Homeಮುಖಪುಟಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

- Advertisement -
- Advertisement -

ದೇಶವನ್ನೇ ತಲ್ಲಣಗೊಳಿಸಿದ್ದ ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಒಂದು ವರ್ಷವಾಗಿದೆ. ಕಳೆದ 2023ರ ಮೇ.3ರಂದು ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಸಾಕ್ಷಿಯಾಗಿತ್ತು. ಇದರ ನೆನಪಿಗಾಗಿ ಸಂಘರ್ಷದ ಭಾಗವಾಗಿದ್ದ ಕುಕಿ-ಜೋ ಮತ್ತು ಮೈತೈ ನಾಗರಿಕ ಸಮಾಜ ಸಂಘಟನೆಗಳು ಮೇ 3ರಂದು ಹಲವಾರು ಪ್ರತ್ಯೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ಕುಕಿ ಗುಂಪುಗಳು ತಮ್ಮನ್ನು ಅಗಲಿದವರ ನೆನಪು ಮತ್ತು “ಜಾಗೃತಿ” ಗಾಗಿ ಮೇ.3ನ್ನು “ನೆನಪಿನ” ದಿನವನ್ನಾಗಿ ಆಚರಿಸಲು ನಿರ್ಧರಿಸಿದರೆ, ಮೈತೈ ಸಂಘಟನೆಗಳು ಮೇ.3ನ್ನು ‘ನಾರ್ಕೋ-ಭಯೋತ್ಪಾದಕರ ಬೆಂಬಲದೊಂದಿಗೆ ಅಕ್ರಮ ವಲಸಿಗರು ತಮ್ಮ ಆಕ್ರಮಣವನ್ನು ಪ್ರಾರಂಭಿಸಿದ ದಿನ’ ಎಂದು ಆಚರಿಸುವುದಾಗಿ ಹೇಳಿದ್ದಾರೆ.

ಮಣಿಪುರ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಮೈತೈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಿರ್ದೇಶಿಸಿದ ನಂತರ, ಕಣಿವೆ ಮೂಲದ ಮೈತೈ ಮತ್ತು ಗುಡ್ಡೆಗಾಡು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಕುಕಿ-ಜೋ ಬುಡಕಟ್ಟು ಗುಂಪುಗಳ ನಡುವೆ ಕಳೆದ ಮೇ.3ರಂದು ಘರ್ಷಣೆ ಪ್ರಾರಂಭವಾಗಿದೆ. ಸಂಘರ್ಷವು ಇಲ್ಲಿಯವರೆಗೆ 220ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, ಸಾವಿರಾರು ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ, ಮಣಿಪುರ ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಸಾವಿರಾರು ಮಂದಿ ಪರಿಹಾರ ಶಿಬಿರಗಳಲ್ಲಿ ನೆಲೆಸಿದ್ದಾರೆ. ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಘಟನೆ ವಿಶ್ವದ ಮುಂದೆ ಭಾರತವನ್ನು ತಲೆತಗ್ಗಿಸುವಂತೆ ಮಾಡಿತ್ತು. ಈಗಲೂ ಮಣಿಪುರದಲ್ಲಿ ಸರಿಯಾದ ಶಾಂತಿ ಸ್ಥಾಪನೆಯಾಗಿಲ್ಲ. ಮಣಿಪುರ ಸಂಘರ್ಷ ಭಾರತದ ಸದನದ ಒಳಗೆ ಮತ್ತು ಹೊರಗೆ ‘ಎನ್‌ಡಿಎ ಸರಕಾರದ ವಿರುದ್ಧ’ ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಗಿತ್ತು. ಮಣಿಪುರದ ಹಿಂಸಾಚಾರದ ವಿಚಾರದಲ್ಲಿ ಮಣಿಪುರ ಬಿಜೆಪಿ ಸರಕಾರದ ವೈಫಲ್ಯವನ್ನು ಸುಪ್ರೀಂಕೋರ್ಟ್‌ ಗಮನಿಸಿತ್ತು.

