Homeಮುಖಪುಟಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

- Advertisement -
- Advertisement -

ದೇಶವನ್ನೇ ತಲ್ಲಣಗೊಳಿಸಿದ್ದ ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಒಂದು ವರ್ಷವಾಗಿದೆ. ಕಳೆದ 2023ರ ಮೇ.3ರಂದು ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಸಾಕ್ಷಿಯಾಗಿತ್ತು. ಇದರ ನೆನಪಿಗಾಗಿ ಸಂಘರ್ಷದ ಭಾಗವಾಗಿದ್ದ ಕುಕಿ-ಜೋ ಮತ್ತು ಮೈತೈ ನಾಗರಿಕ ಸಮಾಜ ಸಂಘಟನೆಗಳು ಮೇ 3ರಂದು ಹಲವಾರು ಪ್ರತ್ಯೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ಕುಕಿ ಗುಂಪುಗಳು ತಮ್ಮನ್ನು ಅಗಲಿದವರ ನೆನಪು ಮತ್ತು “ಜಾಗೃತಿ” ಗಾಗಿ ಮೇ.3ನ್ನು “ನೆನಪಿನ” ದಿನವನ್ನಾಗಿ ಆಚರಿಸಲು ನಿರ್ಧರಿಸಿದರೆ, ಮೈತೈ ಸಂಘಟನೆಗಳು ಮೇ.3ನ್ನು ‘ನಾರ್ಕೋ-ಭಯೋತ್ಪಾದಕರ ಬೆಂಬಲದೊಂದಿಗೆ ಅಕ್ರಮ ವಲಸಿಗರು ತಮ್ಮ ಆಕ್ರಮಣವನ್ನು ಪ್ರಾರಂಭಿಸಿದ ದಿನ’ ಎಂದು ಆಚರಿಸುವುದಾಗಿ ಹೇಳಿದ್ದಾರೆ.

ಮಣಿಪುರ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಮೈತೈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಿರ್ದೇಶಿಸಿದ ನಂತರ, ಕಣಿವೆ ಮೂಲದ ಮೈತೈ ಮತ್ತು ಗುಡ್ಡೆಗಾಡು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಕುಕಿ-ಜೋ ಬುಡಕಟ್ಟು ಗುಂಪುಗಳ ನಡುವೆ ಕಳೆದ ಮೇ.3ರಂದು ಘರ್ಷಣೆ ಪ್ರಾರಂಭವಾಗಿದೆ. ಸಂಘರ್ಷವು ಇಲ್ಲಿಯವರೆಗೆ 220ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, ಸಾವಿರಾರು ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ, ಮಣಿಪುರ ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಸಾವಿರಾರು ಮಂದಿ ಪರಿಹಾರ ಶಿಬಿರಗಳಲ್ಲಿ ನೆಲೆಸಿದ್ದಾರೆ. ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಘಟನೆ ವಿಶ್ವದ ಮುಂದೆ ಭಾರತವನ್ನು ತಲೆತಗ್ಗಿಸುವಂತೆ ಮಾಡಿತ್ತು. ಈಗಲೂ ಮಣಿಪುರದಲ್ಲಿ ಸರಿಯಾದ ಶಾಂತಿ ಸ್ಥಾಪನೆಯಾಗಿಲ್ಲ. ಮಣಿಪುರ ಸಂಘರ್ಷ ಭಾರತದ ಸದನದ ಒಳಗೆ ಮತ್ತು ಹೊರಗೆ ‘ಎನ್‌ಡಿಎ ಸರಕಾರದ ವಿರುದ್ಧ’ ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಗಿತ್ತು. ಮಣಿಪುರದ ಹಿಂಸಾಚಾರದ ವಿಚಾರದಲ್ಲಿ ಮಣಿಪುರ ಬಿಜೆಪಿ ಸರಕಾರದ ವೈಫಲ್ಯವನ್ನು ಸುಪ್ರೀಂಕೋರ್ಟ್‌ ಗಮನಿಸಿತ್ತು.

