Homeಮುಖಪುಟಕೆ.ಟಿ ಗಟ್ಟಿಯವರು ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ: ಬುಲ್ ಬುಲ್ ವಿವಾದಕ್ಕೆ ಲೇಖಕರ ಪತ್ನಿಯ ಸ್ಪಷ್ಟನೆ

ಕೆ.ಟಿ ಗಟ್ಟಿಯವರು ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ: ಬುಲ್ ಬುಲ್ ವಿವಾದಕ್ಕೆ ಲೇಖಕರ ಪತ್ನಿಯ ಸ್ಪಷ್ಟನೆ

- Advertisement -
- Advertisement -

8ನೇ ತರಗತಿ ಕನ್ನಡ ದ್ವಿತೀಯ ಭಾಷ ಪಠ್ಯದಲ್ಲಿ ಸಾವರ್ಕರ್ ಕುರಿತು ಬುಲ್ ಬುಲ್ ಹಕ್ಕಿಯ ಉತ್ಪ್ರೇಕ್ಷಿತ ಪಠ್ಯ ಸೇರಿಸಿದ್ದಕ್ಕೆ ಬಂದ ವ್ಯಾಪಕ ಟೀಕೆಯ ಕುರಿತು ಲೇಖಕ ಕೆ.ಟಿ ಗಟ್ಟಿಯವರು ಪತ್ನಿ ಯಶೋದಾ ಅಮ್ಮೆಂಬಳರವರು ಪ್ರತಿಕ್ರಿಯಿಸಿದ್ದು, ತಮ್ಮ ಪತಿ ಸಾವರ್ಕರ್ ಚಿಂತನೆಯ ಸಮರ್ಥಕರಲ್ಲ ಎಂದಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ವಿವಾದವೇಳುವವರೆಗೆ ನಮಗೆ ಕಾಲವನ್ನು ಗೆದ್ದವರು ಲೇಖನವನ್ನು ಪಠ್ಯಪುಸ್ತಕದಲ್ಲಿ ಸೇರಿಸಿರುವ ಬಗ್ಗೆ ಮಾಹಿತಿ ಇರಲಿಲ್ಲ. ಬುಲ್ ಬುಲ್ ಕಲ್ಪನಾ ಚಿತ್ರದ ವಿವಾದದ ಬಗ್ಗೆ ಹೇಳುವುದಾದರೆ, ಅದು ಒಂದು ರೂಪಕವಲ್ಲದೆ ಬೇರೇನೂ ಅಲ್ಲ ಎಂಬುದು ಸ್ಪಷ್ಟ” ಎಂದು ತಿಳಿಸಿದ್ದಾರೆ.

8ನೇ ತರಗತಿಯ ‘ತಿಳಿ ಕನ್ನಡ’ ಪಠ್ಯಪುಸ್ತಕದಲ್ಲಿ ಲೇಖಕ ಕೆ ಟಿ ಗಟ್ಟಿಯವರು ಬರೆದಿರುವ ವಿ ಡಿ ಸಾವರ್ಕರ್ ಕುರಿತ ‘ಕಾಲವನ್ನು ಗೆದ್ದವರು’ ಎನ್ನುವ ಪ್ರವಾಸ ಕಥನವು ವಿವಾದದ ವಸ್ತುವಾಗಿದೆ. ಅದರಲ್ಲಿ ಲೇಖಕರು ಸಾವರ್ಕರ್‌ರನ್ನು ಇರಿಸಲಾಗಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಬಗ್ಗೆ “ಕೋಣೆಯೊಳಗಿನ ಹಿಂಬದಿ ಗೋಡೆಯ ಎತ್ತರದಲ್ಲಿ ಆಕಾಶ ಕೂಡ ಕಾಣಿಸದ ಕಿಂಡಿ. ಸಾವರ್ಕರ್ ಕೋಣೆಯಲ್ಲಿ ಆ ಕಿಂಡಿ ಕೂಡ ಇಲ್ಲ. ಆದರೂ ಎಲ್ಲಿಂದಲೋ ಬುಲ್‌ಬುಲ್ ಹಕ್ಕಿಗಳು ಹಾರಿ ಸೆಲ್‌ನೊಳಗೆ ಬರುತ್ತಿದ್ದವು. ಅವುಗಳ ರೆಕ್ಕೆಯ ಮೇಲೆ ಕುಳಿತು ಸಾವರ್ಕರ್ ಪ್ರತಿದಿನ ತಾಯ್ನಾಡಿನ ನೆಲವನ್ನು ಸಂದರ್ಶಿಸಿ ಬರುತ್ತಿದ್ದರು”. ಎಂದು ಬರೆಯಲಾಗಿದೆ. ಇದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಇಷ್ಟೊಂದು ಉತ್ಪ್ರೇಕ್ಷಿತ ಪಠ್ಯವನ್ನು ಮಕ್ಕಳು ಕಲಿಯಬೇಕೆ ಎಂದು ಹಲವರು ಪ್ರಶ್ನಿಸಿದ್ದರು. ಅಲ್ಲದೆ ಬುಲ್‌ಬುಲ್ ಹಕ್ಕಿಯ ಮೇಲೆ ಕುಳಿತು ಭಾರತಕ್ಕೆ ಬಂದಿದ್ದರು ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳು ಹರಿದಾಡುತ್ತಿವೆ.