ಕುಕಿ ಬುಡಕಟ್ಟು ಸಂಸ್ಥೆಯಾದ ಚುರಾಚಂದ್‌ಪುರದಲ್ಲಿರುವ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಮೇ 3ರಂದು ಬಂದ್‌ಗೆ ಕರೆ ನೀಡಿದೆ. ಹಿಂಸಾಚಾರದ ಸ್ಮರಣಾರ್ಥ ಮತ್ತು ಒಗ್ಗಟ್ಟಿನ ಸಂಕೇತವಾಗಿ ಪ್ರತಿ ಮನೆಯ ಮೇಲೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮನವಿ ಮಾಡಿದೆ. ಎಲ್ಲಾ ವ್ಯಾಪಾರ ಸಂಸ್ಥೆಗಳು, ಉದ್ಯಮಗಳು, ಮಾರುಕಟ್ಟೆಗಳನ್ನು ಮೇ.3ರಂದು ಮುಚ್ಚುವಂತೆ ವಿನಂತಿಸಲಾಗಿದೆ, ಇದು ನಮ್ಮ ಮಡಿದ ವೀರರಿಗೆ ನೀಡುವ ಗೌರವದ ಸಂಕೇತವಾಗಿದೆ. ನಮ್ಮ ಏಕತೆಯನ್ನು ಪುನರುಚ್ಚರಿಸಲು ಮತ್ತು ಕುಕಿ-ಜೋ ಜನರ ಉಜ್ವಲ ಭವಿಷ್ಯದ ಕಡೆಗೆ ನಮ್ಮ ಸಂಕಲ್ಪವನ್ನು ಬಲಪಡಿಸಲು ನಾವು ಒಂದು ಸಮುದಾಯವಾಗಿ ಒಗ್ಗೂಡೋಣ ಎಂದು ಐಟಿಎಲ್‌ಎಫ್ ಹೇಳಿದೆ.

ಚುರಚಂದಪುರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಸ್ಮರಣೆ ಕಾರ್ಯಕ್ರಮವನ್ನು ನಡೆಸಲು ಕೂಡ ಐಟಿಎಫ್‌ ಮುಂದಾಗಿದ್ದು, ಕಾರ್ಯಕ್ರಮದಲ್ಲಿ ವಿಶೇಷ ಪ್ರಾರ್ಥನೆಗಳು, ಭಾಷಣ ನಡೆಯಲಿದೆ.

ಕಾಂಗ್‌ಪೊಕ್ಪಿ ಜಿಲ್ಲೆಯ ಕುಕಿ-ಜೋ ನಾಗರಿಕ ಸಮಾಜ ಸಂಘಟನೆಗಳು ಸಹ ಇದೇ ರೀತಿಯ ಕರೆಯನ್ನು ನೀಡಿವೆ. ಫೈಜಾಂಗ್‌ನಲ್ಲಿರುವ ಹುತಾತ್ಮರ ಸ್ಮಶಾನದಲ್ಲಿ ನಮ್ಮ ಮಡಿದವರನ್ನು ಗೌರವಿಸುವ ಕಾರ್ಯಕ್ರಮವಿರುತ್ತದೆ ಮತ್ತು ಸಂಜೆಯ ನಂತರ ನಾವು ಅವರಿಗಾಗಿ ಮೇಣದಬತ್ತಿಗಳನ್ನು ಬೆಳಗಿಸುತ್ತೇವೆ ಎಂದು ಕಾಂಗ್‌ಪೋಕ್ಪಿಯಲ್ಲಿರುವ ಕುಕಿ ಇನ್ಪಿ ಮಣಿಪುರದ (ಕೆಐಎಂ) ಜಂಗೌಲುನ್ ಹಾಕಿಪ್ ಹೇಳಿದರು. KIM ರಾಜ್ಯದ ಕುಕಿ ಬುಡಕಟ್ಟು ಜನಾಂಗದವರ ಉನ್ನತ ಸಂಸ್ಥೆಯಾಗಿದೆ.

ಮಣಿಪುರ ರಾಜ್ಯ ಸರ್ಕಾರದ ಅಡಿಯಲ್ಲಿ ನಮ್ಮ ಜನರ ಮೇಲೆ ನಡೆದ ವ್ಯವಸ್ಥಿತ ಕಿರುಕುಳ ಮತ್ತು ದಬ್ಬಾಳಿಕೆಯ ಬಗ್ಗೆ ಕುಕಿ-ಜೋ ಜನರಿಗೆ ಉತ್ತಮ ಜಾಗೃತಿಯ ದಿನವಾಗಿ ಮೇ 3 ನೆನಪಿನಲ್ಲಿ ಉಳಿಯುತ್ತದೆ ಎಂದು KIM ಹೇಳಿಕೊಂಡಿದೆ.

ಮೈತೈ ಗುಂಪುಗಳು ಇಂಫಾಲ್ ಪೂರ್ವದ ಶುಮಾಂಗ್ ಲೀಲಾ ಸಾಂಗ್ಲೆನ್‌ನಲ್ಲಿ ನೆನಪಿನ ಕಾರ್ಯಕ್ರಮವನ್ನು ಆಯೋಜಿಸಿದೆ. ಕಳೆದ ವರ್ಷ ಹಿಂಸಾಚಾರ ಭುಗಿಲೆದ್ದ ನಂತರ ನಾಪತ್ತೆಯಾಗಿರುವ 35 ಮೇತೈ ಜನರನ್ನು ಪತ್ತೆಹಚ್ಚಲು ಆಗ್ರಹಿಸುವುದಾಗಿ ಹೇಳಿದ್ದಾರೆ.

ಇದನ್ನು ಓದಿ:ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...