Homeಮುಖಪುಟಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

- Advertisement -
- Advertisement -

ದೇಶವನ್ನೇ ತಲ್ಲಣಗೊಳಿಸಿದ್ದ ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಒಂದು ವರ್ಷವಾಗಿದೆ. ಕಳೆದ 2023ರ ಮೇ.3ರಂದು ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಸಾಕ್ಷಿಯಾಗಿತ್ತು. ಇದರ ನೆನಪಿಗಾಗಿ ಸಂಘರ್ಷದ ಭಾಗವಾಗಿದ್ದ ಕುಕಿ-ಜೋ ಮತ್ತು ಮೈತೈ ನಾಗರಿಕ ಸಮಾಜ ಸಂಘಟನೆಗಳು ಮೇ 3ರಂದು ಹಲವಾರು ಪ್ರತ್ಯೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ಕುಕಿ ಗುಂಪುಗಳು ತಮ್ಮನ್ನು ಅಗಲಿದವರ ನೆನಪು ಮತ್ತು “ಜಾಗೃತಿ” ಗಾಗಿ ಮೇ.3ನ್ನು “ನೆನಪಿನ” ದಿನವನ್ನಾಗಿ ಆಚರಿಸಲು ನಿರ್ಧರಿಸಿದರೆ, ಮೈತೈ ಸಂಘಟನೆಗಳು ಮೇ.3ನ್ನು ‘ನಾರ್ಕೋ-ಭಯೋತ್ಪಾದಕರ ಬೆಂಬಲದೊಂದಿಗೆ ಅಕ್ರಮ ವಲಸಿಗರು ತಮ್ಮ ಆಕ್ರಮಣವನ್ನು ಪ್ರಾರಂಭಿಸಿದ ದಿನ’ ಎಂದು ಆಚರಿಸುವುದಾಗಿ ಹೇಳಿದ್ದಾರೆ.

ಮಣಿಪುರ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಮೈತೈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಿರ್ದೇಶಿಸಿದ ನಂತರ, ಕಣಿವೆ ಮೂಲದ ಮೈತೈ ಮತ್ತು ಗುಡ್ಡೆಗಾಡು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಕುಕಿ-ಜೋ ಬುಡಕಟ್ಟು ಗುಂಪುಗಳ ನಡುವೆ ಕಳೆದ ಮೇ.3ರಂದು ಘರ್ಷಣೆ ಪ್ರಾರಂಭವಾಗಿದೆ. ಸಂಘರ್ಷವು ಇಲ್ಲಿಯವರೆಗೆ 220ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, ಸಾವಿರಾರು ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ, ಮಣಿಪುರ ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಸಾವಿರಾರು ಮಂದಿ ಪರಿಹಾರ ಶಿಬಿರಗಳಲ್ಲಿ ನೆಲೆಸಿದ್ದಾರೆ. ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಘಟನೆ ವಿಶ್ವದ ಮುಂದೆ ಭಾರತವನ್ನು ತಲೆತಗ್ಗಿಸುವಂತೆ ಮಾಡಿತ್ತು. ಈಗಲೂ ಮಣಿಪುರದಲ್ಲಿ ಸರಿಯಾದ ಶಾಂತಿ ಸ್ಥಾಪನೆಯಾಗಿಲ್ಲ. ಮಣಿಪುರ ಸಂಘರ್ಷ ಭಾರತದ ಸದನದ ಒಳಗೆ ಮತ್ತು ಹೊರಗೆ ‘ಎನ್‌ಡಿಎ ಸರಕಾರದ ವಿರುದ್ಧ’ ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಗಿತ್ತು. ಮಣಿಪುರದ ಹಿಂಸಾಚಾರದ ವಿಚಾರದಲ್ಲಿ ಮಣಿಪುರ ಬಿಜೆಪಿ ಸರಕಾರದ ವೈಫಲ್ಯವನ್ನು ಸುಪ್ರೀಂಕೋರ್ಟ್‌ ಗಮನಿಸಿತ್ತು.

