Homeಮುಖಪುಟಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

ಮಣಿಪುರ ಸಂಘರ್ಷಕ್ಕೆ ಒಂದು ವರ್ಷ: ಮೈತೈ, ಕುಕಿ ಸಮುದಾಯಗಳಿಂದ ಪ್ರತ್ಯೇಕ ಕಾರ್ಯಕ್ರಮ

- Advertisement -
- Advertisement -

ದೇಶವನ್ನೇ ತಲ್ಲಣಗೊಳಿಸಿದ್ದ ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಒಂದು ವರ್ಷವಾಗಿದೆ. ಕಳೆದ 2023ರ ಮೇ.3ರಂದು ಮಣಿಪುರ ಜನಾಂಗೀಯ ಸಂಘರ್ಷಕ್ಕೆ ಸಾಕ್ಷಿಯಾಗಿತ್ತು. ಇದರ ನೆನಪಿಗಾಗಿ ಸಂಘರ್ಷದ ಭಾಗವಾಗಿದ್ದ ಕುಕಿ-ಜೋ ಮತ್ತು ಮೈತೈ ನಾಗರಿಕ ಸಮಾಜ ಸಂಘಟನೆಗಳು ಮೇ 3ರಂದು ಹಲವಾರು ಪ್ರತ್ಯೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ಕುಕಿ ಗುಂಪುಗಳು ತಮ್ಮನ್ನು ಅಗಲಿದವರ ನೆನಪು ಮತ್ತು “ಜಾಗೃತಿ” ಗಾಗಿ ಮೇ.3ನ್ನು “ನೆನಪಿನ” ದಿನವನ್ನಾಗಿ ಆಚರಿಸಲು ನಿರ್ಧರಿಸಿದರೆ, ಮೈತೈ ಸಂಘಟನೆಗಳು ಮೇ.3ನ್ನು ‘ನಾರ್ಕೋ-ಭಯೋತ್ಪಾದಕರ ಬೆಂಬಲದೊಂದಿಗೆ ಅಕ್ರಮ ವಲಸಿಗರು ತಮ್ಮ ಆಕ್ರಮಣವನ್ನು ಪ್ರಾರಂಭಿಸಿದ ದಿನ’ ಎಂದು ಆಚರಿಸುವುದಾಗಿ ಹೇಳಿದ್ದಾರೆ.

ಮಣಿಪುರ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಮೈತೈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಿರ್ದೇಶಿಸಿದ ನಂತರ, ಕಣಿವೆ ಮೂಲದ ಮೈತೈ ಮತ್ತು ಗುಡ್ಡೆಗಾಡು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಕುಕಿ-ಜೋ ಬುಡಕಟ್ಟು ಗುಂಪುಗಳ ನಡುವೆ ಕಳೆದ ಮೇ.3ರಂದು ಘರ್ಷಣೆ ಪ್ರಾರಂಭವಾಗಿದೆ. ಸಂಘರ್ಷವು ಇಲ್ಲಿಯವರೆಗೆ 220ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ, ಸಾವಿರಾರು ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ, ಮಣಿಪುರ ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಸಾವಿರಾರು ಮಂದಿ ಪರಿಹಾರ ಶಿಬಿರಗಳಲ್ಲಿ ನೆಲೆಸಿದ್ದಾರೆ. ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಘಟನೆ ವಿಶ್ವದ ಮುಂದೆ ಭಾರತವನ್ನು ತಲೆತಗ್ಗಿಸುವಂತೆ ಮಾಡಿತ್ತು. ಈಗಲೂ ಮಣಿಪುರದಲ್ಲಿ ಸರಿಯಾದ ಶಾಂತಿ ಸ್ಥಾಪನೆಯಾಗಿಲ್ಲ. ಮಣಿಪುರ ಸಂಘರ್ಷ ಭಾರತದ ಸದನದ ಒಳಗೆ ಮತ್ತು ಹೊರಗೆ ‘ಎನ್‌ಡಿಎ ಸರಕಾರದ ವಿರುದ್ಧ’ ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಗಿತ್ತು. ಮಣಿಪುರದ ಹಿಂಸಾಚಾರದ ವಿಚಾರದಲ್ಲಿ ಮಣಿಪುರ ಬಿಜೆಪಿ ಸರಕಾರದ ವೈಫಲ್ಯವನ್ನು ಸುಪ್ರೀಂಕೋರ್ಟ್‌ ಗಮನಿಸಿತ್ತು.

