Homeಕರ್ನಾಟಕKSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

KSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

- Advertisement -
- Advertisement -

ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌‌‌ ಅವರು ರೈತ ಹೋರಾಟ ಮತ್ತು ಕೆಎಸ್‌ಆರ್‌‌ಟಿಸಿ ಬಸ್‌‌‌ ಮುಷ್ಕರವನ್ನು ನಿಲ್ಲಿಸುವುದಾಗಿ ಕೋಟಿ ಕೋಟಿ ಡೀಲ್‌ ಮಾಡಿದ್ದಾರೆ ಎಂದು ಕನ್ನಡದ ಖಾಸಗಿ ಚಾನೆಲ್‌ ಆರೋಪಿಸಿದೆ. ಈ ಬಗ್ಗೆ ರಾಜ್ಯದಾದ್ಯಂತ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು ಅವರ ವಿರುದ್ದ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್‌ ಅವರು 2021 ರ ಎಪ್ರಿಲ್‌‌ನಲ್ಲಿ ನಡೆದ ಕೆಎಸ್‌ಆರ್‌ಟಿಸಿ ಹೋರಾಟವನ್ನು ನಿಲ್ಲಿಸಲು 35 ಕೋಟಿ ಲಂಚ ಕೇಳಿದ್ದಾರೆ ಎಂದು ಕನ್ನಡದ ಖಾಸಗಿ ಸುದ್ದಿ ಚಾನೆಲ್‌ ಪವರ್‌ ಟಿವಿ ಆರೋಪಿಸಿದ್ದು ಸುದ್ದಿಯನ್ನು ಪ್ರಸಾರ ಮಾಡಿದೆ. ಕೆಎಸ್‌ಆರ್‌ಟಿಸಿ ನೌಕರರ ಹೋರಾಟದ ಸಮಯದಲ್ಲಿ ಹೋರಾಟದ ನೇತೃತ್ವವನ್ನು ಕೋಡಿಹಳ್ಳಿ ಚಂದ್ರಶೇಖರ್‌ ಅವರು ವಹಿಸಿದ್ದರು. ದೇಶದ ಐತಿಹಾಸಿ ರೈತ ಹೋರಾಟವನ್ನು ನಿಲ್ಲಿಸಲು ಸಾವಿರಾರು ಕೋಟಿ ರುಪಾಯಿಗೆ ಅವರು ಡೀಲ್ ನಡೆಸಿದ್ದಾರೆ ಎಂದು ಪವರ್‌‌‌ ಟಿವಿ ವರದಿಯು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಶನಿವಾರದಂದು ಮೈಸೂರಿನ ನ್ಯಾಯಾಲಯದ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕೋಡಿಹಳ್ಳಿ ಚಂದ್ರಶೇಖರ್ ಅವರ ಭ್ರಷ್ಟಾಚಾರದ ವಿರುದ್ಧ ತನಿಖೆ ಮಾಡುವಂತೆ ಹಾಗೂ ತಪ್ಪಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಒತ್ತಾಯದ ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ಪ್ರತಿಭಟನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಡಗಲಪುರ ನಾಗೇಂದ್ರ ಅವರು,“ಕೋಡಿಹಳ್ಳಿ ಚಂದ್ರಶೇಖರ್‌ ಎಂಬ ವ್ಯಕ್ತಿ ಹಸಿರು ಟವೆಲ್‌ ಹಾಕಿಕೊಂಡು ಒಂದು ಡೀಲ್‌‌ಗೆ ಮಾಡುವುದರ ಮೂಲಕ ಇಡೀ ರೈತ ಕುಲಕ್ಕೆ ಅಪಮಾನವಾಗಿದ್ದಾರೆ. ತ್ಯಾಗ ಬಲಿದಾನದ ಮೂಲಕ ಕಟ್ಟಿದ್ದಂತಹ ರೈತ ಚಳವಳಿಗೆ ದ್ರೋಹ ಎಸಗಿದ್ದಾರೆ. ಆತ ಇಂತಹ ಕಳ್ಳ ಎಂದು ನಮಗೆ ಗೊತ್ತಿತ್ತು. ಅದಕ್ಕೆ ನಾವು 2011 ರಿಂದ ನಾವು ದೂರ ಇಟ್ಟಿದ್ದೇವೆ” ಎಂದು ಹೇಳಿದ್ದಾರೆ.

