Homeಮುಖಪುಟಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

- Advertisement -
- Advertisement -

ದೇಶವನ್ನೇ ತಲ್ಲಣಗೊಳಿಸಿದ್ದ ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಒಂದು ವರ್ಷವಾಗಿದೆ. ಕಳೆದ 2023ರ ಮೇ.3ರಂದು ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಸಾಕ್ಷಿಯಾಗಿತ್ತು. ಇದರ ನೆನಪಿಗಾಗಿ ಸಂಘರ್ಷದ ಭಾಗವಾಗಿದ್ದ ಕುಕಿ-ಜೋ ಮತ್ತು ಮೈತೈ ನಾಗರಿಕ ಸಮಾಜ ಸಂಘಟನೆಗಳು ಮೇ 3ರಂದು ಹಲವಾರು ಪ್ರತ್ಯೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ಕುಕಿ ಗುಂಪುಗಳು ತಮ್ಮನ್ನು ಅಗಲಿದವರ ನೆನಪು ಮತ್ತು “ಜಾಗೃತಿ” ಗಾಗಿ ಮೇ.3ನ್ನು “ನೆನಪಿನ” ದಿನವನ್ನಾಗಿ ಆಚರಿಸಲು ನಿರ್ಧರಿಸಿದರೆ, ಮೈತೈ ಸಂಘಟನೆಗಳು ಮೇ.3ನ್ನು ‘ನಾರ್ಕೋ-ಭಯೋತ್ಪಾದಕರ ಬೆಂಬಲದೊಂದಿಗೆ ಅಕ್ರಮ ವಲಸಿಗರು ತಮ್ಮ ಆಕ್ರಮಣವನ್ನು ಪ್ರಾರಂಭಿಸಿದ ದಿನ’ ಎಂದು ಆಚರಿಸುವುದಾಗಿ ಹೇಳಿದ್ದಾರೆ.

ಮಣಿಪುರ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಮೈತೈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಿರ್ದೇಶಿಸಿದ ನಂತರ, ಕಣಿವೆ ಮೂಲದ ಮೈತೈ ಮತ್ತು ಗುಡ್ಡೆಗಾಡು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಕುಕಿ-ಜೋ ಬುಡಕಟ್ಟು ಗುಂಪುಗಳ ನಡುವೆ ಕಳೆದ ಮೇ.3ರಂದು ಘರ್ಷಣೆ ಪ್ರಾರಂಭವಾಗಿದೆ. ಸಂಘರ್ಷವು ಇಲ್ಲಿಯವರೆಗೆ 220ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, ಸಾವಿರಾರು ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ, ಮಣಿಪುರ ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಸಾವಿರಾರು ಮಂದಿ ಪರಿಹಾರ ಶಿಬಿರಗಳಲ್ಲಿ ನೆಲೆಸಿದ್ದಾರೆ. ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಘಟನೆ ವಿಶ್ವದ ಮುಂದೆ ಭಾರತವನ್ನು ತಲೆತಗ್ಗಿಸುವಂತೆ ಮಾಡಿತ್ತು. ಈಗಲೂ ಮಣಿಪುರದಲ್ಲಿ ಸರಿಯಾದ ಶಾಂತಿ ಸ್ಥಾಪನೆಯಾಗಿಲ್ಲ. ಮಣಿಪುರ ಸಂಘರ್ಷ ಭಾರತದ ಸದನದ ಒಳಗೆ ಮತ್ತು ಹೊರಗೆ ‘ಎನ್‌ಡಿಎ ಸರಕಾರದ ವಿರುದ್ಧ’ ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಗಿತ್ತು. ಮಣಿಪುರದ ಹಿಂಸಾಚಾರದ ವಿಚಾರದಲ್ಲಿ ಮಣಿಪುರ ಬಿಜೆಪಿ ಸರಕಾರದ ವೈಫಲ್ಯವನ್ನು ಸುಪ್ರೀಂಕೋರ್ಟ್‌ ಗಮನಿಸಿತ್ತು.

