Homeಮುಖಪುಟಮಣಿಪುರ: ಸರಕಾರಿ ಕಚೇರಿಗಳನ್ನು ಬಲವಂತದಿಂದ ಬಂದ್‌ ಮಾಡಿಸುತ್ತಿರುವ ಕುಕಿ ಗುಂಪು

ಮಣಿಪುರ: ಸರಕಾರಿ ಕಚೇರಿಗಳನ್ನು ಬಲವಂತದಿಂದ ಬಂದ್‌ ಮಾಡಿಸುತ್ತಿರುವ ಕುಕಿ ಗುಂಪು

- Advertisement -
- Advertisement -

ಪೊಲೀಸ್ ಪೇದೆಯೊಬ್ಬರ ಅಮಾನತು ಹಿಂಪಡೆಯಲು ನೀಡಿದ ಗಡುವು ಅಂತ್ಯಗೊಂಡಿರುವುದರಿಂದ ಚುರಾಚಂದ್‌ಪುರ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳನ್ನು ಇಂದಿನಿಂದ ಬಲವಂತವಾಗಿ ಬಂದ್‌ ಮಾಡಲಾಗುವುದು ಎಂದು ಸಂಘರ್ಷ ಪೀಡಿತ ಮಣಿಪುರದ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್‌ಎಫ್) ಹೇಳಿಕೊಂಡಿದೆ.

ರಾಜ್ಯ ಗೃಹ ಇಲಾಖೆಯು ಎಲ್ಲಾ ಉದ್ಯೋಗಿಗಳಿಗೆ ಕುಕಿ ಸಂಘಟನೆಯ ಆದೇಶವನ್ನು ಅನುಸರಿಸದಂತೆ  ಕೇಳಿಕೊಂಡಿದೆ. ಕರ್ತವ್ಯಗಳಿಗೆ ಹಾಜರಾಗದವರ ವಿರುದ್ಧ “ನೋ ವರ್ಕ್‌ ನೋ ಪೇ” ಮಾನದಂಡಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದೆ.

ITLF ಅಧ್ಯಕ್ಷ ಪಗಿನ್ ಹಾಕಿಪ್ ಮತ್ತು ಕಾರ್ಯದರ್ಶಿ ಹ್ಯೂಮನ್ ಟಾಂಬಿಂಗ್ ಈ ಕುರಿತು ಹೇಳಿಕೆಯನ್ನು ನೀಡಿದ್ದು, ಚುರಾಚಂದ್‌ಪುರ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಕಚೇರಿಗೆ ಹೋಗದಂತೆ ಕೇಳಿಕೊಂಡಿದ್ದಾರೆ. ಕಚೇರಿಯಲ್ಲಿ ಯಾರಾದರೂ ಕಂಡರೆ, ಏನಾದರೂ ಅನಾಹುತ ಸಂಭವಿಸಿದಲ್ಲಿ ಅವರೇ ಹೊಣೆಗಾರರು ಎಂದು ಹೇಳಿಕೊಂಡಿದ್ದರು.

ಕುಕಿ ಸಮುದಾಯಕ್ಕೆ ಸೇರಿದ ಕಾನ್‌ಸ್ಟೆಬಲ್ ಸಿಯಾಮ್‌ಲಾಲ್‌, ಶಸ್ತ್ರಧಾರಿ ಕುಕಿ ವ್ಯಕ್ತಿಯೊಂದಿಗೆ ಪೋಟೋ ತೆಗೆಸಿಕೊಂಡಿದ್ದರು ಎನ್ನಲಾಗಿದ್ದು, ಈ ಕಾರಣಕ್ಕೆ ಸಿಯಾಮ್‌ಲಾಲ್‌ ಅವರನ್ನು ಅಮಾನತು ಮಾಡಲಾಗಿತ್ತು. ಇದನ್ನು ಖಂಡಿಸಿ ಕುಕಿ ಸಮುದಾಯದವರು ಗುರುವಾರ ನಡೆಸಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಈ ವೇಳೆ ಇಬ್ಬರ ಹತ್ಯೆ ನಡೆದಿದೆ.  ಇಬ್ಬರು ಕುಕಿಗಳ ಹತ್ಯೆಗೆ ಅವರನ್ನು ಹೊಣೆಗಾರರನ್ನಾಗಿ ಮಾಡಿ ಚುರಚಂದ್‌ಪುರವನ್ನು ತೊರೆಯಲು ಉಪ ಆಯುಕ್ತ ಎಸ್ ಧರುಣ್ ಕುಮಾರ್ ಮತ್ತು ಎಸ್‌ಪಿ ಶಿವಾನಂದ್ ಸುರ್ವೆ ಅವರಿಗೆ ಐಟಿಎಲ್‌ಎಫ್ ಶುಕ್ರವಾರ 24 ಗಂಟೆಗಳ ಗಡುವನ್ನು ನೀಡಿದೆ. ಪೇದೆಯನ್ನು ಅಮಾನತುಗೊಳಿಸಿದ ಆದೇಶ ಹಿಂಪಡೆಯದ ಕಾರಣ ಗುಂಪು ಡಿಸಿ ಮತ್ತು ಎಸ್ಪಿ ಕಚೇರಿಗೆ ನುಗ್ಗಿ ಬೆಂಕಿ ಹಚ್ಚಿತ್ತು.

