Homeಮುಖಪುಟಮಣಿಪುರದಲ್ಲಿ ಹಿಂಸಾಚಾರ ತಡೆಯಲು ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

ಮಣಿಪುರದಲ್ಲಿ ಹಿಂಸಾಚಾರ ತಡೆಯಲು ಅಮಿತ್ ಶಾ ಮನೆ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

- Advertisement -
- Advertisement -

ಮಣಿಪುರದ ಕುಕಿ ಬುಡಕಟ್ಟಿನ ಮಹಿಳೆಯರು ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಡೆಯುವಂತೆ ಮನವಿಯ ಫಲಕಗಳನ್ನು ಹಿಡಿದು ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಮಾತನಾಡಿದ ಪ್ರತಿಭಟನಾಕಾರರು, ”ಶಾಂತಿ ಮರುಸ್ಥಾಪಿಸಲಾಗುವುದು ಎಂದು ಅವರು ಭರವಸೆ ನೀಡಿದರು ಆದರೆ ಮಣಿಪುರದಲ್ಲಿ ನಮ್ಮ ಸಮುದಾಯದ ಮೇಲೆ ದಾಳಿಗಳು ಮುಂದುವರೆಯುತ್ತಲೇ ಇವೆ. ನಮ್ಮವರ ಜೀವಗಳು ಅಪಾಯದಲ್ಲಿದೆ. ಗೃಹ ಸಚಿವ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾತ್ರ ನಮಗೆ ಸಹಾಯ ಮಾಡಬೇಕು” ಎಂದು ಹೇಳಿದರು.

ಮಣಿಪುರದಲ್ಲಿ ಭದ್ರತಾ ಪಡೆಗಳು ಮತ್ತು ದಂಗೆಕೋರರ ನಡುವಿನ ಗುಂಡಿನ ಕಾಳಗದಲ್ಲಿ ಮಂಗಳವಾರ ಮುಂಜಾನೆ ಒಬ್ಬ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಸೇನೆಯು ತಿಳಿಸಿದೆ, ಕಾರ್ಯಾಚರಣೆಯಲ್ಲಿ ಅನೇಕ ಬಂಡುಕೋರರನ್ನು ಕೊಲ್ಲಲಾಯಿತು ಎಮದು ಹೇಳಲಾಗಿದೆ.

ಮ್ಯಾನ್ಮಾರ್‌ನ ಗಡಿಯಲ್ಲಿರುವ ಈಶಾನ್ಯ ರಾಜ್ಯವು ಕಳೆದ ಕೆಲವು ವಾರಗಳಲ್ಲಿ ಉದ್ವಿಗ್ನವಾಗಿದೆ, ಗಲಭೆಗಳು ಮತ್ತು ಜನಾಂಗೀಯ ಘರ್ಷಣೆಗಳು ಮೇ ಆರಂಭದಿಂದ ಇಲ್ಲಿಯವರೆಗೆ ಕನಿಷ್ಠ 80 ಜನರು ಸಾವಿಗೀಡಾಗಿದ್ದಾರೆ. 35,000 ಜನರನ್ನು ಸ್ಥಳಾಂತರಿಸಿವೆ. ಕಳೆದ ತಿಂಗಳು ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ ನಂತರ 30ಕ್ಕೂ ಹೆಚ್ಚು ದಂಗೆಕೋರರು ಸಾವಿಗೀಡಾದರು.

”ಜೂನ್ 05/06 ರ ರಾತ್ರಿಯಿಡೀ ಭದ್ರತಾ ಪಡೆಗಳು ಮತ್ತು ದಂಗೆಕೋರರ ಗುಂಪಿನ ನಡುವೆ ಗುಂಡಿನ ದಾಳಿ ನಡೆದಿದೆ. ಭದ್ರತಾ ಪಡೆಗಳು ಅವರ ವಿರುದ್ದ ಪರಿಣಾಮಕಾರಿಯಾಗಿ ಪ್ರತೀಕಾರ ತೀರಿಸಿಕೊಂಡವು” ಎಂದು ಭಾರತೀಯ ಸೇನೆಯು ಟ್ವಿಟರ್‌ನಲ್ಲಿ ತಿಳಿಸಿದೆ.

ಗಡಿ ಭದ್ರತಾ ಪಡೆಯ ಒಬ್ಬ ಯೋಧ ಸಾವನ್ನಪ್ಪಿದ್ದು, ಭಾರತದ ಈಶಾನ್ಯ ಭಾಗದಲ್ಲಿ ಅರೆಸೇನಾ ಪಡೆ ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ. ”ಶೋಧನಾ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ” ಎಂದು ಸೇನೆ ಹೇಳಿದೆ.

