಒಕ್ಕೂಟಗಳ ಮುಖಂಡರ ಒಂದು ಸುತ್ತಿನ ಸಭೆ ನಡೆಸಲಾಯಿತು. ಅಗತ್ಯವಿದ್ದರೆ ಮತ್ತಷ್ಟು ಮಾತುಕತೆಗಳನ್ನು ನಡೆಸಿ ಸಂಧಾನ ಮಾರ್ಗದಲ್ಲಿ ಸಮಸ್ಯೆ ಪರಿಹರಿಸುವ ಉದ್ದೇಶ ನಮ್ಮ ಸರ್ಕಾರದ್ದಾಗಿದೆ” ಎಂದು ಸಚಿವ ಲಕ್ಷ್ಮಣ್ ಸವದಿ ಸಂಜೆ ಮಾಧ್ಯಮ ಹೇಳಿಕೆ ನೀಡಿದ್ದರು.

ದಿಡೀರ್ ಆಗಿ ಬಸ್ ಸಂಚಾರವನ್ನು ಕೆಲವೆಡೆ ಸ್ಥಗಿತಗೊಳಿಸಿರುವುದರಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟಾಗಿದೆ. ಆದ್ದರಿಂದ ತಕ್ಷಣ ಮುಷ್ಕರನಿರತ ಸಿಬ್ಬಂದಿಗಳು ಕರ್ತವ್ಯಕ್ಕೆ ಮರಳಬೇಕೆಂದು ಮನವಿ ಮಾಡಿಕೊಂಡಿದ್ದ ಲಕ್ಷ್ಮಣ ಸವದಿ, “ಕೋವಿಡ್‍ನಿಂದಾಗಿ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ನೌಕರರ ಕುಟುಂಬದವರಿಗೆ ಇನ್ನು 15 ದಿನಗಳೊಳಗಾಗಿ 30 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು” ಎಂದು ಮಾಧ್ಯಮ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಇಂದು BMTC ಬಸ್‌ಗಳು ರಸ್ತೆಗಿಳಿಯುವುದಿಲ್ಲ: ಸಾರಿಗೆ ನೌಕರರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...