Homeಕರ್ನಾಟಕಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ, ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ

ಕುಕ್ಕೆಸುಬ್ರಮಣ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ, ಬಿಜೆಪಿ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ

ನಾಲ್ವರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ಕುಕ್ಕೆ ಸುಬ್ರಮಣ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಸುಳ್ಯ: ತಾಲ್ಲೂಕಿನ ಕೊಲ್ಲಮೊಗ್ರು ಗ್ರಾಮದ ಕಟ್ಟ ಎಂಬಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಬೆಂಬಲಿತರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಸಂಬಂಧ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೀವ್ರಗಾಯಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತನನ್ನು ಹಲ್ಲೆನಡೆಸಿದವರೇ ಆಸ್ಪತ್ರೆಗೆ ದಾಖಲಿಸಿ, “ಬೈಕ್‌ನಲ್ಲಿ ಬಿದ್ದು ಗಾಯಗೊಂಡಿದ್ದರು. ಮಾನವೀಯತೆಯ ಆಧಾರದಲ್ಲಿ ಇವರನ್ನು ಆಸ್ಪತ್ರೆಗೆ ಕರೆತಂದಿದ್ದೇವೆ” ಎಂದು ಸುಳ್ಳು ಹೇಳಿದ್ದಾರೆಂಬ ಆರೋಪ ಬಂದಿದೆ.

ಕೊಲ್ಲಮೊಗ್ರು ಗ್ರಾಪಂ ಮಾಜಿ ಅಧ್ಯಕ್ಷ ಟಿ.ಎನ್.ಸತೀಶ್, ಮಾಜಿ ಉಪಾಧ್ಯಕ್ಷ ಮಣಿಕಂಠ ಮತ್ತು ಇವರ ಬೆಂಬಲಿಗರಾದ ದುರ್ಗಾದಾಸ್ ಬಂಬಿಲ, ಸುಂದರ ಗುಡ್ಡನ ಮನೆ ಎಂಬವರು ಕಾಂಗ್ರೆಸ್ ಕಾರ್ಯಕರ್ತರಾದ ಕುಮಾರ್‌ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ.

ಹತ್ತು ದಿನಗಳ ಹಿಂದೆ ಬಿಜೆಪಿಯ ಬೆಂಬಲಿತ ಮಣಿಕಂಠ ಮತ್ತು ಕಾಂಗ್ರೆಸ್ ಕಾರ್ಯಕರ್ತ ಕುಮಾರ್‌ ಎಂಬವರ ನಡುವೆ ಕೌಟುಂಬಿಕ ವಿಚಾರಗಳಿಗೆ ಘರ್ಷಣೆಯಾಗಿತ್ತು. ನಂತರದಲ್ಲಿ ಕುಮಾರ್‌ ಅವರು ಅನಾರೋಗ್ಯದ ನಿಮಿತ್ತ ಆಸ್ಪತ್ರೆ ಸೇರಿದ್ದರು. ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿ ಮನೆಗೆ ಬಂದ ಬಳಿಕ ಈ ಘಟನೆ ನಡೆದಿದೆ.

ಹತ್ತು ದಿನಗಳ ಹಿಂದೆ ನಡೆದಿದ್ದ ಗಲಾಟೆಯ ಸಂಬಂಧ ಸಂಧಾನಕ್ಕಾಗಿ ಕುಮಾರ್‌ ಅವರನ್ನು ಬಿಜೆಪಿ ಮುಖಂಡರಾದ ದುರ್ಗಾದಾಸ್ ಬಂಬಿಲ, ಟಿ.ಎನ್.ಸತೀಶ್ ಮಾತುಕತೆಗೆ ಕರೆದಿದ್ದರು. “ಊರಿನಲ್ಲಿ ನಮ್ಮೆಲ್ಲರ ಹೆಸರು ಹಾಳಾಗುತ್ತಿದೆ. ಕೂತು ಬಗೆಹರಿಸಿಕೊಳ್ಳೋಣ, ರಾಜಿಯಾಗೋಣ” ಎಂದು ಕುಮಾರ್‌ ಅವರನ್ನು ನಂಬಿಸಿದ್ದರು.

ಹತ್ತಿರದಲ್ಲೇ ಇದ್ದ ಮನೆಗೆ ತೆರಳಿದಾಗ ಸತೀಶ್ ಮತ್ತು ಮಣಿಕಂಠ ಇಬ್ಬರೇ ಇದ್ದರು. ಹೋಗಿ ಮಾತನಾಡುತ್ತಿರುವಾಗ ದುರ್ಗಾದಾಸ್ ಬಂಬಿಲ ಮತ್ತು ಸುಂದರ ಗುಡ್ಡನ ಮನೆ ಎಂಬವರು ಹಿಂದಿನಿಂದ ಬಂದು ರಾಡಿನಲ್ಲಿ ಹೊಡೆದಿದ್ದಾರೆ. ಹೊಡೆತದ ರಭಸಕ್ಕೆ ಕುಮಾರ್‌ ಅವರು ಪ್ರಜ್ಞೆ ಕಳೆದುಕೊಂಡಿದ್ದರು.