ಕುಕಿ ಬುಡಕಟ್ಟು ಸಂಸ್ಥೆಯಾದ ಚುರಾಚಂದ್‌ಪುರದಲ್ಲಿರುವ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಮೇ 3ರಂದು ಬಂದ್‌ಗೆ ಕರೆ ನೀಡಿದೆ. ಹಿಂಸಾಚಾರದ ಸ್ಮರಣಾರ್ಥ ಮತ್ತು ಒಗ್ಗಟ್ಟಿನ ಸಂಕೇತವಾಗಿ ಪ್ರತಿ ಮನೆಯ ಮೇಲೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮನವಿ ಮಾಡಿದೆ. ಎಲ್ಲಾ ವ್ಯಾಪಾರ ಸಂಸ್ಥೆಗಳು, ಉದ್ಯಮಗಳು, ಮಾರುಕಟ್ಟೆಗಳನ್ನು ಮೇ.3ರಂದು ಮುಚ್ಚುವಂತೆ ವಿನಂತಿಸಲಾಗಿದೆ, ಇದು ನಮ್ಮ ಮಡಿದ ವೀರರಿಗೆ ನೀಡುವ ಗೌರವದ ಸಂಕೇತವಾಗಿದೆ. ನಮ್ಮ ಏಕತೆಯನ್ನು ಪುನರುಚ್ಚರಿಸಲು ಮತ್ತು ಕುಕಿ-ಜೋ ಜನರ ಉಜ್ವಲ ಭವಿಷ್ಯದ ಕಡೆಗೆ ನಮ್ಮ ಸಂಕಲ್ಪವನ್ನು ಬಲಪಡಿಸಲು ನಾವು ಒಂದು ಸಮುದಾಯವಾಗಿ ಒಗ್ಗೂಡೋಣ ಎಂದು ಐಟಿಎಲ್‌ಎಫ್ ಹೇಳಿದೆ.

ಚುರಚಂದಪುರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಸ್ಮರಣೆ ಕಾರ್ಯಕ್ರಮವನ್ನು ನಡೆಸಲು ಕೂಡ ಐಟಿಎಫ್‌ ಮುಂದಾಗಿದ್ದು, ಕಾರ್ಯಕ್ರಮದಲ್ಲಿ ವಿಶೇಷ ಪ್ರಾರ್ಥನೆಗಳು, ಭಾಷಣ ನಡೆಯಲಿದೆ.

ಕಾಂಗ್‌ಪೊಕ್ಪಿ ಜಿಲ್ಲೆಯ ಕುಕಿ-ಜೋ ನಾಗರಿಕ ಸಮಾಜ ಸಂಘಟನೆಗಳು ಸಹ ಇದೇ ರೀತಿಯ ಕರೆಯನ್ನು ನೀಡಿವೆ. ಫೈಜಾಂಗ್‌ನಲ್ಲಿರುವ ಹುತಾತ್ಮರ ಸ್ಮಶಾನದಲ್ಲಿ ನಮ್ಮ ಮಡಿದವರನ್ನು ಗೌರವಿಸುವ ಕಾರ್ಯಕ್ರಮವಿರುತ್ತದೆ ಮತ್ತು ಸಂಜೆಯ ನಂತರ ನಾವು ಅವರಿಗಾಗಿ ಮೇಣದಬತ್ತಿಗಳನ್ನು ಬೆಳಗಿಸುತ್ತೇವೆ ಎಂದು ಕಾಂಗ್‌ಪೋಕ್ಪಿಯಲ್ಲಿರುವ ಕುಕಿ ಇನ್ಪಿ ಮಣಿಪುರದ (ಕೆಐಎಂ) ಜಂಗೌಲುನ್ ಹಾಕಿಪ್ ಹೇಳಿದರು. KIM ರಾಜ್ಯದ ಕುಕಿ ಬುಡಕಟ್ಟು ಜನಾಂಗದವರ ಉನ್ನತ ಸಂಸ್ಥೆಯಾಗಿದೆ.

ಮಣಿಪುರ ರಾಜ್ಯ ಸರ್ಕಾರದ ಅಡಿಯಲ್ಲಿ ನಮ್ಮ ಜನರ ಮೇಲೆ ನಡೆದ ವ್ಯವಸ್ಥಿತ ಕಿರುಕುಳ ಮತ್ತು ದಬ್ಬಾಳಿಕೆಯ ಬಗ್ಗೆ ಕುಕಿ-ಜೋ ಜನರಿಗೆ ಉತ್ತಮ ಜಾಗೃತಿಯ ದಿನವಾಗಿ ಮೇ 3 ನೆನಪಿನಲ್ಲಿ ಉಳಿಯುತ್ತದೆ ಎಂದು KIM ಹೇಳಿಕೊಂಡಿದೆ.

ಮೈತೈ ಗುಂಪುಗಳು ಇಂಫಾಲ್ ಪೂರ್ವದ ಶುಮಾಂಗ್ ಲೀಲಾ ಸಾಂಗ್ಲೆನ್‌ನಲ್ಲಿ ನೆನಪಿನ ಕಾರ್ಯಕ್ರಮವನ್ನು ಆಯೋಜಿಸಿದೆ. ಕಳೆದ ವರ್ಷ ಹಿಂಸಾಚಾರ ಭುಗಿಲೆದ್ದ ನಂತರ ನಾಪತ್ತೆಯಾಗಿರುವ 35 ಮೇತೈ ಜನರನ್ನು ಪತ್ತೆಹಚ್ಚಲು ಆಗ್ರಹಿಸುವುದಾಗಿ ಹೇಳಿದ್ದಾರೆ.

ಇದನ್ನು ಓದಿ:ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ...

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...