Homeಮುಖಪುಟಕುಕಿ-ಜೋ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ದೌರ್ಜನ್ಯಕ್ಕೂ ಮೊದಲು ಪೊಲೀಸರ ಆಶ್ರಯದಲ್ಲಿದ್ದ ಸಂತ್ರಸ್ತೆಯರು!

ಕುಕಿ-ಜೋ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ದೌರ್ಜನ್ಯಕ್ಕೂ ಮೊದಲು ಪೊಲೀಸರ ಆಶ್ರಯದಲ್ಲಿದ್ದ ಸಂತ್ರಸ್ತೆಯರು!

- Advertisement -
- Advertisement -

ಗಲಭೆ ಪೀಡಿತ ಮಣಿಪುರದ ಚುರಾಚಂದ್‌ಪುರದಲ್ಲಿ ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ್ದ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿದ ಘಟನೆ ಕುರಿತು ಆಘಾತಕಾರಿ ಮಾಹಿತಿಯೊಂದು ಬಹಿರಂಗವಾಗಿದ್ದು, ದೌರ್ಜನ್ಯ ನಡೆಯುವುದಕ್ಕೂ ಮೊದಲು ಇಬ್ಬರೂ ಮಹಿಳೆಯರು ಪೊಲೀಸ್ ಜೀಪಿನಲ್ಲಿ ಆಶ್ರಯ ಪಡೆದಿದ್ದರು ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ.

ಘಟನೆ ನಡೆದು ಸುಮಾರು ಒಂದು ವರ್ಷದ ನಂತರ ಇದೀಗ ಇನ್ನಷ್ಟು ಆತಂಕಕಾರಿ ವಿವರಗಳು ಹೊರಬೀಳುತ್ತಿದ್ದು, ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ ಚಾರ್ಜ್‌ಶೀಟ್ ಅನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

ಬಹುಸಂಖ್ಯಾತರ ಮೈತೇಯಿ ಗುಂಪಿನ ಪುರುಷರು ಕುಕಿ-ಜೋಮಿ ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಮೊದಲು ಮತ್ತು ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಮೊದಲು, ಇಬ್ಬರೂ ಪೊಲೀಸರಲ್ಲಿ ಆಶ್ರಯ ಪಡೆದಿದ್ದರು. ರಸ್ತೆಬದಿಯಲ್ಲಿ ಜಿಪ್ಸಿ ನಿಲ್ಲಿಸಿತ್ತಾದರೂ, ವಾಹನವನ್ನು ಪ್ರಾರಂಭಿಸುವಂತೆ ಸಂತ್ರಸ್ತೆಯರು ಮಾಡಿದ ಮನವಿಗೆ ಪೊಲೀಸ್ ಚಾಲಕ ಸ್ಪಂಧಿಸಿಲ್ಲ ಎನ್ನಲಾಗಿದೆ. “ವಾಹನದ ಕೀ ಇಲ್ಲ” ಎಂದು ಹೇಳಿದ್ದಾರೆ ಎನ್ನಲಾಗಿದೆ.

ಪೊಲೀಸ್ ಜಿಪ್ಸಿಯೊಳಗೆ ಇಬ್ಬರು ಪುರುಷ ಸಂತ್ರಸ್ತರು ಸಹ ಇದ್ದರು ಎನ್ನಲಾಗಿದ್ದು, ಸ್ಥಳದಲ್ಲಿದ್ದ ಎಲ್ಲಾ ಪೊಲೀಸರು ಗಲಭೆ ನಂತರ ಅಲ್ಲಿಂದ ಹೊರಟಿದ್ದಾರೆ. ದೊಡ್ಡ ಜನಸಮೂಹವು ಸಂತ್ರಸ್ತರನ್ನು ವಾಹನದಿಂದ ಬಲವಂತವಾಗಿ ಹೊರಗೆಳೆದು, ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ಚುರಾಚಂದ್‌ಪುರದಲ್ಲಿ ನಡೆದ ಮಣಿಪುರದ ಭಯಾನಕ ಘಟನೆಯನ್ನು ಸಿಬಿಐ ತನಿಖೆಯು ಬಹಿರಂಗಪಡಿಸಿದೆ. ಅಕ್ಟೋಬರ್‌ನಲ್ಲಿ ಗುವಾಹಟಿಯ ವಿಶೇಷ ನ್ಯಾಯಾಲಯದಲ್ಲಿ ಆರು ವ್ಯಕ್ತಿಗಳು ಮತ್ತು ಬಾಲಾಪರಾಧಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಒರ್ವ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸ್ ಎಫ್‌ಐಆರ್ ಹೇಳಿತ್ತು. ಮಣಿಪುರ ಪೊಲೀಸರು ಅಪರಾಧ ಸ್ಥಳದಲ್ಲಿ ಉಪಸ್ಥಿತರಿದ್ದರು. ಆದರೆ, ಅವರಿಗೆ ಸಹಾಯ ಮಾಡಲಿಲ್ಲ ಎಂದು  ‘ದಿ ವೈರ್‌’ಗೆ ವರದಿ ಮಾಡಿದೆ.

