Homeಮುಖಪುಟಮಣಿಪುರದಲ್ಲಿ ಹಿಂಸಾಚಾರ ತಡೆಯಲು ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

ಮಣಿಪುರದಲ್ಲಿ ಹಿಂಸಾಚಾರ ತಡೆಯಲು ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

- Advertisement -
- Advertisement -

ಮಣಿಪುರದ ಕುಕಿ ಬುಡಕಟ್ಟಿನ ಮಹಿಳೆಯರು ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಡೆಯುವಂತೆ ಮನವಿಯ ಫಲಕಗಳನ್ನು ಹಿಡಿದು ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಪ್ರತಿಭಟನಾಕಾರರು, ”ಶಾಂತಿ ಮರುಸ್ಥಾಪಿಸಲಾಗುವುದು ಎಂದು ಅವರು ಭರವಸೆ ನೀಡಿದರು ಆದರೆ ಮಣಿಪುರದಲ್ಲಿ ನಮ್ಮ ಸಮುದಾಯದ ಮೇಲೆ ದಾಳಿಗಳು ಮುಂದುವರೆಯುತ್ತಲೇ ಇವೆ. ನಮ್ಮವರ ಜೀವಗಳು ಅಪಾಯದಲ್ಲಿದೆ. ಗೃಹ ಸಚಿವ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾತ್ರ ನಮಗೆ ಸಹಾಯ ಮಾಡಬೇಕು” ಎಂದು ಹೇಳಿದರು.

ಮಣಿಪುರದಲ್ಲಿ ಭದ್ರತಾ ಪಡೆಗಳು ಮತ್ತು ದಂಗೆಕೋರರ ನಡುವಿನ ಗುಂಡಿನ ಕಾಳಗದಲ್ಲಿ ಮಂಗಳವಾರ ಮುಂಜಾನೆ ಒಬ್ಬ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಸೇನೆಯು ತಿಳಿಸಿದೆ, ಕಾರ್ಯಾಚರಣೆಯಲ್ಲಿ ಅನೇಕ ಬಂಡುಕೋರರನ್ನು ಕೊಲ್ಲಲಾಯಿತು ಎಮದು ಹೇಳಲಾಗಿದೆ.

ಮ್ಯಾನ್ಮಾರ್‌ನ ಗಡಿಯಲ್ಲಿರುವ ಈಶಾನ್ಯ ರಾಜ್ಯವು ಕಳೆದ ಕೆಲವು ವಾರಗಳಲ್ಲಿ ಉದ್ವಿಗ್ನವಾಗಿದೆ, ಗಲಭೆಗಳು ಮತ್ತು ಜನಾಂಗೀಯ ಘರ್ಷಣೆಗಳು ಮೇ ಆರಂಭದಿಂದ ಇಲ್ಲಿಯವರೆಗೆ ಕನಿಷ್ಠ 80 ಜನರು ಸಾವಿಗೀಡಾಗಿದ್ದಾರೆ. 35,000 ಜನರನ್ನು ಸ್ಥಳಾಂತರಿಸಿವೆ. ಕಳೆದ ತಿಂಗಳು ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ ನಂತರ 30ಕ್ಕೂ ಹೆಚ್ಚು ದಂಗೆಕೋರರು ಸಾವಿಗೀಡಾದರು.

”ಜೂನ್ 05/06 ರ ರಾತ್ರಿಯಿಡೀ ಭದ್ರತಾ ಪಡೆಗಳು ಮತ್ತು ದಂಗೆಕೋರರ ಗುಂಪಿನ ನಡುವೆ ಗುಂಡಿನ ದಾಳಿ ನಡೆದಿದೆ. ಭದ್ರತಾ ಪಡೆಗಳು ಅವರ ವಿರುದ್ದ ಪರಿಣಾಮಕಾರಿಯಾಗಿ ಪ್ರತೀಕಾರ ತೀರಿಸಿಕೊಂಡವು” ಎಂದು ಭಾರತೀಯ ಸೇನೆಯು ಟ್ವಿಟರ್‌ನಲ್ಲಿ ತಿಳಿಸಿದೆ.

ಗಡಿ ಭದ್ರತಾ ಪಡೆಯ ಒಬ್ಬ ಯೋಧ ಸಾವನ್ನಪ್ಪಿದ್ದು, ಭಾರತದ ಈಶಾನ್ಯ ಭಾಗದಲ್ಲಿ ಅರೆಸೇನಾ ಪಡೆ ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ. ”ಶೋಧನಾ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ” ಎಂದು ಸೇನೆ ಹೇಳಿದೆ.