ಸಶಸ್ತ್ರ ಮೈತೈ ಗುಂಪುಗಳೊಂದಿಗೆ ಛಾಯಾಚಿತ್ರಗಳನ್ನು ತೆಗೆಸಿಕೊಂಡಿರುವ ಅರಾಂಬೈ ಟೆಂಗೋಲ್‌ನಂತಹ ಮೈತೈ ಪೊಲೀಸ್ ಸಿಬ್ಬಂದಿ ವಿರುದ್ಧ ರಾಜ್ಯ ಸರ್ಕಾರವು ಕ್ರಮ ಕೈಗೊಂಡಿಲ್ಲ ಎಂದು ITLF ಆರೋಪಿಸಿದೆ. ಈ ಹಿಂದೆ ಘೋಷಿಸಿದಂತೆ, ಲಂಕಾ ಜಿಲ್ಲೆಯ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳನ್ನು ಸೋಮವಾರ ಮುಚ್ಚಲಾಗುವುದು ಎಂದು ಐಟಿಎಲ್ಎಫ್ ಹೇಳಿಕೆ ತಿಳಿಸಿದೆ. ಕುಕಿ ಗುಂಪುಗಳು ಚುರಾಚಂದ್‌ಪುರವನ್ನು ಲಮ್ಕಾ ಎಂದು ಮರುನಾಮಕರಣ ಮಾಡಿದ್ದಾರೆ. ಇದಲ್ಲದೆ ಹಣಕಾಸು, ವೈದ್ಯಕೀಯ ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಬಂದ್‌ನಿಂದ ವಿನಾಯಿತಿ ನೀಡಲಾಗುವುದು ಎಂದು ITLF ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್, ಕಾನೂನು ಜಾರಿ ಸಂಸ್ಥೆಗಳು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆಗಳ ಬಗ್ಗೆ ಕಠಿಣವಾಗಿ ವ್ಯವಹರಿಸಲಾಗುವುದು ಮತ್ತು ರಾಜ್ಯ ಸರ್ಕಾರವು ಮೂಕ ಪ್ರೇಕ್ಷಕರಾಗಿ ಉಳಿಯುವುದಿಲ್ಲ ಎಂದು ಹೇಳಿದ್ದಾರೆ.

ಈ ಮಧ್ಯೆ, ಮಣಿಪುರದಲ್ಲಿ ನೆಲೆಸಿರುವ ಮ್ಯಾನ್ಮಾರ್‌ನಿಂದ ಬಂದ ಅಕ್ರಮ ಕುಕಿ ವಲಸಿಗರನ್ನು ರಕ್ಷಿಸಲು ಮತದಾರರ ಪಟ್ಟಿಯಂತಹ ದಾಖಲೆಗಳನ್ನು ನಾಶಪಡಿಸುವುದು ಕುಕಿಗಳ “ಹಿಡನ್ ಅಜೆಂಡಾ” ಎಂದು ಮೈತೈ ಸಂಘಟನೆ COCOMI ಹೇಳಿಕೊಂಡಿದೆ.

ಡಿಸಿ ಮತ್ತು ಎಸ್ಪಿ ಕಟ್ಟಡಗಳನ್ನು ಧ್ವಂಸದ ಹಿನ್ನೆಲೆ ಮಣಿಪುರ ಸರ್ಕಾರ ಭಾನುವಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ತ್ರಿವರ್ಣ ಧ್ವಜವನ್ನು ಡಿಸಿ ಕಚೇರಿ ಕಟ್ಟಡದಿಂದ ಅನಧಿಕೃತವಾಗಿ ಹಾರಿಸಲಾಯಿತು ಮತ್ತು ವಿಧ್ವಂಸಕ ಕೃತ್ಯಗಳು, ಅಗ್ನಿಸ್ಪರ್ಶ ಸಂದರ್ಭದಲ್ಲಿ ಅವಮಾನಿಸಲಾಯಿತು. ಜಿಲ್ಲಾಧಿಕಾರಿ ಧರುಣ್ ಕುಮಾರ್   ಜೀವ ಮತ್ತು ಆಸ್ತಿ ನಷ್ಟಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ರಂಜನ್ ಯುಮ್ನಮ್ ಹೇಳಿದ್ದಾರೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...