Homeಮುಖಪುಟಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

- Advertisement -
- Advertisement -

ದೇಶವನ್ನೇ ತಲ್ಲಣಗೊಳಿಸಿದ್ದ ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಒಂದು ವರ್ಷವಾಗಿದೆ. ಕಳೆದ 2023ರ ಮೇ.3ರಂದು ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಸಾಕ್ಷಿಯಾಗಿತ್ತು. ಇದರ ನೆನಪಿಗಾಗಿ ಸಂಘರ್ಷದ ಭಾಗವಾಗಿದ್ದ ಕುಕಿ-ಜೋ ಮತ್ತು ಮೈತೈ ನಾಗರಿಕ ಸಮಾಜ ಸಂಘಟನೆಗಳು ಮೇ 3ರಂದು ಹಲವಾರು ಪ್ರತ್ಯೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ಕುಕಿ ಗುಂಪುಗಳು ತಮ್ಮನ್ನು ಅಗಲಿದವರ ನೆನಪು ಮತ್ತು “ಜಾಗೃತಿ” ಗಾಗಿ ಮೇ.3ನ್ನು “ನೆನಪಿನ” ದಿನವನ್ನಾಗಿ ಆಚರಿಸಲು ನಿರ್ಧರಿಸಿದರೆ, ಮೈತೈ ಸಂಘಟನೆಗಳು ಮೇ.3ನ್ನು ‘ನಾರ್ಕೋ-ಭಯೋತ್ಪಾದಕರ ಬೆಂಬಲದೊಂದಿಗೆ ಅಕ್ರಮ ವಲಸಿಗರು ತಮ್ಮ ಆಕ್ರಮಣವನ್ನು ಪ್ರಾರಂಭಿಸಿದ ದಿನ’ ಎಂದು ಆಚರಿಸುವುದಾಗಿ ಹೇಳಿದ್ದಾರೆ.

ಮಣಿಪುರ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಮೈತೈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಿರ್ದೇಶಿಸಿದ ನಂತರ, ಕಣಿವೆ ಮೂಲದ ಮೈತೈ ಮತ್ತು ಗುಡ್ಡೆಗಾಡು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಕುಕಿ-ಜೋ ಬುಡಕಟ್ಟು ಗುಂಪುಗಳ ನಡುವೆ ಕಳೆದ ಮೇ.3ರಂದು ಘರ್ಷಣೆ ಪ್ರಾರಂಭವಾಗಿದೆ. ಸಂಘರ್ಷವು ಇಲ್ಲಿಯವರೆಗೆ 220ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, ಸಾವಿರಾರು ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ, ಮಣಿಪುರ ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಸಾವಿರಾರು ಮಂದಿ ಪರಿಹಾರ ಶಿಬಿರಗಳಲ್ಲಿ ನೆಲೆಸಿದ್ದಾರೆ. ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಘಟನೆ ವಿಶ್ವದ ಮುಂದೆ ಭಾರತವನ್ನು ತಲೆತಗ್ಗಿಸುವಂತೆ ಮಾಡಿತ್ತು. ಈಗಲೂ ಮಣಿಪುರದಲ್ಲಿ ಸರಿಯಾದ ಶಾಂತಿ ಸ್ಥಾಪನೆಯಾಗಿಲ್ಲ. ಮಣಿಪುರ ಸಂಘರ್ಷ ಭಾರತದ ಸದನದ ಒಳಗೆ ಮತ್ತು ಹೊರಗೆ ‘ಎನ್‌ಡಿಎ ಸರಕಾರದ ವಿರುದ್ಧ’ ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಗಿತ್ತು. ಮಣಿಪುರದ ಹಿಂಸಾಚಾರದ ವಿಚಾರದಲ್ಲಿ ಮಣಿಪುರ ಬಿಜೆಪಿ ಸರಕಾರದ ವೈಫಲ್ಯವನ್ನು ಸುಪ್ರೀಂಕೋರ್ಟ್‌ ಗಮನಿಸಿತ್ತು.

