Homeಮುಖಪುಟಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

- Advertisement -
- Advertisement -

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ “ಕಾನೂನುಬಾಹಿರ ಹತ್ಯೆ”ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ ನೀಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಟೀಕಿಸಿವೆ.

ಸಿಆರ್‌ಪಿಎಫ್‌ 20ನೇ ಬೆಟಾಲಿಯನ್‌ನ ಸಹಾಯಕ ಕಮಾಂಡೆಂಟ್ ವಿಪಿನ್ ವಿಲ್ಸನ್‌ ಅವರಿಗೆ ನೀಡಿರುವ ಪ್ರಶಸ್ತಿಯನ್ನು ಹಿಂತೆಗೆದುಕೊಳ್ಳಬೇಕೆಂದು ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಮತ್ತು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ ಒತ್ತಾಯಿಸಿವೆ.

ಜನವರಿ 25ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಶಸ್ತ್ರ ಪಡೆಗಳ 70 ಸಿಬ್ಬಂದಿಗೆ ಶೌರ್ಯ ಪ್ರಶಸ್ತಿಗಳನ್ನು ಅನುಮೋದಿಸಿದ್ದು, ದೇಶದ ಮೂರನೇ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ ಶೌರ್ಯ ಚಕ್ರವನ್ನು ಪಡೆದ 13 ಸಿಬ್ಬಂದಿಗಳಲ್ಲಿ ವಿಲ್ಸನ್ ಕೂಡ ಒಬ್ಬರು.

ನವೆಂಬರ್ 11, 2024ರಂದು ವಿಲ್ಸನ್ ಮಣಿಪುರದಲ್ಲಿ ದಂಗೆಕೋರರ ಶಿಬಿರದ ದಾಳಿಯನ್ನು ವಿಫಲಗೊಳಿಸಲು ಮತ್ತು ಅವರಲ್ಲಿ 10 ಜನರನ್ನು ತಟಸ್ಥಗೊಳಿಸಲು ಸಿಬ್ಬಂದಿ ತಂಡವನ್ನು ಮುನ್ನಡೆಸಿದ್ದರು. ಅವರ ಅಪ್ರತಿಮ ಧೈರ್ಯಕ್ಕಾಗಿ ಈ ಗಣರಾಜ್ಯೋತ್ಸವದಂದು ಶೌರ್ಯ ಚಕ್ರವನ್ನು ಪ್ರದಾನ ಮಾಡಲಾಗುತ್ತದೆ ಎಂದು ಸಿಆರ್‌ಪಿಎಫ್‌ ಭಾನುವಾರ (ಜ.25) ರಾತ್ರಿ ತಿಳಿಸಿತ್ತು.

ಮಣಿಪುರದ ಜಿರಿಬಮ್ ಜಿಲ್ಲೆಯ ಬೊರೊಬೆಕ್ರಾ ಪ್ರದೇಶದ ಸಿಆರ್‌ಪಿಎಫ್ ಪೋಸ್ಟ್‌ನಲ್ಲಿ ಗುಂಡಿನ ಚಕಮಕಿ ನಡೆದಿತ್ತು. ದಾಳಿಯ ಸಮಯದಲ್ಲಿ, ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದವರು ಶಂಕಿತ ಕುಕಿ ಉಗ್ರಗಾಮಿಗಳು ಎಂದು ಮಣಿಪುರ ಪೊಲೀಸರು ಹೇಳಿಕೊಂಡಿದ್ದರು. ಆದರೆ, ಕುಕಿ-ಝೋ ಸಂಘಟನೆಗಳು ಅವರು ಗ್ರಾಮ ಸ್ವಯಂಸೇವಕರು ಎಂದು ಹೇಳಿಕೊಂಡಿದ್ದವು.

ಮೇ 2023ರಲ್ಲಿ ಕುಕಿ-ಝೋ-ಹ್ಮಾರ್ಸ್ ಮತ್ತು ಮೈತೇಯಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆಗಳು ಭುಗಿಲೆದ್ದಾಗಿನಿಂದ ಗ್ರಾಮಗಳನ್ನು ಕಾಯುತ್ತಿರುವ ಸಶಸ್ತ್ರ ನಾಗರಿಕರಿಗೆ “ಗ್ರಾಮ ಸ್ವಯಂಸೇವಕರು” ಎಂಬ ಪದವನ್ನು ಬಳಸಲಾಗುತ್ತಿದೆ. ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಕನಿಷ್ಠ 260 ಜನರು ಸಾವನ್ನಪ್ಪಿದ್ದಾರೆ ಮತ್ತು 59,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಸೋಮವಾರ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆಯು, ಸಹಾಯಕ ಕಮಾಂಡೆಂಟ್‌ಗೆ ಶೌರ್ಯ ಚಕ್ರವನ್ನು ನೀಡುವ ಕೇಂದ್ರ ಸರ್ಕಾರದ ನಿರ್ಧಾರದಿಂದ ದಿಗ್ಭ್ರಮೆಗೊಂಡಿರುವುದಾಗಿ ಎಂದು ಹೇಳಿದೆ. ಈ ಪ್ರಶಸ್ತಿಯು ಕುಕಿ-ಝೋ ಸಮುದಾಯಕ್ಕೆ ಮಾಡಲಾದ ‘ತಾರತಮ್ಯ ಮತ್ತು ಅನ್ಯಾಯದ ಮುಂದುವರಿಕೆ’ ಎಂದಿದೆ.