ಕೆ.ಟಿ.ಗಟ್ಟಿಯವರು, ಅನಾರೋಗ್ಯದ ಕಾರಣ, ಯಾವುದೇ ಸ್ಪಷ್ಟನೆ ನೀಡುವ ಸ್ಥಿತಿಯಲ್ಲಿಲ್ಲ. ಅವರ ಪರವಾಗಿ ನಾನು ಉತ್ತರಿಸುವಂತಿಲ್ಲ; ಸಂಬಂಧಪಟ್ಟ ಕೆಲವು ವಿವರಗಳನ್ನು ಇಲ್ಲಿ ಹಂಚಿಕೊಳ್ಳಬಲ್ಲೆ ಎಂದಿರುವ ಅವರ ಪತ್ನಿ, “ಸಾವರ್ಕರ್ ಬಗೆಗಿನ ಗಟ್ಟಿಯವರ ಈ ಲೇಖನವನ್ನು ಸಾಂದರ್ಭಿಕವಾಗಿ ಪರಿಗಣಿಸಬೇಕು. ಕನ್ನಡ ಸಾಹಿತ್ಯ ಪರಿಷತ್ತು ಪ್ರಾಯೋಜಿಸಿದ ಈ ಪ್ರವಾಸದ ಉದ್ದೇಶವು, ಅಂಡಮಾನ್‌ನ ಸಾಮಾಜಿಕ ಜನಜೀವನ ಹಾಗೂ ರಾಜಕೀಯ ಚರಿತ್ರೆಯ ವಿಸ್ತೃತ ನೋಟವನ್ನು ಕಲೆ ಹಾಕುವುದೇ ಆಗಿತ್ತು. ಇದಕ್ಕಾಗಿ ಅವರು ಸ್ಥಳೀಯರನ್ನು ಸಂದರ್ಶಿಸುತ್ತಾ, ಸ್ಥಳೀಯ ಸಾಮಾಜಿಕ, ಸಾಂಸ್ಕೃತಿಕ ಸಮಾರಂಭಗಳಲ್ಲಿ ಹಾಜರಿರುತ್ತಾ, ಪುಸ್ತಕಗಳನ್ನೋದುತ್ತಾ ಸಾಕಷ್ಟು ಸಮಯ ಕಳೆದಿದ್ದರು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ಈ ಕೃತಿಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರರ ಪಾತ್ರದ ಬಗೆಗಾಗಲೀ, ಅವರ ವಿಚಾರಧಾರೆಯ ಬಗೆಗಾಗಲೀ ಯಾವುದೇ ಮಾತು ಇಲ್ಲಿ ಬಂದಿಲ್ಲ. ಗಟ್ಟಿಯವರ ಇನ್ನಾವುದೇ ಬರಹಗಳಲ್ಲಿ ಸಾವರ್ಕರರ ಬಗೆಗೆ ಉಲ್ಲೇಖ ಇಲ್ಲ. ಈ ಲೇಖನದ ಮೂವತ್ತು ಶೇಕಡಾ ಭಾಗ, ಮತ್ತೂರು ಕೃಷ್ಣಮೂರ್ತಿಯವರ “ಸ್ವಾತಂತ್ರ್ಯವೀರ ಸಾವರ್ಕರ್” (1966) ಕೃತಿಯಿಂದ ಉಧ್ಧೃತವಾಗಿದೆ. ಸಾವರ್ಕರರ ಆತ್ಮಚರಿತ್ರೆಯೂ ಆಕರಗ್ರಂಥಗಳ ಪಟ್ಟಿಯಲ್ಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬುಲ್ ಬುಲ್ ಸವಾರಿಯು ಬಗ್ಗೆ ಬರೆದಿರುವ ವಾಕ್ಯಗಳಲ್ಲಿ, ಮುದ್ರಣ ದೋಷ ಅಥವಾ ಲೇಖಕರ ನಿರ್ಲಕ್ಷ್ಯದಿಂದ, ಸಂದರ್ಭ/ಉಲ್ಲೇಖವು ಬಿಟ್ಟುಹೋಗಿರುವುದು ಎಲ್ಲಾ ರೀತಿಯ ಗೊಂದಲಗಳಿಗೆ ಎಡೆಮಾಡಿದೆ. ಸಾವರ್ಕರರ ಬುಲ್ ಬುಲ್ ಸವಾರಿಯು, ಅವರು ಇತರ ಮೂಲಗಳಿಂದ ಗ್ರಹಿಸಿದ್ದೇ, ಇಲ್ಲಾ ಅವರ ಕಲ್ಪನೆಯೇ ಎಂಬ ಬಗ್ಗೆ ಖಂಡಿತವಾಗಿ ಹೇಳಲಾಗದಿದ್ದರೂ, ಬುಲ್ ಬುಲ್ ಐತಿಹ್ಯವು ಲೇಖಕನ ಸೃಷ್ಟಿಯಲ್ಲ ಎಂಬುದನ್ನು ನಿಸ್ಸಂದೇಹವಾಗಿ ಹೇಳಬಹುದು ಎಂದು ಅವರು ಹೇಳಿದ್ದಾರೆ.

