Homeಮುಖಪುಟಮಣಿಪುರ: ಸರಕಾರಿ ಕಚೇರಿಗಳನ್ನು ಬಲವಂತದಿಂದ ಬಂದ್‌ ಮಾಡಿಸುತ್ತಿರುವ ಕುಕಿ ಗುಂಪು

ಮಣಿಪುರ: ಸರಕಾರಿ ಕಚೇರಿಗಳನ್ನು ಬಲವಂತದಿಂದ ಬಂದ್‌ ಮಾಡಿಸುತ್ತಿರುವ ಕುಕಿ ಗುಂಪು

- Advertisement -
- Advertisement -

ಪೊಲೀಸ್ ಪೇದೆಯೊಬ್ಬರ ಅಮಾನತು ಹಿಂಪಡೆಯಲು ನೀಡಿದ ಗಡುವು ಅಂತ್ಯಗೊಂಡಿರುವುದರಿಂದ ಚುರಾಚಂದ್‌ಪುರ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳನ್ನು ಇಂದಿನಿಂದ ಬಲವಂತವಾಗಿ ಬಂದ್‌ ಮಾಡಲಾಗುವುದು ಎಂದು ಸಂಘರ್ಷ ಪೀಡಿತ ಮಣಿಪುರದ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ಐಟಿಎಲ್‌ಎಫ್) ಹೇಳಿಕೊಂಡಿದೆ.

ರಾಜ್ಯ ಗೃಹ ಇಲಾಖೆಯು ಎಲ್ಲಾ ಉದ್ಯೋಗಿಗಳಿಗೆ ಕುಕಿ ಸಂಘಟನೆಯ ಆದೇಶವನ್ನು ಅನುಸರಿಸದಂತೆ  ಕೇಳಿಕೊಂಡಿದೆ. ಕರ್ತವ್ಯಗಳಿಗೆ ಹಾಜರಾಗದವರ ವಿರುದ್ಧ “ನೋ ವರ್ಕ್‌ ನೋ ಪೇ” ಮಾನದಂಡಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದೆ.

ITLF ಅಧ್ಯಕ್ಷ ಪಗಿನ್ ಹಾಕಿಪ್ ಮತ್ತು ಕಾರ್ಯದರ್ಶಿ ಹ್ಯೂಮನ್ ಟಾಂಬಿಂಗ್ ಈ ಕುರಿತು ಹೇಳಿಕೆಯನ್ನು ನೀಡಿದ್ದು, ಚುರಾಚಂದ್‌ಪುರ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಕಚೇರಿಗೆ ಹೋಗದಂತೆ ಕೇಳಿಕೊಂಡಿದ್ದಾರೆ. ಕಚೇರಿಯಲ್ಲಿ ಯಾರಾದರೂ ಕಂಡರೆ, ಏನಾದರೂ ಅನಾಹುತ ಸಂಭವಿಸಿದಲ್ಲಿ ಅವರೇ ಹೊಣೆಗಾರರು ಎಂದು ಹೇಳಿಕೊಂಡಿದ್ದರು.

ಕುಕಿ ಸಮುದಾಯಕ್ಕೆ ಸೇರಿದ ಕಾನ್‌ಸ್ಟೆಬಲ್ ಸಿಯಾಮ್‌ಲಾಲ್‌, ಶಸ್ತ್ರಧಾರಿ ಕುಕಿ ವ್ಯಕ್ತಿಯೊಂದಿಗೆ ಪೋಟೋ ತೆಗೆಸಿಕೊಂಡಿದ್ದರು ಎನ್ನಲಾಗಿದ್ದು, ಈ ಕಾರಣಕ್ಕೆ ಸಿಯಾಮ್‌ಲಾಲ್‌ ಅವರನ್ನು ಅಮಾನತು ಮಾಡಲಾಗಿತ್ತು. ಇದನ್ನು ಖಂಡಿಸಿ ಕುಕಿ ಸಮುದಾಯದವರು ಗುರುವಾರ ನಡೆಸಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಈ ವೇಳೆ ಇಬ್ಬರ ಹತ್ಯೆ ನಡೆದಿದೆ.  ಇಬ್ಬರು ಕುಕಿಗಳ ಹತ್ಯೆಗೆ ಅವರನ್ನು ಹೊಣೆಗಾರರನ್ನಾಗಿ ಮಾಡಿ ಚುರಚಂದ್‌ಪುರವನ್ನು ತೊರೆಯಲು ಉಪ ಆಯುಕ್ತ ಎಸ್ ಧರುಣ್ ಕುಮಾರ್ ಮತ್ತು ಎಸ್‌ಪಿ ಶಿವಾನಂದ್ ಸುರ್ವೆ ಅವರಿಗೆ ಐಟಿಎಲ್‌ಎಫ್ ಶುಕ್ರವಾರ 24 ಗಂಟೆಗಳ ಗಡುವನ್ನು ನೀಡಿದೆ. ಪೇದೆಯನ್ನು ಅಮಾನತುಗೊಳಿಸಿದ ಆದೇಶ ಹಿಂಪಡೆಯದ ಕಾರಣ ಗುಂಪು ಡಿಸಿ ಮತ್ತು ಎಸ್ಪಿ ಕಚೇರಿಗೆ ನುಗ್ಗಿ ಬೆಂಕಿ ಹಚ್ಚಿತ್ತು.

