Homeಮುಖಪುಟಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

- Advertisement -
- Advertisement -

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ “ಕಾನೂನುಬಾಹಿರ ಹತ್ಯೆ”ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ ನೀಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಟೀಕಿಸಿವೆ.

ಸಿಆರ್‌ಪಿಎಫ್‌ 20ನೇ ಬೆಟಾಲಿಯನ್‌ನ ಸಹಾಯಕ ಕಮಾಂಡೆಂಟ್ ವಿಪಿನ್ ವಿಲ್ಸನ್‌ ಅವರಿಗೆ ನೀಡಿರುವ ಪ್ರಶಸ್ತಿಯನ್ನು ಹಿಂತೆಗೆದುಕೊಳ್ಳಬೇಕೆಂದು ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಮತ್ತು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ ಒತ್ತಾಯಿಸಿವೆ.

ಜನವರಿ 25ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಶಸ್ತ್ರ ಪಡೆಗಳ 70 ಸಿಬ್ಬಂದಿಗೆ ಶೌರ್ಯ ಪ್ರಶಸ್ತಿಗಳನ್ನು ಅನುಮೋದಿಸಿದ್ದು, ದೇಶದ ಮೂರನೇ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ ಶೌರ್ಯ ಚಕ್ರವನ್ನು ಪಡೆದ 13 ಸಿಬ್ಬಂದಿಗಳಲ್ಲಿ ವಿಲ್ಸನ್ ಕೂಡ ಒಬ್ಬರು.

ನವೆಂಬರ್ 11, 2024ರಂದು ವಿಲ್ಸನ್ ಮಣಿಪುರದಲ್ಲಿ ದಂಗೆಕೋರರ ಶಿಬಿರದ ದಾಳಿಯನ್ನು ವಿಫಲಗೊಳಿಸಲು ಮತ್ತು ಅವರಲ್ಲಿ 10 ಜನರನ್ನು ತಟಸ್ಥಗೊಳಿಸಲು ಸಿಬ್ಬಂದಿ ತಂಡವನ್ನು ಮುನ್ನಡೆಸಿದ್ದರು. ಅವರ ಅಪ್ರತಿಮ ಧೈರ್ಯಕ್ಕಾಗಿ ಈ ಗಣರಾಜ್ಯೋತ್ಸವದಂದು ಶೌರ್ಯ ಚಕ್ರವನ್ನು ಪ್ರದಾನ ಮಾಡಲಾಗುತ್ತದೆ ಎಂದು ಸಿಆರ್‌ಪಿಎಫ್‌ ಭಾನುವಾರ (ಜ.25) ರಾತ್ರಿ ತಿಳಿಸಿತ್ತು.

ಮಣಿಪುರದ ಜಿರಿಬಮ್ ಜಿಲ್ಲೆಯ ಬೊರೊಬೆಕ್ರಾ ಪ್ರದೇಶದ ಸಿಆರ್‌ಪಿಎಫ್ ಪೋಸ್ಟ್‌ನಲ್ಲಿ ಗುಂಡಿನ ಚಕಮಕಿ ನಡೆದಿತ್ತು. ದಾಳಿಯ ಸಮಯದಲ್ಲಿ, ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದವರು ಶಂಕಿತ ಕುಕಿ ಉಗ್ರಗಾಮಿಗಳು ಎಂದು ಮಣಿಪುರ ಪೊಲೀಸರು ಹೇಳಿಕೊಂಡಿದ್ದರು. ಆದರೆ, ಕುಕಿ-ಝೋ ಸಂಘಟನೆಗಳು ಅವರು ಗ್ರಾಮ ಸ್ವಯಂಸೇವಕರು ಎಂದು ಹೇಳಿಕೊಂಡಿದ್ದವು.

ಮೇ 2023ರಲ್ಲಿ ಕುಕಿ-ಝೋ-ಹ್ಮಾರ್ಸ್ ಮತ್ತು ಮೈತೇಯಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆಗಳು ಭುಗಿಲೆದ್ದಾಗಿನಿಂದ ಗ್ರಾಮಗಳನ್ನು ಕಾಯುತ್ತಿರುವ ಸಶಸ್ತ್ರ ನಾಗರಿಕರಿಗೆ “ಗ್ರಾಮ ಸ್ವಯಂಸೇವಕರು” ಎಂಬ ಪದವನ್ನು ಬಳಸಲಾಗುತ್ತಿದೆ. ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಕನಿಷ್ಠ 260 ಜನರು ಸಾವನ್ನಪ್ಪಿದ್ದಾರೆ ಮತ್ತು 59,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಸೋಮವಾರ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆಯು, ಸಹಾಯಕ ಕಮಾಂಡೆಂಟ್‌ಗೆ ಶೌರ್ಯ ಚಕ್ರವನ್ನು ನೀಡುವ ಕೇಂದ್ರ ಸರ್ಕಾರದ ನಿರ್ಧಾರದಿಂದ ದಿಗ್ಭ್ರಮೆಗೊಂಡಿರುವುದಾಗಿ ಎಂದು ಹೇಳಿದೆ. ಈ ಪ್ರಶಸ್ತಿಯು ಕುಕಿ-ಝೋ ಸಮುದಾಯಕ್ಕೆ ಮಾಡಲಾದ ‘ತಾರತಮ್ಯ ಮತ್ತು ಅನ್ಯಾಯದ ಮುಂದುವರಿಕೆ’ ಎಂದಿದೆ.