ಗಟ್ಟಿಯವರ ಸಾಹಿತ್ಯದ ಪರಿಚಯವಿರುವವರಿಗೆ, ಬುಲ್ ಬುಲ್ ರೂಪಕವು ಸಾವರ್ಕರರನ್ನು ವೈಭವೀಕರಿಸುವ ಉದ್ದೇಶದಿಂದ, ಅವರ ವಿಚಾರಧಾರೆಯ ಬಗ್ಗೆ ಅಭಿಮಾನವುಳ್ಳ ಲೇಖಕ ರಚಿಸಿರಬೇಕು ಎಂಬ ಭಾವನೆ ಬರಲಾರದು. ಅವರ ವಿಚಾರಧಾರೆಯ ಪರಿಚಯ ಇರುವವರಿಗೆ ಈ ಬಗ್ಗೆ ಸ್ಪಷ್ಟೀಕರಣ ನೀಡುವ ಅಗತ್ಯವಿರಲಾರದು. ಅವರ ಸಾಹಿತ್ಯದ ಪರಿಚಯ ಇಲ್ಲದವರು, ಅವರ “ನಮ್ಮೊಳಗಿನ ಆಕಾಶ” ಸಂಕಲನದ, “ಧರ್ಮ ಮತ್ತು ವ್ಯಕ್ತಿ ಸ್ವಾತಂತ್ರ್ಯ” ಅಥವಾ ಅವರ ಇತರ ಸಾಹಿತ್ಯ ಕೃತಿಗಳನ್ನು ಓದಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾವರ್ಕರ್ ಕುರಿತ ಉತ್ಪ್ರೇಕ್ಷಿತ ಕನ್ನಡ ಪಠ್ಯಕ್ಕೆ ತೀವ್ರ ವಿರೋಧ: ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...