Homeಮುಖಪುಟಕೆ.ಟಿ ಗಟ್ಟಿಯವರು ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ: ಬುಲ್ ಬುಲ್ ವಿವಾದಕ್ಕೆ ಲೇಖಕರ ಪತ್ನಿಯ ಸ್ಪಷ್ಟನೆ

ಕೆ.ಟಿ ಗಟ್ಟಿಯವರು ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ: ಬುಲ್ ಬುಲ್ ವಿವಾದಕ್ಕೆ ಲೇಖಕರ ಪತ್ನಿಯ ಸ್ಪಷ್ಟನೆ

- Advertisement -
- Advertisement -

8ನೇ ತರಗತಿ ಕನ್ನಡ ದ್ವಿತೀಯ ಭಾಷ ಪಠ್ಯದಲ್ಲಿ ಸಾವರ್ಕರ್ ಕುರಿತು ಬುಲ್ ಬುಲ್ ಹಕ್ಕಿಯ ಉತ್ಪ್ರೇಕ್ಷಿತ ಪಠ್ಯ ಸೇರಿಸಿದ್ದಕ್ಕೆ ಬಂದ ವ್ಯಾಪಕ ಟೀಕೆಯ ಕುರಿತು ಲೇಖಕ ಕೆ.ಟಿ ಗಟ್ಟಿಯವರು ಪತ್ನಿ ಯಶೋದಾ ಅಮ್ಮೆಂಬಳರವರು ಪ್ರತಿಕ್ರಿಯಿಸಿದ್ದು, ತಮ್ಮ ಪತಿ ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ ಎಂದಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ವಿವಾದವೇಳುವವರೆಗೆ ನಮಗೆ ಕಾಲವನ್ನು ಗೆದ್ದವರು ಲೇಖನವನ್ನು ಪಠ್ಯಪುಸ್ತಕದಲ್ಲಿ ಸೇರಿಸಿರುವ ಬಗ್ಗೆ ಮಾಹಿತಿ ಇರಲಿಲ್ಲ. ಬುಲ್ ಬುಲ್ ಕಲ್ಪನಾ ಚಿತ್ರದ ವಿವಾದದ ಬಗ್ಗೆ ಹೇಳುವುದಾದರೆ, ಅದು ಒಂದು ರೂಪಕವಲ್ಲದೆ ಬೇರೇನೂ ಅಲ್ಲ ಎಂಬುದು ಸ್ಪಷ್ಟ” ಎಂದು ತಿಳಿಸಿದ್ದಾರೆ.

8ನೇ ತರಗತಿಯ ‘ತಿಳಿ ಕನ್ನಡ’ ಪಠ್ಯಪುಸ್ತಕದಲ್ಲಿ ಲೇಖಕ ಕೆ ಟಿ ಗಟ್ಟಿಯವರು ಬರೆದಿರುವ ವಿ ಡಿ ಸಾವರ್ಕರ್ ಕುರಿತ ‘ಕಾಲವನ್ನು ಗೆದ್ದವರು’ ಎನ್ನುವ ಪ್ರವಾಸ ಕಥನವು ವಿವಾದದ ವಸ್ತುವಾಗಿದೆ. ಅದರಲ್ಲಿ ಲೇಖಕರು ಸಾವರ್ಕರ್‌ರನ್ನು ಇರಿಸಲಾಗಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಬಗ್ಗೆ “ಕೋಣೆಯೊಳಗಿನ ಹಿಂಬದಿ ಗೋಡೆಯ ಎತ್ತರದಲ್ಲಿ ಆಕಾಶ ಕೂಡ ಕಾಣಿಸದ ಕಿಂಡಿ. ಸಾವರ್ಕರ್ ಕೋಣೆಯಲ್ಲಿ ಆ ಕಿಂಡಿ ಕೂಡ ಇಲ್ಲ. ಆದರೂ ಎಲ್ಲಿಂದಲೋ ಬುಲ್‌ಬುಲ್ ಹಕ್ಕಿಗಳು ಹಾರಿ ಸೆಲ್‌ನೊಳಗೆ ಬರುತ್ತಿದ್ದವು. ಅವುಗಳ ರೆಕ್ಕೆಯ ಮೇಲೆ ಕುಳಿತು ಸಾವರ್ಕರ್ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದರು”. ಎಂದು ಬರೆಯಲಾಗಿದೆ. ಇದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಇಷ್ಟೊಂದು ಉತ್ಪ್ರೇಕ್ಷಿತ ಪಠ್ಯವನ್ನು ಮಕ್ಕಳು ಕಲಿಯಬೇಕೆ ಎಂದು ಹಲವರು ಪ್ರಶ್ನಿಸಿದ್ದರು. ಅಲ್ಲದೆ ಬುಲ್‌ಬುಲ್ ಹಕ್ಕಿಯ ಮೇಲೆ ಕುಳಿತು ಭಾರತಕ್ಕೆ ಬಂದಿದ್ದರು ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳು ಹರಿದಾಡುತ್ತಿವೆ.