ಅಧಿಕಾರಿಗಳು ಆರೋಪಿಸಿದಂತೆ 10 ಗ್ರಾಮ ಸ್ವಯಂಸೇವಕರು ಸಿಆರ್‌ಪಿಎಫ್ ಪೋಸ್ಟ್ ಮೇಲೆ ದಾಳಿ ಮಾಡಲು ಯಾವುದೇ ಕಾರಣವಿಲ್ಲ ಎಂದು ವೇದಿಕೆ ಹೇಳಿದೆ. ಈ ಪುರುಷರು ಹೆಚ್ಚಾಗಿ ದಿನಗೂಲಿ ಕಾರ್ಮಿಕರ ಗುಂಪಾಗಿದ್ದು, ಅವರು ತಮ್ಮ ಜನರನ್ನು ರಕ್ಷಿಸಲು ಸ್ವಯಂಸೇವಕರಾಗಿದ್ದರು. ಪೊಲೀಸರು ಆರೋಪಿಸಿದಂತೆ ತರಬೇತಿ ಪಡೆದ ‘ಉಗ್ರಗಾಮಿಗಳು’ ಅಲ್ಲ ಎಂದು ತಿಳಿಸಿದೆ.

ಸಿಆರ್‌ಪಿಎಫ್ ಪೋಸ್ಟ್ ಮೇಲೆ ದಾಳಿ ಮಾಡಲಾಗಿದೆ ಎಂಬ ಅಧಿಕೃತ ನಿರೂಪಣೆಗೆ ವಿರುದ್ಧವಾಗಿ, ಶವಪರೀಕ್ಷೆ ವರದಿಗಳು ಪುರುಷರಿಗೆ ಹಿಂದಿನಿಂದ ಗುಂಡು ಹಾರಿಸಲಾಗಿದೆ ಎಂದು ಬಹಿರಂಗಪಡಿಸಿವೆ ಎಂದು ವೇದಿಕೆ ಹೇಳಿಕೆಯಲ್ಲಿ ತಿಳಿಸಿದೆ. ತಮ್ಮ ಸಮುದಾಯವನ್ನು ರಕ್ಷಿಸಲು ಪ್ರಯತ್ನಿಸಿದ ಪುರುಷರ ಮೇಲೆ ಮಾತ್ರ ಗುಂಡು ಹಾರಿಸಲು ನಿರ್ಧರಿಸಿದ್ದ ವಿಲ್ಸನ್‌ ಅವರಿಗೆ ಪ್ರಶಸ್ತಿ ನೀಡುವುದನ್ನು ಅದು ಪ್ರಶ್ನಿಸಿದೆ.

ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಕೂಡ ಪ್ರಶಸ್ತಿಯನ್ನು ಖಂಡಿಸಿ, ಈ ಗೌರವವು ರಾಷ್ಟ್ರೀಯ ಹೆಮ್ಮೆಯ ಕಾರ್ಯವಲ್ಲ, ಬದಲಿಗೆ ಕಾನೂನುಬಾಹಿರ ಹತ್ಯೆಗೆ ಸರ್ಕಾರದ ಅನುಮೋದನೆ ಎಂದು ಆರೋಪಿಸಿದೆ.

ವಿಧಿ ವಿಜ್ಞಾನ ವರದಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳು ಸೇರಿದಂತೆ ವಿಶ್ವಾಸಾರ್ಹ ಪುರಾವೆಗಳು, ಬಲಿಪಶುಗಳು ನಿರಾಯುಧರಾಗಿದ್ದರು ಅಥವಾ ಜನಾಂಗೀಯ ಹಿಂಸಾಚಾರದ ಅವಧಿಯಲ್ಲಿ ಸಮುದಾಯ ರಕ್ಷಣಾ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದರು ಎಂಬುವುದಾಗಿ ದೃಢಪಡಿಸುತ್ತದೆ ಎಂದು ಸಂಸ್ಥೆ ಹೇಳಿದೆ.

ಅವರನ್ನು ಉಗ್ರಗಾಮಿಗಳು ಎಂದು ಹಣೆಪಟ್ಟಿ ಕಟ್ಟುವ ಸರ್ಕಾರದ ನಿರೂಪಣೆಯು ಏಕಪಕ್ಷೀಯ, ಅಸಮಾನವಾದ ಮಾರಕ ಬಲಪ್ರಯೋಗವನ್ನು ಸಮರ್ಥಿಸಲು ವಿನ್ಯಾಸಗೊಳಿಸಲಾದ ಕಟ್ಟುಕಥೆಯಾಗಿದೆ. “ಇದು ಎನ್‌ಕೌಂಟರ್ ಅಲ್ಲ, ಮರಣದಂಡನೆ” ಎಂದಿದೆ.

ವಿಲ್ಸನ್‌ ಅವರಿಗೆ ಪ್ರಶಸ್ತಿ ನೀಡಿರುವುದು ಸಾಂವಿಧಾನಿಕ ಮೌಲ್ಯಗಳಿಗೆ ಮಾಡಿದ ಆಳವಾದ ದ್ರೋಹ ಮತ್ತು ಕುಕಿ-ಝೋ ಜನರ ಜೀವನದ ಬಗ್ಗೆ ತಿರಸ್ಕಾರವನ್ನು ಪ್ರದರ್ಶಿಸುತ್ತದೆ ಎಂದು ಸಂಸ್ಥೆ ಅಸಮಾಧಾನ ಹೊರಹಾಕಿದೆ.

ಪ್ರಶಸ್ತಿಯನ್ನು ರದ್ದುಗೊಳಿಸುವುದರ ಜೊತೆಗೆ, ಹತ್ಯೆಯ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖಾ ಸಮಿತಿಯನ್ನು ಸ್ಥಾಪಿಸಬೇಕೆಂದು ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...