Homeಮುಖಪುಟಮಣಿಪುರದಲ್ಲಿ ಹಿಂಸಾಚಾರ ತಡೆಯಲು ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

ಮಣಿಪುರದಲ್ಲಿ ಹಿಂಸಾಚಾರ ತಡೆಯಲು ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

- Advertisement -
- Advertisement -

ಮಣಿಪುರದ ಕುಕಿ ಬುಡಕಟ್ಟಿನ ಮಹಿಳೆಯರು ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಡೆಯುವಂತೆ ಮನವಿಯ ಫಲಕಗಳನ್ನು ಹಿಡಿದು ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಪ್ರತಿಭಟನಾಕಾರರು, ”ಶಾಂತಿ ಮರುಸ್ಥಾಪಿಸಲಾಗುವುದು ಎಂದು ಅವರು ಭರವಸೆ ನೀಡಿದರು ಆದರೆ ಮಣಿಪುರದಲ್ಲಿ ನಮ್ಮ ಸಮುದಾಯದ ಮೇಲೆ ದಾಳಿಗಳು ಮುಂದುವರೆಯುತ್ತಲೇ ಇವೆ. ನಮ್ಮವರ ಜೀವಗಳು ಅಪಾಯದಲ್ಲಿದೆ. ಗೃಹ ಸಚಿವ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾತ್ರ ನಮಗೆ ಸಹಾಯ ಮಾಡಬೇಕು” ಎಂದು ಹೇಳಿದರು.

ಮಣಿಪುರದಲ್ಲಿ ಭದ್ರತಾ ಪಡೆಗಳು ಮತ್ತು ದಂಗೆಕೋರರ ನಡುವಿನ ಗುಂಡಿನ ಕಾಳಗದಲ್ಲಿ ಮಂಗಳವಾರ ಮುಂಜಾನೆ ಒಬ್ಬ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಸೇನೆಯು ತಿಳಿಸಿದೆ, ಕಾರ್ಯಾಚರಣೆಯಲ್ಲಿ ಅನೇಕ ಬಂಡುಕೋರರನ್ನು ಕೊಲ್ಲಲಾಯಿತು ಎಮದು ಹೇಳಲಾಗಿದೆ.

ಮ್ಯಾನ್ಮಾರ್‌ನ ಗಡಿಯಲ್ಲಿರುವ ಈಶಾನ್ಯ ರಾಜ್ಯವು ಕಳೆದ ಕೆಲವು ವಾರಗಳಲ್ಲಿ ಉದ್ವಿಗ್ನವಾಗಿದೆ, ಗಲಭೆಗಳು ಮತ್ತು ಜನಾಂಗೀಯ ಘರ್ಷಣೆಗಳು ಮೇ ಆರಂಭದಿಂದ ಇಲ್ಲಿಯವರೆಗೆ ಕನಿಷ್ಠ 80 ಜನರು ಸಾವಿಗೀಡಾಗಿದ್ದಾರೆ. 35,000 ಜನರನ್ನು ಸ್ಥಳಾಂತರಿಸಿವೆ. ಕಳೆದ ತಿಂಗಳು ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ ನಂತರ 30ಕ್ಕೂ ಹೆಚ್ಚು ದಂಗೆಕೋರರು ಸಾವಿಗೀಡಾದರು.

”ಜೂನ್ 05/06 ರ ರಾತ್ರಿಯಿಡೀ ಭದ್ರತಾ ಪಡೆಗಳು ಮತ್ತು ದಂಗೆಕೋರರ ಗುಂಪಿನ ನಡುವೆ ಗುಂಡಿನ ದಾಳಿ ನಡೆದಿದೆ. ಭದ್ರತಾ ಪಡೆಗಳು ಅವರ ವಿರುದ್ದ ಪರಿಣಾಮಕಾರಿಯಾಗಿ ಪ್ರತೀಕಾರ ತೀರಿಸಿಕೊಂಡವು” ಎಂದು ಭಾರತೀಯ ಸೇನೆಯು ಟ್ವಿಟರ್‌ನಲ್ಲಿ ತಿಳಿಸಿದೆ.

ಗಡಿ ಭದ್ರತಾ ಪಡೆಯ ಒಬ್ಬ ಯೋಧ ಸಾವನ್ನಪ್ಪಿದ್ದು, ಭಾರತದ ಈಶಾನ್ಯ ಭಾಗದಲ್ಲಿ ಅರೆಸೇನಾ ಪಡೆ ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ. ”ಶೋಧನಾ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ” ಎಂದು ಸೇನೆ ಹೇಳಿದೆ.