ಅಧಿಕಾರಿಗಳು ಆರೋಪಿಸಿದಂತೆ 10 ಗ್ರಾಮ ಸ್ವಯಂಸೇವಕರು ಸಿಆರ್‌ಪಿಎಫ್ ಪೋಸ್ಟ್ ಮೇಲೆ ದಾಳಿ ಮಾಡಲು ಯಾವುದೇ ಕಾರಣವಿಲ್ಲ ಎಂದು ವೇದಿಕೆ ಹೇಳಿದೆ. ಈ ಪುರುಷರು ಹೆಚ್ಚಾಗಿ ದಿನಗೂಲಿ ಕಾರ್ಮಿಕರ ಗುಂಪಾಗಿದ್ದು, ಅವರು ತಮ್ಮ ಜನರನ್ನು ರಕ್ಷಿಸಲು ಸ್ವಯಂಸೇವಕರಾಗಿದ್ದರು. ಪೊಲೀಸರು ಆರೋಪಿಸಿದಂತೆ ತರಬೇತಿ ಪಡೆದ ‘ಉಗ್ರಗಾಮಿಗಳು’ ಅಲ್ಲ ಎಂದು ತಿಳಿಸಿದೆ.

ಸಿಆರ್‌ಪಿಎಫ್ ಪೋಸ್ಟ್ ಮೇಲೆ ದಾಳಿ ಮಾಡಲಾಗಿದೆ ಎಂಬ ಅಧಿಕೃತ ನಿರೂಪಣೆಗೆ ವಿರುದ್ಧವಾಗಿ, ಶವಪರೀಕ್ಷೆ ವರದಿಗಳು ಪುರುಷರಿಗೆ ಹಿಂದಿನಿಂದ ಗುಂಡು ಹಾರಿಸಲಾಗಿದೆ ಎಂದು ಬಹಿರಂಗಪಡಿಸಿವೆ ಎಂದು ವೇದಿಕೆ ಹೇಳಿಕೆಯಲ್ಲಿ ತಿಳಿಸಿದೆ. ತಮ್ಮ ಸಮುದಾಯವನ್ನು ರಕ್ಷಿಸಲು ಪ್ರಯತ್ನಿಸಿದ ಪುರುಷರ ಮೇಲೆ ಮಾತ್ರ ಗುಂಡು ಹಾರಿಸಲು ನಿರ್ಧರಿಸಿದ್ದ ವಿಲ್ಸನ್‌ ಅವರಿಗೆ ಪ್ರಶಸ್ತಿ ನೀಡುವುದನ್ನು ಅದು ಪ್ರಶ್ನಿಸಿದೆ.

ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಕೂಡ ಪ್ರಶಸ್ತಿಯನ್ನು ಖಂಡಿಸಿ, ಈ ಗೌರವವು ರಾಷ್ಟ್ರೀಯ ಹೆಮ್ಮೆಯ ಕಾರ್ಯವಲ್ಲ, ಬದಲಿಗೆ ಕಾನೂನುಬಾಹಿರ ಹತ್ಯೆಗೆ ಸರ್ಕಾರದ ಅನುಮೋದನೆ ಎಂದು ಆರೋಪಿಸಿದೆ.

ವಿಧಿ ವಿಜ್ಞಾನ ವರದಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳು ಸೇರಿದಂತೆ ವಿಶ್ವಾಸಾರ್ಹ ಪುರಾವೆಗಳು, ಬಲಿಪಶುಗಳು ನಿರಾಯುಧರಾಗಿದ್ದರು ಅಥವಾ ಜನಾಂಗೀಯ ಹಿಂಸಾಚಾರದ ಅವಧಿಯಲ್ಲಿ ಸಮುದಾಯ ರಕ್ಷಣಾ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದರು ಎಂಬುವುದಾಗಿ ದೃಢಪಡಿಸುತ್ತದೆ ಎಂದು ಸಂಸ್ಥೆ ಹೇಳಿದೆ.

ಅವರನ್ನು ಉಗ್ರಗಾಮಿಗಳು ಎಂದು ಹಣೆಪಟ್ಟಿ ಕಟ್ಟುವ ಸರ್ಕಾರದ ನಿರೂಪಣೆಯು ಏಕಪಕ್ಷೀಯ, ಅಸಮಾನವಾದ ಮಾರಕ ಬಲಪ್ರಯೋಗವನ್ನು ಸಮರ್ಥಿಸಲು ವಿನ್ಯಾಸಗೊಳಿಸಲಾದ ಕಟ್ಟುಕಥೆಯಾಗಿದೆ. “ಇದು ಎನ್‌ಕೌಂಟರ್ ಅಲ್ಲ, ಮರಣದಂಡನೆ” ಎಂದಿದೆ.

