Homeಕರ್ನಾಟಕಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ, ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ

ಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ, ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ

ನಾಲ್ವರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಕುಕ್ಕೆ ಸುಬ್ರಮಣ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಸುಳ್ಯ: ತಾಲ್ಲೂಕಿನ ಕೊಲ್ಲಮೊಗ್ರು ಗ್ರಾಮದ ಕಟ್ಟ ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿತರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಸಂಬಂಧ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೀವ್ರಗಾಯಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತನನ್ನು ಹಲ್ಲೆನಡೆಸಿದವರೇ ಆಸ್ಪತ್ರೆಗೆ ದಾಖಲಿಸಿ, “ಬೈಕ್‌ನಲ್ಲಿ ಬಿದ್ದು ಗಾಯಗೊಂಡಿದ್ದರು. ಮಾನವೀಯತೆಯ ಆಧಾರದಲ್ಲಿ ಇವರನ್ನು ಆಸ್ಪತ್ರೆಗೆ ಕರೆತಂದಿದ್ದೇವೆ” ಎಂದು ಸುಳ್ಳು ಹೇಳಿದ್ದಾರೆಂಬ ಆರೋಪ ಬಂದಿದೆ.

ಕೊಲ್ಲಮೊಗ್ರು ಗ್ರಾಪಂ ಮಾಜಿ ಅಧ್ಯಕ್ಷ ಟಿ.ಎನ್.ಸತೀಶ್, ಮಾಜಿ ಉಪಾಧ್ಯಕ್ಷ ಮಣಿಕಂಠ ಮತ್ತು ಇವರ ಬೆಂಬಲಿಗರಾದ ದುರ್ಗಾದಾಸ್ ಬಂಬಿಲ, ಸುಂದರ ಗುಡ್ಡನ ಮನೆ ಎಂಬವರು ಕಾಂಗ್ರೆಸ್ ಕಾರ್ಯಕರ್ತರಾದ ಕುಮಾರ್‌ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ.

ಹತ್ತು ದಿನಗಳ ಹಿಂದೆ ಬಿಜೆಪಿಯ ಬೆಂಬಲಿತ ಮಣಿಕಂಠ ಮತ್ತು ಕಾಂಗ್ರೆಸ್ ಕಾರ್ಯಕರ್ತ ಕುಮಾರ್‌ ಎಂಬವರ ನಡುವೆ ಕೌಟುಂಬಿಕ ವಿಚಾರಗಳಿಗೆ ಘರ್ಷಣೆಯಾಗಿತ್ತು. ನಂತರದಲ್ಲಿ ಕುಮಾರ್‌ ಅವರು ಅನಾರೋಗ್ಯದ ನಿಮಿತ್ತ ಆಸ್ಪತ್ರೆ ಸೇರಿದ್ದರು. ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿ ಮನೆಗೆ ಬಂದ ಬಳಿಕ ಈ ಘಟನೆ ನಡೆದಿದೆ.

ಹತ್ತು ದಿನಗಳ ಹಿಂದೆ ನಡೆದಿದ್ದ ಗಲಾಟೆಯ ಸಂಬಂಧ ಸಂಧಾನಕ್ಕಾಗಿ ಕುಮಾರ್‌ ಅವರನ್ನು ಬಿಜೆಪಿ ಮುಖಂಡರಾದ ದುರ್ಗಾದಾಸ್ ಬಂಬಿಲ, ಟಿ.ಎನ್.ಸತೀಶ್ ಮಾತುಕತೆಗೆ ಕರೆದಿದ್ದರು. “ಊರಿನಲ್ಲಿ ನಮ್ಮೆಲ್ಲರ ಹೆಸರು ಹಾಳಾಗುತ್ತಿದೆ. ಕೂತು ಬಗೆಹರಿಸಿಕೊಳ್ಳೋಣ, ರಾಜಿಯಾಗೋಣ” ಎಂದು ಕುಮಾರ್‌ ಅವರನ್ನು ನಂಬಿಸಿದ್ದರು.

ಹತ್ತಿರದಲ್ಲೇ ಇದ್ದ ಮನೆಗೆ ತೆರಳಿದಾಗ ಸತೀಶ್ ಮತ್ತು ಮಣಿಕಂಠ ಇಬ್ಬರೇ ಇದ್ದರು. ಹೋಗಿ ಮಾತನಾಡುತ್ತಿರುವಾಗ ದುರ್ಗಾದಾಸ್ ಬಂಬಿಲ ಮತ್ತು ಸುಂದರ ಗುಡ್ಡನ ಮನೆ ಎಂಬವರು ಹಿಂದಿನಿಂದ ಬಂದು ರಾಡಿನಲ್ಲಿ ಹೊಡೆದಿದ್ದಾರೆ. ಹೊಡೆತದ ರಭಸಕ್ಕೆ ಕುಮಾರ್‌ ಅವರು ಪ್ರಜ್ಞೆ ಕಳೆದುಕೊಂಡಿದ್ದರು.

