Homeಕರ್ನಾಟಕಕುಮಾರಸ್ವಾಮಿ ವಿರುದ್ಧ ಜನಾಂಗೀಯ ನಿಂದನೆ | ಸಚಿವ ಜಮೀರ್ ವಿರುದ್ಧ ಶಿಸ್ತು ಕ್ರಮದ ಸುಳಿವು ನೀಡಿದ...

ಕುಮಾರಸ್ವಾಮಿ ವಿರುದ್ಧ ಜನಾಂಗೀಯ ನಿಂದನೆ | ಸಚಿವ ಜಮೀರ್ ವಿರುದ್ಧ ಶಿಸ್ತು ಕ್ರಮದ ಸುಳಿವು ನೀಡಿದ ಡಿಸಿಎಂ ಶಿವಕುಮಾರ್

- Advertisement -
- Advertisement -

ಕೇಂದ್ರ ಸಚಿವ ಹಾಗೂ ರಾಜ್ಯ ಜೆಡಿಎಸ್ ಮುಖ್ಯಸ್ಥ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ‘ಜನಾಂಗೀಯ’ ಹೇಳಿಕೆ ನೀಡಿದ್ದ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಶನಿವಾರ ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸುಳಿವು ನೀಡಿದ್ದಾರೆ. ಕುಮಾರಸ್ವಾಮಿ ವಿರುದ್ಧ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಕುಮಾರ್, “ಜಮೀರ್ ಹೇಳಿದ್ದು ತಪ್ಪು. ಪಕ್ಷದ ರಾಜ್ಯ ಘಟಕದ ಮುಖ್ಯಸ್ಥನಾಗಿ ನಾನು ಇದನ್ನು ಹೇಳುತ್ತಿದ್ದೇನೆ. ಅವರ ತಪ್ಪುಗಳನ್ನು ತಿದ್ದಿಕೊಳ್ಳಲು ಹೇಳಿದ್ದೆ. ಅವರು ಕ್ಷಮೆಯಾಚಿಸಿದ್ದಾರೆ” ಎಂದು ಹೇಳಿದ್ದಾರೆ. ಕುಮಾರಸ್ವಾಮಿ ವಿರುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚನ್ನಪಟ್ಟಣ ಉಪಚುನಾವಣೆಗೆ ಮುಂಚಿತವಾಗಿ ಜಮೀರ್ ಖಾನ್ ಅವರು ಕುಮಾರಸ್ವಾಮಿ ಅವರನ್ನು “ಕಾಳಾ” ಮತ್ತು “ಕಾಲಿಯಾ” (ಕಪ್ಪು ಚರ್ಮದ ವ್ಯಕ್ತಿ) ಎಂದು ಸಂಬೋಧಿಸಿದ್ದರು. ಮುಸ್ಲಿಂ ಸಮುದಾಯದಿಂದ ಹಣ ಸಂಗ್ರಹಿಸಿ ಗೌಡರ ಕುಟುಂಬವನ್ನು ಖರೀದಿಸುವುದಾಗಿಯೂ ಹೇಳಿದ್ದರು.

ಕುಮಾರಸ್ವಾಮಿ ವಿರುದ್ಧ ಜಮೀರ್ ದಾಳಿ ನಡೆಸಿರುವುದು ವೈಯಕ್ತಿಕ ವಿಚಾರ. ಆದರೆ ಜಮೀರ್ ಬಣ್ಣ ಮತ್ತು ದೇವೇಗೌಡರ ಕುಟುಂಬವನ್ನು ಖರೀದಿಸುವ ಬಗ್ಗೆ ಮಾತನಾಡಬಾರದಿತ್ತು. ಜಮೀರ್ ಹೇಳಿಕೆ ತಪ್ಪು ಎಂದು ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ. ಜಮೀರ್ ಆ ಮಟ್ಟಿಗೆ ಹೋಗಬಾರದಿತ್ತು ಎಂದು ಹೇಳಿದ್ದಾರೆ.