ಮುಖ್ಯಮಂತ್ರಿ ಬಿರೇನ್ ಸಿಂಗ್ ಸರ್ಕಾರವು ರಾಜ್ಯದಲ್ಲಿನ ಹಿಂಸಾಚಾರದ ಪ್ರಮಾಣ ಮತ್ತು ಪ್ರಕಾರವನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿತು ಮತ್ತು ಘಟನೆ ನಡೆದ ತಿಂಗಳುಗಳ ನಂತರ ಆರೋಪಿಯನ್ನು ಬಂಧಿಸುವ ಘೋರ ವೀಡಿಯೊ, ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಜನಸಮೂಹದಿಂದ ಮೆರವಣಿಗೆ ಮಾಡುವುದನ್ನು ತೋರಿಸುತ್ತದೆ. ಘಟನೆಯ ನಂತರ ಸಂತ್ರಸ್ತೆಯೊಬ್ಬರು ಮಾತನಾಡಿ, “ಮಣಿಪುರದ ಪೊಲೀಸರು ಅಲ್ಲಿ ಹಾಜರಿದ್ದರು. ಆದರೆ, ಅವರು ನಮಗೆ ಸಹಾಯ ಮಾಡಲಿಲ್ಲ” ಎಂದು ಹೇಳಿದ್ದಾರೆ.

“ನಾಲ್ವರು ಪೊಲೀಸರು ಕಾರಿನಲ್ಲಿ ಕುಳಿತು ಹಿಂಸಾಚಾರವನ್ನು ನೋಡುತ್ತಿರುವುದನ್ನು ತಾನು ನೋಡಿದ್ದೇನೆ” ಎಂದು ಮತ್ತೋರ್ವ ಸಂತ್ರಸ್ತೆ ಹೇಳಿದ್ದಾರೆ. “ಅವರು ನಮಗೆ ಸಹಾಯ ಮಾಡಲು ಏನನ್ನೂ ಮಾಡಲಿಲ್ಲ” ಎಂದು ಅವರು ಹೇಳಿದರು. ಈ ಗುಂಪಿನ ದಾಳಿಯಲ್ಲಿ ಆಕೆಯ ತಂದೆ ಮತ್ತು ಸಹೋದರ ಸಾವನ್ನಪ್ಪಿದ್ದಾರೆ.

ಕಳೆದ ವರ್ಷ ಮೇ 3 ರಿಂದ ಇಂಫಾಲ್ ಕಣಿವೆ ಮೂಲದ ಮೈತೇಯಿ ಮತ್ತು ಪಕ್ಕದ ಬೆಟ್ಟಗಳ ಮೂಲದ ಕುಕಿಗಳ ನಡುವಿನ ಜನಾಂಗೀಯ ಕಲಹದಲ್ಲಿ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಏನಿದೆ?

