Homeಮುಖಪುಟಮಣಿಪುರ: ಸರಕಾರಿ ಕಚೇರಿಗಳನ್ನು ಬಲವಂತದಿಂದ ಬಂದ್‌ ಮಾಡಿಸುತ್ತಿರುವ ಕುಕಿ ಗುಂಪು

ಮಣಿಪುರ: ಸರಕಾರಿ ಕಚೇರಿಗಳನ್ನು ಬಲವಂತದಿಂದ ಬಂದ್‌ ಮಾಡಿಸುತ್ತಿರುವ ಕುಕಿ ಗುಂಪು

- Advertisement -
- Advertisement -

ಪೊಲೀಸ್ ಪೇದೆಯೊಬ್ಬರ ಅಮಾನತು ಹಿಂಪಡೆಯಲು ನೀಡಿದ ಗಡುವು ಅಂತ್ಯಗೊಂಡಿರುವುದರಿಂದ ಚುರಾಚಂದ್‌ಪುರ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳನ್ನು ಇಂದಿನಿಂದ ಬಲವಂತವಾಗಿ ಬಂದ್‌ ಮಾಡಲಾಗುವುದು ಎಂದು ಸಂಘರ್ಷ ಪೀಡಿತ ಮಣಿಪುರದ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್‌ಎಫ್) ಹೇಳಿಕೊಂಡಿದೆ.

ರಾಜ್ಯ ಗೃಹ ಇಲಾಖೆಯು ಎಲ್ಲಾ ಉದ್ಯೋಗಿಗಳಿಗೆ ಕುಕಿ ಸಂಘಟನೆಯ ಆದೇಶವನ್ನು ಅನುಸರಿಸದಂತೆ  ಕೇಳಿಕೊಂಡಿದೆ. ಕರ್ತವ್ಯಗಳಿಗೆ ಹಾಜರಾಗದವರ ವಿರುದ್ಧ “ನೋ ವರ್ಕ್‌ ನೋ ಪೇ” ಮಾನದಂಡಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದೆ.

ITLF ಅಧ್ಯಕ್ಷ ಪಗಿನ್ ಹಾಕಿಪ್ ಮತ್ತು ಕಾರ್ಯದರ್ಶಿ ಹ್ಯೂಮನ್ ಟಾಂಬಿಂಗ್ ಈ ಕುರಿತು ಹೇಳಿಕೆಯನ್ನು ನೀಡಿದ್ದು, ಚುರಾಚಂದ್‌ಪುರ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಕಚೇರಿಗೆ ಹೋಗದಂತೆ ಕೇಳಿಕೊಂಡಿದ್ದಾರೆ. ಕಚೇರಿಯಲ್ಲಿ ಯಾರಾದರೂ ಕಂಡರೆ, ಏನಾದರೂ ಅನಾಹುತ ಸಂಭವಿಸಿದಲ್ಲಿ ಅವರೇ ಹೊಣೆಗಾರರು ಎಂದು ಹೇಳಿಕೊಂಡಿದ್ದರು.

ಕುಕಿ ಸಮುದಾಯಕ್ಕೆ ಸೇರಿದ ಕಾನ್‌ಸ್ಟೆಬಲ್ ಸಿಯಾಮ್‌ಲಾಲ್‌, ಶಸ್ತ್ರಧಾರಿ ಕುಕಿ ವ್ಯಕ್ತಿಯೊಂದಿಗೆ ಪೋಟೋ ತೆಗೆಸಿಕೊಂಡಿದ್ದರು ಎನ್ನಲಾಗಿದ್ದು, ಈ ಕಾರಣಕ್ಕೆ ಸಿಯಾಮ್‌ಲಾಲ್‌ ಅವರನ್ನು ಅಮಾನತು ಮಾಡಲಾಗಿತ್ತು. ಇದನ್ನು ಖಂಡಿಸಿ ಕುಕಿ ಸಮುದಾಯದವರು ಗುರುವಾರ ನಡೆಸಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಈ ವೇಳೆ ಇಬ್ಬರ ಹತ್ಯೆ ನಡೆದಿದೆ.  ಇಬ್ಬರು ಕುಕಿಗಳ ಹತ್ಯೆಗೆ ಅವರನ್ನು ಹೊಣೆಗಾರರನ್ನಾಗಿ ಮಾಡಿ ಚುರಚಂದ್‌ಪುರವನ್ನು ತೊರೆಯಲು ಉಪ ಆಯುಕ್ತ ಎಸ್ ಧರುಣ್ ಕುಮಾರ್ ಮತ್ತು ಎಸ್‌ಪಿ ಶಿವಾನಂದ್ ಸುರ್ವೆ ಅವರಿಗೆ ಐಟಿಎಲ್‌ಎಫ್ ಶುಕ್ರವಾರ 24 ಗಂಟೆಗಳ ಗಡುವನ್ನು ನೀಡಿದೆ. ಪೇದೆಯನ್ನು ಅಮಾನತುಗೊಳಿಸಿದ ಆದೇಶ ಹಿಂಪಡೆಯದ ಕಾರಣ ಗುಂಪು ಡಿಸಿ ಮತ್ತು ಎಸ್ಪಿ ಕಚೇರಿಗೆ ನುಗ್ಗಿ ಬೆಂಕಿ ಹಚ್ಚಿತ್ತು.