ಸಶಸ್ತ್ರ ಮೈತೈ ಗುಂಪುಗಳೊಂದಿಗೆ ಛಾಯಾಚಿತ್ರಗಳನ್ನು ತೆಗೆಸಿಕೊಂಡಿರುವ ಅರಾಂಬೈ ಟೆಂಗೋಲ್‌ನಂತಹ ಮೈತೈ ಪೊಲೀಸ್ ಸಿಬ್ಬಂದಿ ವಿರುದ್ಧ ರಾಜ್ಯ ಸರ್ಕಾರವು ಕ್ರಮ ಕೈಗೊಂಡಿಲ್ಲ ಎಂದು ITLF ಆರೋಪಿಸಿದೆ. ಈ ಹಿಂದೆ ಘೋಷಿಸಿದಂತೆ, ಲಂಕಾ ಜಿಲ್ಲೆಯ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳನ್ನು ಸೋಮವಾರ ಮುಚ್ಚಲಾಗುವುದು ಎಂದು ಐಟಿಎಲ್ಎಫ್ ಹೇಳಿಕೆ ತಿಳಿಸಿದೆ. ಕುಕಿ ಗುಂಪುಗಳು ಚುರಾಚಂದ್‌ಪುರವನ್ನು ಲಮ್ಕಾ ಎಂದು ಮರುನಾಮಕರಣ ಮಾಡಿದ್ದಾರೆ. ಇದಲ್ಲದೆ ಹಣಕಾಸು, ವೈದ್ಯಕೀಯ ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಬಂದ್‌ನಿಂದ ವಿನಾಯಿತಿ ನೀಡಲಾಗುವುದು ಎಂದು ITLF ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮಣಿಪುರ ಸಿಎಂ ಎನ್ ಬಿರೇನ್ ಸಿಂಗ್, ಕಾನೂನು ಜಾರಿ ಸಂಸ್ಥೆಗಳು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆಗಳ ಬಗ್ಗೆ ಕಠಿಣವಾಗಿ ವ್ಯವಹರಿಸಲಾಗುವುದು ಮತ್ತು ರಾಜ್ಯ ಸರ್ಕಾರವು ಮೂಕ ಪ್ರೇಕ್ಷಕರಾಗಿ ಉಳಿಯುವುದಿಲ್ಲ ಎಂದು ಹೇಳಿದ್ದಾರೆ.

ಈ ಮಧ್ಯೆ, ಮಣಿಪುರದಲ್ಲಿ ನೆಲೆಸಿರುವ ಮ್ಯಾನ್ಮಾರ್‌ನಿಂದ ಬಂದ ಅಕ್ರಮ ಕುಕಿ ವಲಸಿಗರನ್ನು ರಕ್ಷಿಸಲು ಮತದಾರರ ಪಟ್ಟಿಯಂತಹ ದಾಖಲೆಗಳನ್ನು ನಾಶಪಡಿಸುವುದು ಕುಕಿಗಳ “ಹಿಡನ್ ಅಜೆಂಡಾ” ಎಂದು ಮೈತೈ ಸಂಘಟನೆ COCOMI ಹೇಳಿಕೊಂಡಿದೆ.

ಡಿಸಿ ಮತ್ತು ಎಸ್ಪಿ ಕಟ್ಟಡಗಳನ್ನು ಧ್ವಂಸದ ಹಿನ್ನೆಲೆ ಮಣಿಪುರ ಸರ್ಕಾರ ಭಾನುವಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ತ್ರಿವರ್ಣ ಧ್ವಜವನ್ನು ಡಿಸಿ ಕಚೇರಿ ಕಟ್ಟಡದಿಂದ ಅನಧಿಕೃತವಾಗಿ ಹಾರಿಸಲಾಯಿತು ಮತ್ತು ವಿಧ್ವಂಸಕ ಕೃತ್ಯಗಳು, ಅಗ್ನಿಸ್ಪರ್ಶ ಸಂದರ್ಭದಲ್ಲಿ ಅವಮಾನಿಸಲಾಯಿತು. ಜಿಲ್ಲಾಧಿಕಾರಿ ಧರುಣ್ ಕುಮಾರ್   ಜೀವ ಮತ್ತು ಆಸ್ತಿ ನಷ್ಟಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಲಿದ್ದಾರೆ ಎಂದು ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ರಂಜನ್ ಯುಮ್ನಮ್ ಹೇಳಿದ್ದಾರೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಲೋಪಗಳನ್ನು ಬಿಚ್ಚಿಟ್ಟ ಸತ್ಯಶೋಧನಾ ವರದಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...