ಕುಕಿ ಬುಡಕಟ್ಟು ಸಂಸ್ಥೆಯಾದ ಚುರಾಚಂದ್‌ಪುರದಲ್ಲಿರುವ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಮೇ 3ರಂದು ಬಂದ್‌ಗೆ ಕರೆ ನೀಡಿದೆ. ಹಿಂಸಾಚಾರದ ಸ್ಮರಣಾರ್ಥ ಮತ್ತು ಒಗ್ಗಟ್ಟಿನ ಸಂಕೇತವಾಗಿ ಪ್ರತಿ ಮನೆಯ ಮೇಲೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮನವಿ ಮಾಡಿದೆ. ಎಲ್ಲಾ ವ್ಯಾಪಾರ ಸಂಸ್ಥೆಗಳು, ಉದ್ಯಮಗಳು, ಮಾರುಕಟ್ಟೆಗಳನ್ನು ಮೇ.3ರಂದು ಮುಚ್ಚುವಂತೆ ವಿನಂತಿಸಲಾಗಿದೆ, ಇದು ನಮ್ಮ ಮಡಿದ ವೀರರಿಗೆ ನೀಡುವ ಗೌರವದ ಸಂಕೇತವಾಗಿದೆ. ನಮ್ಮ ಏಕತೆಯನ್ನು ಪುನರುಚ್ಚರಿಸಲು ಮತ್ತು ಕುಕಿ-ಜೋ ಜನರ ಉಜ್ವಲ ಭವಿಷ್ಯದ ಕಡೆಗೆ ನಮ್ಮ ಸಂಕಲ್ಪವನ್ನು ಬಲಪಡಿಸಲು ನಾವು ಒಂದು ಸಮುದಾಯವಾಗಿ ಒಗ್ಗೂಡೋಣ ಎಂದು ಐಟಿಎಲ್‌ಎಫ್ ಹೇಳಿದೆ.

ಚುರಚಂದಪುರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಸ್ಮರಣೆ ಕಾರ್ಯಕ್ರಮವನ್ನು ನಡೆಸಲು ಕೂಡ ಐಟಿಎಫ್‌ ಮುಂದಾಗಿದ್ದು, ಕಾರ್ಯಕ್ರಮದಲ್ಲಿ ವಿಶೇಷ ಪ್ರಾರ್ಥನೆಗಳು, ಭಾಷಣ ನಡೆಯಲಿದೆ.

ಕಾಂಗ್‌ಪೊಕ್ಪಿ ಜಿಲ್ಲೆಯ ಕುಕಿ-ಜೋ ನಾಗರಿಕ ಸಮಾಜ ಸಂಘಟನೆಗಳು ಸಹ ಇದೇ ರೀತಿಯ ಕರೆಯನ್ನು ನೀಡಿವೆ. ಫೈಜಾಂಗ್‌ನಲ್ಲಿರುವ ಹುತಾತ್ಮರ ಸ್ಮಶಾನದಲ್ಲಿ ನಮ್ಮ ಮಡಿದವರನ್ನು ಗೌರವಿಸುವ ಕಾರ್ಯಕ್ರಮವಿರುತ್ತದೆ ಮತ್ತು ಸಂಜೆಯ ನಂತರ ನಾವು ಅವರಿಗಾಗಿ ಮೇಣದಬತ್ತಿಗಳನ್ನು ಬೆಳಗಿಸುತ್ತೇವೆ ಎಂದು ಕಾಂಗ್‌ಪೋಕ್ಪಿಯಲ್ಲಿರುವ ಕುಕಿ ಇನ್ಪಿ ಮಣಿಪುರದ (ಕೆಐಎಂ) ಜಂಗೌಲುನ್ ಹಾಕಿಪ್ ಹೇಳಿದರು. KIM ರಾಜ್ಯದ ಕುಕಿ ಬುಡಕಟ್ಟು ಜನಾಂಗದವರ ಉನ್ನತ ಸಂಸ್ಥೆಯಾಗಿದೆ.

ಮಣಿಪುರ ರಾಜ್ಯ ಸರ್ಕಾರದ ಅಡಿಯಲ್ಲಿ ನಮ್ಮ ಜನರ ಮೇಲೆ ನಡೆದ ವ್ಯವಸ್ಥಿತ ಕಿರುಕುಳ ಮತ್ತು ದಬ್ಬಾಳಿಕೆಯ ಬಗ್ಗೆ ಕುಕಿ-ಜೋ ಜನರಿಗೆ ಉತ್ತಮ ಜಾಗೃತಿಯ ದಿನವಾಗಿ ಮೇ 3 ನೆನಪಿನಲ್ಲಿ ಉಳಿಯುತ್ತದೆ ಎಂದು KIM ಹೇಳಿಕೊಂಡಿದೆ.

ಮೈತೈ ಗುಂಪುಗಳು ಇಂಫಾಲ್ ಪೂರ್ವದ ಶುಮಾಂಗ್ ಲೀಲಾ ಸಾಂಗ್ಲೆನ್‌ನಲ್ಲಿ ನೆನಪಿನ ಕಾರ್ಯಕ್ರಮವನ್ನು ಆಯೋಜಿಸಿದೆ. ಕಳೆದ ವರ್ಷ ಹಿಂಸಾಚಾರ ಭುಗಿಲೆದ್ದ ನಂತರ ನಾಪತ್ತೆಯಾಗಿರುವ 35 ಮೇತೈ ಜನರನ್ನು ಪತ್ತೆಹಚ್ಚಲು ಆಗ್ರಹಿಸುವುದಾಗಿ ಹೇಳಿದ್ದಾರೆ.

ಇದನ್ನು ಓದಿ:ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...