Homeಕರ್ನಾಟಕನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

ನಾಳೆಯು ಮುಂದುವರೆಯಲಿರುವ ಕೆಎಸ್‌ಆರ್‌‌ಟಿಸಿ ನೌಕರರ ಮುಷ್ಕರ

ಸರ್ಕಾರ ಈ ಸಮಸ್ಯೆಯಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎಂದು ದಾರಿ ಹುಡುಕುತ್ತಿದೆ. ಮಾತುಕತೆಗಾಗಿ ನಮ್ಮನ್ನು ಕರೆದಿದ್ದಾರೆಂದು ಸಾರಿಗೆ ಸಚಿವರು ಸುಳ್ಳು ಹೇಳುತ್ತಿದ್ದಾರೆ. ಇದುವರೆಗೂ ಯಾವುದೇ ಮಾತುಕತೆಗಾಗಿ ನಮ್ಮನ್ನು ಕರೆದಿಲ್ಲ ಎಂದು ಮುಷ್ಕರ ನಿರತ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸಿ ಎಂದು ಒತ್ತಾಯಿಸಿ ಕೆಎಸ್‌ಆರ್‌ಟಿಸಿ ನೌಕರರು ನಿನ್ನೆ ನಡೆಸಿದ ಬೃಹತ್‌ ಪ್ರತಿಭಟನೆಯ ಮುಂದುವರೆದ ಭಾಗವಾಗಿ ಇಂದು ಮುಷ್ಕರ ಹೂಡಿದ್ದು, ಮುಂಜಾನೆಯಿಂದ ಯಾವುದೇ ಬಸ್ಸುಗಳು ಓಡಾಡಿರಲಿಲ್ಲ. ಮುಷ್ಕರದ ಬಗ್ಗೆ ಸರ್ಕಾರ ನಮ್ಮೊಂದಿಗೆ ಯಾವುದೆ ಮಾತುಕತೆ ನಡೆಸಿಲ್ಲವಾದ್ದರಿಂದ ’ನಾಳೆಯು ಮುಷ್ಕರ ಮುಂದುವರೆಯಲಿದೆ’ ಎಂದು ಮುಷ್ಕರವನ್ನು ಮುನ್ನಡೆಸುತ್ತಿರುವ ಕೋಡಿಹಳ್ಳಿ ಚಂದ್ರಶೇಖರ್‌ ಅವರು ತಿಳಿಸಿದರು.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವರು, “ಸರ್ಕಾರ ಈ ಸಮಸ್ಯೆಯಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎಂದು ದಾರಿ ಹುಡುಕುತ್ತಿದೆ. ಮಾತುಕತೆಗಾಗಿ ನಮ್ಮನ್ನು ಕರೆದಿದ್ದಾರೆಂದು ಸಾರಿಗೆ ಸಚಿವರು ಸುಳ್ಳು ಹೇಳುತ್ತಿದ್ದಾರೆ. ಇದುವರೆಗೂ ಯಾವುದೇ ಮಾತುಕತೆಗಾಗಿ ನಮ್ಮನ್ನು ಕರೆದಿಲ್ಲವಾದ್ದರಿಂದ, ನಾಳೆಯು ಮುಷ್ಕರ ಮುಂದುವರೆಯಲಿದೆ” ಎಂದು ಹೇಳಿದರು.

ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕೆಎಸ್‌ಆರ್‌ಟಿಸಿ ನೌಕರರ ಸಂಘ(ಎ.ಐ.ಟಿ.ಯು.ಸಿ) ಮುಖಂಡರಾದ ಅನಂತ ಸುಬ್ಬರಾವ್, “ಈ ಮುಷ್ಕರವನ್ನು ಮುನ್ನಡೆಸುತ್ತಿರುವುದು ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್‌ ಅವರಾಗಿದ್ದಾರೆ, ನಮ್ಮ ಸಂಘಟನೆಯ ಸದಸ್ಯರಿಗೆ ಸಹಕಾರ ಕೊಡಲು ಹೇಳಿದ್ದೇವೆ. ಮುಷ್ಕರ ಹಿನ್ನಲೆಯಲ್ಲಿ ಸಚಿವರು ನಮ್ಮನ್ನು ಸಭೆಗೆ ಕರೆದಿದ್ದರಾದರೂ ’ಮುಷ್ಕರವನ್ನು ನಾವು ಮುನ್ನಡೆಸುತ್ತಿಲ್ಲವಾದ್ದರಿಂದ ಅದನ್ನು ತಡೆಯುವುದು ಕೂಡಾ ಇಲ್ಲ, ಮುಷ್ಕರ ಮುನ್ನಡೆಸುತ್ತಿರುವ ಮುಖಂಡರನ್ನು ಕರೆದು ಮಾತನಾಡಿ’ ಎಂದು ಸರ್ಕಾರವನ್ನು ಕೇಳಿಕೊಂಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಿ: ಬೆಂಗಳೂರಿನಲ್ಲಿ ಬೃಹತ್ ಹೋರಾಟ