“ಕೋಡಿಹಳ್ಳಿ ಚಂದ್ರಶೇಖರ್‌ ಇನ್ನಾವುದೇ ರೈತರ ಹೆಸರಿನಲ್ಲಿ ಹೋರಾಟ ಮಾಡಬಾರದು. ಒಂದು ವೇಳೆ ಹೋರಾಟ ಮಾಡಿದರೆ ಅಲ್ಲಿಂದ ಅವರನ್ನು ಹೇಗೆ ಹೊರಹಾಕಬೇಕು ಎನ್ನುವುದು ಗೊತ್ತಿದೆ. ಹಸಿರು ಟವೆಲ್ ತೆಗೆಯಿರಿ ಎಂದು ಹೇಳಿದ್ದೇವೆ, ಅದನ್ನು ನಾವೇ ಕಿತ್ತುಕೊಳ್ಳುತ್ತೇವೆ. ಯಾರೋ ಒಬ್ಬರು ಹಸಿರು ಟವೆಲ್ ಹಾಕಿ ತಪ್ಪು ಮಾಡಿದರೆ, ಎಲ್ಲಾ ಹಸಿರು ಟವೆಲ್ ಹಾಕಿರುವವರು ತಪ್ಪು ಮಾಡಿದ್ದಾರೆ ಎಂದು ಬಿಂಬಿಸಬೇಡಿ.

ಪ್ರಾಮಾಣಿಕವಾಗಿ ತ್ಯಾಗ, ಬಲಿದಾನ ಮಾಡುವ ಹೋರಾಟಗಾರರು ಇದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್‌ ಇನ್ನು ಮುಂದೆ ಯಾವುದೇ ಹೋರಾಟದಲ್ಲಿ ಕಂಡು ಬಂದರೆ ಅವರನ್ನು ಓಡಿಸುವಂತಹ ಕೆಲಸವನ್ನು ಸಾಮಾನ್ಯ ರೈತರು ಮಾಡುತ್ತಾರೆ” ಎಂದು ಅವರು ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರನ್ನು ವಾರೆಂಟ್ ಇಲ್ಲದೆ ಬಂಧಿಸಿ ‘ಪೊಲೀಸ್ ರಾಜ್ಯ’ ಮಾಡುತ್ತಿದ್ದಾರೆಯೆ

ತಮ್ಮ ಮೇಲಿನ ಡೀಲ್ ಆರೋಪದ ವಿಚಾರವಾಗಿ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವರು,“ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡುವವನಿಗೆ ನೈತಿಕತೆ ಇರಬೇಕು, ಮೊದಲು ಅವನು ಭ್ರಷ್ಟಾಚಾರ ಮುಕ್ತನಾಗಿರಬೇಕು. ಅವನೇ ಭ್ರಷ್ಟಾಚಾರ ಮಾಡಿ, ನಮ್ಮನ್ನು ಭ್ರಷ್ಟರು ಎಂದರೆ ಹೇಗೆ? ಅವರು ಚಾರಿತ್ಯ್ರವಧೆ ಮಾಡಲು ಬೇಕಾಗಿ ಮಾಡುತ್ತಿರುವಂತಹ ಒಂದು ಡೀಲ್ ಅದು. ಕೋಡಿಹಳ್ಳಿ ಚಂದ್ರಶೇಖರ್‌ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ, ಹಾಗಾಗಿ ಅವರನ್ನು ಮುಗಿಸಬೇಕು ಎಂದು, ಒಂದು ದೊಡ್ಡ ಡೀಲ್ ತೆಗೆದುಕೊಂಡು ಅವರು ನಡೆಸಿರುವಂತಹ ತಂತ್ರ ಅದು. ಏಳೆಂಟು ತಿಂಗಳುಗಳ ಕಾಲ ನನ್ನ ಸಂಪರ್ಕ ಮಾಡಿ, ಕಟ್‌ ಆಂಡ್‌ ಪೇಸ್ಟ್‌ ಮಾಡಿ ಅದನ್ನು ಸ್ಟೋರಿ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಎಲ್ಲಾ ಕಳ್ಳರು😡😡😡

    ಯಾರನ್ನೂ ನಂಬೋ ಹಾಗಿಲ್ಲ.

    ಇವನ ಐಶಾರಾಮಿ ಜೀವನ, ಬಹುಕೋಟಿ ಬಂಗಲೆ, ಫಾರ್ಚುನರ್ ಕಾರಿನ ದರ್ಬಾರ್ ನೋಡಿ ಆಗಲೇ ನಾವು ಎಚ್ಚೆತ್ತು ಕೊಳ್ಳಬೇಕಿತ್ತು.

  2. Govt. To give a benefits to KSRTC staff.
    Department is not giving security to Staff.
    Staff are very imbalanced life in their life.

    Specially full and enjoying in department all the Ticket Checkers..

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....