Homeಕರ್ನಾಟಕಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ, ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ

ಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ, ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ

ನಾಲ್ವರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಕುಕ್ಕೆ ಸುಬ್ರಮಣ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಸುಳ್ಯ: ತಾಲ್ಲೂಕಿನ ಕೊಲ್ಲಮೊಗ್ರು ಗ್ರಾಮದ ಕಟ್ಟ ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿತರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಸಂಬಂಧ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೀವ್ರಗಾಯಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತನನ್ನು ಹಲ್ಲೆನಡೆಸಿದವರೇ ಆಸ್ಪತ್ರೆಗೆ ದಾಖಲಿಸಿ, “ಬೈಕ್‌ನಲ್ಲಿ ಬಿದ್ದು ಗಾಯಗೊಂಡಿದ್ದರು. ಮಾನವೀಯತೆಯ ಆಧಾರದಲ್ಲಿ ಇವರನ್ನು ಆಸ್ಪತ್ರೆಗೆ ಕರೆತಂದಿದ್ದೇವೆ” ಎಂದು ಸುಳ್ಳು ಹೇಳಿದ್ದಾರೆಂಬ ಆರೋಪ ಬಂದಿದೆ.

ಕೊಲ್ಲಮೊಗ್ರು ಗ್ರಾಪಂ ಮಾಜಿ ಅಧ್ಯಕ್ಷ ಟಿ.ಎನ್.ಸತೀಶ್, ಮಾಜಿ ಉಪಾಧ್ಯಕ್ಷ ಮಣಿಕಂಠ ಮತ್ತು ಇವರ ಬೆಂಬಲಿಗರಾದ ದುರ್ಗಾದಾಸ್ ಬಂಬಿಲ, ಸುಂದರ ಗುಡ್ಡನ ಮನೆ ಎಂಬವರು ಕಾಂಗ್ರೆಸ್ ಕಾರ್ಯಕರ್ತರಾದ ಕುಮಾರ್‌ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ.

ಹತ್ತು ದಿನಗಳ ಹಿಂದೆ ಬಿಜೆಪಿಯ ಬೆಂಬಲಿತ ಮಣಿಕಂಠ ಮತ್ತು ಕಾಂಗ್ರೆಸ್ ಕಾರ್ಯಕರ್ತ ಕುಮಾರ್‌ ಎಂಬವರ ನಡುವೆ ಕೌಟುಂಬಿಕ ವಿಚಾರಗಳಿಗೆ ಘರ್ಷಣೆಯಾಗಿತ್ತು. ನಂತರದಲ್ಲಿ ಕುಮಾರ್‌ ಅವರು ಅನಾರೋಗ್ಯದ ನಿಮಿತ್ತ ಆಸ್ಪತ್ರೆ ಸೇರಿದ್ದರು. ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿ ಮನೆಗೆ ಬಂದ ಬಳಿಕ ಈ ಘಟನೆ ನಡೆದಿದೆ.

ಹತ್ತು ದಿನಗಳ ಹಿಂದೆ ನಡೆದಿದ್ದ ಗಲಾಟೆಯ ಸಂಬಂಧ ಸಂಧಾನಕ್ಕಾಗಿ ಕುಮಾರ್‌ ಅವರನ್ನು ಬಿಜೆಪಿ ಮುಖಂಡರಾದ ದುರ್ಗಾದಾಸ್ ಬಂಬಿಲ, ಟಿ.ಎನ್.ಸತೀಶ್ ಮಾತುಕತೆಗೆ ಕರೆದಿದ್ದರು. “ಊರಿನಲ್ಲಿ ನಮ್ಮೆಲ್ಲರ ಹೆಸರು ಹಾಳಾಗುತ್ತಿದೆ. ಕೂತು ಬಗೆಹರಿಸಿಕೊಳ್ಳೋಣ, ರಾಜಿಯಾಗೋಣ” ಎಂದು ಕುಮಾರ್‌ ಅವರನ್ನು ನಂಬಿಸಿದ್ದರು.

ಹತ್ತಿರದಲ್ಲೇ ಇದ್ದ ಮನೆಗೆ ತೆರಳಿದಾಗ ಸತೀಶ್ ಮತ್ತು ಮಣಿಕಂಠ ಇಬ್ಬರೇ ಇದ್ದರು. ಹೋಗಿ ಮಾತನಾಡುತ್ತಿರುವಾಗ ದುರ್ಗಾದಾಸ್ ಬಂಬಿಲ ಮತ್ತು ಸುಂದರ ಗುಡ್ಡನ ಮನೆ ಎಂಬವರು ಹಿಂದಿನಿಂದ ಬಂದು ರಾಡಿನಲ್ಲಿ ಹೊಡೆದಿದ್ದಾರೆ. ಹೊಡೆತದ ರಭಸಕ್ಕೆ ಕುಮಾರ್‌ ಅವರು ಪ್ರಜ್ಞೆ ಕಳೆದುಕೊಂಡಿದ್ದರು.

