Homeಕರ್ನಾಟಕKSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

KSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

- Advertisement -
- Advertisement -

ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌‌‌ ಅವರು ರೈತ ಹೋರಾಟ ಮತ್ತು ಕೆಎಸ್‌ಆರ್‌‌ಟಿಸಿ ಬಸ್‌‌‌ ಮುಷ್ಕರವನ್ನು ನಿಲ್ಲಿಸುವುದಾಗಿ ಕೋಟಿ ಕೋಟಿ ಡೀಲ್‌ ಮಾಡಿದ್ದಾರೆ ಎಂದು ಕನ್ನಡದ ಖಾಸಗಿ ಚಾನೆಲ್‌ ಆರೋಪಿಸಿದೆ. ಈ ಬಗ್ಗೆ ರಾಜ್ಯದಾದ್ಯಂತ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು ಅವರ ವಿರುದ್ದ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್‌ ಅವರು 2021 ರ ಎಪ್ರಿಲ್‌‌ನಲ್ಲಿ ನಡೆದ ಕೆಎಸ್‌ಆರ್‌ಟಿಸಿ ಹೋರಾಟವನ್ನು ನಿಲ್ಲಿಸಲು 35 ಕೋಟಿ ಲಂಚ ಕೇಳಿದ್ದಾರೆ ಎಂದು ಕನ್ನಡದ ಖಾಸಗಿ ಸುದ್ದಿ ಚಾನೆಲ್‌ ಪವರ್‌ ಟಿವಿ ಆರೋಪಿಸಿದ್ದು ಸುದ್ದಿಯನ್ನು ಪ್ರಸಾರ ಮಾಡಿದೆ. ಕೆಎಸ್‌ಆರ್‌ಟಿಸಿ ನೌಕರರ ಹೋರಾಟದ ಸಮಯದಲ್ಲಿ ಹೋರಾಟದ ನೇತೃತ್ವವನ್ನು ಕೋಡಿಹಳ್ಳಿ ಚಂದ್ರಶೇಖರ್‌ ಅವರು ವಹಿಸಿದ್ದರು. ದೇಶದ ಐತಿಹಾಸಿ ರೈತ ಹೋರಾಟವನ್ನು ನಿಲ್ಲಿಸಲು ಸಾವಿರಾರು ಕೋಟಿ ರುಪಾಯಿಗೆ ಅವರು ಡೀಲ್ ನಡೆಸಿದ್ದಾರೆ ಎಂದು ಪವರ್‌‌‌ ಟಿವಿ ವರದಿಯು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಶನಿವಾರದಂದು ಮೈಸೂರಿನ ನ್ಯಾಯಾಲಯದ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕೋಡಿಹಳ್ಳಿ ಚಂದ್ರಶೇಖರ್ ಅವರ ಭ್ರಷ್ಟಾಚಾರದ ವಿರುದ್ಧ ತನಿಖೆ ಮಾಡುವಂತೆ ಹಾಗೂ ತಪ್ಪಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಒತ್ತಾಯದ ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ಪ್ರತಿಭಟನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಡಗಲಪುರ ನಾಗೇಂದ್ರ ಅವರು,“ಕೋಡಿಹಳ್ಳಿ ಚಂದ್ರಶೇಖರ್‌ ಎಂಬ ವ್ಯಕ್ತಿ ಹಸಿರು ಟವೆಲ್‌ ಹಾಕಿಕೊಂಡು ಒಂದು ಡೀಲ್‌‌ಗೆ ಮಾಡುವುದರ ಮೂಲಕ ಇಡೀ ರೈತ ಕುಲಕ್ಕೆ ಅಪಮಾನವಾಗಿದ್ದಾರೆ. ತ್ಯಾಗ ಬಲಿದಾನದ ಮೂಲಕ ಕಟ್ಟಿದ್ದಂತಹ ರೈತ ಚಳವಳಿಗೆ ದ್ರೋಹ ಎಸಗಿದ್ದಾರೆ. ಆತ ಇಂತಹ ಕಳ್ಳ ಎಂದು ನಮಗೆ ಗೊತ್ತಿತ್ತು. ಅದಕ್ಕೆ ನಾವು 2011 ರಿಂದ ನಾವು ದೂರ ಇಟ್ಟಿದ್ದೇವೆ” ಎಂದು ಹೇಳಿದ್ದಾರೆ.

