Homeಕರ್ನಾಟಕಕುಡುಪು ಗುಂಪು ಹತ್ಯೆ : ಮತ್ತೊಬ್ಬ ಆರೋಪಿಗೆ ಜಾಮೀನು

ಕುಡುಪು ಗುಂಪು ಹತ್ಯೆ : ಮತ್ತೊಬ್ಬ ಆರೋಪಿಗೆ ಜಾಮೀನು

- Advertisement -
- Advertisement -

ಮಂಗಳೂರು ಹೊರವಲಯದ ಕುಡುಪು ಬಳಿ 2025ರ ಏಪ್ರಿಲ್ 27ರಂದು ನಡೆದ ಕೇರಳ ಮೂಲದ ಮುಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣದ ಆರೋಪಿ ನಟೇಶ್ ಕುಮಾರ್‌ಗೆ ಹೈಕೋರ್ಟ್ ಶುಕ್ರವಾರ (ಜ.23) ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರು ನಟೇಶ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಜಾಮೀನು ಮಂಜೂರು ನೀಡಿದ್ದಾರೆ.

ಪ್ರಕರಣದ ತನಿಖೆ ಪೂರ್ಣಗೊಂಡು ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವುದು, ಆರೋಪಿಯು ಈಗಾಗಲೇ ಸುದೀರ್ಘ ಕಾಲ (2025ರ ಏಪ್ರಿಲ್‌ನಿಂದ) ನ್ಯಾಯಾಂಗ ಬಂಧನದಲ್ಲಿರುವುದು ಮತ್ತು ಹೆಚ್ಚಿನ ಕಸ್ಟಡಿ ವಿಚಾರಣೆಯ ಅಗತ್ಯವಿಲ್ಲದಿರುವುದನ್ನು ಗಮನಿಸಿ ನ್ಯಾಯಾಲಯ ಜಾಮೀನು ನೀಡಿದೆ ಎಂದು ವರದಿಯಾಗಿದೆ.

ಕ್ರಿಕೆಟ್ ಪಂದ್ಯದ ವೇಳೆ ಅಶ್ರಫ್ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರು ಎಂದು ಆರೋಪಿಸಿ ಗುಂಪು ಹತ್ಯೆ ನಡೆಸಲಾಗಿತ್ತು. ಈ ವೇಳೆ ನಟೇಶ್ ಅಶ್ರಫ್ ಕಣ್ಣಿಗೆ ಮೆಣಸಿನ ಪುಡಿ ಎರಚಿ ಇತರರನ್ನು ಹಲ್ಲೆಗೆ ಪ್ರಚೋದಿಸಿದ್ದರು ಎಂದು ಪ್ರಾಸಿಕ್ಯೂಷನ್ ವಾದಿಸಿದೆ.

ನ್ಯಾಯಾಲಯವು ಆರೋಪಿಗೆ ಸಾಕ್ಷ್ಯಗಳನ್ನು ನಾಶಪಡಿಸಬಾರದು, ವಿಚಾರಣೆಗೆ ಸಹಕರಿಸಬೇಕು, ರೂ. 1,00,00 ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಒಬ್ಬರನ್ನು ಶ್ಯೂರಿಟಿ ಇಡಬೇಕು ಎಂಬ ಷರತ್ತುಗಳನ್ನು ವಿಧಿಸಿದೆ.

ಈ ಪ್ರಕರಣದಲ್ಲಿ ಈಗಾಗಲೇ ಸಚಿನ್, ದೀಕ್ಷಿತ್, ಸಂದೀಪ್ ಹಾವೇರಿ ಸೇರಿದಂತೆ ಇತರ ಕೆಲವು ಆರೋಪಿಗಳಿಗೂ ವಿವಿಧ ಹಂತಗಳಲ್ಲಿ ಜಾಮೀನು ಲಭಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಧಾರ್ ಕಾರ್ಡ್‌ ಇಲ್ಲದೆ ದಾಖಲಿಸಿಕೊಳ್ಳದ ವೈದ್ಯರು : ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಮಹಿಳೆ ಪರದಾಟ

ಆಧಾರ್ ಕಾರ್ಡ್‌ ಇಲ್ಲದ ಕಾರಣ ವೈದ್ಯರು ದಾಖಲಿಸಿಕೊಳ್ಳಲು ನಿರಾಕರಿಸಿದ್ದು, ಪರಿಣಾಮ ಹೆರಿಗೆಗೆ ಆಸ್ಪತ್ರೆ ಸಿಗದೆ ಅಲೆಮಾರಿ ಸಮುದಾಯದ ಮಹಿಳೆಯೊಬ್ಬರು ಪರದಾಡುತ್ತಿರುವ ಬಗ್ಗೆ ತೆಲಂಗಾಣದ ಕರೀಂನಗರ ಜಿಲ್ಲೆಯಿಂದ ವರದಿಯಾಗಿದೆ. ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ...

ಲ್ಯಾಂಡ್‌ಲಾರ್ಡ್: ಜಮೀನ್ದಾರಿ ವ್ಯವಸ್ಥೆ, ಜಾತಿ ಪ್ರಶ್ನೆ ಮತ್ತು ಸಂವಿಧಾನ – ಕನ್ನಡ ಚಿತ್ರರಂಗದ ಒಂದು ಮಹತ್ವದ ತಿರುವು

ಕನ್ನಡ ಮುಖ್ಯವಾಹಿನಿ ಸಿನೆಮಾ ಅಪರೂಪಕ್ಕೊಮ್ಮೆ ಮಾತ್ರ ಸಮಾಜದ ಮೂಲಭೂತ ಪ್ರಶ್ನೆಗಳತ್ತ ನೇರವಾಗಿ ಮುಖ ಮಾಡುತ್ತದೆ. ಜಾತಿ, ಭೂಮಿ, ಅಧಿಕಾರ ಎಲ್ಲವನ್ನು ಒಟ್ಟಿಗೆ ಹಿಡಿದು ಪ್ರಶ್ನಿಸುವ ಚಿತ್ರಗಳು ಇನ್ನೂ ವಿರಳ. ನಿರ್ದೇಶಕ–ಕಥಾಲೇಖಕ ಜಡೆಶ್ ಕೆ....

ಬಂಗಾಳದಲ್ಲಿ ಎಸ್‌ಐಆರ್ ಭಯದಿಂದ 110 ಮಂದಿ ಆತ್ಮಹತ್ಯೆ : ಸಿಎಂ ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಭಯದಿಂದ ಪ್ರತಿದಿನ ಪಶ್ಚಿಮ ಬಂಗಾಳದಲ್ಲಿ ಮೂರ್ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ (ಜ.23) ಹೇಳಿದ್ದಾರೆ. ಚುನಾವಣಾ ಆಯೋಗ ಮತ್ತು ಕೇಂದ್ರ...

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...