ಇದನ್ನೂ ಓದಿ: ಪರಿಶಿಷ್ಟ ಪಂಗಡಕ್ಕೆ ಮೈತಿ ಸಮುದಾಯ ಸೇರಿಸುವ ವಿಚಾರ; ಮಣಿಪುರ ಹೈಕೋರ್ಟ್ ಆದೇಶ ವಾಸ್ತವವಾಗಿ ತಪ್ಪು ಎಂದ ಸುಪ್ರೀಂ

ಹಿಂಸಾಚಾರಕ್ಕೆ ಕಾರಣವೇನು?

ಮೇ 3ರಂದು ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತು, ಮೈತಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ವಿರೋಧಿಸಿ ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟವು ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.

ಪ್ರತಿಭಟನಾಕಾರರಲ್ಲಿ ಮಣಿಪುರದ ದೊಡ್ಡ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಕುಕಿಗಳು ಸೇರಿದ್ದಾರೆ. ಅವರು ರಾಜ್ಯ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ ಮತ್ತು ನಿರ್ದಿಷ್ಟವಾಗಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಮೈತಿ ಸಮುದಾಯದ ಪರವಾಗಿದ್ದಾರೆ ಎಂದು ಸಮುದಾಯವು ಹೇಳಿಕೊಳ್ಳುತ್ತದೆ. ಈ ಘರ್ಷಣೆಯಲ್ಲಿ ಕನಿಷ್ಠ 80 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದ ಜನಸಂಖ್ಯೆಯ 60% ರಷ್ಟಿರುವ ಮೈತಿ ಸಮುದಾಯದ ಸದಸ್ಯರು ಹೆಚ್ಚಾಗಿ ಇಂಫಾಲ್ ಕಣಿವೆಯಲ್ಲಿ ಕೇಂದ್ರೀಕೃತರಾಗಿದ್ದಾರೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶಿ ಪ್ರಜೆಗಳಿಂದ ದೊಡ್ಡ ಪ್ರಮಾಣದ ಅಕ್ರಮ ವಲಸೆಯಿಂದಾಗಿ ತೊಂದರೆಗಳನ್ನು ಎದುರಿಸುತ್ತಿದೆ ಎಂದು ಸಮುದಾಯವು ಹೇಳಿಕೊಂಡಿದೆ. ಕಾನೂನಿನ ಪ್ರಕಾರ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಮೈಟೀಸ್‌ಗೆ ನೆಲೆಸಲು ಅವಕಾಶವಿಲ್ಲ.

ಮಣಿಪುರದ ಬುಡಕಟ್ಟು ಬೆಟ್ಟದ ಜಿಲ್ಲೆಗಳು ಸಂವಿಧಾನದ ಆರ್ಟಿಕಲ್ 371C ಅಡಿಯಲ್ಲಿ ವಿಶೇಷ ರಕ್ಷಣೆಗಳನ್ನು ಅನುಭವಿಸುತ್ತವೆ, ಅದು ಜಿಲ್ಲೆಗಳ ಮೇಲೆ ಪರಿಣಾಮ ಬೀರುವ ಎಲ್ಲಾ ಕಾನೂನುಗಳನ್ನು ಮಣಿಪುರ ವಿಧಾನಸಭೆಯ ಗುಡ್ಡಗಾಡು ಪ್ರದೇಶಗಳ ಸಮಿತಿಯು ಪರಿಶೀಲಿಸಬೇಕು ಎಂದು ಹೇಳುತ್ತದೆ.

ವಿಶ್ವಾಸ ಹೆಚ್ಚಿಸುವ ಕ್ರಮಗಳ ಭಾಗವಾಗಿ ಕಳೆದ ವಾರ ನಾಲ್ಕು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರು ಎಲ್ಲಾ ಸಮುದಾಯಗಳ ಪ್ರತಿನಿಧಿಗಳು ಮತ್ತು ಮುಖಂಡರನ್ನು ಭೇಟಿಯಾಗಿದ್ದರು.

ಮಣಿಪುರದ ಶಾಂತಿ ಮತ್ತು ಸಮೃದ್ಧಿಯು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ ಮತ್ತು ಶಾಂತಿ ಕದಡುವ ಯಾವುದೇ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ಎದುರಿಸಲು ಭದ್ರತಾ ಪಡೆಗಳಿಗೆ ಸೂಚನೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...