ಆನಂತರ ಆಂಬುಲೆನ್ಸ್‌ಗೆ ಕರೆ ಮಾಡಿರುವ ಆರೋಪಿಗಳು, “ಮದ್ಯ ಸೇವನೆ ಮಾಡಿ ಬೈಕ್‌ನಲ್ಲಿ ಬರುವಾಗ ಒಬ್ಬಾತ ಬಿದ್ದಿದ್ದಾನೆ. ನಾವು ಸ್ಥಳೀಯವಾಗಿ ಮಾಡಿಕೊಂಡಿರುವ ವಿಪತ್ತು ನಿರ್ವಹಣಾ ತಂಡದ ಭಾಗವಾಗಿ, ಮಾನವೀಯತೆಯ ಆಧಾರದಲ್ಲಿ ಇವರನ್ನು ಆಸ್ಪತ್ರೆಗೆ ಸೇರಿಸಲು ಮುಂದಾಗಿದ್ದೇವೆ. ನೀವು ತುರ್ತಾಗಿ ಬನ್ನಿ” ಎಂದು ತಿಳಿಸಿದ್ದಾರೆ. ಆಸ್ಪತ್ರೆಯಲ್ಲೂ ಹಾಗೆಯೇ ಹೇಳಿ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಗಾಯಗೊಂಡ ವ್ಯಕ್ತಿ ಸುಳ್ಯ ಕೆ.ವಿ.ಜಿ. ಮೆಡಿಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಕುಮಾರ್‌ ಅವರ ಮನೆಯಲ್ಲಿ ವಿಚಾರ ಗೊತ್ತಿರಲಿಲ್ಲ. ನಂತರ ಪ್ರಕರಣ ಕುಕ್ಕೆಸುಬ್ರಮಣ್ಯ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಗಂಭೀರವಾಗಿ ಗಾಯಗೊಂಡಿರುವುದು ಊರಿಗೆಲ್ಲ ಗೊತ್ತಾಗಿದೆ. ಇದರ ಹಿಂದೆ ಬಿಜೆಪಿ ಕಾರ್ಯಕರ್ತರು ಇದ್ದಾರೆಂಬುದು ಚರ್ಚೆಯಾಗುತ್ತಿದೆ. ಪ್ರಕರಣ ದಾಖಲಾದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸುಬ್ರಹ್ಮಣ್ಯ ಪೊಲೀಸರು ಆಸ್ಪತ್ರೆಗೆ ತೆರಳಿ ಹಲ್ಲೆಗೊಳಗಾದ ಕುಮಾರ್ ಅವರ ಹೇಳಿಕೆ ಪಡೆದಿದ್ದು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

“ಹಲ್ಲೆಗೊಳಗಾದ ಕುಮಾರ್‌ ಅವರಿಗೆ ಬೈಕ್‌ ಓಡಿಸಲು ಬರುವುದಿಲ್ಲ” ಎಂದು ಕುಮಾರ್‌ ಅವರ ಆಪ್ತರು ಹೇಳಿಕೊಂಡಿದ್ದಾರೆ.

ಘಟನೆಯ ಸಂಬಂಧ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಕುಕ್ಕೆಸುಬ್ರಮಣ್ಯ ಪೊಲೀಸ್ ಠಾಣೆಯ ಅಧಿಕಾರಿ ಮಂಜುನಾಥ್‌, “ರಾಜಕೀಯ ಪ್ರೇರಿತ ಎಂಬುದಕ್ಕಿಂತ ಕೌಟುಂಬಿಕ ಕಲಹದ ವಿಚಾರ ಇಲ್ಲಿದೆ. ಮಣಿಕಂಠ ಮತ್ತು ಕುಮಾರ್‌ ಕುಟುಂಬಗಳ ನಡುವೆ ಜಗಳವಾಗಿತ್ತು. ಇದರಲ್ಲಿ ಇನ್ನುಳಿದವರು ಯಾಕೆ ಭಾಗಿಯಾಗಿದ್ದಾರೆಂಬುದು ತನಿಖೆಯಿಂದ ಬಯಲಾಗುತ್ತದೆ. ಹಲ್ಲೆ ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್‌ 324, 323, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲಾಗುವುದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...