Homeಮುಖಪುಟಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

- Advertisement -
- Advertisement -

ದೇಶವನ್ನೇ ತಲ್ಲಣಗೊಳಿಸಿದ್ದ ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಒಂದು ವರ್ಷವಾಗಿದೆ. ಕಳೆದ 2023ರ ಮೇ.3ರಂದು ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಸಾಕ್ಷಿಯಾಗಿತ್ತು. ಇದರ ನೆನಪಿಗಾಗಿ ಸಂಘರ್ಷದ ಭಾಗವಾಗಿದ್ದ ಕುಕಿ-ಜೋ ಮತ್ತು ಮೈತೈ ನಾಗರಿಕ ಸಮಾಜ ಸಂಘಟನೆಗಳು ಮೇ 3ರಂದು ಹಲವಾರು ಪ್ರತ್ಯೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ಕುಕಿ ಗುಂಪುಗಳು ತಮ್ಮನ್ನು ಅಗಲಿದವರ ನೆನಪು ಮತ್ತು “ಜಾಗೃತಿ” ಗಾಗಿ ಮೇ.3ನ್ನು “ನೆನಪಿನ” ದಿನವನ್ನಾಗಿ ಆಚರಿಸಲು ನಿರ್ಧರಿಸಿದರೆ, ಮೈತೈ ಸಂಘಟನೆಗಳು ಮೇ.3ನ್ನು ‘ನಾರ್ಕೋ-ಭಯೋತ್ಪಾದಕರ ಬೆಂಬಲದೊಂದಿಗೆ ಅಕ್ರಮ ವಲಸಿಗರು ತಮ್ಮ ಆಕ್ರಮಣವನ್ನು ಪ್ರಾರಂಭಿಸಿದ ದಿನ’ ಎಂದು ಆಚರಿಸುವುದಾಗಿ ಹೇಳಿದ್ದಾರೆ.

ಮಣಿಪುರ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಮೈತೈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಿರ್ದೇಶಿಸಿದ ನಂತರ, ಕಣಿವೆ ಮೂಲದ ಮೈತೈ ಮತ್ತು ಗುಡ್ಡೆಗಾಡು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಕುಕಿ-ಜೋ ಬುಡಕಟ್ಟು ಗುಂಪುಗಳ ನಡುವೆ ಕಳೆದ ಮೇ.3ರಂದು ಘರ್ಷಣೆ ಪ್ರಾರಂಭವಾಗಿದೆ. ಸಂಘರ್ಷವು ಇಲ್ಲಿಯವರೆಗೆ 220ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, ಸಾವಿರಾರು ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ, ಮಣಿಪುರ ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಸಾವಿರಾರು ಮಂದಿ ಪರಿಹಾರ ಶಿಬಿರಗಳಲ್ಲಿ ನೆಲೆಸಿದ್ದಾರೆ. ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಘಟನೆ ವಿಶ್ವದ ಮುಂದೆ ಭಾರತವನ್ನು ತಲೆತಗ್ಗಿಸುವಂತೆ ಮಾಡಿತ್ತು. ಈಗಲೂ ಮಣಿಪುರದಲ್ಲಿ ಸರಿಯಾದ ಶಾಂತಿ ಸ್ಥಾಪನೆಯಾಗಿಲ್ಲ. ಮಣಿಪುರ ಸಂಘರ್ಷ ಭಾರತದ ಸದನದ ಒಳಗೆ ಮತ್ತು ಹೊರಗೆ ‘ಎನ್‌ಡಿಎ ಸರಕಾರದ ವಿರುದ್ಧ’ ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಗಿತ್ತು. ಮಣಿಪುರದ ಹಿಂಸಾಚಾರದ ವಿಚಾರದಲ್ಲಿ ಮಣಿಪುರ ಬಿಜೆಪಿ ಸರಕಾರದ ವೈಫಲ್ಯವನ್ನು ಸುಪ್ರೀಂಕೋರ್ಟ್‌ ಗಮನಿಸಿತ್ತು.

