Homeಮುಖಪುಟಮಣಿಪುರದಲ್ಲಿ ಹಿಂಸಾಚಾರ ತಡೆಯಲು ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

ಮಣಿಪುರದಲ್ಲಿ ಹಿಂಸಾಚಾರ ತಡೆಯಲು ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

- Advertisement -
- Advertisement -

ಮಣಿಪುರದ ಕುಕಿ ಬುಡಕಟ್ಟಿನ ಮಹಿಳೆಯರು ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಡೆಯುವಂತೆ ಮನವಿಯ ಫಲಕಗಳನ್ನು ಹಿಡಿದು ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಪ್ರತಿಭಟನಾಕಾರರು, ”ಶಾಂತಿ ಮರುಸ್ಥಾಪಿಸಲಾಗುವುದು ಎಂದು ಅವರು ಭರವಸೆ ನೀಡಿದರು ಆದರೆ ಮಣಿಪುರದಲ್ಲಿ ನಮ್ಮ ಸಮುದಾಯದ ಮೇಲೆ ದಾಳಿಗಳು ಮುಂದುವರೆಯುತ್ತಲೇ ಇವೆ. ನಮ್ಮವರ ಜೀವಗಳು ಅಪಾಯದಲ್ಲಿದೆ. ಗೃಹ ಸಚಿವ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾತ್ರ ನಮಗೆ ಸಹಾಯ ಮಾಡಬೇಕು” ಎಂದು ಹೇಳಿದರು.

ಮಣಿಪುರದಲ್ಲಿ ಭದ್ರತಾ ಪಡೆಗಳು ಮತ್ತು ದಂಗೆಕೋರರ ನಡುವಿನ ಗುಂಡಿನ ಕಾಳಗದಲ್ಲಿ ಮಂಗಳವಾರ ಮುಂಜಾನೆ ಒಬ್ಬ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಸೇನೆಯು ತಿಳಿಸಿದೆ, ಕಾರ್ಯಾಚರಣೆಯಲ್ಲಿ ಅನೇಕ ಬಂಡುಕೋರರನ್ನು ಕೊಲ್ಲಲಾಯಿತು ಎಮದು ಹೇಳಲಾಗಿದೆ.

ಮ್ಯಾನ್ಮಾರ್‌ನ ಗಡಿಯಲ್ಲಿರುವ ಈಶಾನ್ಯ ರಾಜ್ಯವು ಕಳೆದ ಕೆಲವು ವಾರಗಳಲ್ಲಿ ಉದ್ವಿಗ್ನವಾಗಿದೆ, ಗಲಭೆಗಳು ಮತ್ತು ಜನಾಂಗೀಯ ಘರ್ಷಣೆಗಳು ಮೇ ಆರಂಭದಿಂದ ಇಲ್ಲಿಯವರೆಗೆ ಕನಿಷ್ಠ 80 ಜನರು ಸಾವಿಗೀಡಾಗಿದ್ದಾರೆ. 35,000 ಜನರನ್ನು ಸ್ಥಳಾಂತರಿಸಿವೆ. ಕಳೆದ ತಿಂಗಳು ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ ನಂತರ 30ಕ್ಕೂ ಹೆಚ್ಚು ದಂಗೆಕೋರರು ಸಾವಿಗೀಡಾದರು.

”ಜೂನ್ 05/06 ರ ರಾತ್ರಿಯಿಡೀ ಭದ್ರತಾ ಪಡೆಗಳು ಮತ್ತು ದಂಗೆಕೋರರ ಗುಂಪಿನ ನಡುವೆ ಗುಂಡಿನ ದಾಳಿ ನಡೆದಿದೆ. ಭದ್ರತಾ ಪಡೆಗಳು ಅವರ ವಿರುದ್ದ ಪರಿಣಾಮಕಾರಿಯಾಗಿ ಪ್ರತೀಕಾರ ತೀರಿಸಿಕೊಂಡವು” ಎಂದು ಭಾರತೀಯ ಸೇನೆಯು ಟ್ವಿಟರ್‌ನಲ್ಲಿ ತಿಳಿಸಿದೆ.

ಗಡಿ ಭದ್ರತಾ ಪಡೆಯ ಒಬ್ಬ ಯೋಧ ಸಾವನ್ನಪ್ಪಿದ್ದು, ಭಾರತದ ಈಶಾನ್ಯ ಭಾಗದಲ್ಲಿ ಅರೆಸೇನಾ ಪಡೆ ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ. ”ಶೋಧನಾ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ” ಎಂದು ಸೇನೆ ಹೇಳಿದೆ.