ಕೆ.ಟಿ.ಗಟ್ಟಿಯವರು, ಅನಾರೋಗ್ಯದ ಕಾರಣ, ಯಾವುದೇ ಸ್ಪಷ್ಟನೆ ನೀಡುವ ಸ್ಥಿತಿಯಲ್ಲಿಲ್ಲ. ಅವರ ಪರವಾಗಿ ನಾನು ಉತ್ತರಿಸುವಂತಿಲ್ಲ; ಸಂಬಂಧಪಟ್ಟ ಕೆಲವು ವಿವರಗಳನ್ನು ಇಲ್ಲಿ ಹಂಚಿಕೊಳ್ಳಬಲ್ಲೆ ಎಂದಿರುವ ಅವರ ಪತ್ನಿ, “ಸಾವರ್ಕರ್ ಬಗೆಗಿನ ಗಟ್ಟಿಯವರ ಈ ಲೇಖನವನ್ನು ಸಾಂದರ್ಭಿಕವಾಗಿ ಪರಿಗಣಿಸಬೇಕು. ಕನ್ನಡ ಸಾಹಿತ್ಯ ಪರಿಷತ್ತು ಪ್ರಾಯೋಜಿಸಿದ ಈ ಪ್ರವಾಸದ ಉದ್ದೇಶವು, ಅಂಡಮಾನ್‌ನ ಸಾಮಾಜಿಕ ಜನಜೀವನ ಹಾಗೂ ರಾಜಕೀಯ ಚರಿತ್ರೆಯ ವಿಸ್ತೃತ ನೋಟವನ್ನು ಕಲೆ ಹಾಕುವುದೇ ಆಗಿತ್ತು. ಇದಕ್ಕಾಗಿ ಅವರು ಸ್ಥಳೀಯರನ್ನು ಸಂದರ್ಶಿಸುತ್ತಾ, ಸ್ಥಳೀಯ ಸಾಮಾಜಿಕ, ಸಾಂಸ್ಕೃತಿಕ ಸಮಾರಂಭಗಳಲ್ಲಿ ಹಾಜರಿರುತ್ತಾ, ಪುಸ್ತಕಗಳನ್ನೋದುತ್ತಾ ಸಾಕಷ್ಟು ಸಮಯ ಕಳೆದಿದ್ದರು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ಈ ಕೃತಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರರ ಪಾತ್ರದ ಬಗೆಗಾಗಲೀ, ಅವರ ವಿಚಾರಧಾರೆಯ ಬಗೆಗಾಗಲೀ ಯಾವುದೇ ಮಾತು ಇಲ್ಲಿ ಬಂದಿಲ್ಲ. ಗಟ್ಟಿಯವರ ಇನ್ನಾವುದೇ ಬರಹಗಳಲ್ಲಿ ಸಾವರ್ಕರರ ಬಗೆಗೆ ಉಲ್ಲೇಖ ಇಲ್ಲ. ಈ ಲೇಖನದ ಮೂವತ್ತು ಶೇಕಡಾ ಭಾಗ, ಮತ್ತೂರು ಕೃಷ್ಣಮೂರ್ತಿಯವರ “ಸ್ವಾತಂತ್ರ್ಯವೀರ ಸಾವರ್ಕರ್” (1966) ಕೃತಿಯಿಂದ ಉಧ್ಧೃತವಾಗಿದೆ. ಸಾವರ್ಕರರ ಆತ್ಮಚರಿತ್ರೆಯೂ ಆಕರಗ್ರಂಥಗಳ ಪಟ್ಟಿಯಲ್ಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬುಲ್ ಬುಲ್ ಸವಾರಿಯು ಬಗ್ಗೆ ಬರೆದಿರುವ ವಾಕ್ಯಗಳಲ್ಲಿ, ಮುದ್ರಣ ದೋಷ ಅಥವಾ ಲೇಖಕರ ನಿರ್ಲಕ್ಷ್ಯದಿಂದ, ಸಂದರ್ಭ/ಉಲ್ಲೇಖವು ಬಿಟ್ಟುಹೋಗಿರುವುದು ಎಲ್ಲಾ ರೀತಿಯ ಗೊಂದಲಗಳಿಗೆ ಎಡೆಮಾಡಿದೆ. ಸಾವರ್ಕರರ ಬುಲ್ ಬುಲ್ ಸವಾರಿಯು, ಅವರು ಇತರ ಮೂಲಗಳಿಂದ ಗ್ರಹಿಸಿದ್ದೇ, ಇಲ್ಲಾ ಅವರ ಕಲ್ಪನೆಯೇ ಎಂಬ ಬಗ್ಗೆ ಖಂಡಿತವಾಗಿ ಹೇಳಲಾಗದಿದ್ದರೂ, ಬುಲ್ ಬುಲ್ ಐತಿಹ್ಯವು ಲೇಖಕನ ಸೃಷ್ಟಿಯಲ್ಲ ಎಂಬುದನ್ನು ನಿಸ್ಸಂದೇಹವಾಗಿ ಹೇಳಬಹುದು ಎಂದು ಅವರು ಹೇಳಿದ್ದಾರೆ.