ಕುಕಿ ಬುಡಕಟ್ಟು ಸಂಸ್ಥೆಯಾದ ಚುರಾಚಂದ್‌ಪುರದಲ್ಲಿರುವ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಮೇ 3ರಂದು ಬಂದ್‌ಗೆ ಕರೆ ನೀಡಿದೆ. ಹಿಂಸಾಚಾರದ ಸ್ಮರಣಾರ್ಥ ಮತ್ತು ಒಗ್ಗಟ್ಟಿನ ಸಂಕೇತವಾಗಿ ಪ್ರತಿ ಮನೆಯ ಮೇಲೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮನವಿ ಮಾಡಿದೆ. ಎಲ್ಲಾ ವ್ಯಾಪಾರ ಸಂಸ್ಥೆಗಳು, ಉದ್ಯಮಗಳು, ಮಾರುಕಟ್ಟೆಗಳನ್ನು ಮೇ.3ರಂದು ಮುಚ್ಚುವಂತೆ ವಿನಂತಿಸಲಾಗಿದೆ, ಇದು ನಮ್ಮ ಮಡಿದ ವೀರರಿಗೆ ನೀಡುವ ಗೌರವದ ಸಂಕೇತವಾಗಿದೆ. ನಮ್ಮ ಏಕತೆಯನ್ನು ಪುನರುಚ್ಚರಿಸಲು ಮತ್ತು ಕುಕಿ-ಜೋ ಜನರ ಉಜ್ವಲ ಭವಿಷ್ಯದ ಕಡೆಗೆ ನಮ್ಮ ಸಂಕಲ್ಪವನ್ನು ಬಲಪಡಿಸಲು ನಾವು ಒಂದು ಸಮುದಾಯವಾಗಿ ಒಗ್ಗೂಡೋಣ ಎಂದು ಐಟಿಎಲ್‌ಎಫ್ ಹೇಳಿದೆ.

ಚುರಚಂದಪುರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಸ್ಮರಣೆ ಕಾರ್ಯಕ್ರಮವನ್ನು ನಡೆಸಲು ಕೂಡ ಐಟಿಎಫ್‌ ಮುಂದಾಗಿದ್ದು, ಕಾರ್ಯಕ್ರಮದಲ್ಲಿ ವಿಶೇಷ ಪ್ರಾರ್ಥನೆಗಳು, ಭಾಷಣ ನಡೆಯಲಿದೆ.

ಕಾಂಗ್‌ಪೊಕ್ಪಿ ಜಿಲ್ಲೆಯ ಕುಕಿ-ಜೋ ನಾಗರಿಕ ಸಮಾಜ ಸಂಘಟನೆಗಳು ಸಹ ಇದೇ ರೀತಿಯ ಕರೆಯನ್ನು ನೀಡಿವೆ. ಫೈಜಾಂಗ್‌ನಲ್ಲಿರುವ ಹುತಾತ್ಮರ ಸ್ಮಶಾನದಲ್ಲಿ ನಮ್ಮ ಮಡಿದವರನ್ನು ಗೌರವಿಸುವ ಕಾರ್ಯಕ್ರಮವಿರುತ್ತದೆ ಮತ್ತು ಸಂಜೆಯ ನಂತರ ನಾವು ಅವರಿಗಾಗಿ ಮೇಣದಬತ್ತಿಗಳನ್ನು ಬೆಳಗಿಸುತ್ತೇವೆ ಎಂದು ಕಾಂಗ್‌ಪೋಕ್ಪಿಯಲ್ಲಿರುವ ಕುಕಿ ಇನ್ಪಿ ಮಣಿಪುರದ (ಕೆಐಎಂ) ಜಂಗೌಲುನ್ ಹಾಕಿಪ್ ಹೇಳಿದರು. KIM ರಾಜ್ಯದ ಕುಕಿ ಬುಡಕಟ್ಟು ಜನಾಂಗದವರ ಉನ್ನತ ಸಂಸ್ಥೆಯಾಗಿದೆ.

ಮಣಿಪುರ ರಾಜ್ಯ ಸರ್ಕಾರದ ಅಡಿಯಲ್ಲಿ ನಮ್ಮ ಜನರ ಮೇಲೆ ನಡೆದ ವ್ಯವಸ್ಥಿತ ಕಿರುಕುಳ ಮತ್ತು ದಬ್ಬಾಳಿಕೆಯ ಬಗ್ಗೆ ಕುಕಿ-ಜೋ ಜನರಿಗೆ ಉತ್ತಮ ಜಾಗೃತಿಯ ದಿನವಾಗಿ ಮೇ 3 ನೆನಪಿನಲ್ಲಿ ಉಳಿಯುತ್ತದೆ ಎಂದು KIM ಹೇಳಿಕೊಂಡಿದೆ.

ಮೈತೈ ಗುಂಪುಗಳು ಇಂಫಾಲ್ ಪೂರ್ವದ ಶುಮಾಂಗ್ ಲೀಲಾ ಸಾಂಗ್ಲೆನ್‌ನಲ್ಲಿ ನೆನಪಿನ ಕಾರ್ಯಕ್ರಮವನ್ನು ಆಯೋಜಿಸಿದೆ. ಕಳೆದ ವರ್ಷ ಹಿಂಸಾಚಾರ ಭುಗಿಲೆದ್ದ ನಂತರ ನಾಪತ್ತೆಯಾಗಿರುವ 35 ಮೇತೈ ಜನರನ್ನು ಪತ್ತೆಹಚ್ಚಲು ಆಗ್ರಹಿಸುವುದಾಗಿ ಹೇಳಿದ್ದಾರೆ.

ಇದನ್ನು ಓದಿ:ಗಾಝಾ ಹತ್ಯಾಕಾಂಡ: ಇಸ್ರೇಲ್‌ ಜೊತೆ ರಾಜತಾಂತ್ರಿಕ ಸಂಬಂಧಗಳನ್ನು ಮುರಿದ ಕೊಲಂಬಿಯಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...