ಇದನ್ನೂ ಓದಿ: ಪರಿಶಿಷ್ಟ ಪಂಗಡಕ್ಕೆ ಮೈತಿ ಸಮುದಾಯ ಸೇರಿಸುವ ವಿಚಾರ; ಮಣಿಪುರ ಹೈಕೋರ್ಟ್ ಆದೇಶ ವಾಸ್ತವವಾಗಿ ತಪ್ಪು ಎಂದ ಸುಪ್ರೀಂ

ಹಿಂಸಾಚಾರಕ್ಕೆ ಕಾರಣವೇನು?

ಮೇ 3ರಂದು ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತು, ಮೈತಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ವಿರೋಧಿಸಿ ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.

ಪ್ರತಿಭಟನಾಕಾರರಲ್ಲಿ ಮಣಿಪುರದ ದೊಡ್ಡ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಕುಕಿಗಳು ಸೇರಿದ್ದಾರೆ. ಅವರು ರಾಜ್ಯ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ ಮತ್ತು ನಿರ್ದಿಷ್ಟವಾಗಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಮೈತಿ ಸಮುದಾಯದ ಪರವಾಗಿದ್ದಾರೆ ಎಂದು ಸಮುದಾಯವು ಹೇಳಿಕೊಳ್ಳುತ್ತದೆ. ಈ ಘರ್ಷಣೆಯಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದ ಜನಸಂಖ್ಯೆಯ 60% ರಷ್ಟಿರುವ ಮೈತಿ ಸಮುದಾಯದ ಸದಸ್ಯರು ಹೆಚ್ಚಾಗಿ ಇಂಫಾಲ್ ಕಣಿವೆಯಲ್ಲಿ ಕೇಂದ್ರೀಕೃತರಾಗಿದ್ದಾರೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳಿಂದ ದೊಡ್ಡ ಪ್ರಮಾಣದ ಅಕ್ರಮ ವಲಸೆಯಿಂದಾಗಿ ತೊಂದರೆಗಳನ್ನು ಎದುರಿಸುತ್ತಿದೆ ಎಂದು ಸಮುದಾಯವು ಹೇಳಿಕೊಂಡಿದೆ. ಕಾನೂನಿನ ಪ್ರಕಾರ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಮೈಟೀಸ್‌ಗೆ ನೆಲೆಸಲು ಅವಕಾಶವಿಲ್ಲ.

ಮಣಿಪುರದ ಬುಡಕಟ್ಟು ಬೆಟ್ಟದ ಜಿಲ್ಲೆಗಳು ಸಂವಿಧಾನದ ಆರ್ಟಿಕಲ್ 371C ಅಡಿಯಲ್ಲಿ ವಿಶೇಷ ರಕ್ಷಣೆಗಳನ್ನು ಅನುಭವಿಸುತ್ತವೆ, ಅದು ಜಿಲ್ಲೆಗಳ ಮೇಲೆ ಪರಿಣಾಮ ಬೀರುವ ಎಲ್ಲಾ ಕಾನೂನುಗಳನ್ನು ಮಣಿಪುರ ವಿಧಾನಸಭೆಯ ಗುಡ್ಡಗಾಡು ಪ್ರದೇಶಗಳ ಸಮಿತಿಯು ಪರಿಶೀಲಿಸಬೇಕು ಎಂದು ಹೇಳುತ್ತದೆ.

ವಿಶ್ವಾಸ ಹೆಚ್ಚಿಸುವ ಕ್ರಮಗಳ ಭಾಗವಾಗಿ ಕಳೆದ ವಾರ ನಾಲ್ಕು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರು ಎಲ್ಲಾ ಸಮುದಾಯಗಳ ಪ್ರತಿನಿಧಿಗಳು ಮತ್ತು ಮುಖಂಡರನ್ನು ಭೇಟಿಯಾಗಿದ್ದರು.

ಮಣಿಪುರದ ಶಾಂತಿ ಮತ್ತು ಸಮೃದ್ಧಿಯು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ ಮತ್ತು ಶಾಂತಿ ಕದಡುವ ಯಾವುದೇ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ಎದುರಿಸಲು ಭದ್ರತಾ ಪಡೆಗಳಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...