ಕುಕಿ ಬುಡಕಟ್ಟು ಸಂಸ್ಥೆಯಾದ ಚುರಾಚಂದ್‌ಪುರದಲ್ಲಿರುವ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಮೇ 3ರಂದು ಬಂದ್‌ಗೆ ಕರೆ ನೀಡಿದೆ. ಹಿಂಸಾಚಾರದ ಸ್ಮರಣಾರ್ಥ ಮತ್ತು ಒಗ್ಗಟ್ಟಿನ ಸಂಕೇತವಾಗಿ ಪ್ರತಿ ಮನೆಯ ಮೇಲೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮನವಿ ಮಾಡಿದೆ. ಎಲ್ಲಾ ವ್ಯಾಪಾರ ಸಂಸ್ಥೆಗಳು, ಉದ್ಯಮಗಳು, ಮಾರುಕಟ್ಟೆಗಳನ್ನು ಮೇ.3ರಂದು ಮುಚ್ಚುವಂತೆ ವಿನಂತಿಸಲಾಗಿದೆ, ಇದು ನಮ್ಮ ಮಡಿದ ವೀರರಿಗೆ ನೀಡುವ ಗೌರವದ ಸಂಕೇತವಾಗಿದೆ. ನಮ್ಮ ಏಕತೆಯನ್ನು ಪುನರುಚ್ಚರಿಸಲು ಮತ್ತು ಕುಕಿ-ಜೋ ಜನರ ಉಜ್ವಲ ಭವಿಷ್ಯದ ಕಡೆಗೆ ನಮ್ಮ ಸಂಕಲ್ಪವನ್ನು ಬಲಪಡಿಸಲು ನಾವು ಒಂದು ಸಮುದಾಯವಾಗಿ ಒಗ್ಗೂಡೋಣ ಎಂದು ಐಟಿಎಲ್‌ಎಫ್ ಹೇಳಿದೆ.

ಚುರಚಂದಪುರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಸ್ಮರಣೆ ಕಾರ್ಯಕ್ರಮವನ್ನು ನಡೆಸಲು ಕೂಡ ಐಟಿಎಫ್‌ ಮುಂದಾಗಿದ್ದು, ಕಾರ್ಯಕ್ರಮದಲ್ಲಿ ವಿಶೇಷ ಪ್ರಾರ್ಥನೆಗಳು, ಭಾಷಣ ನಡೆಯಲಿದೆ.

ಕಾಂಗ್‌ಪೊಕ್ಪಿ ಜಿಲ್ಲೆಯ ಕುಕಿ-ಜೋ ನಾಗರಿಕ ಸಮಾಜ ಸಂಘಟನೆಗಳು ಸಹ ಇದೇ ರೀತಿಯ ಕರೆಯನ್ನು ನೀಡಿವೆ. ಫೈಜಾಂಗ್‌ನಲ್ಲಿರುವ ಹುತಾತ್ಮರ ಸ್ಮಶಾನದಲ್ಲಿ ನಮ್ಮ ಮಡಿದವರನ್ನು ಗೌರವಿಸುವ ಕಾರ್ಯಕ್ರಮವಿರುತ್ತದೆ ಮತ್ತು ಸಂಜೆಯ ನಂತರ ನಾವು ಅವರಿಗಾಗಿ ಮೇಣದಬತ್ತಿಗಳನ್ನು ಬೆಳಗಿಸುತ್ತೇವೆ ಎಂದು ಕಾಂಗ್‌ಪೋಕ್ಪಿಯಲ್ಲಿರುವ ಕುಕಿ ಇನ್ಪಿ ಮಣಿಪುರದ (ಕೆಐಎಂ) ಜಂಗೌಲುನ್ ಹಾಕಿಪ್ ಹೇಳಿದರು. KIM ರಾಜ್ಯದ ಕುಕಿ ಬುಡಕಟ್ಟು ಜನಾಂಗದವರ ಉನ್ನತ ಸಂಸ್ಥೆಯಾಗಿದೆ.

ಮಣಿಪುರ ರಾಜ್ಯ ಸರ್ಕಾರದ ಅಡಿಯಲ್ಲಿ ನಮ್ಮ ಜನರ ಮೇಲೆ ನಡೆದ ವ್ಯವಸ್ಥಿತ ಕಿರುಕುಳ ಮತ್ತು ದಬ್ಬಾಳಿಕೆಯ ಬಗ್ಗೆ ಕುಕಿ-ಜೋ ಜನರಿಗೆ ಉತ್ತಮ ಜಾಗೃತಿಯ ದಿನವಾಗಿ ಮೇ 3 ನೆನಪಿನಲ್ಲಿ ಉಳಿಯುತ್ತದೆ ಎಂದು KIM ಹೇಳಿಕೊಂಡಿದೆ.

ಮೈತೈ ಗುಂಪುಗಳು ಇಂಫಾಲ್ ಪೂರ್ವದ ಶುಮಾಂಗ್ ಲೀಲಾ ಸಾಂಗ್ಲೆನ್‌ನಲ್ಲಿ ನೆನಪಿನ ಕಾರ್ಯಕ್ರಮವನ್ನು ಆಯೋಜಿಸಿದೆ. ಕಳೆದ ವರ್ಷ ಹಿಂಸಾಚಾರ ಭುಗಿಲೆದ್ದ ನಂತರ ನಾಪತ್ತೆಯಾಗಿರುವ 35 ಮೇತೈ ಜನರನ್ನು ಪತ್ತೆಹಚ್ಚಲು ಆಗ್ರಹಿಸುವುದಾಗಿ ಹೇಳಿದ್ದಾರೆ.

ಇದನ್ನು ಓದಿ:ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...