ರಾಜ್ಯದ ನಾಲ್ಕು ಬಸ್ ನಿಗಮಗಳು 15%ದಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಕೋರಿವೆ, ಈ ಪ್ರಸ್ತಾವನೆ ಕುರಿತು ಸರ್ಕಾರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ಹೇಳಿದ್ದಾರೆ. ಸಾರಿಗೆ ನಿಗಮಗಳು ಸುಮಾರು ಆರು ತಿಂಗಳ ಹಿಂದೆ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪ್ರಸ್ತಾವನೆಯನ್ನು ಕಳುಹಿಸಿತ್ತು ಎಂದು ಸಚಿವರು ತಿಳಿಸಿದ್ದಾರೆ. ಕೆಎಸ್ಆರ್ಟಿಸಿ 15% ದರ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ), ಮತ್ತು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎನ್ಡಬ್ಲ್ಯುಕೆಆರ್ಟಿಸಿ) ಅಧಿಕಾರಿಗಳು, ನಿಗಮಗಳಿಗೆ ಉಂಟಾದ ನಷ್ಟವನ್ನು ಸರಿದೂಗಿಸಲು ದರ ಪರಿಷ್ಕರಣೆಯ ಅಗತ್ಯವನ್ನು ಒತ್ತಿಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಈ ನಡುವೆ, ಬಾಕಿ ಇರುವ ವೇತನವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಡಿಸೆಂಬರ್ 31 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಆರ್ಟಿಸಿ ಯೂನಿಯನ್ಗಳ ಸದಸ್ಯರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಅದಾಗ್ಯೂ, ‘ನಾಲ್ಕು ಸಾರಿಗೆ ನಿಗಮಗಳಲ್ಲಿ ಹಣದ ಕೊರತೆಯಿದ್ದು, ಬಾಕಿ ವೇತನ ಸಂಗ್ರಹಕ್ಕೆ ಇದು ಒಂದು ಕಾರಣ’ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೆಎಸ್ಆರ್ಟಿಸಿ 15% ದರ
KSRTC ದರಗಳನ್ನು ಕೊನೆಯದಾಗಿ 2020 ರಲ್ಲಿ ಪರಿಷ್ಕರಿಸಲಾಗಿತ್ತು
“BMTC ದರಗಳನ್ನು 2014 ರಲ್ಲಿ ಪರಿಷ್ಕರಿಸಲಾಯಿತು. KSRTC, KKRTC, ಮತ್ತು NWKRTC ಯ ದರಗಳನ್ನು 2020 ಕ್ಕೆ ಪರಿಷ್ಕರಿಸಲಾಯಿತು. ಅಂದಿನಿಂದ ಸರ್ಕಾರವು ದರಗಳನ್ನು ಹೆಚ್ಚಿಸಿಲ್ಲ” ಎಂದು ಬಸ್ ನಿಗಮಗಳ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾಗಿ TNIE ಹೇಳಿದ್ದಾರೆ. ಇಂಧನ, ಬಿಡಿಭಾಗಗಳು ಮತ್ತು ಟೈರ್ಗಳ ಬೆಲೆಗಳು ಹೆಚ್ಚಾಗಿದ್ದು, ನಿಗಮದ ಹೆಚ್ಚಿನ ಆದಾಯವು ಉದ್ಯೋಗಿಗಳ ಸಂಬಳಕ್ಕೆ ಹೋಗುತ್ತದೆ ಎಂದು ಅವರು ಹೇಳಿದ್ದಾರೆ.
“ಆದಾಯದ 45% ಕ್ಕಿಂತ ಹೆಚ್ಚು ಡೀಸೆಲ್ಗೆ ಖರ್ಚು ಮಾಡಲಾಗಿದೆ. ಕೆಎಸ್ಆರ್ಟಿಸಿಯಲ್ಲಿ ಕಳೆದ ಬಾರಿ ಬಸ್ ದರ ಪರಿಷ್ಕರಣೆಯಾದಾಗ ಡೀಸೆಲ್ ದರ ಲೀಟರ್ಗೆ 61 ರೂ. ಆಗಿತ್ತು. ಆದರೆ, ಪ್ರಯಾಣ ದರಗಳು ಹಾಗೆಯೇ ಉಳಿದಿವೆ, ಆದರೆ ಡೀಸೆಲ್ ಬೆಲೆ ಈಗ ಲೀಟರ್ಗೆ 90 ರೂ. ಆಗಿದೆ” ಎಂದು ಅವರು ಹೇಳಿದ್ದಾರೆ.
2020 ರಲ್ಲಿ ಬಸ್ ದರವನ್ನು ಪರಿಷ್ಕರಿಸಿದಾಗ, ಕೆಎಸ್ಆರ್ಟಿಸಿ ಇಂಧನಕ್ಕಾಗಿ ದಿನಕ್ಕೆ ಸುಮಾರು 3 ಕೋಟಿ ರೂ. ವ್ಯಯಿಸುತ್ತಿತ್ತು. ಆದರೆ, ಇಂಧನ ಬೆಲೆ ಏರಿಕೆಯಿಂದಾಗಿ ನಿಗಮಗಳು ಈಗ ದಿನಕ್ಕೆ 5 ಕೋಟಿ ರೂ. ಖರ್ಚು ಮಾಡುತ್ತಿವೆ. ನಾಲ್ಕೂ ಬಸ್ ನಿಗಮಗಳ ಉದ್ದೇಶ ಜನರ ಸೇವೆಯೇ ಹೊರತು ಹೊರೆಯಾಗಬಾರದು. ಆದಾಗ್ಯೂ, ಹೆಚ್ಚುತ್ತಿರುವ ಕಾರ್ಯಾಚರಣೆಯ ವೆಚ್ಚದಿಂದಾಗಿ ಅವರು ಪ್ರಯಾಣ ದರ ಏರಿಕೆ ಮಾಡಲೇ ಬೇಕಾದ ಸ್ಥಿತಿಯಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಇದನ್ನೂ ಓದಿ: ಬಿಜೆಪಿ ನಾಯಕನ ‘ಕೇರಳ ಮಿನಿ ಪಾಕಿಸ್ತಾನ’ ಹೇಳಿಕೆ ಖಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್
ಬಿಜೆಪಿ ನಾಯಕನ ‘ಕೇರಳ ಮಿನಿ ಪಾಕಿಸ್ತಾನ’ ಹೇಳಿಕೆ ಖಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್