“ಮುಷ್ಕರದಲ್ಲಿ ಮುಖ್ಯವಾಗಿ ಸರ್ಕಾರಿ ಸಂಬಳ, ಕೊರೊನಾದಿಂದ ಮೃತಪಟ್ಟವರಿಗೆ 30 ಲಕ್ಷ ನೀಡುವುದು ಹಾಗೂ ನೌಕರರಿಗೆ ಹಿಂಸೆ ಕಿರುಕುಳದ ಬಗ್ಗೆ ನೌಕರರು ಹೇಳಿಕೊಂಡಿದ್ದಾರೆ. ನಾವು ಈ ಬಗ್ಗೆ ಆಂಧ್ರಪ್ರದೇಶದಲ್ಲಿ ಆಗಿರುವ ಸುಧಾರಣೆಗಳ ಬಗ್ಗೆ ಅಧ್ಯಯನ ನಡೆಸಲು ಒಂದು ಆಯೋಗವನ್ನು ಕಳುಹಿಸಿ ವರದಿ ಪಡೆಯಲು ಕೇಳಿಕೊಂಡಿದ್ದೇವೆ” ಎಂದು ಅನಂತಸುಬ್ಬರಾವ್ ಹೇಳಿದರು.

ನಾನುಗೌರಿ.ಕಾಮ್ ಜೊತೆ ಮಾತನಾಡಿದ ಸಿಐಟಿಯು ಮುಖಂಡ ಪ್ರಕಾಶ್ ಮಾತನಾಡಿ, “ಮುಷ್ಕರವನ್ನು ನಿಲ್ಲಿಸಲು ಸಹಾಯ ಮಾಡಿ ಎಂದು ಸರ್ಕಾರ ಕೇಳಿಕೊಂಡಿದೆ. ಮುಷ್ಕರ ಕೋಡಿಹಳ್ಳಿ ಚಂದ್ರಶೇಖರ್‌ ಅವರ ನೇತೃತ್ವದಲ್ಲಿ ನಡೆಯುತ್ತಿರುವುದರಿಂದ, ಅವರನ್ನು ಸಭೆಗೆ ಕರೆಯದ ಹೊರತು ಸಭೆ ನಡೆಸಿ ಮುಷ್ಕರವನ್ನು ಕೊನೆಗೊಳಿಸಲು ಆಗುವುದಿಲ್ಲ ಎಂದು ಹೇಳಿದ್ದೇವೆ. ಕಾರ್ಮಿಕರಲ್ಲಿ ಸರ್ಕಾರದ ವಿರುದ್ದ ಅಸಮಾಧಾನ ಮಡುಗಟ್ಟಿರುವುದರಿಂದ ಮುಷ್ಕರವನ್ನು ಮಾಡುತ್ತಿದ್ದಾರೆ, ಸರ್ಕಾರ ಕೂಡಾ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳದೆ ಕಾರ್ಮಿಕರು ಎತ್ತಿರುವ ಬೇಡಿಕೆಯನ್ನು ಈಡೇರಿಸುವಂತೆ ಕೇಳಿಕೊಂಡಿದ್ದೇವೆ” ಎಂದು ಹೇಳಿದರು.

“ಸಾರಿಗೆ ಸಿಬ್ಬಂದಿಗಳ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಸಹಾನುಭೂತಿ ಇದೆ. ಅವರ ಬೇಡಿಕೆಗಳ ಬಗ್ಗೆ ಈಗಾಗಲೇ ಒಕ್ಕೂಟಗಳ ಮುಖಂಡರ ಒಂದು ಸುತ್ತಿನ ಸಭೆ ನಡೆಸಲಾಯಿತು. ಅಗತ್ಯವಿದ್ದರೆ ಮತ್ತಷ್ಟು ಮಾತುಕತೆಗಳನ್ನು ನಡೆಸಿ ಸಂಧಾನ ಮಾರ್ಗದಲ್ಲಿ ಸಮಸ್ಯೆ ಪರಿಹರಿಸುವ ಉದ್ದೇಶ ನಮ್ಮ ಸರ್ಕಾರದ್ದಾಗಿದೆ” ಎಂದು ಸಚಿವ ಲಕ್ಷ್ಮಣ್ ಸವದಿ ಸಂಜೆ ಮಾಧ್ಯಮ ಹೇಳಿಕೆ ನೀಡಿದ್ದರು.

ದಿಡೀರ್ ಆಗಿ ಬಸ್ ಸಂಚಾರವನ್ನು ಕೆಲವೆಡೆ ಸ್ಥಗಿತಗೊಳಿಸಿರುವುದರಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟಾಗಿದೆ. ಆದ್ದರಿಂದ ತಕ್ಷಣ ಮುಷ್ಕರನಿರತ ಸಿಬ್ಬಂದಿಗಳು ಕರ್ತವ್ಯಕ್ಕೆ ಮರಳಬೇಕೆಂದು ಮನವಿ ಮಾಡಿಕೊಂಡಿದ್ದ ಲಕ್ಷ್ಮಣ ಸವದಿ, “ಕೋವಿಡ್‍ನಿಂದಾಗಿ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ನೌಕರರ ಕುಟುಂಬದವರಿಗೆ ಇನ್ನು 15 ದಿನಗಳೊಳಗಾಗಿ 30 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು” ಎಂದು ಮಾಧ್ಯಮ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಇಂದು BMTC ಬಸ್‌ಗಳು ರಸ್ತೆಗಿಳಿಯುವುದಿಲ್ಲ: ಸಾರಿಗೆ ನೌಕರರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...