Homeಮುಖಪುಟಕೆ.ಟಿ ಗಟ್ಟಿಯವರು ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ: ಬುಲ್ ಬುಲ್ ವಿವಾದಕ್ಕೆ ಲೇಖಕರ ಪತ್ನಿಯ ಸ್ಪಷ್ಟನೆ

ಕೆ.ಟಿ ಗಟ್ಟಿಯವರು ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ: ಬುಲ್ ಬುಲ್ ವಿವಾದಕ್ಕೆ ಲೇಖಕರ ಪತ್ನಿಯ ಸ್ಪಷ್ಟನೆ

- Advertisement -
- Advertisement -

8ನೇ ತರಗತಿ ಕನ್ನಡ ದ್ವಿತೀಯ ಭಾಷ ಪಠ್ಯದಲ್ಲಿ ಸಾವರ್ಕರ್ ಕುರಿತು ಬುಲ್ ಬುಲ್ ಹಕ್ಕಿಯ ಉತ್ಪ್ರೇಕ್ಷಿತ ಪಠ್ಯ ಸೇರಿಸಿದ್ದಕ್ಕೆ ಬಂದ ವ್ಯಾಪಕ ಟೀಕೆಯ ಕುರಿತು ಲೇಖಕ ಕೆ.ಟಿ ಗಟ್ಟಿಯವರು ಪತ್ನಿ ಯಶೋದಾ ಅಮ್ಮೆಂಬಳರವರು ಪ್ರತಿಕ್ರಿಯಿಸಿದ್ದು, ತಮ್ಮ ಪತಿ ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ ಎಂದಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ವಿವಾದವೇಳುವವರೆಗೆ ನಮಗೆ ಕಾಲವನ್ನು ಗೆದ್ದವರು ಲೇಖನವನ್ನು ಪಠ್ಯಪುಸ್ತಕದಲ್ಲಿ ಸೇರಿಸಿರುವ ಬಗ್ಗೆ ಮಾಹಿತಿ ಇರಲಿಲ್ಲ. ಬುಲ್ ಬುಲ್ ಕಲ್ಪನಾ ಚಿತ್ರದ ವಿವಾದದ ಬಗ್ಗೆ ಹೇಳುವುದಾದರೆ, ಅದು ಒಂದು ರೂಪಕವಲ್ಲದೆ ಬೇರೇನೂ ಅಲ್ಲ ಎಂಬುದು ಸ್ಪಷ್ಟ” ಎಂದು ತಿಳಿಸಿದ್ದಾರೆ.

8ನೇ ತರಗತಿಯ ‘ತಿಳಿ ಕನ್ನಡ’ ಪಠ್ಯಪುಸ್ತಕದಲ್ಲಿ ಲೇಖಕ ಕೆ ಟಿ ಗಟ್ಟಿಯವರು ಬರೆದಿರುವ ವಿ ಡಿ ಸಾವರ್ಕರ್ ಕುರಿತ ‘ಕಾಲವನ್ನು ಗೆದ್ದವರು’ ಎನ್ನುವ ಪ್ರವಾಸ ಕಥನವು ವಿವಾದದ ವಸ್ತುವಾಗಿದೆ. ಅದರಲ್ಲಿ ಲೇಖಕರು ಸಾವರ್ಕರ್‌ರನ್ನು ಇರಿಸಲಾಗಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಬಗ್ಗೆ “ಕೋಣೆಯೊಳಗಿನ ಹಿಂಬದಿ ಗೋಡೆಯ ಎತ್ತರದಲ್ಲಿ ಆಕಾಶ ಕೂಡ ಕಾಣಿಸದ ಕಿಂಡಿ. ಸಾವರ್ಕರ್ ಕೋಣೆಯಲ್ಲಿ ಆ ಕಿಂಡಿ ಕೂಡ ಇಲ್ಲ. ಆದರೂ ಎಲ್ಲಿಂದಲೋ ಬುಲ್‌ಬುಲ್ ಹಕ್ಕಿಗಳು ಹಾರಿ ಸೆಲ್‌ನೊಳಗೆ ಬರುತ್ತಿದ್ದವು. ಅವುಗಳ ರೆಕ್ಕೆಯ ಮೇಲೆ ಕುಳಿತು ಸಾವರ್ಕರ್ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದರು”. ಎಂದು ಬರೆಯಲಾಗಿದೆ. ಇದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಇಷ್ಟೊಂದು ಉತ್ಪ್ರೇಕ್ಷಿತ ಪಠ್ಯವನ್ನು ಮಕ್ಕಳು ಕಲಿಯಬೇಕೆ ಎಂದು ಹಲವರು ಪ್ರಶ್ನಿಸಿದ್ದರು. ಅಲ್ಲದೆ ಬುಲ್‌ಬುಲ್ ಹಕ್ಕಿಯ ಮೇಲೆ ಕುಳಿತು ಭಾರತಕ್ಕೆ ಬಂದಿದ್ದರು ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳು ಹರಿದಾಡುತ್ತಿವೆ.

