Homeಮುಖಪುಟಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

- Advertisement -
- Advertisement -

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ “ಕಾನೂನುಬಾಹಿರ ಹತ್ಯೆ”ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ ನೀಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಟೀಕಿಸಿವೆ.

ಸಿಆರ್‌ಪಿಎಫ್‌ 20ನೇ ಬೆಟಾಲಿಯನ್‌ನ ಸಹಾಯಕ ಕಮಾಂಡೆಂಟ್ ವಿಪಿನ್ ವಿಲ್ಸನ್‌ ಅವರಿಗೆ ನೀಡಿರುವ ಪ್ರಶಸ್ತಿಯನ್ನು ಹಿಂತೆಗೆದುಕೊಳ್ಳಬೇಕೆಂದು ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಮತ್ತು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ ಒತ್ತಾಯಿಸಿವೆ.

ಜನವರಿ 25ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಶಸ್ತ್ರ ಪಡೆಗಳ 70 ಸಿಬ್ಬಂದಿಗೆ ಶೌರ್ಯ ಪ್ರಶಸ್ತಿಗಳನ್ನು ಅನುಮೋದಿಸಿದ್ದು, ದೇಶದ ಮೂರನೇ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ ಶೌರ್ಯ ಚಕ್ರವನ್ನು ಪಡೆದ 13 ಸಿಬ್ಬಂದಿಗಳಲ್ಲಿ ವಿಲ್ಸನ್ ಕೂಡ ಒಬ್ಬರು.

ನವೆಂಬರ್ 11, 2024ರಂದು ವಿಲ್ಸನ್ ಮಣಿಪುರದಲ್ಲಿ ದಂಗೆಕೋರರ ಶಿಬಿರದ ದಾಳಿಯನ್ನು ವಿಫಲಗೊಳಿಸಲು ಮತ್ತು ಅವರಲ್ಲಿ 10 ಜನರನ್ನು ತಟಸ್ಥಗೊಳಿಸಲು ಸಿಬ್ಬಂದಿ ತಂಡವನ್ನು ಮುನ್ನಡೆಸಿದ್ದರು. ಅವರ ಅಪ್ರತಿಮ ಧೈರ್ಯಕ್ಕಾಗಿ ಈ ಗಣರಾಜ್ಯೋತ್ಸವದಂದು ಶೌರ್ಯ ಚಕ್ರವನ್ನು ಪ್ರದಾನ ಮಾಡಲಾಗುತ್ತದೆ ಎಂದು ಸಿಆರ್‌ಪಿಎಫ್‌ ಭಾನುವಾರ (ಜ.25) ರಾತ್ರಿ ತಿಳಿಸಿತ್ತು.

ಮಣಿಪುರದ ಜಿರಿಬಮ್ ಜಿಲ್ಲೆಯ ಬೊರೊಬೆಕ್ರಾ ಪ್ರದೇಶದ ಸಿಆರ್‌ಪಿಎಫ್ ಪೋಸ್ಟ್‌ನಲ್ಲಿ ಗುಂಡಿನ ಚಕಮಕಿ ನಡೆದಿತ್ತು. ದಾಳಿಯ ಸಮಯದಲ್ಲಿ, ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದವರು ಶಂಕಿತ ಕುಕಿ ಉಗ್ರಗಾಮಿಗಳು ಎಂದು ಮಣಿಪುರ ಪೊಲೀಸರು ಹೇಳಿಕೊಂಡಿದ್ದರು. ಆದರೆ, ಕುಕಿ-ಝೋ ಸಂಘಟನೆಗಳು ಅವರು ಗ್ರಾಮ ಸ್ವಯಂಸೇವಕರು ಎಂದು ಹೇಳಿಕೊಂಡಿದ್ದವು.

ಮೇ 2023ರಲ್ಲಿ ಕುಕಿ-ಝೋ-ಹ್ಮಾರ್ಸ್ ಮತ್ತು ಮೈತೇಯಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆಗಳು ಭುಗಿಲೆದ್ದಾಗಿನಿಂದ ಗ್ರಾಮಗಳನ್ನು ಕಾಯುತ್ತಿರುವ ಸಶಸ್ತ್ರ ನಾಗರಿಕರಿಗೆ “ಗ್ರಾಮ ಸ್ವಯಂಸೇವಕರು” ಎಂಬ ಪದವನ್ನು ಬಳಸಲಾಗುತ್ತಿದೆ. ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಕನಿಷ್ಠ 260 ಜನರು ಸಾವನ್ನಪ್ಪಿದ್ದಾರೆ ಮತ್ತು 59,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಸೋಮವಾರ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆಯು, ಸಹಾಯಕ ಕಮಾಂಡೆಂಟ್‌ಗೆ ಶೌರ್ಯ ಚಕ್ರವನ್ನು ನೀಡುವ ಕೇಂದ್ರ ಸರ್ಕಾರದ ನಿರ್ಧಾರದಿಂದ ದಿಗ್ಭ್ರಮೆಗೊಂಡಿರುವುದಾಗಿ ಎಂದು ಹೇಳಿದೆ. ಈ ಪ್ರಶಸ್ತಿಯು ಕುಕಿ-ಝೋ ಸಮುದಾಯಕ್ಕೆ ಮಾಡಲಾದ ‘ತಾರತಮ್ಯ ಮತ್ತು ಅನ್ಯಾಯದ ಮುಂದುವರಿಕೆ’ ಎಂದಿದೆ.