ಸಶಸ್ತ್ರ ಮೈತೈ ಗುಂಪುಗಳೊಂದಿಗೆ ಛಾಯಾಚಿತ್ರಗಳನ್ನು ತೆಗೆಸಿಕೊಂಡಿರುವ ಅರಾಂಬೈ ಟೆಂಗೋಲ್‌ನಂತಹ ಮೈತೈ ಪೊಲೀಸ್ ಸಿಬ್ಬಂದಿ ವಿರುದ್ಧ ರಾಜ್ಯ ಸರ್ಕಾರವು ಕ್ರಮ ಕೈಗೊಂಡಿಲ್ಲ ಎಂದು ITLF ಆರೋಪಿಸಿದೆ. ಈ ಹಿಂದೆ ಘೋಷಿಸಿದಂತೆ, ಲಂಕಾ ಜಿಲ್ಲೆಯ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳನ್ನು ಸೋಮವಾರ ಮುಚ್ಚಲಾಗುವುದು ಎಂದು ಐಟಿಎಲ್ಎಫ್ ಹೇಳಿಕೆ ತಿಳಿಸಿದೆ. ಕುಕಿ ಗುಂಪುಗಳು ಚುರಾಚಂದ್‌ಪುರವನ್ನು ಲಮ್ಕಾ ಎಂದು ಮರುನಾಮಕರಣ ಮಾಡಿದ್ದಾರೆ. ಇದಲ್ಲದೆ ಹಣಕಾಸು, ವೈದ್ಯಕೀಯ ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಬಂದ್‌ನಿಂದ ವಿನಾಯಿತಿ ನೀಡಲಾಗುವುದು ಎಂದು ITLF ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್, ಕಾನೂನು ಜಾರಿ ಸಂಸ್ಥೆಗಳು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆಗಳ ಬಗ್ಗೆ ಕಠಿಣವಾಗಿ ವ್ಯವಹರಿಸಲಾಗುವುದು ಮತ್ತು ರಾಜ್ಯ ಸರ್ಕಾರವು ಮೂಕ ಪ್ರೇಕ್ಷಕರಾಗಿ ಉಳಿಯುವುದಿಲ್ಲ ಎಂದು ಹೇಳಿದ್ದಾರೆ.

ಈ ಮಧ್ಯೆ, ಮಣಿಪುರದಲ್ಲಿ ನೆಲೆಸಿರುವ ಮ್ಯಾನ್ಮಾರ್‌ನಿಂದ ಬಂದ ಅಕ್ರಮ ಕುಕಿ ವಲಸಿಗರನ್ನು ರಕ್ಷಿಸಲು ಮತದಾರರ ಪಟ್ಟಿಯಂತಹ ದಾಖಲೆಗಳನ್ನು ನಾಶಪಡಿಸುವುದು ಕುಕಿಗಳ “ಹಿಡನ್ ಅಜೆಂಡಾ” ಎಂದು ಮೈತೈ ಸಂಘಟನೆ COCOMI ಹೇಳಿಕೊಂಡಿದೆ.

ಡಿಸಿ ಮತ್ತು ಎಸ್ಪಿ ಕಟ್ಟಡಗಳನ್ನು ಧ್ವಂಸದ ಹಿನ್ನೆಲೆ ಮಣಿಪುರ ಸರ್ಕಾರ ಭಾನುವಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ತ್ರಿವರ್ಣ ಧ್ವಜವನ್ನು ಡಿಸಿ ಕಚೇರಿ ಕಟ್ಟಡದಿಂದ ಅನಧಿಕೃತವಾಗಿ ಹಾರಿಸಲಾಯಿತು ಮತ್ತು ವಿಧ್ವಂಸಕ ಕೃತ್ಯಗಳು, ಅಗ್ನಿಸ್ಪರ್ಶ ಸಂದರ್ಭದಲ್ಲಿ ಅವಮಾನಿಸಲಾಯಿತು. ಜಿಲ್ಲಾಧಿಕಾರಿ ಧರುಣ್ ಕುಮಾರ್   ಜೀವ ಮತ್ತು ಆಸ್ತಿ ನಷ್ಟಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ರಂಜನ್ ಯುಮ್ನಮ್ ಹೇಳಿದ್ದಾರೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...