ಕೆ.ಟಿ.ಗಟ್ಟಿಯವರು, ಅನಾರೋಗ್ಯದ ಕಾರಣ, ಯಾವುದೇ ಸ್ಪಷ್ಟನೆ ನೀಡುವ ಸ್ಥಿತಿಯಲ್ಲಿಲ್ಲ. ಅವರ ಪರವಾಗಿ ನಾನು ಉತ್ತರಿಸುವಂತಿಲ್ಲ; ಸಂಬಂಧಪಟ್ಟ ಕೆಲವು ವಿವರಗಳನ್ನು ಇಲ್ಲಿ ಹಂಚಿಕೊಳ್ಳಬಲ್ಲೆ ಎಂದಿರುವ ಅವರ ಪತ್ನಿ, “ಸಾವರ್ಕರ್ ಬಗೆಗಿನ ಗಟ್ಟಿಯವರ ಈ ಲೇಖನವನ್ನು ಸಾಂದರ್ಭಿಕವಾಗಿ ಪರಿಗಣಿಸಬೇಕು. ಕನ್ನಡ ಸಾಹಿತ್ಯ ಪರಿಷತ್ತು ಪ್ರಾಯೋಜಿಸಿದ ಈ ಪ್ರವಾಸದ ಉದ್ದೇಶವು, ಅಂಡಮಾನ್‌ನ ಸಾಮಾಜಿಕ ಜನಜೀವನ ಹಾಗೂ ರಾಜಕೀಯ ಚರಿತ್ರೆಯ ವಿಸ್ತೃತ ನೋಟವನ್ನು ಕಲೆ ಹಾಕುವುದೇ ಆಗಿತ್ತು. ಇದಕ್ಕಾಗಿ ಅವರು ಸ್ಥಳೀಯರನ್ನು ಸಂದರ್ಶಿಸುತ್ತಾ, ಸ್ಥಳೀಯ ಸಾಮಾಜಿಕ, ಸಾಂಸ್ಕೃತಿಕ ಸಮಾರಂಭಗಳಲ್ಲಿ ಹಾಜರಿರುತ್ತಾ, ಪುಸ್ತಕಗಳನ್ನೋದುತ್ತಾ ಸಾಕಷ್ಟು ಸಮಯ ಕಳೆದಿದ್ದರು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ಈ ಕೃತಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರರ ಪಾತ್ರದ ಬಗೆಗಾಗಲೀ, ಅವರ ವಿಚಾರಧಾರೆಯ ಬಗೆಗಾಗಲೀ ಯಾವುದೇ ಮಾತು ಇಲ್ಲಿ ಬಂದಿಲ್ಲ. ಗಟ್ಟಿಯವರ ಇನ್ನಾವುದೇ ಬರಹಗಳಲ್ಲಿ ಸಾವರ್ಕರರ ಬಗೆಗೆ ಉಲ್ಲೇಖ ಇಲ್ಲ. ಈ ಲೇಖನದ ಮೂವತ್ತು ಶೇಕಡಾ ಭಾಗ, ಮತ್ತೂರು ಕೃಷ್ಣಮೂರ್ತಿಯವರ “ಸ್ವಾತಂತ್ರ್ಯವೀರ ಸಾವರ್ಕರ್” (1966) ಕೃತಿಯಿಂದ ಉಧ್ಧೃತವಾಗಿದೆ. ಸಾವರ್ಕರರ ಆತ್ಮಚರಿತ್ರೆಯೂ ಆಕರಗ್ರಂಥಗಳ ಪಟ್ಟಿಯಲ್ಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬುಲ್ ಬುಲ್ ಸವಾರಿಯು ಬಗ್ಗೆ ಬರೆದಿರುವ ವಾಕ್ಯಗಳಲ್ಲಿ, ಮುದ್ರಣ ದೋಷ ಅಥವಾ ಲೇಖಕರ ನಿರ್ಲಕ್ಷ್ಯದಿಂದ, ಸಂದರ್ಭ/ಉಲ್ಲೇಖವು ಬಿಟ್ಟುಹೋಗಿರುವುದು ಎಲ್ಲಾ ರೀತಿಯ ಗೊಂದಲಗಳಿಗೆ ಎಡೆಮಾಡಿದೆ. ಸಾವರ್ಕರರ ಬುಲ್ ಬುಲ್ ಸವಾರಿಯು, ಅವರು ಇತರ ಮೂಲಗಳಿಂದ ಗ್ರಹಿಸಿದ್ದೇ, ಇಲ್ಲಾ ಅವರ ಕಲ್ಪನೆಯೇ ಎಂಬ ಬಗ್ಗೆ ಖಂಡಿತವಾಗಿ ಹೇಳಲಾಗದಿದ್ದರೂ, ಬುಲ್ ಬುಲ್ ಐತಿಹ್ಯವು ಲೇಖಕನ ಸೃಷ್ಟಿಯಲ್ಲ ಎಂಬುದನ್ನು ನಿಸ್ಸಂದೇಹವಾಗಿ ಹೇಳಬಹುದು ಎಂದು ಅವರು ಹೇಳಿದ್ದಾರೆ.

