Homeಕರ್ನಾಟಕKSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

KSRTC ನೌಕರರ ಹೋರಾಟದ ಹೆಸರಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌‌ ಕೋಟಿ ಕೋಟಿ ಡೀಲ್‌: ಆರೋಪ

- Advertisement -
- Advertisement -

ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌‌‌ ಅವರು ರೈತ ಹೋರಾಟ ಮತ್ತು ಕೆಎಸ್‌ಆರ್‌‌ಟಿಸಿ ಬಸ್‌‌‌ ಮುಷ್ಕರವನ್ನು ನಿಲ್ಲಿಸುವುದಾಗಿ ಕೋಟಿ ಕೋಟಿ ಡೀಲ್‌ ಮಾಡಿದ್ದಾರೆ ಎಂದು ಕನ್ನಡದ ಖಾಸಗಿ ಚಾನೆಲ್‌ ಆರೋಪಿಸಿದೆ. ಈ ಬಗ್ಗೆ ರಾಜ್ಯದಾದ್ಯಂತ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು ಅವರ ವಿರುದ್ದ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್‌ ಅವರು 2021 ರ ಎಪ್ರಿಲ್‌‌ನಲ್ಲಿ ನಡೆದ ಕೆಎಸ್‌ಆರ್‌ಟಿಸಿ ಹೋರಾಟವನ್ನು ನಿಲ್ಲಿಸಲು 35 ಕೋಟಿ ಲಂಚ ಕೇಳಿದ್ದಾರೆ ಎಂದು ಕನ್ನಡದ ಖಾಸಗಿ ಸುದ್ದಿ ಚಾನೆಲ್‌ ಪವರ್‌ ಟಿವಿ ಆರೋಪಿಸಿದ್ದು ಸುದ್ದಿಯನ್ನು ಪ್ರಸಾರ ಮಾಡಿದೆ. ಕೆಎಸ್‌ಆರ್‌ಟಿಸಿ ನೌಕರರ ಹೋರಾಟದ ಸಮಯದಲ್ಲಿ ಹೋರಾಟದ ನೇತೃತ್ವವನ್ನು ಕೋಡಿಹಳ್ಳಿ ಚಂದ್ರಶೇಖರ್‌ ಅವರು ವಹಿಸಿದ್ದರು. ದೇಶದ ಐತಿಹಾಸಿ ರೈತ ಹೋರಾಟವನ್ನು ನಿಲ್ಲಿಸಲು ಸಾವಿರಾರು ಕೋಟಿ ರುಪಾಯಿಗೆ ಅವರು ಡೀಲ್ ನಡೆಸಿದ್ದಾರೆ ಎಂದು ಪವರ್‌‌‌ ಟಿವಿ ವರದಿಯು ಆರೋಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಶನಿವಾರದಂದು ಮೈಸೂರಿನ ನ್ಯಾಯಾಲಯದ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂದೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಕೋಡಿಹಳ್ಳಿ ಚಂದ್ರಶೇಖರ್ ಅವರ ಭ್ರಷ್ಟಾಚಾರದ ವಿರುದ್ಧ ತನಿಖೆ ಮಾಡುವಂತೆ ಹಾಗೂ ತಪ್ಪಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಒತ್ತಾಯದ ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ಪ್ರತಿಭಟನೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಡಗಲಪುರ ನಾಗೇಂದ್ರ ಅವರು,“ಕೋಡಿಹಳ್ಳಿ ಚಂದ್ರಶೇಖರ್‌ ಎಂಬ ವ್ಯಕ್ತಿ ಹಸಿರು ಟವೆಲ್‌ ಹಾಕಿಕೊಂಡು ಒಂದು ಡೀಲ್‌‌ಗೆ ಮಾಡುವುದರ ಮೂಲಕ ಇಡೀ ರೈತ ಕುಲಕ್ಕೆ ಅಪಮಾನವಾಗಿದ್ದಾರೆ. ತ್ಯಾಗ ಬಲಿದಾನದ ಮೂಲಕ ಕಟ್ಟಿದ್ದಂತಹ ರೈತ ಚಳವಳಿಗೆ ದ್ರೋಹ ಎಸಗಿದ್ದಾರೆ. ಆತ ಇಂತಹ ಕಳ್ಳ ಎಂದು ನಮಗೆ ಗೊತ್ತಿತ್ತು. ಅದಕ್ಕೆ ನಾವು 2011 ರಿಂದ ನಾವು ದೂರ ಇಟ್ಟಿದ್ದೇವೆ” ಎಂದು ಹೇಳಿದ್ದಾರೆ.