ಇದನ್ನೂ ಓದಿ: ಪರಿಶಿಷ್ಟ ಪಂಗಡಕ್ಕೆ ಮೈತಿ ಸಮುದಾಯ ಸೇರಿಸುವ ವಿಚಾರ; ಮಣಿಪುರ ಹೈಕೋರ್ಟ್ ಆದೇಶ ವಾಸ್ತವವಾಗಿ ತಪ್ಪು ಎಂದ ಸುಪ್ರೀಂ

ಹಿಂಸಾಚಾರಕ್ಕೆ ಕಾರಣವೇನು?

ಮೇ 3ರಂದು ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತು, ಮೈತಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ವಿರೋಧಿಸಿ ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.

ಪ್ರತಿಭಟನಾಕಾರರಲ್ಲಿ ಮಣಿಪುರದ ದೊಡ್ಡ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಕುಕಿಗಳು ಸೇರಿದ್ದಾರೆ. ಅವರು ರಾಜ್ಯ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ ಮತ್ತು ನಿರ್ದಿಷ್ಟವಾಗಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಮೈತಿ ಸಮುದಾಯದ ಪರವಾಗಿದ್ದಾರೆ ಎಂದು ಸಮುದಾಯವು ಹೇಳಿಕೊಳ್ಳುತ್ತದೆ. ಈ ಘರ್ಷಣೆಯಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದ ಜನಸಂಖ್ಯೆಯ 60% ರಷ್ಟಿರುವ ಮೈತಿ ಸಮುದಾಯದ ಸದಸ್ಯರು ಹೆಚ್ಚಾಗಿ ಇಂಫಾಲ್ ಕಣಿವೆಯಲ್ಲಿ ಕೇಂದ್ರೀಕೃತರಾಗಿದ್ದಾರೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳಿಂದ ದೊಡ್ಡ ಪ್ರಮಾಣದ ಅಕ್ರಮ ವಲಸೆಯಿಂದಾಗಿ ತೊಂದರೆಗಳನ್ನು ಎದುರಿಸುತ್ತಿದೆ ಎಂದು ಸಮುದಾಯವು ಹೇಳಿಕೊಂಡಿದೆ. ಕಾನೂನಿನ ಪ್ರಕಾರ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಮೈಟೀಸ್‌ಗೆ ನೆಲೆಸಲು ಅವಕಾಶವಿಲ್ಲ.

ಮಣಿಪುರದ ಬುಡಕಟ್ಟು ಬೆಟ್ಟದ ಜಿಲ್ಲೆಗಳು ಸಂವಿಧಾನದ ಆರ್ಟಿಕಲ್ 371C ಅಡಿಯಲ್ಲಿ ವಿಶೇಷ ರಕ್ಷಣೆಗಳನ್ನು ಅನುಭವಿಸುತ್ತವೆ, ಅದು ಜಿಲ್ಲೆಗಳ ಮೇಲೆ ಪರಿಣಾಮ ಬೀರುವ ಎಲ್ಲಾ ಕಾನೂನುಗಳನ್ನು ಮಣಿಪುರ ವಿಧಾನಸಭೆಯ ಗುಡ್ಡಗಾಡು ಪ್ರದೇಶಗಳ ಸಮಿತಿಯು ಪರಿಶೀಲಿಸಬೇಕು ಎಂದು ಹೇಳುತ್ತದೆ.

ವಿಶ್ವಾಸ ಹೆಚ್ಚಿಸುವ ಕ್ರಮಗಳ ಭಾಗವಾಗಿ ಕಳೆದ ವಾರ ನಾಲ್ಕು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರು ಎಲ್ಲಾ ಸಮುದಾಯಗಳ ಪ್ರತಿನಿಧಿಗಳು ಮತ್ತು ಮುಖಂಡರನ್ನು ಭೇಟಿಯಾಗಿದ್ದರು.

ಮಣಿಪುರದ ಶಾಂತಿ ಮತ್ತು ಸಮೃದ್ಧಿಯು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ ಮತ್ತು ಶಾಂತಿ ಕದಡುವ ಯಾವುದೇ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ಎದುರಿಸಲು ಭದ್ರತಾ ಪಡೆಗಳಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...