ಗಟ್ಟಿಯವರ ಸಾಹಿತ್ಯದ ಪರಿಚಯವಿರುವವರಿಗೆ, ಬುಲ್ ಬುಲ್ ರೂಪಕವು ಸಾವರ್ಕರರನ್ನು ವೈಭವೀಕರಿಸುವ ಉದ್ದೇಶದಿಂದ, ಅವರ ವಿಚಾರಧಾರೆಯ ಬಗ್ಗೆ ಅಭಿಮಾನವುಳ್ಳ ಲೇಖಕ ರಚಿಸಿರಬೇಕು ಎಂಬ ಭಾವನೆ ಬರಲಾರದು. ಅವರ ವಿಚಾರಧಾರೆಯ ಪರಿಚಯ ಇರುವವರಿಗೆ ಈ ಬಗ್ಗೆ ಸ್ಪಷ್ಟೀಕರಣ ನೀಡುವ ಅಗತ್ಯವಿರಲಾರದು. ಅವರ ಸಾಹಿತ್ಯದ ಪರಿಚಯ ಇಲ್ಲದವರು, ಅವರ “ನಮ್ಮೊಳಗಿನ ಆಕಾಶ” ಸಂಕಲನದ, “ಧರ್ಮ ಮತ್ತು ವ್ಯಕ್ತಿ ಸ್ವಾತಂತ್ರ್ಯ” ಅಥವಾ ಅವರ ಇತರ ಸಾಹಿತ್ಯ ಕೃತಿಗಳನ್ನು ಓದಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...