“ಕೋಡಿಹಳ್ಳಿ ಚಂದ್ರಶೇಖರ್‌ ಇನ್ನಾವುದೇ ರೈತರ ಹೆಸರಿನಲ್ಲಿ ಹೋರಾಟ ಮಾಡಬಾರದು. ಒಂದು ವೇಳೆ ಹೋರಾಟ ಮಾಡಿದರೆ ಅಲ್ಲಿಂದ ಅವರನ್ನು ಹೇಗೆ ಹೊರಹಾಕಬೇಕು ಎನ್ನುವುದು ಗೊತ್ತಿದೆ. ಹಸಿರು ಟವೆಲ್ ತೆಗೆಯಿರಿ ಎಂದು ಹೇಳಿದ್ದೇವೆ, ಅದನ್ನು ನಾವೇ ಕಿತ್ತುಕೊಳ್ಳುತ್ತೇವೆ. ಯಾರೋ ಒಬ್ಬರು ಹಸಿರು ಟವೆಲ್ ಹಾಕಿ ತಪ್ಪು ಮಾಡಿದರೆ, ಎಲ್ಲಾ ಹಸಿರು ಟವೆಲ್ ಹಾಕಿರುವವರು ತಪ್ಪು ಮಾಡಿದ್ದಾರೆ ಎಂದು ಬಿಂಬಿಸಬೇಡಿ.

ಪ್ರಾಮಾಣಿಕವಾಗಿ ತ್ಯಾಗ, ಬಲಿದಾನ ಮಾಡುವ ಹೋರಾಟಗಾರರು ಇದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್‌ ಇನ್ನು ಮುಂದೆ ಯಾವುದೇ ಹೋರಾಟದಲ್ಲಿ ಕಂಡು ಬಂದರೆ ಅವರನ್ನು ಓಡಿಸುವಂತಹ ಕೆಲಸವನ್ನು ಸಾಮಾನ್ಯ ರೈತರು ಮಾಡುತ್ತಾರೆ” ಎಂದು ಅವರು ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರನ್ನು ವಾರೆಂಟ್ ಇಲ್ಲದೆ ಬಂಧಿಸಿ ‘ಪೊಲೀಸ್ ರಾಜ್ಯ’ ಮಾಡುತ್ತಿದ್ದಾರೆಯೆ

ತಮ್ಮ ಮೇಲಿನ ಡೀಲ್ ಆರೋಪದ ವಿಚಾರವಾಗಿ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವರು,“ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡುವವನಿಗೆ ನೈತಿಕತೆ ಇರಬೇಕು, ಮೊದಲು ಅವನು ಭ್ರಷ್ಟಾಚಾರ ಮುಕ್ತನಾಗಿರಬೇಕು. ಅವನೇ ಭ್ರಷ್ಟಾಚಾರ ಮಾಡಿ, ನಮ್ಮನ್ನು ಭ್ರಷ್ಟರು ಎಂದರೆ ಹೇಗೆ? ಅವರು ಚಾರಿತ್ಯ್ರವಧೆ ಮಾಡಲು ಬೇಕಾಗಿ ಮಾಡುತ್ತಿರುವಂತಹ ಒಂದು ಡೀಲ್ ಅದು. ಕೋಡಿಹಳ್ಳಿ ಚಂದ್ರಶೇಖರ್‌ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ, ಹಾಗಾಗಿ ಅವರನ್ನು ಮುಗಿಸಬೇಕು ಎಂದು, ಒಂದು ದೊಡ್ಡ ಡೀಲ್ ತೆಗೆದುಕೊಂಡು ಅವರು ನಡೆಸಿರುವಂತಹ ತಂತ್ರ ಅದು. ಏಳೆಂಟು ತಿಂಗಳುಗಳ ಕಾಲ ನನ್ನ ಸಂಪರ್ಕ ಮಾಡಿ, ಕಟ್‌ ಆಂಡ್‌ ಪೇಸ್ಟ್‌ ಮಾಡಿ ಅದನ್ನು ಸ್ಟೋರಿ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಎಲ್ಲಾ ಕಳ್ಳರು😡😡😡

    ಯಾರನ್ನೂ ನಂಬೋ ಹಾಗಿಲ್ಲ.

    ಇವನ ಐಶಾರಾಮಿ ಜೀವನ, ಬಹುಕೋಟಿ ಬಂಗಲೆ, ಫಾರ್ಚುನರ್ ಕಾರಿನ ದರ್ಬಾರ್ ನೋಡಿ ಆಗಲೇ ನಾವು ಎಚ್ಚೆತ್ತು ಕೊಳ್ಳಬೇಕಿತ್ತು.

  2. Govt. To give a benefits to KSRTC staff.
    Department is not giving security to Staff.
    Staff are very imbalanced life in their life.

    Specially full and enjoying in department all the Ticket Checkers..

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...