“ಬೆತ್ತಲೆ ಮೆರವಣಿಗೆ ನಂತರ ಇತರ ಸ್ಥಳಗಳಲ್ಲಿ ಹಲವಾರು ಘಟನೆಗಳು ನಡೆದವು. ಮೈತೇಯಿ ಸಮುದಾಯಕ್ಕೆ ಸೇರಿದ ಜನಸಮೂಹವು ಒಂದು ಹಳ್ಳಿಯ ಮೇಲೆ ಮನೆಗಳಿಗೆ ಬೆಂಕಿ ಹಚ್ಚುವ ಮೂಲಕ ದಾಳಿಯನ್ನು ಪ್ರಾರಂಭಿಸಿತು ಮತ್ತು ಅಕ್ಕಪಕ್ಕದ ಹಳ್ಳಿಗಳಲ್ಲಿನ ಕೆಲವು ನಿವಾಸಗಳನ್ನು ಗುರಿಯಾಗಿರಿಸಿಕೊಂಡಿತು. ಗುಂಪು ಉದ್ದೇಶಪೂರ್ವಕವಾಗಿ ಚರ್ಚ್‌ಗೆ ಬೆಂಕಿ ಹಚ್ಚಿದೆ. ಮೇ 4 ರಂದು ಸುತ್ತಮುತ್ತಲಿನ ಗ್ರಾಮಗಳ ಪ್ರಧಾನರು ಮತ್ತು ಇತರ ಸಮುದಾಯದ ಗ್ರಾಮಗಳ ಮುಖ್ಯಸ್ಥರ ಸಭೆ ನಡೆದಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ.

ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದ ಹೊರತಾಗಿಯೂ ಗುಂಪು ಚರ್ಚ್, ಕೆಲವು ಮನೆಗಳು ಮತ್ತು ಹತ್ತಿರದ ಹಳ್ಳಿಗಳನ್ನು ಸುಟ್ಟುಹಾಕಿತು ಎಂದು ಸಿಬಿಐ ಚಾರ್ಜ್‌ಶೀಟ್ ಹೇಳಿದೆ.

“ಭಯದಿಂದ ದೂರುದಾರರು, ಮೂವರು ಸಂತ್ರಸ್ತರು ಮತ್ತು ಇಬ್ಬರು ಪುರುಷರು, ಮತ್ತೊಬ್ಬ ವ್ಯಕ್ತಿ ತನ್ನ ಮಗಳು ಮತ್ತು ಮೊಮ್ಮಗಳೊಂದಿಗೆ ಕಾಡಿಗೆ ಓಡಿಹೋದರು ಎಂದು ತನಿಖೆಯಿಂದ ತಿಳಿದುಬಂದಿದೆ. ಒಂದು ಕುಟುಂಬದ ಸದಸ್ಯರು ಅಡಗಿರುವ ಸ್ಥಳವನ್ನು ಗಮನಿಸಿದ ಜನಸಮೂಹವು ಅವರನ್ನು ನೋಡಿದ ನಂತರ ‘ಜನರು ಇಲ್ಲಿ ಅಡಗಿಕೊಂಡಿದ್ದಾರೆ’ ಎಂದು ಕೂಗಲು ಪ್ರಾರಂಭಿಸಿದರು.

“ದೊಡ್ಡ ಕೊಡಲಿಯನ್ನು ಕೈಯಲ್ಲಿ ಹಿಡಿದುಕೊಂಡಿದ್ದ ಗುಂಪಿನ ಸದಸ್ಯರು ಅವರತ್ತ ಧಾವಿಸಿ, ‘ಚುರಾಚಂದ್‌ಪುರದ ನೀವು ನಮ್ಮನ್ನು ಹೇಗೆ ನಡೆಸಿಕೊಂಡಿದ್ದೀರಿ, ನಾವು ನಿಮಗೆ ಅದೇ ರೀತಿ ಮಾಡುತ್ತೇವೆ’ ಎಂದು ಬೆದರಿಕೆ ಹಾಕಿದರು. ಗುಂಪು ಬಲವಂತವಾಗಿ ಎಲ್ಲರನ್ನು ಎಳೆದು ತಂದು, ಸಂತ್ರಸ್ತರಲ್ಲಿ ಒಬ್ಬರನ್ನು ಮತ್ತು ಆಕೆಯ ಮೊಮ್ಮಗಳನ್ನು ಒಂದು ದಿಕ್ಕಿಗೆ, ಅವರ ತಂದೆ ಮತ್ತು ಅವರ ಗ್ರಾಮದ ಮುಖ್ಯಸ್ಥರನ್ನು ಒಂದು ದಿಕ್ಕಿನಲ್ಲಿ, ಇಬ್ಬರು ಮಹಿಳೆಯರು, ಇಬ್ಬರು ಪುರುಷರನ್ನು ಮತ್ತೊಂದು ದಿಕ್ಕಿನಲ್ಲಿ ಕರೆದೊಯ್ಯುವ ಮೂಲಕ ಕುಟುಂಬದ ಸದಸ್ಯರನ್ನು ಪ್ರತ್ಯೇಕಿಸಿದರು ಎಂದು ಸಿಬಿಐ ಹೇಳಿದೆ.