ಇದನ್ನೂ ಓದಿ: ಪರಿಶಿಷ್ಟ ಪಂಗಡಕ್ಕೆ ಮೈತಿ ಸಮುದಾಯ ಸೇರಿಸುವ ವಿಚಾರ; ಮಣಿಪುರ ಹೈಕೋರ್ಟ್ ಆದೇಶ ವಾಸ್ತವವಾಗಿ ತಪ್ಪು ಎಂದ ಸುಪ್ರೀಂ

ಹಿಂಸಾಚಾರಕ್ಕೆ ಕಾರಣವೇನು?

ಮೇ 3ರಂದು ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತು, ಮೈತಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ವಿರೋಧಿಸಿ ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.

ಪ್ರತಿಭಟನಾಕಾರರಲ್ಲಿ ಮಣಿಪುರದ ದೊಡ್ಡ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಕುಕಿಗಳು ಸೇರಿದ್ದಾರೆ. ಅವರು ರಾಜ್ಯ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ ಮತ್ತು ನಿರ್ದಿಷ್ಟವಾಗಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಮೈತಿ ಸಮುದಾಯದ ಪರವಾಗಿದ್ದಾರೆ ಎಂದು ಸಮುದಾಯವು ಹೇಳಿಕೊಳ್ಳುತ್ತದೆ. ಈ ಘರ್ಷಣೆಯಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದ ಜನಸಂಖ್ಯೆಯ 60% ರಷ್ಟಿರುವ ಮೈತಿ ಸಮುದಾಯದ ಸದಸ್ಯರು ಹೆಚ್ಚಾಗಿ ಇಂಫಾಲ್ ಕಣಿವೆಯಲ್ಲಿ ಕೇಂದ್ರೀಕೃತರಾಗಿದ್ದಾರೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳಿಂದ ದೊಡ್ಡ ಪ್ರಮಾಣದ ಅಕ್ರಮ ವಲಸೆಯಿಂದಾಗಿ ತೊಂದರೆಗಳನ್ನು ಎದುರಿಸುತ್ತಿದೆ ಎಂದು ಸಮುದಾಯವು ಹೇಳಿಕೊಂಡಿದೆ. ಕಾನೂನಿನ ಪ್ರಕಾರ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಮೈಟೀಸ್‌ಗೆ ನೆಲೆಸಲು ಅವಕಾಶವಿಲ್ಲ.

ಮಣಿಪುರದ ಬುಡಕಟ್ಟು ಬೆಟ್ಟದ ಜಿಲ್ಲೆಗಳು ಸಂವಿಧಾನದ ಆರ್ಟಿಕಲ್ 371C ಅಡಿಯಲ್ಲಿ ವಿಶೇಷ ರಕ್ಷಣೆಗಳನ್ನು ಅನುಭವಿಸುತ್ತವೆ, ಅದು ಜಿಲ್ಲೆಗಳ ಮೇಲೆ ಪರಿಣಾಮ ಬೀರುವ ಎಲ್ಲಾ ಕಾನೂನುಗಳನ್ನು ಮಣಿಪುರ ವಿಧಾನಸಭೆಯ ಗುಡ್ಡಗಾಡು ಪ್ರದೇಶಗಳ ಸಮಿತಿಯು ಪರಿಶೀಲಿಸಬೇಕು ಎಂದು ಹೇಳುತ್ತದೆ.

ವಿಶ್ವಾಸ ಹೆಚ್ಚಿಸುವ ಕ್ರಮಗಳ ಭಾಗವಾಗಿ ಕಳೆದ ವಾರ ನಾಲ್ಕು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರು ಎಲ್ಲಾ ಸಮುದಾಯಗಳ ಪ್ರತಿನಿಧಿಗಳು ಮತ್ತು ಮುಖಂಡರನ್ನು ಭೇಟಿಯಾಗಿದ್ದರು.

ಮಣಿಪುರದ ಶಾಂತಿ ಮತ್ತು ಸಮೃದ್ಧಿಯು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ ಮತ್ತು ಶಾಂತಿ ಕದಡುವ ಯಾವುದೇ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ಎದುರಿಸಲು ಭದ್ರತಾ ಪಡೆಗಳಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...