ವಿಲ್ಸನ್‌ ಅವರಿಗೆ ಪ್ರಶಸ್ತಿ ನೀಡಿರುವುದು ಸಾಂವಿಧಾನಿಕ ಮೌಲ್ಯಗಳಿಗೆ ಮಾಡಿದ ಆಳವಾದ ದ್ರೋಹ ಮತ್ತು ಕುಕಿ-ಝೋ ಜನರ ಜೀವನದ ಬಗ್ಗೆ ತಿರಸ್ಕಾರವನ್ನು ಪ್ರದರ್ಶಿಸುತ್ತದೆ ಎಂದು ಸಂಸ್ಥೆ ಅಸಮಾಧಾನ ಹೊರಹಾಕಿದೆ.

ಪ್ರಶಸ್ತಿಯನ್ನು ರದ್ದುಗೊಳಿಸುವುದರ ಜೊತೆಗೆ, ಹತ್ಯೆಯ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖಾ ಸಮಿತಿಯನ್ನು ಸ್ಥಾಪಿಸಬೇಕೆಂದು ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಬೋರ್ಡ್ ಪರೀಕ್ಷೆ ಕಡ್ಡಾಯ, ಪರಿಣಾಮಗಳ ಬಗ್ಗೆ ಎಚ್ಚರಿಕೆ

ನವದೆಹಲಿ: 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಸ್ಪಷ್ಟಪಡಿಸಿದ್ದು, ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸದ ವಿದ್ಯಾರ್ಥಿಗಳು "ಅಗತ್ಯ...

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ವಿಧಾನಸಭೆಯ 2023ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ (ಭಾಗ್ಯನಗರ) ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎನ್‌.ಸುಬ್ಬಾರೆಡ್ಡಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ &ಬೆಂಚ್ ಸೋಮವಾರ (ಫೆ.16) ವರದಿ ಮಾಡಿದೆ. ಸುಬ್ಬಾರೆಡ್ಡಿ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ ; ಮೂವರು ಅಪರಾಧಿಗಳಿಗೆ ಮರಣದಂಡನೆ

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ...

ಶಿವಮೊಗ್ಗ: 40 ಸಾವಿರ ಲಂಚ ಪಡೆಯುತ್ತಿದ್ದ ಕೆಎಎಸ್ ಅಧಿಕಾರಿ ಸೇರಿ ಇಬ್ಬರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು 

ಶಿವಮೊಗ್ಗ: 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ (KAS officer) ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ...

ದ್ವೇಷ ಭಾಷಣ | ಅಸ್ಸಾಂ ಸಿಎಂ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ ; ಹೈಕೋರ್ಟ್‌ಗೆ ಹೋಗಲು ಸೂಚನೆ

ಸಂವಿಧಾನದ 32ನೇ ವಿಧಿಯಡಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ವಿಷಯವಾಗಿ ಗುವಾಹಟಿ ಹೈಕೋರ್ಟ್...

ಕಲಬುರಗಿ| ಅನುಮತಿ ಇಲ್ಲದೆ ಪುರಾತತ್ವ ಇಲಾಖೆ ಕೋಟೆ ಪ್ರವೇಶಕ್ಕೆ ಯತ್ನಿಸಿದ ಪಿಎಸ್‌ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ತಂಡ

ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದ ಗುಂಪೊಂದು ಭಾನುವಾರ ಕಲಬುರಗಿ ಕೋಟೆಗೆ ಮಹಾಶಿವರಾತ್ರಿ ಪೂಜೆ ಮಾಡಲು ಅನುಮತಿಯಿಲ್ಲದೆ ಪ್ರವೇಶಿಸಲು ಯತ್ನಿಸಿದ...

‘ಆರೆಸ್ಸೆಸ್ ಭೂತ, ಬಿಜೆಪಿ ಅದರ ನೆರಳು’: ಆರ್‌ಎಸ್‌ಎಸ್ ನೋಂದಣಿ ಆಗೇ ಆಗುತ್ತೆ, ನಾವು ಮಾಡಿಸುತ್ತೇವೆ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಆರ್‌ಎಸ್‌ಎಸ್ ಮತ್ತು ಅದರ ಸೈದ್ಧಾಂತಿಕ ಸಂತತಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಆರ್‌ಎಸ್‌ಎಸ್ ಇಲ್ಲದೆ ಬಿಜೆಪಿ "ಜೆಡಿ (ಎಸ್) ಗಿಂತ ದುರ್ಬಲವಾಗಿದೆ"...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು...

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...