ಕುಕಿ ಬುಡಕಟ್ಟು ಸಂಸ್ಥೆಯಾದ ಚುರಾಚಂದ್‌ಪುರದಲ್ಲಿರುವ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಮೇ 3ರಂದು ಬಂದ್‌ಗೆ ಕರೆ ನೀಡಿದೆ. ಹಿಂಸಾಚಾರದ ಸ್ಮರಣಾರ್ಥ ಮತ್ತು ಒಗ್ಗಟ್ಟಿನ ಸಂಕೇತವಾಗಿ ಪ್ರತಿ ಮನೆಯ ಮೇಲೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮನವಿ ಮಾಡಿದೆ. ಎಲ್ಲಾ ವ್ಯಾಪಾರ ಸಂಸ್ಥೆಗಳು, ಉದ್ಯಮಗಳು, ಮಾರುಕಟ್ಟೆಗಳನ್ನು ಮೇ.3ರಂದು ಮುಚ್ಚುವಂತೆ ವಿನಂತಿಸಲಾಗಿದೆ, ಇದು ನಮ್ಮ ಮಡಿದ ವೀರರಿಗೆ ನೀಡುವ ಗೌರವದ ಸಂಕೇತವಾಗಿದೆ. ನಮ್ಮ ಏಕತೆಯನ್ನು ಪುನರುಚ್ಚರಿಸಲು ಮತ್ತು ಕುಕಿ-ಜೋ ಜನರ ಉಜ್ವಲ ಭವಿಷ್ಯದ ಕಡೆಗೆ ನಮ್ಮ ಸಂಕಲ್ಪವನ್ನು ಬಲಪಡಿಸಲು ನಾವು ಒಂದು ಸಮುದಾಯವಾಗಿ ಒಗ್ಗೂಡೋಣ ಎಂದು ಐಟಿಎಲ್‌ಎಫ್ ಹೇಳಿದೆ.

ಚುರಚಂದಪುರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಸ್ಮರಣೆ ಕಾರ್ಯಕ್ರಮವನ್ನು ನಡೆಸಲು ಕೂಡ ಐಟಿಎಫ್‌ ಮುಂದಾಗಿದ್ದು, ಕಾರ್ಯಕ್ರಮದಲ್ಲಿ ವಿಶೇಷ ಪ್ರಾರ್ಥನೆಗಳು, ಭಾಷಣ ನಡೆಯಲಿದೆ.

ಕಾಂಗ್‌ಪೊಕ್ಪಿ ಜಿಲ್ಲೆಯ ಕುಕಿ-ಜೋ ನಾಗರಿಕ ಸಮಾಜ ಸಂಘಟನೆಗಳು ಸಹ ಇದೇ ರೀತಿಯ ಕರೆಯನ್ನು ನೀಡಿವೆ. ಫೈಜಾಂಗ್‌ನಲ್ಲಿರುವ ಹುತಾತ್ಮರ ಸ್ಮಶಾನದಲ್ಲಿ ನಮ್ಮ ಮಡಿದವರನ್ನು ಗೌರವಿಸುವ ಕಾರ್ಯಕ್ರಮವಿರುತ್ತದೆ ಮತ್ತು ಸಂಜೆಯ ನಂತರ ನಾವು ಅವರಿಗಾಗಿ ಮೇಣದಬತ್ತಿಗಳನ್ನು ಬೆಳಗಿಸುತ್ತೇವೆ ಎಂದು ಕಾಂಗ್‌ಪೋಕ್ಪಿಯಲ್ಲಿರುವ ಕುಕಿ ಇನ್ಪಿ ಮಣಿಪುರದ (ಕೆಐಎಂ) ಜಂಗೌಲುನ್ ಹಾಕಿಪ್ ಹೇಳಿದರು. KIM ರಾಜ್ಯದ ಕುಕಿ ಬುಡಕಟ್ಟು ಜನಾಂಗದವರ ಉನ್ನತ ಸಂಸ್ಥೆಯಾಗಿದೆ.

ಮಣಿಪುರ ರಾಜ್ಯ ಸರ್ಕಾರದ ಅಡಿಯಲ್ಲಿ ನಮ್ಮ ಜನರ ಮೇಲೆ ನಡೆದ ವ್ಯವಸ್ಥಿತ ಕಿರುಕುಳ ಮತ್ತು ದಬ್ಬಾಳಿಕೆಯ ಬಗ್ಗೆ ಕುಕಿ-ಜೋ ಜನರಿಗೆ ಉತ್ತಮ ಜಾಗೃತಿಯ ದಿನವಾಗಿ ಮೇ 3 ನೆನಪಿನಲ್ಲಿ ಉಳಿಯುತ್ತದೆ ಎಂದು KIM ಹೇಳಿಕೊಂಡಿದೆ.

ಮೈತೈ ಗುಂಪುಗಳು ಇಂಫಾಲ್ ಪೂರ್ವದ ಶುಮಾಂಗ್ ಲೀಲಾ ಸಾಂಗ್ಲೆನ್‌ನಲ್ಲಿ ನೆನಪಿನ ಕಾರ್ಯಕ್ರಮವನ್ನು ಆಯೋಜಿಸಿದೆ. ಕಳೆದ ವರ್ಷ ಹಿಂಸಾಚಾರ ಭುಗಿಲೆದ್ದ ನಂತರ ನಾಪತ್ತೆಯಾಗಿರುವ 35 ಮೇತೈ ಜನರನ್ನು ಪತ್ತೆಹಚ್ಚಲು ಆಗ್ರಹಿಸುವುದಾಗಿ ಹೇಳಿದ್ದಾರೆ.

ಇದನ್ನು ಓದಿ:ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...