ಕುಕಿ ಬುಡಕಟ್ಟು ಸಂಸ್ಥೆಯಾದ ಚುರಾಚಂದ್‌ಪುರದಲ್ಲಿರುವ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಮೇ 3ರಂದು ಬಂದ್‌ಗೆ ಕರೆ ನೀಡಿದೆ. ಹಿಂಸಾಚಾರದ ಸ್ಮರಣಾರ್ಥ ಮತ್ತು ಒಗ್ಗಟ್ಟಿನ ಸಂಕೇತವಾಗಿ ಪ್ರತಿ ಮನೆಯ ಮೇಲೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮನವಿ ಮಾಡಿದೆ. ಎಲ್ಲಾ ವ್ಯಾಪಾರ ಸಂಸ್ಥೆಗಳು, ಉದ್ಯಮಗಳು, ಮಾರುಕಟ್ಟೆಗಳನ್ನು ಮೇ.3ರಂದು ಮುಚ್ಚುವಂತೆ ವಿನಂತಿಸಲಾಗಿದೆ, ಇದು ನಮ್ಮ ಮಡಿದ ವೀರರಿಗೆ ನೀಡುವ ಗೌರವದ ಸಂಕೇತವಾಗಿದೆ. ನಮ್ಮ ಏಕತೆಯನ್ನು ಪುನರುಚ್ಚರಿಸಲು ಮತ್ತು ಕುಕಿ-ಜೋ ಜನರ ಉಜ್ವಲ ಭವಿಷ್ಯದ ಕಡೆಗೆ ನಮ್ಮ ಸಂಕಲ್ಪವನ್ನು ಬಲಪಡಿಸಲು ನಾವು ಒಂದು ಸಮುದಾಯವಾಗಿ ಒಗ್ಗೂಡೋಣ ಎಂದು ಐಟಿಎಲ್‌ಎಫ್ ಹೇಳಿದೆ.

ಚುರಚಂದಪುರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಸ್ಮರಣೆ ಕಾರ್ಯಕ್ರಮವನ್ನು ನಡೆಸಲು ಕೂಡ ಐಟಿಎಫ್‌ ಮುಂದಾಗಿದ್ದು, ಕಾರ್ಯಕ್ರಮದಲ್ಲಿ ವಿಶೇಷ ಪ್ರಾರ್ಥನೆಗಳು, ಭಾಷಣ ನಡೆಯಲಿದೆ.

ಕಾಂಗ್‌ಪೊಕ್ಪಿ ಜಿಲ್ಲೆಯ ಕುಕಿ-ಜೋ ನಾಗರಿಕ ಸಮಾಜ ಸಂಘಟನೆಗಳು ಸಹ ಇದೇ ರೀತಿಯ ಕರೆಯನ್ನು ನೀಡಿವೆ. ಫೈಜಾಂಗ್‌ನಲ್ಲಿರುವ ಹುತಾತ್ಮರ ಸ್ಮಶಾನದಲ್ಲಿ ನಮ್ಮ ಮಡಿದವರನ್ನು ಗೌರವಿಸುವ ಕಾರ್ಯಕ್ರಮವಿರುತ್ತದೆ ಮತ್ತು ಸಂಜೆಯ ನಂತರ ನಾವು ಅವರಿಗಾಗಿ ಮೇಣದಬತ್ತಿಗಳನ್ನು ಬೆಳಗಿಸುತ್ತೇವೆ ಎಂದು ಕಾಂಗ್‌ಪೋಕ್ಪಿಯಲ್ಲಿರುವ ಕುಕಿ ಇನ್ಪಿ ಮಣಿಪುರದ (ಕೆಐಎಂ) ಜಂಗೌಲುನ್ ಹಾಕಿಪ್ ಹೇಳಿದರು. KIM ರಾಜ್ಯದ ಕುಕಿ ಬುಡಕಟ್ಟು ಜನಾಂಗದವರ ಉನ್ನತ ಸಂಸ್ಥೆಯಾಗಿದೆ.

ಮಣಿಪುರ ರಾಜ್ಯ ಸರ್ಕಾರದ ಅಡಿಯಲ್ಲಿ ನಮ್ಮ ಜನರ ಮೇಲೆ ನಡೆದ ವ್ಯವಸ್ಥಿತ ಕಿರುಕುಳ ಮತ್ತು ದಬ್ಬಾಳಿಕೆಯ ಬಗ್ಗೆ ಕುಕಿ-ಜೋ ಜನರಿಗೆ ಉತ್ತಮ ಜಾಗೃತಿಯ ದಿನವಾಗಿ ಮೇ 3 ನೆನಪಿನಲ್ಲಿ ಉಳಿಯುತ್ತದೆ ಎಂದು KIM ಹೇಳಿಕೊಂಡಿದೆ.

ಮೈತೈ ಗುಂಪುಗಳು ಇಂಫಾಲ್ ಪೂರ್ವದ ಶುಮಾಂಗ್ ಲೀಲಾ ಸಾಂಗ್ಲೆನ್‌ನಲ್ಲಿ ನೆನಪಿನ ಕಾರ್ಯಕ್ರಮವನ್ನು ಆಯೋಜಿಸಿದೆ. ಕಳೆದ ವರ್ಷ ಹಿಂಸಾಚಾರ ಭುಗಿಲೆದ್ದ ನಂತರ ನಾಪತ್ತೆಯಾಗಿರುವ 35 ಮೇತೈ ಜನರನ್ನು ಪತ್ತೆಹಚ್ಚಲು ಆಗ್ರಹಿಸುವುದಾಗಿ ಹೇಳಿದ್ದಾರೆ.

ಇದನ್ನು ಓದಿ:ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...