ಆನಂತರ ಆಂಬುಲೆನ್ಸ್‌ಗೆ ಕರೆ ಮಾಡಿರುವ ಆರೋಪಿಗಳು, “ಮದ್ಯ ಸೇವನೆ ಮಾಡಿ ಬೈಕ್‌ನಲ್ಲಿ ಬರುವಾಗ ಒಬ್ಬಾತ ಬಿದ್ದಿದ್ದಾನೆ. ನಾವು ಸ್ಥಳೀಯವಾಗಿ ಮಾಡಿಕೊಂಡಿರುವ ವಿಪತ್ತು ನಿರ್ವಹಣಾ ತಂಡದ ಭಾಗವಾಗಿ, ಮಾನವೀಯತೆಯ ಆಧಾರದಲ್ಲಿ ಇವರನ್ನು ಆಸ್ಪತ್ರೆಗೆ ಸೇರಿಸಲು ಮುಂದಾಗಿದ್ದೇವೆ. ನೀವು ತುರ್ತಾಗಿ ಬನ್ನಿ” ಎಂದು ತಿಳಿಸಿದ್ದಾರೆ. ಆಸ್ಪತ್ರೆಯಲ್ಲೂ ಹಾಗೆಯೇ ಹೇಳಿ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಗಾಯಗೊಂಡ ವ್ಯಕ್ತಿ ಸುಳ್ಯ ಕೆ.ವಿ.ಜಿ. ಮೆಡಿಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಕುಮಾರ್‌ ಅವರ ಮನೆಯಲ್ಲಿ ವಿಚಾರ ಗೊತ್ತಿರಲಿಲ್ಲ. ನಂತರ ಪ್ರಕರಣ ಕುಕ್ಕೆಸುಬ್ರಮಣ್ಯ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಗಂಭೀರವಾಗಿ ಗಾಯಗೊಂಡಿರುವುದು ಊರಿಗೆಲ್ಲ ಗೊತ್ತಾಗಿದೆ. ಇದರ ಹಿಂದೆ ಬಿಜೆಪಿ ಕಾರ್ಯಕರ್ತರು ಇದ್ದಾರೆಂಬುದು ಚರ್ಚೆಯಾಗುತ್ತಿದೆ. ಪ್ರಕರಣ ದಾಖಲಾದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸುಬ್ರಹ್ಮಣ್ಯ ಪೊಲೀಸರು ಆಸ್ಪತ್ರೆಗೆ ತೆರಳಿ ಹಲ್ಲೆಗೊಳಗಾದ ಕುಮಾರ್ ಅವರ ಹೇಳಿಕೆ ಪಡೆದಿದ್ದು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

“ಹಲ್ಲೆಗೊಳಗಾದ ಕುಮಾರ್‌ ಅವರಿಗೆ ಬೈಕ್‌ ಓಡಿಸಲು ಬರುವುದಿಲ್ಲ” ಎಂದು ಕುಮಾರ್‌ ಅವರ ಆಪ್ತರು ಹೇಳಿಕೊಂಡಿದ್ದಾರೆ.

ಘಟನೆಯ ಸಂಬಂಧ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಕುಕ್ಕೆಸುಬ್ರಮಣ್ಯ ಪೊಲೀಸ್ ಠಾಣೆಯ ಅಧಿಕಾರಿ ಮಂಜುನಾಥ್‌, “ರಾಜಕೀಯ ಪ್ರೇರಿತ ಎಂಬುದಕ್ಕಿಂತ ಕೌಟುಂಬಿಕ ಕಲಹದ ವಿಚಾರ ಇಲ್ಲಿದೆ. ಮಣಿಕಂಠ ಮತ್ತು ಕುಮಾರ್‌ ಕುಟುಂಬಗಳ ನಡುವೆ ಜಗಳವಾಗಿತ್ತು. ಇದರಲ್ಲಿ ಇನ್ನುಳಿದವರು ಯಾಕೆ ಭಾಗಿಯಾಗಿದ್ದಾರೆಂಬುದು ತನಿಖೆಯಿಂದ ಬಯಲಾಗುತ್ತದೆ. ಹಲ್ಲೆ ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್‌ 324, 323, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲಾಗುವುದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...