ಅವರ ತಪ್ಪುಗಳನ್ನು ಸರಿಪಡಿಸಿಕೊಳ್ಳುವಂತೆ ವೈಯಕ್ತಿಕವಾಗಿ ಸಲಹೆ ನೀಡಿದ್ದು, ಕ್ಷಮೆಯಾಚಿಸಿದ್ದಾರೆ. ಆದರೆ ಅವರ ವಿರುದ್ಧ ಯಾವ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ನಾವು ಅವರನ್ನು ಸರಿಪಡಿಸಲಿದ್ದೇವೆ ಎಂದು ಶಿವಕುಮಾರ್ ಹೇಳಿದ್ದಾರೆ. ಜಮೀರ್ ಅವರು ಹೇಳಿಕೊಳ್ಳುವಂತೆ, ಪ್ರೀತಿಯಿಂದ ಕೂಡ ಅಂತಹ ಟೀಕೆಗಳನ್ನು ಮಾಡಬಾರದಿತ್ತು ಎಂದು ಶಿವಕುಮಾರ್ ಪ್ರತಿಪಾದಿಸಿದ್ದಾರೆ.

ಇದೇ ವೇಳೆ, ಶಿವಕುಮಾರ್ ಅವರ ಸಹೋದರ ಹಾಗೂ ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ಜಮೀರ್ ಅವರು ಈ ಹಿಂದೆ ಜೆಡಿಎಸ್‌ನಲ್ಲಿದ್ದಾಗ ಇಬ್ಬರೂ ತುಂಬಾ ಆತ್ಮೀಯರಾಗಿದ್ದರು. ಹಾಗಾಗಿ ಅವರು ಕುಮಾರಸ್ವಾಮಿ ಅವರನ್ನು ಪ್ರೀತಿಯಿಂದ ಸಂಬೋಧಿಸಿರಬಹುದು ಎಂದು ಹೇಳಿದ್ದಾರೆ.

ಜಮೀರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಉಪಾಧ್ಯಕ್ಷ ಎ.ಆರ್.ಎಂ. ಹುಸೇನ್ ಶುಕ್ರವಾರ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದರು. “ಚನ್ನಪಟ್ಟಣ ಉಪಚುನಾವಣೆ ವೇಳೆ ಝಮೀರ್ ನೀಡಿದ ಹೇಳಿಕೆ ಪಕ್ಷಕ್ಕೆ ದಕ್ಕೆ ತಂದಿರುವುದು ಸ್ಪಷ್ಟವಾಗಿದೆ. ಪಕ್ಷದ ಹಿನ್ನಡೆಗೆ ಜಮೀರ್ ಬೆಲೆ ತೆರಬೇಕಾಗುತ್ತದೆ. ಅವರು ರಾಜಕೀಯ ಪ್ರಬುದ್ಧತೆಯನ್ನು ಕಳೆದುಕೊಂಡಿರುವುದರಿಂದ, ಪಕ್ಷವು ಅವರನ್ನು ಮುಖ್ಯವಾಹಿನಿಯ ನಾಯಕ ಎಂದು ಬಿಂಬಿಸಬಾರದು” ಎಂದು ಹುಸೇನ್ ಹೇಳಿದ್ದಾರೆ.

ಇದೇ ವೇಳೆ ಚನ್ನಪಟ್ಟಣ ಉಪಚುನಾವಣೆ ಫಲಿತಾಂಶದ ಮೇಲೆ ಜಮೀರ್ ಹೇಳಿಕೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೀಶ್ವರ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಯೋಗೇಶ್ವರ್, ಎಚ್‌.ಡಿ. ಕುಮಾರಸ್ವಾಮಿ ಅವರ ಪುತ್ರ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ, ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: 2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

2019 ರಲ್ಲಿ ಅಪಘಾತ; 5 ವರ್ಷಗಳ ನಂತರ ₹31ಲಕ್ಷ ಪರಿಹಾರ ಘೋಷಿಸಿದ ಮೋಟಾರು ಅಪಘಾತ ಹಕ್ಕುಗಳ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...