“ಪೊಲೀಸ್ ಜಿಪ್ಸಿಯನ್ನು ಸಮೀಪಿಸುತ್ತಿರುವಾಗ, ಜನಸಮೂಹವು ಮತ್ತೆ ಸಂತ್ರಸ್ತರನ್ನು ಪ್ರತ್ಯೇಕಿಸಿತು…ಇಬ್ಬರು ಮಹಿಳೆಯರು ಪೊಲೀಸ್ ಜಿಪ್ಸಿಯೊಳಗೆ ಪ್ರವೇಶಿಸುವಲ್ಲಿ ಯಶಸ್ವಿಯಾದರು. ಸಾದಾ ಖಾಕಿ ಸಮವಸ್ತ್ರವನ್ನು ಧರಿಸಿದ ಚಾಲಕನೊಂದಿಗೆ ಇಬ್ಬರು ಪೊಲೀಸರು ಪೊಲೀಸ್ ಜಿಪ್ಸಿಯೊಳಗೆ ಅವರೊಂದಿಗೆ ಇದ್ದರು ಮತ್ತು ಮೂರ್ನಾಲ್ಕು ಪೊಲೀಸರು ಹೊರಗೆ ಇದ್ದರು. ಒಬ್ಬ ಸಂತ್ರಸ್ತ ಪುರುಷನು ವಾಹನವನ್ನು ಪ್ರಾರಂಭಿಸಲು ಪೊಲೀಸರನ್ನು ವಿನಂತಿಸಿದನು. ಆದರೆ, ಪೊಲೀಸ್ ಜಿಪ್ಸಿಯ ಚಾಲಕನು ‘ಯಾವುದೇ ಕೀ ಇಲ್ಲ’ ಎಂದು ಉತ್ತರಿಸಿದನು” ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ ಎಂದು ವರದಿಯಾಗಿದೆ.

ಸಂತ್ರಸ್ತರು ಪೊಲೀಸರ ಬಳಿ ಸಹಾಯ ಮಾಡುವಂತೆ ಮತ್ತು ಜನಸಮೂಹದಿಂದ ಹಲ್ಲೆಗೊಳಗಾದ ವ್ಯಕ್ತಿಯನ್ನು ರಕ್ಷಿಸುವಂತೆ ಪದೇ ಪದೇ ಬೇಡಿಕೊಳ್ಳುತ್ತಿದ್ದರು. ಆದರೆ ‘ಪೊಲೀಸರು ಅವರಿಗೆ ಸಹಾಯ ಮಾಡಲಿಲ್ಲ’ ಎಂದು ಸಿಬಿಐ ಆರೋಪಪಟ್ಟಿಯಲ್ಲಿ ಹೇಳಿದೆ.

ಇದನ್ನೂ ಓದಿ; ಬ್ರಿಟನ್‌ನಲ್ಲಿರುವ ಶೇ.52ರಷ್ಟು ಭಾರತೀಯರು ಪ್ರಧಾನಿ ಮೋದಿ ಬಗ್ಗೆ ನಕಾರಾತ್ಮಕ ದೃಷ್ಟಿಕೋನ ಹೊಂದಿದ್ದಾರೆ ಎಂದ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...