ಗಟ್ಟಿಯವರ ಸಾಹಿತ್ಯದ ಪರಿಚಯವಿರುವವರಿಗೆ, ಬುಲ್ ಬುಲ್ ರೂಪಕವು ಸಾವರ್ಕರರನ್ನು ವೈಭವೀಕರಿಸುವ ಉದ್ದೇಶದಿಂದ, ಅವರ ವಿಚಾರಧಾರೆಯ ಬಗ್ಗೆ ಅಭಿಮಾನವುಳ್ಳ ಲೇಖಕ ರಚಿಸಿರಬೇಕು ಎಂಬ ಭಾವನೆ ಬರಲಾರದು. ಅವರ ವಿಚಾರಧಾರೆಯ ಪರಿಚಯ ಇರುವವರಿಗೆ ಈ ಬಗ್ಗೆ ಸ್ಪಷ್ಟೀಕರಣ ನೀಡುವ ಅಗತ್ಯವಿರಲಾರದು. ಅವರ ಸಾಹಿತ್ಯದ ಪರಿಚಯ ಇಲ್ಲದವರು, ಅವರ “ನಮ್ಮೊಳಗಿನ ಆಕಾಶ” ಸಂಕಲನದ, “ಧರ್ಮ ಮತ್ತು ವ್ಯಕ್ತಿ ಸ್ವಾತಂತ್ರ್ಯ” ಅಥವಾ ಅವರ ಇತರ ಸಾಹಿತ್ಯ ಕೃತಿಗಳನ್ನು ಓದಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...