ಆನಂತರ ಆಂಬುಲೆನ್ಸ್‌ಗೆ ಕರೆ ಮಾಡಿರುವ ಆರೋಪಿಗಳು, “ಮದ್ಯ ಸೇವನೆ ಮಾಡಿ ಬೈಕ್‌ನಲ್ಲಿ ಬರುವಾಗ ಒಬ್ಬಾತ ಬಿದ್ದಿದ್ದಾನೆ. ನಾವು ಸ್ಥಳೀಯವಾಗಿ ಮಾಡಿಕೊಂಡಿರುವ ವಿಪತ್ತು ನಿರ್ವಹಣಾ ತಂಡದ ಭಾಗವಾಗಿ, ಮಾನವೀಯತೆಯ ಆಧಾರದಲ್ಲಿ ಇವರನ್ನು ಆಸ್ಪತ್ರೆಗೆ ಸೇರಿಸಲು ಮುಂದಾಗಿದ್ದೇವೆ. ನೀವು ತುರ್ತಾಗಿ ಬನ್ನಿ” ಎಂದು ತಿಳಿಸಿದ್ದಾರೆ. ಆಸ್ಪತ್ರೆಯಲ್ಲೂ ಹಾಗೆಯೇ ಹೇಳಿ ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಗಾಯಗೊಂಡ ವ್ಯಕ್ತಿ ಸುಳ್ಯ ಕೆ.ವಿ.ಜಿ. ಮೆಡಿಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಕುಮಾರ್‌ ಅವರ ಮನೆಯಲ್ಲಿ ವಿಚಾರ ಗೊತ್ತಿರಲಿಲ್ಲ. ನಂತರ ಪ್ರಕರಣ ಕುಕ್ಕೆಸುಬ್ರಮಣ್ಯ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಗಂಭೀರವಾಗಿ ಗಾಯಗೊಂಡಿರುವುದು ಊರಿಗೆಲ್ಲ ಗೊತ್ತಾಗಿದೆ. ಇದರ ಹಿಂದೆ ಬಿಜೆಪಿ ಕಾರ್ಯಕರ್ತರು ಇದ್ದಾರೆಂಬುದು ಚರ್ಚೆಯಾಗುತ್ತಿದೆ. ಪ್ರಕರಣ ದಾಖಲಾದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸುಬ್ರಹ್ಮಣ್ಯ ಪೊಲೀಸರು ಆಸ್ಪತ್ರೆಗೆ ತೆರಳಿ ಹಲ್ಲೆಗೊಳಗಾದ ಕುಮಾರ್ ಅವರ ಹೇಳಿಕೆ ಪಡೆದಿದ್ದು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

“ಹಲ್ಲೆಗೊಳಗಾದ ಕುಮಾರ್‌ ಅವರಿಗೆ ಬೈಕ್‌ ಓಡಿಸಲು ಬರುವುದಿಲ್ಲ” ಎಂದು ಕುಮಾರ್‌ ಅವರ ಆಪ್ತರು ಹೇಳಿಕೊಂಡಿದ್ದಾರೆ.

ಘಟನೆಯ ಸಂಬಂಧ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಕುಕ್ಕೆಸುಬ್ರಮಣ್ಯ ಪೊಲೀಸ್ ಠಾಣೆಯ ಅಧಿಕಾರಿ ಮಂಜುನಾಥ್‌, “ರಾಜಕೀಯ ಪ್ರೇರಿತ ಎಂಬುದಕ್ಕಿಂತ ಕೌಟುಂಬಿಕ ಕಲಹದ ವಿಚಾರ ಇಲ್ಲಿದೆ. ಮಣಿಕಂಠ ಮತ್ತು ಕುಮಾರ್‌ ಕುಟುಂಬಗಳ ನಡುವೆ ಜಗಳವಾಗಿತ್ತು. ಇದರಲ್ಲಿ ಇನ್ನುಳಿದವರು ಯಾಕೆ ಭಾಗಿಯಾಗಿದ್ದಾರೆಂಬುದು ತನಿಖೆಯಿಂದ ಬಯಲಾಗುತ್ತದೆ. ಹಲ್ಲೆ ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್‌ 324, 323, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲಾಗುವುದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...