ಅಧಿಕಾರಿಗಳು ಆರೋಪಿಸಿದಂತೆ 10 ಗ್ರಾಮ ಸ್ವಯಂಸೇವಕರು ಸಿಆರ್‌ಪಿಎಫ್ ಪೋಸ್ಟ್ ಮೇಲೆ ದಾಳಿ ಮಾಡಲು ಯಾವುದೇ ಕಾರಣವಿಲ್ಲ ಎಂದು ವೇದಿಕೆ ಹೇಳಿದೆ. ಈ ಪುರುಷರು ಹೆಚ್ಚಾಗಿ ದಿನಗೂಲಿ ಕಾರ್ಮಿಕರ ಗುಂಪಾಗಿದ್ದು, ಅವರು ತಮ್ಮ ಜನರನ್ನು ರಕ್ಷಿಸಲು ಸ್ವಯಂಸೇವಕರಾಗಿದ್ದರು. ಪೊಲೀಸರು ಆರೋಪಿಸಿದಂತೆ ತರಬೇತಿ ಪಡೆದ ‘ಉಗ್ರಗಾಮಿಗಳು’ ಅಲ್ಲ ಎಂದು ತಿಳಿಸಿದೆ.

ಸಿಆರ್‌ಪಿಎಫ್ ಪೋಸ್ಟ್ ಮೇಲೆ ದಾಳಿ ಮಾಡಲಾಗಿದೆ ಎಂಬ ಅಧಿಕೃತ ನಿರೂಪಣೆಗೆ ವಿರುದ್ಧವಾಗಿ, ಶವಪರೀಕ್ಷೆ ವರದಿಗಳು ಪುರುಷರಿಗೆ ಹಿಂದಿನಿಂದ ಗುಂಡು ಹಾರಿಸಲಾಗಿದೆ ಎಂದು ಬಹಿರಂಗಪಡಿಸಿವೆ ಎಂದು ವೇದಿಕೆ ಹೇಳಿಕೆಯಲ್ಲಿ ತಿಳಿಸಿದೆ. ತಮ್ಮ ಸಮುದಾಯವನ್ನು ರಕ್ಷಿಸಲು ಪ್ರಯತ್ನಿಸಿದ ಪುರುಷರ ಮೇಲೆ ಮಾತ್ರ ಗುಂಡು ಹಾರಿಸಲು ನಿರ್ಧರಿಸಿದ್ದ ವಿಲ್ಸನ್‌ ಅವರಿಗೆ ಪ್ರಶಸ್ತಿ ನೀಡುವುದನ್ನು ಅದು ಪ್ರಶ್ನಿಸಿದೆ.

ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಕೂಡ ಪ್ರಶಸ್ತಿಯನ್ನು ಖಂಡಿಸಿ, ಈ ಗೌರವವು ರಾಷ್ಟ್ರೀಯ ಹೆಮ್ಮೆಯ ಕಾರ್ಯವಲ್ಲ, ಬದಲಿಗೆ ಕಾನೂನುಬಾಹಿರ ಹತ್ಯೆಗೆ ಸರ್ಕಾರದ ಅನುಮೋದನೆ ಎಂದು ಆರೋಪಿಸಿದೆ.

ವಿಧಿ ವಿಜ್ಞಾನ ವರದಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳು ಸೇರಿದಂತೆ ವಿಶ್ವಾಸಾರ್ಹ ಪುರಾವೆಗಳು, ಬಲಿಪಶುಗಳು ನಿರಾಯುಧರಾಗಿದ್ದರು ಅಥವಾ ಜನಾಂಗೀಯ ಹಿಂಸಾಚಾರದ ಅವಧಿಯಲ್ಲಿ ಸಮುದಾಯ ರಕ್ಷಣಾ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದರು ಎಂಬುವುದಾಗಿ ದೃಢಪಡಿಸುತ್ತದೆ ಎಂದು ಸಂಸ್ಥೆ ಹೇಳಿದೆ.

ಅವರನ್ನು ಉಗ್ರಗಾಮಿಗಳು ಎಂದು ಹಣೆಪಟ್ಟಿ ಕಟ್ಟುವ ಸರ್ಕಾರದ ನಿರೂಪಣೆಯು ಏಕಪಕ್ಷೀಯ, ಅಸಮಾನವಾದ ಮಾರಕ ಬಲಪ್ರಯೋಗವನ್ನು ಸಮರ್ಥಿಸಲು ವಿನ್ಯಾಸಗೊಳಿಸಲಾದ ಕಟ್ಟುಕಥೆಯಾಗಿದೆ. “ಇದು ಎನ್‌ಕೌಂಟರ್ ಅಲ್ಲ, ಮರಣದಂಡನೆ” ಎಂದಿದೆ.

ವಿಲ್ಸನ್‌ ಅವರಿಗೆ ಪ್ರಶಸ್ತಿ ನೀಡಿರುವುದು ಸಾಂವಿಧಾನಿಕ ಮೌಲ್ಯಗಳಿಗೆ ಮಾಡಿದ ಆಳವಾದ ದ್ರೋಹ ಮತ್ತು ಕುಕಿ-ಝೋ ಜನರ ಜೀವನದ ಬಗ್ಗೆ ತಿರಸ್ಕಾರವನ್ನು ಪ್ರದರ್ಶಿಸುತ್ತದೆ ಎಂದು ಸಂಸ್ಥೆ ಅಸಮಾಧಾನ ಹೊರಹಾಕಿದೆ.

ಪ್ರಶಸ್ತಿಯನ್ನು ರದ್ದುಗೊಳಿಸುವುದರ ಜೊತೆಗೆ, ಹತ್ಯೆಯ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖಾ ಸಮಿತಿಯನ್ನು ಸ್ಥಾಪಿಸಬೇಕೆಂದು ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...