“ಕೋಡಿಹಳ್ಳಿ ಚಂದ್ರಶೇಖರ್‌ ಇನ್ನಾವುದೇ ರೈತರ ಹೆಸರಿನಲ್ಲಿ ಹೋರಾಟ ಮಾಡಬಾರದು. ಒಂದು ವೇಳೆ ಹೋರಾಟ ಮಾಡಿದರೆ ಅಲ್ಲಿಂದ ಅವರನ್ನು ಹೇಗೆ ಹೊರಹಾಕಬೇಕು ಎನ್ನುವುದು ಗೊತ್ತಿದೆ. ಹಸಿರು ಟವೆಲ್ ತೆಗೆಯಿರಿ ಎಂದು ಹೇಳಿದ್ದೇವೆ, ಅದನ್ನು ನಾವೇ ಕಿತ್ತುಕೊಳ್ಳುತ್ತೇವೆ. ಯಾರೋ ಒಬ್ಬರು ಹಸಿರು ಟವೆಲ್ ಹಾಕಿ ತಪ್ಪು ಮಾಡಿದರೆ, ಎಲ್ಲಾ ಹಸಿರು ಟವೆಲ್ ಹಾಕಿರುವವರು ತಪ್ಪು ಮಾಡಿದ್ದಾರೆ ಎಂದು ಬಿಂಬಿಸಬೇಡಿ.

ಪ್ರಾಮಾಣಿಕವಾಗಿ ತ್ಯಾಗ, ಬಲಿದಾನ ಮಾಡುವ ಹೋರಾಟಗಾರರು ಇದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್‌ ಇನ್ನು ಮುಂದೆ ಯಾವುದೇ ಹೋರಾಟದಲ್ಲಿ ಕಂಡು ಬಂದರೆ ಅವರನ್ನು ಓಡಿಸುವಂತಹ ಕೆಲಸವನ್ನು ಸಾಮಾನ್ಯ ರೈತರು ಮಾಡುತ್ತಾರೆ” ಎಂದು ಅವರು ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರನ್ನು ವಾರೆಂಟ್ ಇಲ್ಲದೆ ಬಂಧಿಸಿ ‘ಪೊಲೀಸ್ ರಾಜ್ಯ’ ಮಾಡುತ್ತಿದ್ದಾರೆಯೆ

ತಮ್ಮ ಮೇಲಿನ ಡೀಲ್ ಆರೋಪದ ವಿಚಾರವಾಗಿ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವರು,“ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡುವವನಿಗೆ ನೈತಿಕತೆ ಇರಬೇಕು, ಮೊದಲು ಅವನು ಭ್ರಷ್ಟಾಚಾರ ಮುಕ್ತನಾಗಿರಬೇಕು. ಅವನೇ ಭ್ರಷ್ಟಾಚಾರ ಮಾಡಿ, ನಮ್ಮನ್ನು ಭ್ರಷ್ಟರು ಎಂದರೆ ಹೇಗೆ? ಅವರು ಚಾರಿತ್ಯ್ರವಧೆ ಮಾಡಲು ಬೇಕಾಗಿ ಮಾಡುತ್ತಿರುವಂತಹ ಒಂದು ಡೀಲ್ ಅದು. ಕೋಡಿಹಳ್ಳಿ ಚಂದ್ರಶೇಖರ್‌ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾರೆ, ಹಾಗಾಗಿ ಅವರನ್ನು ಮುಗಿಸಬೇಕು ಎಂದು, ಒಂದು ದೊಡ್ಡ ಡೀಲ್ ತೆಗೆದುಕೊಂಡು ಅವರು ನಡೆಸಿರುವಂತಹ ತಂತ್ರ ಅದು. ಏಳೆಂಟು ತಿಂಗಳುಗಳ ಕಾಲ ನನ್ನ ಸಂಪರ್ಕ ಮಾಡಿ, ಕಟ್‌ ಆಂಡ್‌ ಪೇಸ್ಟ್‌ ಮಾಡಿ ಅದನ್ನು ಸ್ಟೋರಿ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಎಲ್ಲಾ ಕಳ್ಳರು😡😡😡

    ಯಾರನ್ನೂ ನಂಬೋ ಹಾಗಿಲ್ಲ.

    ಇವನ ಐಶಾರಾಮಿ ಜೀವನ, ಬಹುಕೋಟಿ ಬಂಗಲೆ, ಫಾರ್ಚುನರ್ ಕಾರಿನ ದರ್ಬಾರ್ ನೋಡಿ ಆಗಲೇ ನಾವು ಎಚ್ಚೆತ್ತು ಕೊಳ್ಳಬೇಕಿತ್ತು.

  2. Govt. To give a benefits to KSRTC staff.
    Department is not giving security to Staff.
    Staff are very imbalanced life in their life.

    Specially full and enjoying in department all the Ticket Checkers..

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...